ಸೋಮವಾರಪೇಟೆ ಚಾಲಕರ ಸಂಘದಿಂದ ಸ್ವಾತಂತ್ರೋತ್ಸವ

15/08/2020

ಸೋಮವಾರಪೇಟೆ ಆ.15 : ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸ್ವಾತಂತ್ರೋತ್ಸವ ಆಚರಿಸಲಾಯಿತು. ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಸ್.ಪದ್ಮನಾಭ ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ಭರತ್, ಮಾಜಿ ಅಧ್ಯಕ್ಷರಾದ ಕೆ.ಜಿ.ಸುರೇಶ್, ಸಿ.ಸಿ.ನಂದ, ಜಯಕರ್ನಾಟಕ ಸಂಘಟಣೆ ತಾಲೂಕು ಅಧ್ಯಕ್ಷ ಸಿ.ಬಿ.ಸುರೇಶ್‍ಶೆಟ್ಟಿ, ಕರವೇ ತಾಲೂಕು ಅಧ್ಯಕ್ಷ ದೀಪಕ್ ಮತ್ತಿತರರು ಹಾಜರಿದ್ದರು.