ಕೊಡಗು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಅವರಿಗೆ ಬೀಳ್ಕೊಡುಗೆ

ಮಡಿಕೇರಿ ಆ.15 : ಕಳೆದ 2 ವರ್ಷಗಳಿಂದ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಹೆರಿಗೆ ರಜೆಯ ಮೇಲೆ ತೆರಳುತ್ತಿರುವ ಕೆ.ಲಕ್ಷ್ಮೀಪ್ರಿಯ ಅವರನ್ನು ಜಿಲ್ಲಾಡಳಿತದಿಂದ ಬೀಳ್ಕೊಡಲಾಯಿತು.
ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹೃದಯ ಸ್ಪರ್ಶಿಯಾಗಿ ಜಿ.ಪಂ.ಸಿಇಒ ಅವರಿಗೆ ಶಾಲೂ., ಫಲ-ತಾಂಬೂಲ ಮತ್ತು ಉಡುಗೊರೆ ನೀಡಿ ಸನ್ಮಾನಿಸಲಾಯಿತು.
ಬೀಳ್ಕೊಡುಗೆ ಸ್ವೀಕರಿಸುವುದಕ್ಕೂ ಮೊದಲು ಮಾತನಾಡಿದ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಅವರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹೀಗೆ ಎಲ್ಲರ ಸಹಕಾರದಿಂದ 2 ವರ್ಷಗಳ ಕಾಲ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದು ಹೇಳಿದರು.
ಜಿಲ್ಲಾಡಳಿತದೊಂದಿಗೆ ಸದಾ ಸಮನ್ವಯತೆ ಸಹಕಾರದಿಂದ ಕರ್ತವ್ಯ ನಿರ್ವಹಿಸಲಾಯಿತು. ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕುಟುಂಬದವರಂತೆ ಕರ್ತವ್ಯ ನಿರ್ವಹಿಸದ್ದು ಸ್ಮರಣೀಯ ಎಂದರು.
ಜಿಲ್ಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಉತ್ತಮ ಪ್ರಗತಿ ಸಾಧಿಸಿರುವುದಕ್ಕೆ ಕೆ.ಲಕ್ಷ್ಮಿ ಪ್ರಿಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಸಿಇಒ ಅವರು ಹೊಂದಾಣಿಕೆಯಿಂದ ಕೆಲಸ ಮಾಡಿದರು. ಈ ನಿಟ್ಟಿನಲ್ಲಿ ಹಿಂದಿನ ಎಸ್ಪಿ ಯಾಗಿದ್ದ ಸುಮನ್ ಮತ್ತು ಸಿಇಒ ಲಕ್ಷ್ಮಿಪ್ರಿಯ ಸಂಬಂಧಿಕರಂತೆ ಕರ್ತವ್ಯ ನಿರ್ವಹಿಸಿದ್ದು ವಿಶೇಷ ಎಂದರು.
2019 ರಲ್ಲಿ ಪ್ರಕೃತಿ ವಿಕೋಪದಿಂದ ಭಾಗಮಂಡಲದಲ್ಲಿ ಉಂಟಾದ ಭೂಕುಸಿತ ಸಂದರ್ಭದಲ್ಲಿನ ಘಟನೆಯನ್ನು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಐಟಿಡಿಪಿ ಇಲಾಖಾಧಿಕಾರಿ ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ, ಜಿ.ಪಂ ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಬಿ.ಬಿ ಪುಷ್ಪಾವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ತಾ.ಪಂ.ಇಒಗಳಾದ ಲಕ್ಷ್ಮೀ, ಸುನೀಲ್ ಕುಮಾರ್, ಷಣ್ಮುಗ ಹಾಜರಿದ್ದರು.