ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ಮಡಿಕೇರಿ ಅ. 7 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನ ಫಲಾನುಭವಿ ಆಧಾರಿತ ಯೋಜನೆಯಡಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ, 10ನೇ ತರಗತಿ ನಂತರದ ಕೋರ್ಸುಗಳಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಶುಲ್ಕವನ್ನು ಮರು ಪಾವತಿಸಲು ಧನ ಸಹಾಯ, ವಿಕಲಚೇತನರಿಗೆ ಅವಶ್ಯವಿರುವ ಸಾಧನ ಸಲಕರಣೆಗಳು, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ, ವಿಕಲಚೇತನ ವ್ಯಕ್ತಿಗಳು ವಿಕಲತೆ ಭಾಗವನ್ನು ಸರಿಪಡಿಸುವ ಭಾಗಶ: ಸರಿಪಡಿಸುವ ಶಸ್ತ್ರ ಚಿಕಿತ್ಸೆಗೊಳಪಟ್ಟಲ್ಲಿ ಧನ ಸಹಾಯ, ಅಂಧ ಮಹಿಳೆಗೆ ಜನಿಸುವ ಮೊದಲ ಎರಡು ಶಿಶುಗಳ ಪಾಲನೆಗಾಗಿ ಸಹಾಯ ಧನ, 10ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿಕಲಚೇತನರಿಗೆ ಕೋಚಿಂಗ್ಗಾಗಿ ಧನ ಸಹಾಯ.
10ನೇ ತರಗತಿ ನಂತರದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ನೀಡುವ ಯೋಜನೆ, ನಾಲ್ಕು ಬಗೆಯ ವಿಕಲಚೇತನ ವ್ಯಕ್ತಿಗಳಿಗೆ ವಾರ್ಷಿಕ ರೂ. 1 ಲಕ್ಷಗಳವರೆಗೆ ವೈದ್ಯಕೀಯ ಸೌಲಭ್ಯ ಪಡೆಯುವ ಯೋಜನೆ ಹಾಗೂ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ರಾಜ್ಯ ಮತ್ತು ಅಂತರ ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ವಿಶೇಷ ಧನ ಸಹಾಯ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಫಲಾಪೇಕ್ಷೆ ಪಡೆಯುವ ಅರ್ಹ ವಿಕಲಚೇತನರು ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲ್ಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್ವರ್ ಇವರ ಮೊಬೈಲ್ ಸಂಖ್ಯೆ. 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ ಇವರ ಮೊಬೈಲ್ ಸಂಖ್ಯೆ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ ಇವರ ಮೊಬೈಲ್ ಸಂಖ್ಯೆ 9900883654 ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ಮಾಹಿತಿ ಸಲಹೆಗಾರರಾದ ಹೆಚ್.ಎಸ್. ನವೀನ್ ಇವರ ಮೊಬೈಲ್ ಸಂಖ್ಯೆ 7411717619 ಹಾಗೂ ರವಿ ಇವರ ಮೊಬೈಲ್ ಸಂಖ್ಯೆ. 9741813436 ಸಂಪರ್ಕಿಸುವಂತೆ ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272 295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಸಂಪತ್ಕುಮಾರ್ ಅವರು ತಿಳಿಸಿದ್ದಾರೆ.
