ಪೊಲೀಸರೊಂದಿಗೆ ಬಿಜೆಪಿ ಘರ್ಷಣೆ

09/10/2020

ಕೋಲ್ಕತಾ ಅ.8 : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‍ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಪಕ್ಷದ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.