ಕುಶಾಲನಗರ ಪ್ರೆಸ್ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ

ಮಡಿಕೇರಿ ಅ.14 : ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘ ಮತ್ತು ಕುಶಾಲನಗರ ಪ್ರೆಸ್ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು,
ಪತ್ರಿಕೆ, ಮಾಧ್ಯಮಗಳು ವಸ್ತುನಿಷ್ಠ ವರದಿಯನ್ನು ಬಿತ್ತರ ಮಾಡುವಂತಾಗಬೇಕು ಎಂದರು.
ಪ್ರೆಸ್ಕ್ಲಬ್ ಟ್ರಸ್ಟ್ ಅಧ್ಯಕ್ಷರು ಹಾಗೂ ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘ ಜಿಲ್ಲಾ ಅಧ್ಯಕ್ಷರಾದ ಎಚ್.ಎಂ.ರಘು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ರಾಷ್ಟ್ರಪತಿ ಪದಕ ವಿಜೇತ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ, ಮುಖ್ಯಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಎಂ.ಮಹೇಶ್, ಕುಶಾಲನಗರ ಪಪಂ ಆರೋಗ್ಯ ನಿರೀಕ್ಷಕ ಎಂ.ಸಿ.ಉದಯಕುಮಾರ್, ನ್ಯೂಸ್ ಚಾನಲ್ ಜಿಲ್ಲಾ ವರದಿಗಾರ ಪ್ರೇಮ್ಕುಮಾರ, ಕಿರಿಯ ಮಹಿಳಾ ಆರೋಗ್ಯ ಸಹಾಯಕ ಎಂ.ವಿ.ಸುಮತಿ, ತಾಲೂಕು ಪ್ರ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ನಾಡಕಛೇರಿಯ ಸಚಿನ್ ಕುಲಕರ್ಣಿ, ಪೊಲೀಸ್ ಸಹಾಯಕ ಠಾಣಾಧಿಕಾರಿ ಎಚ್.ಟಿ.ಗೀತಾ, ಉಪ ಅರಣ್ಯ ವಲಯಾಧಿಕಾರಿ ಕೂಡಕಂಡಿ ಸುಬ್ರಾಯ, ಪೊಲೀಸ್ ಮುಖ್ಯಪೇದೆ ಎಂ.ಬಿ.ರವೀಂದ್ರ, ಅಂಗನವಾಡಿ ಕಾರ್ಯಕರ್ತೆ ಈ.ಕೆ.ಸರೋಜ ಮತ್ತು ಸಮಾಜ ಸೇವಕರಾದ ನವನೀತ್ ಪೊನ್ನೇಟಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ಪ್ರೆಸ್ಕ್ಲಬ್ ಟ್ರಸ್ಟ್ ಗೌರವಾಧ್ಯಕ್ಷ ಟಿ.ಆರ್.ಪ್ರಭುದೇವ, ವೃತ್ತ ನಿರೀಕ್ಷಕ ಸಿ.ಪಿ.ಸೋಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು, ಪ್ರೆಸ್ಕ್ಲಬ್ ಟ್ರಸ್ಟ್ ಕಾನೂನು ಸಲಹೆಗಾರರಾದ ಆರ್.ಕೆ.ನಾಗೇಂದ್ರಬಾಬು ಮತ್ತಿತರರು ಇದ್ದರು.