ಬಾಂಬ್ ಬೆದರಿಕೆ ಹಾಕಿದವರ ಬಂಧನ

ಬೆಂಗಳೂರು ಅ.21 : ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, ಜಂಟಿ ಪೆÇಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರಿಗೆ ಪತ್ರ ಬರೆದಿದ್ದರು.
ಈ ಬೆದರಿಕೆ ಪತ್ರವನ್ನು ದ್ವೇಷದ ಹಿನ್ನೆಲೆಯಲ್ಲಿ ಬರೆಯಲಾಗಿದೆ ಎಂದು ಶಂಕಿಸಲಾಗಿದೆ. ಪತ್ರ ಕಳುಹಿಸಿರುವ ವ್ಯಕ್ತಿ ಪತ್ರದ ಜೊತೆಗೆ ವ್ಯಕ್ತಿಯೊಬ್ಬರ ವೋಟರ್ ಐಡಿ ಮತ್ತು ಎರಡು ಮೊಬೈಲ್ ನಂಬರ್ ಕಳುಹಿಸಿದ್ದ. ಪತ್ರದಲ್ಲಿರುವ ವೋಟರ್ ಐಡಿ ಕೊಡಿಯಳ್ಳಿ ಪಂಚಾಯತ್, ಹರಿವೇಸಂದ್ರ ಗ್ರಾಮ ಶಿವಪ್ರಕಾಶ್ ಎಂಬ ಹೆಸರಿನಲ್ಲಿದೆ. ಈ ಬೆದರಿಕೆ ಪತ್ರಗಳು ಐದು ಗಂಟೆ ವೇಳೆ ಬಂದಿದ್ದವು.
