ಮಡಿಕೇರಿ NEWS DESK ಜು.28 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಜಿಲ್ಲಾ ಸಮಿತಿಯ ನಾಯಕರುಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ ಫ್ಯಾನ್ಸಿ ಪಾರ್ವತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ ಅವರು ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಶೌಕತ್ ಆಲಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮತ್ತಿತರ ಪ್ರಮುಖರು ಫ್ಯಾನ್ಸಿ ಪಾರ್ವತಿ ಅವರಿಗೆ ಆದೇಶ ಪತ್ರ ನೀಡಿದರು. ಮಹಿಳಾ ಕಾಂಗ್ರೆಸ್ಸಿನ ವಿವಿಧ ಹುದ್ದೆಗಳಲ್ಲಿ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಫ್ಯಾನ್ಸಿ ಪಾರ್ವತಿ ಅವರು…
ಲೇಖಕ: admin
ಮಡಿಕೇರಿ NEWS DESK ಜು.27 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025 ನೇ ವರ್ಷದಲ್ಲಿ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ, ನಗದು ಪುರಸ್ಕಾರ ಪ್ರಶಸ್ತಿ ಯೋಜನೆ, ಹಾಗೆಯೇ 2026-27ನೇ ಸಾಲಿಗೆ ಗುರಿ ಒಲಂಪಿಕ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಮುಂದುವರೆದು 2025-206ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಅರ್ಹ ಕ್ರೀಡಾ ಪಟುಗಳು ಅರ್ಜಿಯನ್ನು ಅಧಿಕೃತ ಜಾಲತಾಣ https://sevasindu.karnataka.gov.in ಮೂಲಕ ಕಡ್ಡಾಯವಾಗಿ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸಹಾಯವಾಣಿ 155265 ನ್ನು ಸಂಪರ್ಕಿಸಬಹುದು ಎಂದು…
ವಿರಾಜಪೇಟೆ ಜು.27 NEWS DESK : ಮೂಲತಃ ವಿ.ಬಾಡಗ ಗ್ರಾಮದ ನಿವಾಸಿಯೂ ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಳವಂಡ ಆಶಿಕ ಪೃಥ್ವಿ ಹಾಗೂ ಅವರ ಸ್ನೇಹಿತರು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಈ ಸಾಮಾಜಿಕ ಸೇವೆಯನ್ನು ಕೈಗೊಂಡ ಮಳವಂಡ ಆಶಿಕ ಪೃಥ್ವಿ ಮತ್ತು ಅವರ ಮಿತ್ರವೃಂದಕ್ಕೆ ಶಾಲೆಯ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಶ್ಲಾಘನೆ ವ್ಯಕ್ತಪಡಿಸಿದರು.
ವಿರಾಜಪೇಟೆ ಜು.27 NEWS DESK : ಕಾರ್ಗಿಲ್ ಯುದ್ದದಲ್ಲಿ ನಮ್ಮ ಅನೇಕ ವೀರ ಯೋಧರು ಹುತಾತ್ಮರಾಗಿದ್ದು ದೇಶಕ್ಕಾಗಿ ಅವರ ಬಲಿದಾನ ಅತ್ಯಂತ ಹಿರಿದು. ಆದರಿಂದ ಆ ದಿನದ ಯುದ್ದದಲ್ಲಿ ದಿಟ್ಟ ಪರಾಕ್ರಮ ತೋರಿದ ವೀರ ಯೋದರನ್ನು ಕಾರ್ಗಿಲ್ ವಿಜಯ ದಿವಸ್ದಂದು ನೆನಪಿಸಿಕೊಂಡು ಅವರಿಗೆ ನಮನ ಸಲ್ಲಿಸುವುದು ಎಲ್ಲಾರ ಕರ್ತವ್ಯವಾಗಿದೆ ಎಂದು ವಿರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ವಿರಾಜಪೇಟೆ ಮಿನಿ ವಿಧಾನ ಸೌಧದ ಬಳಿ ಇರುವ ಯೋಧರ ಸ್ಮಾರಕದಲ್ಲಿ ಹುತಾತ್ಮ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಗಗನ ಮುಟ್ಟುವಂತಿರುವ ಬೆಟ್ಟಗಳ ಸಾಲು, ಕೊರೆಯುವ ಚಳಿ ಇದರ ನಡುವೆ ನಮ್ಮ ಯೋಧರು ದೇಶ ಕಾಯುವ ಕೆಲಸವನ್ನು ಭಾರತಾಂಭೆಯ ಸೇವೆ ಎಂದು ಭಾವಿಸಿ ದೇಶಕ್ಕಾಗಿ ಪ್ರಾಣವನ್ನು ಮುಡಿಪಿಡುತ್ತಾರೆ. ಅದೇ ರೀತಿ ಪಾಕ್ ದೇಶದ ಕುತಂತ್ರವನ್ನು ಹತ್ತಿಕ್ಕಲು ನಮ್ಮ ಸೇನೆಯ ಯೋಧರು ಕಾರ್ಗಿಲ್ ಹೋರಾಟದಲ್ಲಿ ಕೆಚ್ಚೆದೆಯಿಂದ…
ವಿರಾಜಪೇಟೆ ಜು.27 NEWS DESK : ಜೆನ್ ಶಿಟೋ ರಿಯೋ ಕರಾಟೆ ಅಕಾಡೆಮಿಯ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ 29ನೇ ಅಖಿಲ ಭಾರತ ಶಿಟೋ ರಿಯೋ ಕರಾಟೆ-ಡೋ ಚಾಂಪಿಯನ್ಶಿಪ್-2026 ರಲ್ಲಿ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಪೆರುಂಬಾಡಿಯ ಜೆನ್ ಸಿಟೋರಿಯೋ ಸ್ಕೂಲ್ ಆಫ್ ಇಂಡಿಯಾ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಸ್ಥಳೀಯ ಸಂಸ್ಥೆಯ ಒಟ್ಟು 22 ಕರಾಟೆ ಪಟುಗಳು ಕುಮಿತೆ ಹಾಗೂ ಕಟಾ ವಿಭಾಗಗಳಲ್ಲಿ ಅಮೋಘ ಪ್ರದರ್ಶನ ನೀಡಿ ವಿವಿಧ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಚಿನ್ನ ಹಾಗೂ ಬೆಳ್ಳಿ ಪದಕಗಳ ಗರಿ: ಪಂದ್ಯಾವಳಿಯ ಕುಮಿತೆ ಹಾಗೂ ಕಟಾ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈತನ್ಯ ಪಿ.ವಿ. ಅವರು ಎರಡೂ ವಿಭಾಗಗಳಲ್ಲೂ ಚಿನ್ನದ ಪದಕಗಳನ್ನು ಪಡೆದು ಅತ್ಯುತ್ತಮ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದೇ…
ಮಡಿಕೇರಿ ಜು.27 NEWS DESK : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮವು ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬಳಿಕ ಮಾತನಾಡಿದ ಸಂಸ್ಕೃತಿ ಮತ್ತು ಸಾಹಿತ್ಯಗಳ ಪೋಷಣೆಯೊಂದಿಗೆ ಅರೆಭಾಷೆಯನ್ನು ಪುಷ್ಟೀಕರಿಸುವ ಕಾರ್ಯಗಳನ್ನು ಅಕಾಡೆಮಿಯು ನಿರಂತರವಾಗಿ ಮಾಡುತ್ತಿದ್ದು ವಿಟ್ಲ ಜನರಿಗೆ ಅರೆಭಾಷೆ ಮೇಲೆ ಇರುವ ಅಭಿಮಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಸಂಘಟಕರನ್ನು ಅಭಿನಂದಿಸಿದರು. ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸೌಮ್ಯ ಸುಕುಮಾರ್ ಅವರು ದೀಪ ಪ್ರಜ್ವಲಿಸಿ ಮಾತನಾಡಿ ಸಾಂಸ್ಕೃತಿಕ ಜಾಗೃತಿ ಮತ್ತು ರಕ್ಷಣೆಗಳ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಇಂದಿನ ಅವಶ್ಯಕತೆಯಾಗಿದೆ ಎಂದರು. ಆಟಿ’ ಆಚರಣೆಯಲ್ಲ, ಇತಿಹಾಸದ ನೆನಪು: ಸೀತಾರಾಮ ಕೇವಳ ಸಂಪನ್ಮೂಲ…
ಮಡಿಕೇರಿ ಜು.27 NEWS DESK : ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ 143 ಸಂಘ ಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾರ್ಯಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ತೃತೀಯ ವರ್ಷದ 27ನೇ ಕಾರ್ಗಿಲ್ ವಿಜಯ್ ದಿವಸ್ ಹುತಾತ್ಮ ಯೋಧರ ಸ್ಮರಣಾ ಕಾರ್ಯಕ್ರಮಕ್ಕೆ ನಗರದ ಆರ್ಮಿ ಕ್ಯಾಂಟೀನ್ ನ ಹಿರಿಯ ವ್ಯವಸ್ಥಾಪಕ ಲೆಫ್ಟಿನೆಂಟ್ ಕರ್ನಲ್ ಮೊಳ್ಳೇರ ಎಸ್. ಕಾವೇರಿಯಪ್ಪ (ನಿವೃತ್ತ) ಅವರು, ಹುತಾತ್ಮರ ಪ್ರತೀಕವಾಗಿ ನಿಲ್ಲಿಸಲಾಗಿದ್ದ ಸ್ಮಾರಕಕ್ಕೆ ಪುಷ್ಪನಮನದ ಮೂಲಕ ಚಾಲನೆ ನೀಡಿದರು. ಗಡಿ ಕಾಯುವ ಯೋಧರ, ರಾಷ್ಟ್ರದ ಏಕತೆ ಐಕ್ಯತೆಗಾಗಿ ಬಲಿದಾನ ಗೈದ ಯೋಧರ ಪರವಾದ ಘೋಷಣೆಗಳ ನಡುವೆ ಮಡಿಕೇರಿ…
ಸಿದ್ದಾಪುರ NEWS DESK ಜು.27 : ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಮೀಸಲು ಅರಣ್ಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅಕ್ರಮವಾಗಿ ಸಮಾಧಿ ನಿರ್ಮಿಸಿರುವ ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಹಿಂದೂ ಸುರಕ್ಷಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಗೋರಿಯನ್ನು ತೆರವುಗೊಳಿಸಬೇಕು. ಕೋಮು ಗಲಭೆಗೆ ಪ್ರಚೋದಿಸುತ್ತಿರುವ ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಿದ್ದಾಪುರ–ಮೈಸೂರು ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಗೋರಿಯನ್ನು ಅಗೆದಾಗ ಯಾವುದೇ ಅವಶೇಷ ಕಂಡು ಬರಲಿಲ್ಲ. ಹಿಂದೂ ಪರ ಸಂಘಟನೆಯ ಚೆಕ್ಕೇರ ಮನು ಅವರು ಮಾತನಾಡಿ, ಹಿಂದೂ ದೇವಾಲಯದ ಆವರಣದಲ್ಲಿ ಖಬರಸ್ಥಾನ ಮಾದರಿಯಲ್ಲಿ ಗೋರಿ ನಿರ್ಮಿಸಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ…
ಚೆಟ್ಟಳ್ಳಿ ಜು.27 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು ಹಾಗೂ ಜನಪರ ಹೋರಾಟ ಸಮಿತಿಯ ಸಂಚಾಲಕರಾದ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ, ಮಳೆಯ ದೇವರೆಂದೇ ಆರಾಧಿಸಲ್ಪಡುವ ಪಾಡಿ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು. ಈ ವರ್ಷ ಮಳೆ ಅಲ್ಪ ಪ್ರಮಾಣದಲ್ಲಿ ಸುರಿದಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೃಷಿ ಕಾರ್ಯಗಳು ಸುಗಮವಾಗಿ ಸಾಗಲಿ, ರೈತರ ಬದುಕಿಗೆ ಸಮೃದ್ಧಿ ದೊರಕಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಈ ಸಂದರ್ಭ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೇರಿಯನ ಪೂರ್ಣಚ್ಚ, ನಿರ್ದೇಶಕರಾದ ಬಟ್ಟೀರ ಶರಿನ್, ಕೊಂಗೇಟಿರ ವಾಣಿ ಕಾಳಪ್ಪ,…
ಮಡಿಕೇರಿ NEWS DESK ಜು.27 : ಮಳೆಯ ಪರಿಣಾಮ ನಗರದ ಸಂಪಿಗೆಕಟ್ಟೆ ನಿವಾಸಿ ಪೂವಪ್ಪ ಎಂಬುವವರ ವಾಸದ ಮನೆಯ ಎದುರಿನ ತಡೆಗೋಡೆ ಕುಸಿತಗೊಂಡಿದೆ. ಸೋಮವಾರ ಬೆಳಗ್ಗೆ ಅಂದಾಜು 20 ಅಡಿ ಆಳದ ಮಣ್ಣು ಕುಸಿತವಾಗಿದ್ದು, ಮನೆ ಮಂದಿ ಆತಂಕಕ್ಕೆ ಒಳಗಾಗಿದ್ದಾರೆ. ಮಣ್ಣು ಮತ್ತೆ ಕುಸಿಯದಂತೆ ತಡೆಯಲು ಹೊದಿಕೆ ಹಾಸಿ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ತಹಶೀಲ್ದಾರ್ ಶ್ರೀಧರ್ ಹಾಗೂ ನಗರಸಭೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಗರಸಭೆ ವತಿಯಿಂದಲೂ ಟಾರ್ಪಲ್ ವಿತರಣೆ ಮಾಡಲಾಗಿದ್ದು, ತಡೆಗೋಡೆ ಕುಸಿತದಿಂದ ಲಕ್ಷ ರೂ. ನಷ್ಟ ಉಂಟಾಗಿದೆ. ನಗರಸಭೆ ವತಿಯಿಂದ ತಡೆಗೋಡೆ ಮರು ನಿರ್ಮಾಣ ಮಾಡಿಕೊಡುವಂತೆ ಮನೆ ಮಂದಿ ಮನವಿ ಮಾಡಿದರು.






