ಮಡಿಕೇರಿ NEWS DESK ಮೇ 28 : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಮೇ 30 ರಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ರೂಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ…
ಲೇಖಕ: admin
ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ ಗುತ್ತಿಗೆದಾರರೇ ಪಡೆಯಬೇಕು ಎಂದು ಈಗಾಗಲೇ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಸಂಘಗಳಿಗೆ ಮನವಿ ಮಾಡಿದೆ. ಇದರೊಂದಿಗೆ ಹೊರ ಜಿಲ್ಲೆಯ ಗುತ್ತಿಗೆದಾರರ ಮನವೊಲಿಸುವ ಪ್ತಯತ್ನ ಮಾಡಲಾಗುತ್ತದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ಸಂಕಷ್ಟ್ಟದ ಪರಿಹಾರಕ್ಕೆ ಪೂರಕವಾಗಿ, ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ 50 ಲಕ್ಷ ರೂ. ಮೊತ್ತದ ಕಾಮಗಾರಿಯ ಟೆಂಡರನ್ನು ಇತರ ತಾಲ್ಲೂಕು ಮತ್ತು ಜಿಲ್ಲೆಯವರು ಪಡೆಯದಂತೆ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬoಧಿಸಿದoತೆ, ಹೊರ ಜಿಲ್ಲೆಯ ಗುತ್ತಿಗೆದಾರರು ಶೇ.25 ರಿಂದ 30 ರಷ್ಟು ಕಡಿಮೆ ಮೊತ್ತಕ್ಕೆ ಟೆಂಡರ್ಗಳನ್ನು ಕರೆಯುತ್ತಿರುವುದು ಸಮಸ್ಯೆಯನ್ನು ಸೃಷ್ಟಿಸಿದೆ. ಇಷ್ಟು ಕಡಿಮೆ…
ಮಡಿಕೇರಿ NEWS DESK ಮೇ 28 : ಸರಕಾರ ವಿಧಿಸುತ್ತಿರುವ ತೆರಿಗೆ ಹೊರೆ ದೇಶದ ಜನಸಾಮಾನ್ಯರನ್ನು ಕಂಗಾಲಾಗಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮಧ್ಯ ಪ್ರಾಚ್ಯದ ಯುದ್ಧದ ಹಿನ್ನೆಲೆ ತೈಲದ ಕೊರತೆ ಇರುವುದರಿಂದ ಬೆಲೆ ಹೆಚ್ಚಳವೆನ್ನಲಾಗುತ್ತ್ತಿದೆ. ಬೆಲೆ ಹೆಚ್ಚಳ ಮಾಡಿದರೆ ಕೊರತೆ ಇರುವ ತೈಲ ಲಭ್ಯವಾಗುತ್ತದೆಯೇ ಎಂದು ಲೇವಡಿ ಮಾಡಿದರು. ತೈಲ ಬೆಲೆ ಹೆಚ್ಚಳದಿಂದ ಬೃಹತ್ ತೈಲ ಕಂಪೆನಿಗಳು ಲಾಭ ಪಡೆಯುತ್ತಿವೆ, ಇಂತಹ ವಿಚಾರಗಳನ್ನು ಜನಸಾಮಾನ್ಯರು ಪ್ರಶ್ನಿಸಬೇಕಿದೆ. ಒಂದು ಟೂತ್ ಪೇಸ್ಟ್ ಕೊಳ್ಳುವಾಗ ಅದಾನಿ ನೀಡುವಷ್ಟೆ ತೆರಿಗೆಯನ್ನು ಸಮಾಜದ ಕೆಳ ಸ್ತರದಲ್ಲಿರುವ ಜನಸಾಮಾನ್ಯರು ಕೂಡ ನೀಡುತ್ತಾರೆ. ಪ್ರಸ್ತುತ ಅತ್ಯಧಿಕ ತೆರಿಗೆ ಪಾವತಿಸುತ್ತಿರುವವರು ಜನಸಾಮಾನ್ಯರೇ ಆಗಿದ್ದಾರೆ. ಇಂದಿನ ತೆರಿಗೆಗಳು ಹೆಚ್ಚಿನ ಹೊರೆಯಾಗುತ್ತಿರುವುದು ಕಳವಳಕಾರಿ ಎಂದರು. ಪ್ರಮುಖ ರಾಜಕೀಯ ಪಕ್ಷಗಳು ಜನ ಹಿತಕ್ಕೆ ಪೂರಕವಾಗಿ ಕಾರ್ಯನಿರ್ವಹಿಸದೆ ಸ್ವಹಿತಾಸಕ್ತಿ ಮತ್ತು ಕುಟುಂಬ ರಾಜಕಾರಣದಲ್ಲಿ…
ಮಡಿಕೇರಿ NEWS DESK ಮೇ 28 : ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕರಿಕೆ ಗ್ರಾಮದ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕರಿಕೆ ವಲಯ ಅರಣ್ಯಾಧಿಕಾರಿಗಳು ಅರಣ್ಯದಲ್ಲಿ ಬೀಟ್ ತೆರಳುತ್ತಿದ್ದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಕರಿಕೆ ಉಪ ಠಾಣಾ ಪೊಲೀಸ್ ಸಿಬ್ಬಂದಿಗಳು, ಭಾಗಮಂಡಲ ಪೊಲೀಸ್ ಠಾಣಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರಿಕೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಸಮೀಪ ನೀಲಿ ಬಣ್ಣದ ಶರ್ಟ್ ಇದ್ದು, ಕಾವಿ ಬಣ್ಣದ ಪಂಚೆಯಲ್ಲಿ ನೇಣು ಕುಣಿಕೆ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಮೇ 27 : ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಶ್ವೇತಪತ್ರವನ್ನು ಶಾಸಕರು ತಕ್ಷಣ ಬಿಡುಗಡೆ ಮಾಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತೇ ಹೊರತು ಇಲ್ಲಿಯವರೆಗೆ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಾಮಾಜಿಕ ಜಾಲಾತಾಣಗಳಲ್ಲಿ ಮಾತ್ರ ಕೋಟಿಗಟ್ಟಲೆ ಅನುದಾನದ ಸುಳ್ಳು ಪ್ರಚಾರ ನೀಡಿ ಜನರ ಹಾದಿ ತಪ್ಪಿಸಲಾಗುತ್ತಿದೆ. ಇದೀಗ 150 ಕೋಟಿ ರೂ.ಗಳ ಅನುದಾನದ ಬಗ್ಗೆ ಪ್ರಚಾರ ನೀಡಲಾಗುತ್ತಿದೆಯಾದರೂ ಮಳೆಯ ನೆಪವೊಡ್ಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಮತ್ತು ಗುಂಪುಗಾರಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಸರಕಾರ ಕಳೆದ ಮೂರು ವರ್ಷಗಳಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅಧಿಕಾರವನ್ನು ಅನುಭವಿಸುತ್ತಾ ಕಾಲಹರಣ ಮಾಡುತ್ತಿದೆ. ಇದರ ಪರಿಣಾಮ ವಿರಾಜಪೇಟೆ ಕ್ಷೇತ್ರದ…
ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ ಬರಬೇಕೆನ್ನುವುದು ರಾಜಕೀಯ ಪಕ್ಷಗಳ ಹಂಬಲವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಮಹದೇವಪೇಟೆಯ ಎ.ವಿ ಶಾಲೆಯ ಬಳಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಆಮ್ ಆದ್ಮಿ ಪಾರ್ಟಿ” ಹೆಸರೇ ಸೂಚಿಸುವಂತೆ ಈ ಪಕ್ಷಕ್ಕೆ ಸಾಮಾನ್ಯ ಜನರೇ ಮುಖ್ಯವಾಗಿದ್ದಾರೆ. ಇಲ್ಲಿ ಕುಟುಂಬ ರಾಜಕಾರಣವಿಲ್ಲ, ಇದು ಪಾರ್ಟಿಯ ಸಿದ್ಧಾಂತವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಈ ದೇಶದ ಅಭಿವೃದ್ದಿಯಾಗುತ್ತದೆ ಎನ್ನುವ ಬಗ್ಗೆ ನನಗೆ ನಂಬಿಕೆ ಇಲ್ಲ. ಕಳೆದ 10 ದಿನಗಳ ಅವಧಿಯಲ್ಲಿ 4 ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದ್ದು, ಜನ ಸಾಮಾನ್ಯರಿಗೆ ಇಂಧನವೂ ದೊರಕದ ಪರಿಸ್ಥಿತಿ ಕಾಣುತ್ತಿದ್ದೇವೆ. ಸಾಮಾನ್ಯರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ…
ಕುಶಾಲನಗರ NEWS DESK ಮೇ 27: ಕೊಡಗು ಜಿಲ್ಲಾ ಸರ್ಕಾರಿ ನೌಕರರ ಪುರುಷರ ಹಾಕಿ ತಂಡವು ರಾಜ್ಯ ಮಟ್ಟದ ಹಾಕಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಆಶ್ರಯದಲ್ಲಿ ಬೆಂಗಳೂರು ನಗರದ ಫೀಲ್ಡ್ ಮಾರ್ಷಲ್ ಕೆ. ಎಂ.ಕಾರ್ಯಪ್ಪ ಹಾಕಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಹಾಕಿ ಟೂರ್ನಿಯಲ್ಲಿ ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪುರುಷರ ಹಾಕಿ ತಂಡವು ತಂಡದ ನಾಯಕ ಬಿ.ಟಿ.ಪೂರ್ಣೇಶ್ ನೇತೃತ್ವದಲ್ಲಿ 7-1 ಗೋಲುಗಳಿಂದ ಮೈಸೂರು ಜಿಲ್ಲಾ ತಂಡವನ್ನು ಮಣಿಸಿ ರಾಷ್ಟ್ರೀಯ ಟೂರ್ನಿಗೆ ಅರ್ಹತೆ ಪಡೆಯಿತು. ಕೊಡಗು ಜಿಲ್ಲಾ ತಂಡದ ಆಟಗಾರರಾದ ಜಾಗೃತ್ -2 , ಬಿ.ಟಿ.ಪೂರ್ಣೇಶ್, ಡಿ.ಸಿ.ಸಂಜಿತ್, ಹರ್ಷಲ್, ಚಂದ್ರಶೇಖರ್ ಹಾಗೂ ಪಿ.ಎಸ್.ಸತೀಶ್ ತಲಾ ಒಂದು ಗೋಲು ಪಡೆದು ಗೆಲುವಿನ ನಗೆ ಬೀರಿದರು. ಟೂರ್ನಿಯಲ್ಲಿ ಡ್ಯಾನಿ ಈರಪ್ಪ, ಮೌನ್ ಮೊಣ್ಣಪ್ಪ, ಜಿ.ಕೆ.ಮಂಜುನಾಥ್, ಪೂಣಚ್ಚ, ಸುಬ್ಬಯ್ಯ, ಮಾಚಯ್ಯ, ರತೀಶ್, ಶ್ರೀನಿವಾಸ ರೈ, ದಯಾನಂದ…
ಮಡಿಕೇರಿ NEWS DESK ಮೇ 27 : ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ ಹಾಗೂ ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಮಡಿಕೇರಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮಹಮದ್ ಇಮ್ರಾನ್, ಎಂ.ಎನ್.ಮುಜೀಬ್, ಮೊಹಮ್ಮದ್ ನಾಸಿರ್ ಹುಸೇನ್, ಸಾಧಿಕ್ ಅಹಮದ್, ಇಮ್ರಾನ್ ಯು, ಸೈಯದ್ ಮಾಸೂಮ್ ಅಲಿ, ಎಂ.ಎಚ್.ಅಬ್ದುಲ್ ಹನೀಫ್, ಅಬ್ದುಲ್ ರಜಾಕ್, ಯೂನುಸ್ ಎಂ.ಎo, ನಝೀರ್ ಅಹ್ಮದ್ ಹಾಗೂ ಸಫಿಯಾ ಆಯ್ಕೆಯಾಗಿದ್ದಾರೆ.
ಮಡಿಕೇರಿ ಮೇ 26 NEWS DESK : ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಅಪಾಯ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಬಾರದ ರೀತಿಯಲ್ಲಿ ನೋಡಿಕೊಳ್ಳಲು ನಿರ್ದೇಶನ ನೀಡಿದರು. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು. ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ…
ಮಡಿಕೇರಿ ಮೇ 26 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು, ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮರಗೋಡು ಗೌಡ ಸಮಾಜದ ಆವರಣದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡದ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸಿದಲ್ಲಿ ಕನ್ನಡ ಭಾಷೆಯನ್ನೂ ಸಹ ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಮಕ್ಕಳು ಮತ್ತು ಯುವಜನರಿಗೆ ಕಲಿಸುವಂತಾಗಬೇಕು ಎಂದು ಅವರು ನುಡಿದರು. ಅರೆಭಾಷೆಯು ಒಂದು ವಿಶಿಷ್ಟ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಹತ್ತಿರವಾಗಿದೆ. ಆ ದಿಸೆಯಲ್ಲಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಪರಂಪರೆ, ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು. ಬಳಿಕ…






