ಲೇಖಕ: admin

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಲಯ ಹಾತೂರು ಕಾರ್ಯಕ್ಷೇತ್ರದ ಅನುಗ್ರಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಾತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಂಜುಳಾ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು ಇದರಿಂದ ಅನೇಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಎಂದು ತಿಳಿಸಿದರು. ಹೋಮಿಯೋಪತಿ ವೈದ್ಯಾಧಿಕಾರಿ ಡಾ.ಶ್ವೇತಾ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಅಧ್ಯಕ್ಷರಾದ ಗಿರಿಜಾ ಮಾತನಾಡಿ, ನಮ್ಮ ಕೇಂದ್ರಕ್ಕೆ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ತುಂಬಾ ಉಪಕಾರಿಯಾಯಿತು ಹಾಗೂ ಸದಸ್ಯರಲ್ಲಿ ಸ್ವಉದ್ಯೋಗ ಮಾಡಲು ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರವಾಯಿತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ…

Read More

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್ ಗ್ರೇಸ್ ಎಂಬ ಕಾರ್ಯಕ್ರಮ ನಡೆಯಿತು. ಆರ್ಥಿಕ ಸ್ಥಿತಿಯಲ್ಲಿ ಹಿಂದುಳಿದ ರೋಗಿಗಳಿಗೆ ನಗದು ರೂಪದಲ್ಲಿ ಸಹಾಯ ಮಾಡುವುದು ಹಾಗೂ ಅವಶ್ಯಕತೆ ಇದ್ದವರಿಗೆ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕೊಡಗಿಗೆ ಸೇರಿದ 15 ಚರ್ಚ್‍ನ ತಲಾ ಒಬ್ಬೊಬ್ಬ ಫಲಾನುಭವಿಗಳಿಗೆ ಮೂರು ಲಕ್ಷ ರೂಪಾಯಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ ಅವರು, ಧರ್ಮ ಯಾವುದೇ ಆಗಿರಲಿ, ದಾನ ಧರ್ಮ ಮಾಡುವ ಮೂಲಕ ಇತರರಿಗೆ ನೆರವಾಗಬೇಕು. ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಮಿಷಿನರಿಗಳ ಸೇವೆ ಅಪಾರ ಎಂದು ನುಡಿದರು. ಕೊಡಗು ಡಿಸಿಸಿ ಹಾಗೂ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ ಮಾತನಾಡಿ, ಇದು ಇತರರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಎಂದ ಅವರು, ತಮ್ಮ ಹೋರಾಟ ಜೀವನವನ್ನು ಹಾಗೂ ಕೈಗೊಂಡ ಯಶಸ್ಸನ್ನು ಸ್ಮರಿಸಿದರು.…

Read More

ಮಡಿಕೇರಿ ಮಾ.23 NEWS DESK : 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಕುಶಾಲನಗರ, ಮಾ.23 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯ ಪ್ರಾಂಶುಪಾಲರು ಆದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್  ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಆರಂಭಿಸಲಾಗುತ್ತಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಇದೇ ಮಾರ್ಚ್ 27 ರಂದು ಬೆಳಗ್ಗೆ 10.00 ಗಂಟೆಯಿಂದ ಕೂಡಿಗೆ ಸಂಸ್ಥೆಯ ಆವರಣದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಕೂಡಿಗೆ ಡಯಟ್…

Read More

ಮಡಿಕೇರಿ ಮಾ.23 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್, 7 ರಿಂದ 30 ರವರೆಗೆ (ರಜೆ ದಿನ ಹೊರತುಪಡಿಸಿ) 21 ದಿನಗಳ ಕಾಲ ನುರಿತ ತರಬೇತುದಾರರಿಂದ ಬೇಸಿಗೆ ತರಬೇತಿ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಈಜು ತರಬೇತುದಾರರು ಮನೋಹರ್ ದೂ.ಸಂ.9480032712, ಷಟಲ್ ಬ್ಯಾಡ್ಮಿಂಟನ್ ತರಬೇತುದಾರರು ಜ್ಯೋತಿ ಸೋಮಯ್ಯ 8792842853, ಟೇಬಲ್ ಟೆನ್ನಿಸ್ ತರಬೇತುದಾರರು ರಚನ್ ಪೊನ್ನಪ್ಪ 9110677030, ಅಥ್ಲೆಟಿಕ್ಸ್ ತರಬೇತುದಾರರು ಮಹಾಬಲ ಕೆ. 9980887499 ಮತ್ತು ಹಾಕಿ ತರಬೇತುದಾರರು ಬಿಂದ್ಯಾ ಕೆ.ಕೆ. 8105122430 ನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. :: ಕ್ರೀಡೆಗಳ ವಿವರ : : ಈಜು, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್(7 ರಿಂದ 18 ವರ್ಷದವರಿಗೆ), ಅಥ್ಲೆಟಿಕ್ಸ್, ಹಾಕಿ (10 ರಿಂದ 18 ವರ್ಷದವರಿಗೆ). ಈಜು ಬೆಳಗ್ಗೆ 9.30 ರಿಂದ 11.30 ರವರೆಗೆ ಮತ್ತು ಸಂಜೆ 5 ರಿಂದ 6.30 ಗಂಟೆಯವರೆಗೆ, ಷಟಲ್ ಬ್ಯಾಡ್ಮಿಂಟನ್ ಮಧ್ಯಾಹ್ನ…

Read More

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೈಜೋಡಿಸಬೇಕು ಎಂದು ಅವರು ಕೋರಿದರು. ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಸರ್ಕಾರದ ಅಂಗ ಸಂಸ್ಥೆಗಳಿಗೆ ಬೆಡ್‍ಶೀಟ್, ಟವಲ್, ಮ್ಯಾಟ್ ಮತ್ತಿತರ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿದಲ್ಲಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಬರಲಿದೆ. ಇದರಿಂದ ಸ್ಥಳೀಯವಾಗಿ ಸ್ವ ಉದ್ಯೋಗ ದೊರೆಯಲಿದೆ ಎಂದು ಅವರು ಸಲಹೆ ಮಾಡಿದರು. ನೇಕಾರರ ಬದುಕು ಹಸನುಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪಾಂಡುರಂಗ ಅವರು ಸಲಹೆ ಮಾಡಿದರು. ಕೊಡಗು…

Read More

ಮಡಿಕೇರಿ ಮಾ.23 NEWS DESK :  ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪತ್ರಕರ್ತರಿಗೆ ಆಯೋಜಿಸಿದ್ದ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 ನಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯಾಟದಲ್ಲಿ ಟಾಸ್ ಸೋತ ಮೀಡಿಯಾ ಚಾಲೆಂಜರ್ಸ್ ತಂಡ ನಿಗದಿತ 6 ಓವರ್‍ನಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಕಲೆಹಾಕಿತು. ತಂಡದ ಪರ ವಿನೋದ್ 39, ಹೇಮಂತ್ 31 ರನ್ ಕಲೆ ಹಾಕಿದರು. ಗುರಿ ಬೆನ್ನಟ್ಟಿದ ಮೀಡಿಯಾ ಹಿಟ್ಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 54 ರನ್‍ಗಳಿಸಿ 27ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡವನ್ನು ಮೀಡಿಯಾ ಹಿಟ್ಟರ್ಸ್ ತಂಡ 10 ವಿಕೆಟ್‍ಗಳಿಂದ ಮಣಿಸಿತು. ನಂತರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತ ಕೂರ್ಗ್ ಡ್ಯೂ ಡ್ರಾಪ್ಸ್ ಕುಶಾಲನಗರ ತಂಡ ನಿಗದಿತ ಓವರ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 44 ರನ್…

Read More

ಮಡಿಕೇರಿ ಮಾ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧಿಕಾರವಧಿಯಲ್ಲೇ ನಡೆದಿದೆ. ಆದರೆ ಕಾಂಗ್ರೆಸ್ಸಿಗರು ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಸುಳ್ಳು ಹೇಳಿಕೆ ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2016ರಲ್ಲಿ ಆಗಿನ ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ- ಕರಡ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ದರ್ಜೆಯ ರಸ್ತೆಯನ್ನು ನಿರ್ಮಾಣ ಮಾಡಲು ಅಡಿಗಲ್ಲು ಹಾಕಿದರು. ಇದೇ ಅವಧಿಯಲ್ಲಿ 3 ಕಿ.ಮೀ ಉತ್ತಮ ರಸ್ತೆಯನ್ನು ಮರು ಡಾಂಬರೀಕರಣ ಮಾಡಿ ಅನುಕೂಲ ಕಲ್ಪಿಸಿಕೊಟ್ಟರು. ಇದೀಗ ಕಾಂಗ್ರೆಸ್ ಸರಕಾರ ಬಂದ ನಂತರ ಕಳೆದ ಮೂರು ವರ್ಷಗಳಲ್ಲಿ ಒಂದು ಕಿ.ಮೀ 350 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಿ…

Read More

ಸುಂಟಿಕೊಪ್ಪ ಮಾ.23 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆ ಧ್ವಜಾರೋಹಣದೊಂದಿಗೆ ಆರಂಭಗೊಂಡ ತೆರೆ ಮಹೋತ್ಸವವು ಮಧ್ಯಾಹ್ನದವರೆಗೂ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ಕೋಲಗಳು ಸೇರಿದಂತೆ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪ ಹಾಗೂ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಯಂಕನ ಶ್ರೀರಾಮ್, ಬಿ.ಡಿ.ರಾಜುರೈ, ಪ್ರಧಾನಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್‍ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸುರೇಶ್ ಗೋಪಿ, ಸುದೀಶ್, ಚಂದು ಸುರೇಶ್, ಧನುಕಾವೇರಪ್ಪ, ಎಂ.ಎಸ್.ಸುನಿಲ್, ಚಂದ್ರ, ಪ್ರವೀಣ, ದಿವಾಕರ ರೈ, ವಿನೋದ್, ಪ್ರಾಂತ್, ಎ.ಲೋಕೇಶ್ ಕುಮಾರ್, ಎ.ಶ್ರೀಧರ್ ಕುಮಾರ್, ಮನು ರೈ (ಮಹೇಶ್), ಸಲಹಾಸಮಿತಿ ಸದ್ಯರಾದ ಕೆ.ಪಿ.ಜಗನ್ನಾಥ್, ವೀಣಾರೈ, ಗಿರೀಜಾ ಉದಯಕುಮಾರ್ ಹಾಗೂ ರಮ್ಯ ಮೋಹನ್ ಸೇರಿದಂತೆ ಸಮಿತಿ ಸದಸ್ಯರು ಸೇರಿದಂತೆ ಭಕ್ತಾಧಿಗಳು ಸಾವಿರಾರು…

Read More

ಮಡಿಕೇರಿ ಮಾ.23 NEWS DESK : ಕೊಡಗು ಜಿಲ್ಲೆಯ ಪ್ರತಿಷ್ಟಿತ ಕ್ಲಬ್ ಗಳಲ್ಲೊಂದಾದ ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರತನ್ ತಮ್ಮಯ್ಯ ಆಯ್ಕೆಯಾಗಿದ್ದಾರೆ. ಮಾ.21 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2 ವಷ೯ಗಳ ಅವಧಿಗೆ ರತನ್ ತಮ್ಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮುಕ್ಕಾಟೀರ ಸಂಜು ಪೊನ್ನಪ್ಪ ಅವರನ್ನು ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮತ್ತು ಸಂಜಯ್ ಹೆಚ್. ಎಲ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. 121 ವಷ೯ಗಳ ಸುಧೀಘ೯ ಇತಿಹಾಸಿವಿರುವ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ 240 ಸದಸ್ಯರಿದ್ದಾರೆ, ರತನ್ ತಮ್ಮಯ್ಯ ರೋಟರಿ ಸಂಸ್ಥಯ ವಿವಿಧ ಹುದ್ದೆಗಳಲ್ಲಿಯೂ ಕಾಯ೯ನಿವ೯ಹಿಸಿದ್ದಾರೆ.

Read More