ಲೇಖಕ: admin

ಮಡಿಕೇರಿ ಸೆ.12 NEWS DESK : ವಿಶ್ವದ ಅತಿ ದೊಡ್ಡ ಕೌಶಲ್ಯ ಹಬ್ಬ ವಲ್ರ್ಡ್ ಸ್ಕಿಲ್ಸ್ ಸ್ಫರ್ಧೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಜಗತ್ತಿನ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆ ಆಗಿದೆ. ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ 2026-27 ಅನ್ನು ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ಆಯೋಜಿಸಲಾಗುತ್ತಿದೆ. ‘ವಲ್ರ್ಡ್ ಸ್ಕಿಲ್-2028’ ಜಾಗತಿಕ ಮಟ್ಟದ ಸ್ಪರ್ಧೆಯು ಜಪಾನಿನ ಐಚಿಯಲ್ಲಿ ನಡೆಯಲಿದ್ದು, ಭಾರತವನ್ನು ಪ್ರತಿನಿಧಿಸಲು ಬಯಸುವ ಯುವಕ ಯುತಿಯರಿಗೆ ಇಂಡಿಯಾ ಸ್ಕಿಲ್ಸ್ -2026 ಕಾರ್ಯಕ್ರಮ ರಾಜ್ಯ ಮಟ್ಟದ ವೇದಿಕೆ ಒದಗಿಸುತ್ತಿದೆ. 63 ವಿವಿಧ ವೃತ್ತಿಪರ ಕೌಶಲ್ಯ ವಿಭಾಗಗಳಲ್ಲಿ ನೈಪುಣ್ಯತೆ ಹೊಂದಿರುವ 16 ರಿಂದ 25 ವರ್ಷ ವಯೋಮಿತಿಯ ಜಿಲ್ಲೆಯ ಯುವಜನರು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಬಹದು. ಆಸಕ್ತಿಯಿರುವ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಆಧಾರ್ ಮಾಹಿತಿಯೊಂದಿಗೆ https://www.skillindiadigital.gov.in/home  ಲಿಂಕ್‍ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 15 ಕೊನೆ ದಿನವಾಗಿದೆ. ಸ್ಪರ್ಧೆಗೆ ಗುರುತಿಸಲಾಗಿರುವ 63 ವಿವಿಧ ವೃತ್ತಿಪರ ಕೌಶಲ್ಯಗಳ ಪಟ್ಟಿ,…

Read More

ವಿರಾಜಪೇಟೆ ಸೆ.12 NEWS DESK : ತಾಲೂಕಿನ ವಿರಾಜಪೇಟೆ ವಲಯದ ಕಡಂಗ ಕಾರ್ಯಕ್ಷೇತ್ರ ವ್ಯಾಪ್ತಿಯ ಬೆಳ್ಳುಮಾಡು ಗ್ರಾಮದ ಶ್ರೀ ಮಾದೇರಪ್ಪ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರೂ.3 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಅನುದಾನದ ಮಂಜೂರಾತಿ ಪತ್ರದೊಂದಿಗೆ ಡಿ.ಡಿ.ಯನ್ನು ತಾಲೂಕು ಯೋಜನಾಧಿಕಾರಿ ಹರೀಶ್ ಪಿ. ಅವರು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ವಲಯದ ಮೇಲ್ವಿಚಾರಕ ಶಿವಕುಮಾರ್ ಬಿ., ಸೇವಾಪ್ರತಿನಿಧಿ ತೇಜಸ್ವಿನಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.12 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆ ಹೊನ್ನಮ್ಮ ತಾಯಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವು ಸೆಪ್ಟೆಂಬರ್, 14 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಸಚಿವರಾದ ಬಿ.ಎ.ಜೀವಿಜಯ, ಎಂ.ಪಿ.ಅಪ್ಪಚ್ಚು ರಂಜನ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಜಿ.ಪಂ.ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಗ್ರಾ.ಪಂ. ಅಧ್ಯಕ್ಷರಾದ ಎಚ್.ಎಂ.ಗೋಪಾಲಕೃಷ್ಣ, ಗೌಡಳ್ಳಿ ಪ್ರಾ.ಕೃ.ಪ.ಸ.ಸಂ. ಅಧ್ಯಕ್ಷರಾದ ಭರತ್ ಕುಮಾರ್, ಮಾಜಿ ಅಧ್ಯಕ್ಷರಾದ ಎಚ್.ಆರ್.ಸುರೇಶ್, ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಹಾಸನ ಶೇಖರ್ ಪೈಂಟ್ಸ್‍ನ ಶೇಖರ್, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಸೆ.15 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 2007 ರ ಘೋಷಣೆಯಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತೀ ವರ್ಷ ಸೆಪ್ಟೆಂಬರ್, 15 ರಂದು ಆಚರಿಸಲಾಗುತ್ತಿದೆ. ಆದ್ದರಿಂದ ಈ ಬಾರಿಯು ಸಹ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಕಾನೂನು ನ್ಯಾಯ, ಮಾನವ ಹಕ್ಕುಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವಂತೆ ಸಲಹೆ ಮಾಡಿದರು. ಪ್ರಜಾಪ್ರಭುತ್ವ ವಿಚಾರಧಾರೆಯನ್ನು ಸಾರ್ವಜನಿಕರಿಗೆ ಹಾಗೂ ಯುವಕರಿಗೆ ತಿಳಿಸಬೇಕಾದ ಅಗತ್ಯತೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಸಲಹೆ ಮಾಡಿದರು. ಸೆಪ್ಟೆಂಬರ್, 16 ರಿಂದ ನವೆಂಬರ್, 26 ರವರೆಗೆ ತಾಲ್ಲೂಕು ಹಾಗೂ…

Read More

ವಿರಾಜಪೇಟೆ ಸೆ.12 NEWS DESK : ವಿರಾಜಪೇಟೆ ಕೊಡಗು ಮಹಿಳಾ ಸಹಕಾರ ಸಂಘ ನಿ. ಇದರ 2025-26ನೇ ಸಾಲಿನ 86ನೇ ವಾರ್ಷಿಕ ಮಹಾಸಭೆಯು ಸೆ.19 ರಂದು ನಡೆಯಲಿದೆ. ಸಂಘದ ಅಧ್ಯಕ್ಷರಾದ ಪಟ್ರಪಂಡ ಗೀತಾ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10.30ಕ್ಕೆ ಸಂಘದ ಕಟ್ಟಡದಲ್ಲಿ ಸಭೆ ಜರುಗಲಿದ್ದು, ಸಾಲಿನ ಲೆಕ್ಕಪರಿಶೋಧನಾ ವರದಿ ಮಂಡನೆ, ನಿವ್ವಳ ಲಾಭದ ವಿಲೇವಾರಿ ಹಾಗೂ ಮುಂಬರುವ ಸಾಲಿನ ಆಯವ್ಯಯ ಬಜೆಟ್‍ಗೆ ಅನುಮೋದನೆ ಪಡೆಯಲಾಗುವುದು. ಸದಸ್ಯರು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿ ಹಾಗೂ ಆಹ್ವಾನ ಪತ್ರಿಕೆಯ ಪರಿಚಯ ಚೀಟಿಯೊಂದಿಗೆ ಆಗಮಿಸಿ ಸಭಾ-ಭತ್ಯೆ ಪಡೆದುಕೊಳ್ಳುವಂತೆ ಸಂಘದ ಕಾರ್ಯದರ್ಶಿ ಬಿ.ಜಿ. ಪುಷ್ಪಲತ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ, ಸೆ.12 NEWS DESK : ಮಡಿಕೇರಿ ನಗರ ವ್ಯಾಪ್ತಿಯ ವಿವಿಧ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಕುರಿತು ತಪಾಸಣೆ ನಡೆಸಿ, ಕಾನೂನು ಅರಿವು ಮೂಡಿಸಲಾಯಿತು. ನಗರದ ಹೋಟೆಲ್, ದಿನಸಿ ಅಂಗಡಿ, ಕಾಫಿ–ಟೀ ಕ್ಯಾಂಟೀನ್ ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ ಕಾಯ್ದೆ, 2016ರ ಪ್ರಮುಖ ಅಂಶಗಳ ಕುರಿತು ಸಂಸ್ಥೆಗಳ ಮಾಲೀಕರಿಗೆ ಮಾಹಿತಿ ನೀಡಲಾಯಿತು. ಕಾಯ್ದೆಯ ಪ್ರಮುಖ ಅಂಶಗಳನ್ನು ಒಳಗೊಂಡ ಬಿತ್ತಿಪತ್ರಗಳನ್ನು ವಿತರಿಸಲಾಯಿತು. ಅಲ್ಲದೆ, ಸಂಸ್ಥೆಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳದಿರುವ ಕುರಿತು ಮಾಲೀಕರಿಂದ ಸ್ವಯಂ ಘೋಷಣಾ ಪತ್ರಗಳನ್ನು ಪಡೆಯುವ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸುವಂತೆ ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಕಾಯ್ದೆ, 1976, ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006 ಹಾಗೂ ಪೋಕ್ಸೋ ಕಾಯ್ದೆ, 2012ರ ಕುರಿತು ಸಾರ್ವಜನಿಕರು ಮತ್ತು…

Read More

ಮಡಿಕೇರಿ, NEWS DESK ಸೆ.12 : ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಅನುಷ್ಠಾನ ಸಮಿತಿಯೊಂದಿಗೆ ಚರ್ಚಿಸಿ, ವರದಿ ವ್ಯಾಪ್ತಿಯ 9,993.75 ಚ.ಕಿ.ಮೀ. ಪ್ರದೇಶವನ್ನು 8,590.69 ಚ.ಕಿ.ಮೀ.ಗೆ ಹಾಗೂ 123 ಗ್ರಾಮಗಳನ್ನು 98 ಗ್ರಾಮಗಳಿಗೆ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾಪಿಸಿದೆ. ಇದೇ ಮಾದರಿಯ ಪ್ರಯತ್ನವನ್ನು ಕರ್ನಾಟಕವೂ ಮಾಡಬೇಕೆಂದು ಸೇವ್ ಕೊಡಗು ಸಂಘಟನೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖ ಮಧು ಬೋಪಣ್ಣ ಅವರು, ಕಸ್ತೂರಿ ರಂಗನ್ ವರದಿ ಸಮಿತಿಯಲ್ಲಿ ವಿಜ್ಞಾನಿಗಳು ಹಾಗೂ ಪರಿಸರ ತಜ್ಞರಿಗೆ ಮಾತ್ರ ಪ್ರಾತಿನಿಧ್ಯವಿತ್ತು. ಪಶ್ಚಿಮಘಟ್ಟದ ಜನರ ಸಮಸ್ಯೆಗಳನ್ನು ಅರಿತ ಸಮಾಜಶಾಸ್ತ್ರಜ್ಞರು, ಜನಸಂಘಟನೆಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಪ್ರಾತಿನಿಧ್ಯ ಇರಲಿಲ್ಲ. ಪ್ರಸ್ತುತ ಸಂಜಯ್ ಕುಮಾರ್ ನೇತೃತ್ವದ ಅನುಷ್ಠಾನ ಸಮಿತಿಯಲ್ಲಿಯೂ ಪರಿಸರ ತಜ್ಞರೇ ಇದ್ದಾರೆ. ಹೀಗಾಗಿ ಸಮಿತಿಯನ್ನು ವಿಸರ್ಜಿಸಿ, ಸಮಾನ ಪ್ರಾತಿನಿಧ್ಯ ಹೊಂದಿರುವ ಹೊಸ ಸಮಿತಿಯನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ಹೇಳಿದರು. ಕಂದಾಯ ಗ್ರಾಮಗಳು ಹಾಗೂ ಜನವಸತಿ ಪ್ರದೇಶಗಳನ್ನು ಹೊರತುಪಡಿಸಿ…

Read More

ಮಡಿಕೇರಿ, NEWS DESK ಸೆ.12: ಕೋಲಾರದ ಬಂಗಾರಪೇಟೆಯಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಸೇರಿದಂತೆ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಮೆನ್ಸ್ ಇಂಡಿಯನ್ ಮೂವ್‌ಮೆಂಟ್ ಸಂಘಟನೆಯ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ವಿಮೆನ್ಸ್ ಇಂಡಿಯನ್ ಮೂವ್‌ಮೆಂಟ್‌ನ ಜಿಲ್ಲಾಧ್ಯಕ್ಷೆ ರಿಶಾನ ತಹಸೀರ್ ಅವರ ನೇತೃತ್ವದಲ್ಲಿ ಶನಿವಾರ ನಗರದ ಇಂದಿರಾಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಘಟನೆಯ ಜಿಲ್ಲಾಧ್ಯಕ್ಷೆ ರಿಶಾನ ತಹಸೀರ್ ಮಾತನಾಡಿ, ಕೋಲಾರದ ಬಂಗಾರಪೇಟೆಯಲ್ಲಿ ವಾರದ ಹಿಂದೆ ಸಂಜೆ ವೇಳೆ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ಈ ಕುರಿತು ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಒಬ್ಬ ಆರೋಪಿಯನ್ನು ಮಾತ್ರ ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಕೂಡ ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲು ಪೊಲೀಸ್ ಇಲಾಖೆ ಹಾಗೂ ಸರ್ಕಾರ…

Read More

ಸುಂಟಿಕೊಪ್ಪ, NEWS DESK ಸೆ. 12: ದೇವರು ಮತ್ತು ಭಕ್ತರ ನಡುವಿನ ಕೊಂಡಿಯಾಗಿ ಅರ್ಚಕರು ಕಾರ್ಯನಿರ್ವಹಿಸಿದರೆ, ಪತ್ರಿಕಾ ವಿತರಕರು ಪತ್ರಿಕೆ ಮತ್ತು ಓದುಗರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ‘ಶಕ್ತಿ’ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕದ ಸಹಯೋಗದಲ್ಲಿ ಇಲ್ಲಿನ ಕೇರಳ ಸಮಾಜಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘ ಕೊಡಮಾಡುವ ಶೈಕ್ಷಣಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೆ ಮತ್ತು ಪತ್ರಿಕಾ ವಿತರಕರು ಒಂದು ಕುಟುಂಬವಿದ್ದಂತೆ. ಪತ್ರಿಕಾ ಸಂಪಾದಕರು ಎಷ್ಟೇ ಉತ್ತಮವಾಗಿ ಪತ್ರಿಕೆಯನ್ನು ಹೊರತಂದರೂ ಅದು ಓದುಗರಿಗೆ ತಲುಪದಿದ್ದರೆ ವ್ಯರ್ಥ. ಆದ್ದರಿಂದ ಪತ್ರಿಕೆಗಳ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ವಿಶ್ಲೇಷಿಸಿದರು. ಇತ್ತೀಚಿನ…

Read More

ಗೋಣಿಕೊಪ್ಪ, NEWS DESK ಸೆ.12: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಮತ್ತು 3ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಲಾಂಛನವನ್ನು ರಿಪಬ್ಲಿಕ್ ನೆಟ್‌ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಬಿಡುಗಡೆಗೊಳಿಸಿದರು. ಪೊನ್ನಂಪೇಟೆಯ ಖಾಸಗಿ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಕೊಡಗಿನ ಪತ್ರಕರ್ತರು ಸಾಕಷ್ಟು ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಸಂಘಟಿತರಾಗುತ್ತಿರುವುದು ಮೆಚ್ಚುವ ವಿಚಾರವಾಗಿದೆ. ಹಿಂದೆಯೂ ಹಲವು ಕ್ರೀಡಾಕೂಟಗಳು ನಡೆದಿರುವ ಬಗ್ಗೆ ಮಾಹಿತಿ ಇದೆ. ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ಆಯೋಜಿಸುವ ಮೂಲಕ ಮತ್ತೆ ಕ್ರೀಡಾ ಚಟುವಟಿಕೆಗಳತ್ತ ಉತ್ಸಾಹ ತೋರುತ್ತಿರುವುದು ಮಾದರಿಯಾಗಿದೆ. ಕ್ರೀಡಾಕೂಟಕ್ಕೆ ಅಗತ್ಯ ನೆರವು ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ ತಂಡಗಳನ್ನು ಸೇರಿಸಿಕೊಂಡು ಕ್ರಿಕೆಟ್ ಟೂರ್ನಿ ನಡೆಸಲು ಯೋಜನೆ ರೂಪಿಸಲಾಗಿದೆ. ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸುಮಾರು 20ಕ್ಕೂ ಹೆಚ್ಚು…

Read More