ಮಡಿಕೇರಿ NEWS DESK ಜು.17 : ಆದಾಯ ತೆರಿಗೆ ಇಲಾಖೆಯ ನಿವೃತ್ತ ಸಿಬ್ಬಂದಿ, ಮಡಿಕೇರಿ ನಗರದ ಕುಂಬಳಕೇರಿ ಉಕ್ಕುಡದ ನಿವಾಸಿ ಹೆಚ್.ಬಿ.ಕೃಷ್ಣಪ್ಪ (74) ಅವರು ಇಂದು (ಜು.17) ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜು.18 ರಂದು ಕುಂಬಳಕೇರಿ ಉಕ್ಕುಡದಲ್ಲಿ ನಡೆಯಲಿದೆ.
ಲೇಖಕ: admin
ಮಡಿಕೇರಿ NEWS DESK ಜು.17 : ಮಡಿಕೇರಿಯ ಮಾರ್ನಿಂಗ್ ಗುಡ್ಮಿಂಟನ್ ತಂಡದ ವತಿಯಿಂದ ತಂಡದ ಸ್ಥಾಪಕಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ನೇತೃತ್ವದಲ್ಲಿ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ 14 ಡಬಲ್ಸ್ ತಂಡಗಳು ಭಾಗವಹಿಸಿ ಕ್ರೀಡಾಸ್ಫೂರ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದವು. ರೋಚಕ ಅಂತಿಮ ಪಂದ್ಯದಲ್ಲಿ ಡಾ.ಕರುಣಾಕರ್ ಹಾಗೂ ಹುಸೇನ್ ಜೋಡಿ ಚಾಂಪಿಯನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಚೇತನ್ ಹಾಗೂ ಅಯ್ಯನ್ ಗೌಡ ಜೋಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು. ಪಂದ್ಯಾವಳಿಗೆ ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ದೊರೆಯಿತು. ಅಂತಿಮ ಪಂದ್ಯವನ್ನು ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ ಹಾಗೂ ಕುಕ್ಕೇರ ಜಯ ಚಿಣ್ಣಪ್ಪ ಅವರು ಉದ್ಘಾಟಿಸಿದರು. ವಿ.ಟಿ.ವಿಸ್ಮಯಿ ಅವರು ಮಾತನಾಡಿ ಕ್ರೀಡೆಯು ದೈಹಿಕ…
ಮಡಿಕೇರಿ ಜು.16 NEWS DESK : ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ನಲ್ಲೂರಿನಲ್ಲಿ ಖಾಯಂ ವೈದ್ಯರು ನೇಮಕಾತಿ ಹೊಂದಿದ್ದು, ಸಾರ್ವಜನಿಕರ ತಪಾಸಣೆಗೆ ವಾರದಲ್ಲಿ ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ಲಭ್ಯವಿರುತ್ತಾರೆ. ಸಾರ್ವಜನಿಕರು ಇಲಾಖಾ ಸೇವೆಯನ್ನು ಪಡೆಯಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9448328464 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.16 NEWS DESK : `ಅಗ್ನಿವೀರ್’ ಯೋಧನಾಗಿ ಆಯ್ಕೆಯಾಗಿ, ಪಂಜಾಬ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಬಿಟ್ಟಂಗಾಲದ ಬಿಎಸ್ಎನ್ಎಲ್ ಉದ್ಯೋಗಿ ಲಕ್ಷ್ಮಿ ರಾಜಪ್ಪ ಅವರ ಪುತ್ರ, ಯೋಗೇಶ್ವರ್ ಅವರನ್ನು ಕೊಡಗಿನ ಅಜಿಲ ಸಮುದಾಯದಿಂದ ಸನ್ಮಾನಿಸಲಾಯಿತು. ವಿರಾಜಪೇಟೆ ಬಳಿಯ ಕೊಟ್ಟೋಳಿಯ ದೇವಯ್ಯ ಅವರ ಮನೆಯಂಗಳದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಯೋಗೇಶ್ವರ್ ಅವರನ್ನು ಶಾಲು, ಪೇಟ, ಹಾರ ಮತ್ತು ಫಲ ತಾಂಬೂಲದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಹಿರಿಯರಾದ ಬಾಬು ಅಜಿಲ ಮಾತನಾಡಿ, ಯೋಗೇಶ್ವರ್ ಅವರು ದೇಶಸೇವೆಗಾಗಿ ಆಯ್ಕೆಯಾಗಿರುವದು ಸಮುದಾಯಕ್ಕೆ ಹೆಮ್ಮೆ ತಂದಿದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರಲ್ಲಿರುವ ಪ್ರತಿಭೆಗಳನ್ನು ಹೊರತರಲು ಶ್ರಮಿಸಬೇಕು. ಜೊತೆಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು. ಉತ್ಸಾಹಿ ಯುವಕ ಯೋಗೇಶ್ವರ್ ಅಗ್ನಿವೀರ್ ಯೋಧನಾಗಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವದು, ಉಳಿದ ಯುವಕರಿಗೆ ಮಾದರಿ ಎಂದು ಅವರು ಹೇಳಿದರು. ಯೋಧ ಯೋಗೇಶ್ವರ್ ತಾಯಿ ಲಕ್ಷ್ಮಿ ಮಾತನಾಡಿ, ಎಲ್ಲ ಸನ್ಮಾನಕ್ಕಿಂತಲೂ ಸಮುದಾಯದವರಿಂದ ಸಿಕ್ಕಿದ ಗೌರವದಿಂದ ಹೃದಯ ತುಂಬಿ ಬಂದಂತಾಗಿದೆ…
ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಮೂರ್ಲನೆ ಮಾಡಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ, ಜಿಲ್ಲಾ ಕಾರ್ಯಪಡೆ, ಸಲಹಾ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ ಬಾಲ ಕಾರ್ಮಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಟ್ಟುನಿಟ್ಟಾದ ಕಾನೂನು ಜಾರಿ, ಶಾಲಾ ದಾಖಲಾತಿ ಹೆಚ್ಚಳ ಮತ್ತು ಸಾರ್ವಜನಿಕರಲ್ಲಿ ಮೂಡಿದ ಜಾಗೃತಿಯಿಂದಾಗಿ ಈ ಪಿಡುಗು ಕಡಿಮೆಯಾಗಲು ಸಾಧ್ಯವಾಗಿದೆ. ಆದರೂ, ಗ್ರಾಮೀಣ ಪ್ರದೇಶಗಳಲ್ಲಿ, ಸಣ್ಣ ಕೈಗಾರಿಕೆಗೆ ಹಾಗೂ ಹೋಟೆಲ್, ತೋಟ, ರೆಸಾರ್ಟ್ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡುವ ಮೂಲಕ ಸಂಪೂರ್ಣವಾಗಿ ನಿರ್ಮೂಲನೆಗೆ ಪಣತೊಡಬೇಕು. ಮಕ್ಕಳನ್ನು ದುಡಿಸಿಕೊಳ್ಳುವ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.…
ಕುಶಾಲನಗರ ಜು.16 NEWS DESK : ನಾಡಿನಾದ್ಯಂತ ಗ್ರಾಮೀಣ ಪ್ರದೇಶಗಳ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ದೊರಕಬೇಕೆಂಬ ಕನಸು ನಡೆದಾಡಿದ ದೈವ ಸಿದ್ದಗಂಗಾ ಮಠದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಕನಸಾಗಿತ್ತು. ಅಂತೆಯೇ ಶ್ರೀಗಳ ಅಪ್ರತಿಮ ಸೇವೆಯಿಂದಾಗಿ ಭಕ್ತರ ಪಾಲಿನ ವಿಶ್ವ ಕಂಡ ಶ್ರೇಷ್ಠ ಸಂತರಾದರು. ಅವರ ಪ್ರತಿಮೆಗಳು ನಾಡಿನಾದ್ಯಂತ ಭಕ್ತಿಮಯವಾಗಿವೆ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಕುಶಾಲನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ಗುರುವಾರ ಭೇಟಿ ನೀಡಿ ಶ್ರೀಗಳ ಪಾದಗಳಿಗೆ ಪುಷ್ಪ ನಮನ ಸಲ್ಲಿಸಿದ ಶ್ರೀಗಳು ನೆರೆದ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಕುಶಾಲನಗರದಲ್ಲೂ ಭಕ್ತ ಸಮದಾಯ ಶ್ರೀಗಳ ಹೆಸರಿನಲ್ಲಿ ವೃತ್ತಿಗಳನ್ನು ನಿರ್ಮಾಣ ಮಾಡಿರುವುದು ಸಂತಸದ ಸಂಗತಿ ಎಂದರು. ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕೊಡಗು…
ಮಡಿಕೇರಿ ಜು.16 NEWS DESK : ಕೋಟ್ಯಂತರ ಜನರ ಹೃದಯದಲ್ಲಿ ಶಾಶ್ವತ ಸ್ಥಾನವನ್ನು ಪಡೆದುಕೊಂಡಿರುವ ಸ್ವರ ಸಾಮ್ರಾಜ್ಞಿ, ಗಾನ ಕೋಗಿಲೆ ಎಸ್. ಜಾನಕಿಯಮ್ಮನವರಿಗೆ, ಸುಮಧುರ ಗಾಯನಗಳ ಪುಷ್ಪಮಾಲೆಯನ್ನು ತೊಡಿಸಿ, ನುಡಿನಮನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ಕೆಲ ದಿನಗಳ ಹಿಂದಷ್ಟೆ ನಮ್ಮನ್ನಗಲಿರುವ ಎಸ್. ಜಾನಕಿಯವರಿಗೆ ನಗರದ ಪತ್ರಿಕಾ ಭವನದಲ್ಲಿ ಗೌರವ ನಮನ ಸಲ್ಲಿಸುವ ಮೂಲಕ, ಅವರ ಅಗಲಿಕೆಗೆ ಸಂತಾಪವನ್ನು ವ್ಯಕ್ತಪಡಿಸಲಾಯಿತು. ಸತಿ ಸಕ್ಕೂಬಾಯಿ ಚಲನ ಚಿತ್ರಕ್ಕೆ ಜಾನಕಿಯವರು ಹಾಡಿದ “ಓ ಪಾಂಡುರಂಗ ಪ್ರಭೋ ವಿಠಲ”ವನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್ ಅವರು ಸುಮಧುರವಾಗಿ ಹಾಡಿದರೆ, ಜಿಲ್ಲಾ ಕಸಾಪ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು, ಜಾನಕಿಯಮ್ಮನವರು ಹಾಡಿರುವ ಹಾಡುಗಳನ್ನೆಂದಿಗೂ ಮರೆಯಲಾಗದ್ದು, ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವೆಂದು ಅಭಿಪ್ರಾಯಿಸಿ,…
ಮಡಿಕೇರಿ ಜು.16 NEWS DESK : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಮೇಲೆ ಪ್ರಭಾವ ಬೀರುವ ಮೂಲಕ ರಾಜ್ಯದ 70 ರಿಂದ 75 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದೆಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಪಕ್ಷದ ಎಸ್ಐಆರ್ ರಾಜ್ಯ ಉಸ್ತುವಾರಿಗಳಾದ ವಿ.ಆರ್.ಸುದರ್ಶನ್ ಗಂಭೀರ ಆರೋಪ ಮಾಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿತ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಎಸ್ಐಆರ್ನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ಎಚ್ಚರಿಕೆಯನ್ನು ತೆಗೆದುಕೊಂಡಿದೆ. ಯಾವೊಬ್ಬ ನೈಜ ಮತದಾರರ ಮತದಾನದ ಹಕ್ಕನ್ನು ರಾಜ್ಯ ಚುನಾವಣಾ ಆಯೋಗ ಕಸಿದುಕೊಳ್ಳ ಕೂಡದು. ಬಡವರು, ರೈತಾಪಿ ವರ್ಗ ಹೀಗೆ ಸಮಾಜದ ದುರ್ಬಲ ವರ್ಗದ ಮಂದಿ ಮತದಾನದ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ನೈಜ ಕಾಳಜಿಯನನ್ನು ಕಾಂಗ್ರೆಸ್ ಹೊಂದಿರುವುದಾಗಿ ಸ್ಪಷ್ಟಪಡಿಸಿದರು. ಆತಂಕವನ್ನು ಹುಟ್ಟು ಹಾಕಿರುವ ಎಸ್ಐಆರ್ :: ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಹತ್ತು ಬಾರಿ ಮತದಾರರ ಪಟ್ಟಿ ಪರಿಷ್ಕರಣೆಯಾಗಿದೆ. ಹಿಂದೆಂದೂ…
ಮಡಿಕೇರಿ ಜು.16 NEWS DESK : ನಗರದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಉತ್ತೇಜಿಸಲು ಮತ್ತು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಿದರು.
ಸೋಮವಾರಪೇಟೆ ಜು.16 NEWS DESK : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ ಎಂದು ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಕೊಡ್ಲಿಪೇಟೆಯ ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆ ಆವರಣದಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಾಲ್ಕು ದಿಕ್ಕುಗಳಲ್ಲಿ ನಡೆಯುವ ಘಟನೆಗಳು, ಬೆಳವಣಿಗೆಗಳು ಹಾಗೂ ಸಮಾಜದ ವಿವಿಧ ವಿಚಾರಗಳನ್ನು ಒಂದೆಡೆ ತಂದು ಜನರಿಗೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ. ಆದ್ದರಿಂದ ಪತ್ರಿಕೆಗಳ ಪಾತ್ರ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳನ್ನು ಖರೀದಿಸಿ ಓದುವ ಮೂಲಕ ಮಾಧ್ಯಮಗಳನ್ನು ಪ್ರೋತ್ಸಾಹಿಸಬೇಕು. ಪತ್ರಿಕೆಗಳಲ್ಲಿ ದೊರೆಯುವ ಮಾಹಿತಿಗಳು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಇತರ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುತ್ತವೆ. ಇದರಿಂದ ವಿದ್ಯಾರ್ಥಿಗಳ…






