ನಾಪೋಕ್ಲು ಏ.8 NEWS DESK : ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿಯಂದಡ ಗ್ರಾಮ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮದ ವಾತ್ಸಲ್ಯ ಫಲಾನುಭವಿಗಳಾದ ಕೊಕೇರಿ ಗ್ರಾಮದ ಜಾಜಿ ಮತ್ತು ರಮ್ಯ,, ಮರಂದೋಡ ಗ್ರಾಮದ ಶೀಲಾ , ಅರಪಟ್ಟು ಗ್ರಾಮದ ವಿಷ್ಣು ಇವರುಗಳ ಮನೆಗೆ ತೆರಳಿ ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರ ವತಿಯಿಂದ ಹಣ್ಣು ಹಂಪಲು ವಿತರಣೆ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ಈ ಸಂದಭ೯ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರದ ಸುನಿಲ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಮಾಚಮ್ಮ, ಸೇವಾ ಪ್ರತಿನಿಧಿ ಪ್ರಭ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಕುಶಾಲನಗರ ಏ.8 NEWS DESK : ಏ.1 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗು ಜಿಲ್ಲೆಯ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಶಾಸಕ ಡಾ.ಮಂತರ್ ಗೌಡ ಅವರು ಕೋರಿದ್ದಾರೆ. ಕುಶಾಲನಗರ ಪುರಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಕಾರ್ಯ ಅತ್ಯಗತ್ಯ. ಈ ಹಿಂದೆ ರಾಜ್ಯ ಸರಕಾರ ನಡೆಸಿದ ಜಾತಿ ಗಣತಿ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ, ಎಸ್ಟಿಪಿ, ಟಿಎಸ್ಪಿ, ಇತರೆ ಅನುದಾನ ಮಂಜೂರಾತಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಜನಗಣತಿಯಲ್ಲಿ ಭಾಗಿಯಾಗಬೇಕು. ಅದರಲ್ಲೂ ಜಿಲ್ಲೆಯಿಂದ ಹೊರಗಡೆ ನೆಲೆಸಿರುವವರು ಕೊಡಗಿನ ಮೂಲ ವಿಳಾಸ ನೀಡಿ ಘೋಷಣೆ ಮಾಡಿಕೊಳ್ಳಬೇಕಿದೆ ಎಂದು ಮನವಿ ಮಾಡಿದರು. ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಇದೇ ಸಂದರ್ಭ ಜನಗಣತಿ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಗೋಷ್ಠಿಯಲ್ಲಿ ಕುಶಾಲನಗರ…
ಕುಶಾಲನಗರ ಏ.8 NEWS DESK : ಕುಶಾಲನಗರ ಟೈಕೂನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಏ.12 ರಿಂದ ನಾಲ್ಕನೇ ವರ್ಷದ ಹಾಕಿ ಮತ್ತು ಅಥ್ಲೆಟಿಕ್ಸ್ ಶಿಬಿರ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷರಾದ ಹೆಚ್ ಇ ರಮೇಶ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಏಪ್ರಿಲ್ 12 ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರ ಬೈಚನಹಳ್ಳಿ ಬಳಿಯ ಗುಂಡೂರಾವ್ ಬಡಾವಣೆಯ ಕ್ರೀಡಾಂಗಣದಲ್ಲಿ ಶಿಬಿರಕ್ಕೆ ಚಾಲನೆ ದೊರೆಯಲಿದೆ. ಮೇ 1 ರಂದು ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಬೆಳಗ್ಗೆ 6 ಗಂಟೆಯಿಂದ 8 ಗಂಟೆ ತನಕ ಎಲ್ಲಾ ವಯಸ್ಸಿನ ಜನರಿಗೆ ಹಾಕಿ ಮತ್ತು ಅಥ್ಲೆಟಿಕ್ಸ್ ತರಬೇತು ನೀಡಲಾಗುತ್ತದೆ. ರಾಷ್ಟ್ರೀಯ ಅಂತರಾಷ್ಟ್ರೀಯ ಕ್ರೀಡಾಪಟುಗಳ ಮೂಲಕ ಶಿಬಿರಾರ್ಥಿಗಳಿಗೆ ತರಬೇತು ನೀಡಲಾಗುತ್ತದೆ. ಶಿಬಿರದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳು ಮಹಿಳೆಯರು, ಪುರುಷರು, 12 ವರ್ಷ ಮೇಲ್ಪಟ್ಟ ಮತ್ತು 18 ವರ್ಷ ಮೇಲ್ಪಟ್ಟ ಮೂರು ವಿಭಾಗಗಳನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ರೀಡಾಪಟುಗಳಾದ…
ಮಡಿಕೇರಿ ಏ.8 NEWS DESK : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ನೂತನ ಸದಸ್ಯತ್ವಕ್ಕೆ 800 ಹಾಗೂ ಕ್ಷೇಮನಿಧಿ ಸಮಿತಿಗೆ 200 ಸೇರಿದಂತೆ 1000 ರೂ ಹಾಗೂ ಸದಸ್ಯತ್ವ ನವೀಕರಣಕ್ಕೆ ರೂ 500 ಹಾಗೂ ಕ್ಷೇಮನಿಧಿ ಸಮಿತಿಗೆ 100 ಸೇರಿದಂತೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30, 2026 ಕೊನೆಯ ದಿನಾಂಕವಾಗಿದೆ. ಸ್ಥಳೀಯ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು, ವಾರಪತ್ರಿಕೆ, ಪಾಕ್ಷಿಕಗಳು, ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು, ಸಂಪಾದಕರು, ಉಪ ಸಂಪಾದಕರು, ವರದಿಗಾರರು, ಬಿಡಿ ವರದಿಗಾರರು, ಛಾಯಾಚಿತ್ರಗಾರರು, ಕ್ಯಾಮೆರಾ ಮ್ಯಾನ್ ಗಳು ಹಾಗೂ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು ಅರ್ಜಿಗಳಿಗಾಗಿ 9449290718, 9844060174, 9901657211 ದೂರವಾಣಿಯನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು ಎಂದು ಕೊಡಗು ಪತ್ರಕರ್ತರ…
ಮಡಿಕೇರಿ ಏ.8 NEWS DESK : ವಿರಾಜಪೇಟೆ ಸಮೀಪದ ಆರ್ಜಿ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ಹರ್ಷದ್ ಖಾನ್(25), ಮುಜಾಮಿಲ್ ಅಹಮ್ಮದ್(46), ಅಫ್ಸಲ್ ಪಾಷ(28) ಮತ್ತು ಸಾಕ್ಯೂಬ್(32) ಅವರೆ ಬಂಧಿತ ವ್ಯಕ್ತಿಗಳು,. ಇವರ ಬಳಿಯಿಂದ 576 ಗ್ರಾಂ ಗಾಂಜಾ ಮತ್ತು ಟೊಯೋಟಾ ಇಟಿಯೋಸ್ ಕಾರ್ನ್ನು ವಶಪಡಿಸಿಕೊಳ್ಳಲಾಗಿದೆ. ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ನಲ್ಲಿ ಗಾಂಜಾ ಮಾರಾಟ, ಸರಬರಾಜಿನ ಬಗ್ಗೆ ದೊರೆತ ಸುಳಿವಿನ ಮೇರೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಮಾಲು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಏ.8 NEWS DESK : ಕೊಡಗಿನಲ್ಲಿ ಕಾಡಾನೆ ಉಪಟಳ ಮಿತಿ ಮೀರಿದ್ದು, ಇಂದು ಕಾಡಾನೆ ದಾಳಿಗೆ ಬೆಳೆಗಾರೊಬ್ಬರು ಬಲಿಯಾಗಿದ್ದಾರೆ. ಕಳೆದ ಮೂರೂವರೆ ತಿಂಗಳಿನಲ್ಲಿ ಕಾಡಾನೆಯಿಂದ 6 ಸಾವುಗಳು ಸಂಭವಿಸಿದ್ದು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕಾಯಿಮಾನಿ ಗ್ರಾಮದಲ್ಲಿ ಇಂದು ಮುಂಜಾನೆ ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು (54) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ರತ್ತು ಅವರು ಕಾಯಿಮಾನಿ-ಕುರ್ಚಿ ಗ್ರಾಮಗಳ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ತೆರಳುತ್ತಿದ್ದರು. ಈ ಸಂದರ್ಭ ಏಕಾಏಕಿ ಕಾಡಾನೆಯೊಂದು ಇವರ ಮೇಲೆ ದಾಳಿ ಮಾಡಿ ತುಳಿದಿದ್ದು, ಗಂಭೀರ ಸ್ವರೂಪದಲ್ಲಿ ಗಾಯಗೊಂಡ ರತ್ತು ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ವಿಭಾಗದಲ್ಲಿ 8 ರಿಂದ 10 ಕಾಡಾನೆಗಳು ಬೀಡುಬಿಟ್ಟಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದಷ್ಟು…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.9ರಂದು ನಡೆಯುವ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕಡಗದಾಳು) ಮತ್ತು ಕನ್ನಂಡ, 10ಕ್ಕೆ ಮಂಡೀರ (ನೆಲಜಿ) ಮತ್ತು ಕೇಚೆಟ್ಟಿರ (ಬೇಗೂರು), 11ಕ್ಕೆ ಮೀದೇರಿರ ಮತ್ತು ಕಂಜಿತಂಡ, ಮಧ್ಯಾಹ್ನ 12ಕ್ಕೆ ಕೇತಿರ ಮತ್ತು ಕೋಳುಮಾಡಂಡ (ಅರ್ವತ್ತೊಕ್ಲು), 1ಕ್ಕೆ ನಡಿಕೇರಿಯಂಡ ಮತ್ತು ಚೊಟ್ಟಂಗಡ ಹಾಗೂ 2 ಗಂಟೆಗೆ ಕಾಂಡೇರ ಮತ್ತು ಮಂದನೆರವಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೇಂದಂಡ ಮತ್ತು ಮಾತಂಡ, 10ಕ್ಕೆ ಅಜ್ಜಿನಿಕಂಡ ಮತ್ತು ತೀತಮಾಡ (ಕುಂದ), 11ಕ್ಕೆ ತಡಿಯಂಗಡ ಮತ್ತು ಚೆರುವಾಳಂಡ (ಪಾಲೂರು), ಮಧ್ಯಾಹ್ನ 12ಕ್ಕೆ ಚಾಮೇರ ಮತ್ತು ಚೋನೀರ, 1ಕ್ಕೆ ನಾಳಿಯಂಡ ಮತ್ತು ಆಲೇಮಾಡ, 2ಕ್ಕೆ ಬಳ್ಳಿಮಾಡ ಮತ್ತು ಮಚ್ಚಮಾಡ ಹಾಗೂ 3 ಗಂಟೆಗೆ ಬಡುವಂಡ ಮತ್ತು ಅರಮಣಮಾಡ (ಬೆಸಗೂರು)
ಮಡಿಕೇರಿ ಏ.8 NEWS DESK : ಲೇಖಕ ಅಮ್ಮತ್ತಿಯ ಮೂಕೋಂಡ ನಿತಿನ್ ಕುಶಾಲಪ್ಪ ಅವರು ರಚಿಸಿರುವ ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಜಾನಪದ ಕಥೆಗಳನ್ನು ಆಧರಿಸಿದ ನೂತನ ಇಂಗ್ಲೀಷ್ ಕೃತಿ “Folktales, Myths and Legends from the Deccan” ಇಂದು ಬಿಡುಗಡೆಗೊಂಡಿತು. ಮಡಿಕೇರಿಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದರ ಕಚೇರಿಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಪುಸ್ತಕ ಬಿಡುಗಡೆಗೊಳಿಸಿ ಮತ್ತಷ್ಟು ಪುಸ್ತಕಗಳು ಸಾಹಿತ್ಯ ಲೋಕಕ್ಕೆ ದೊರೆಯಲಿ ಎಂದು ನಿತಿನ್ ಕುಶಾಲಪ್ಪ ಅವರಿಗೆ ಶುಭ ಹಾರೈಸಿದರು. “Folktales, Myths and Legends from the Deccan” ನಿತಿನ್ ಕುಶಾಲಪ್ಪ ಅವರು ರಚಿಸಿರುವ 10 ನೇ ಇಂಗ್ಲೀಷ್ ಕೃತಿಯಾಗಿದೆ. ಈ ಕೃತಿ ದಕ್ಷಿಣ ಭಾರತದ ಸಾಂಸ್ಕøತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಪರಿಚಯಿಸುವ ಅಪರೂಪದ ಪ್ರಯಾಣವಾಗಿದ್ದು, ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ಪ್ರದೇಶಗಳ 11 ಜನಪದ ಕಥೆಗಳ ಸಂಗ್ರಹವಿದೆ. ವಿವಿಧ ಪ್ರದೇಶಗಳಲ್ಲಿ…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಮೈದಾನ 2 ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಬೋಳಕಾರಂಡ (ಕೊಣಂಜಗೇರಿ) ಮತ್ತು ಬಾಳೆಕುಟ್ಟೀರ ನಡುವಿನ ಪಂದ್ಯದಲ್ಲಿ ಬೋಳಕಾರಂಡ 39 ರನ್ಗಳ ಜಯ ಸಾಧಿಸಿತು. ಬೋಳಕಾರಂಡ 6 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 97 ರನ್ ಗಳನ್ನು ಮತ್ತು ಬಾಳೆಕುಟ್ಟೀರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು ಚೀಯಂಡಿರ ಮತ್ತು ಅಳಮೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಅಳಮೇಂಗಡ 50 ರನ್ ಗಳಿಂದ ಗೆಲುವು ಸಾಧಿಸಿತು. ಅಳಮೇಂಗಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಮತ್ತು ಚೀಯಂಡಿರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿತು. ಆದೇಂಗಡ ಮತ್ತು ಬೊಳ್ಳನಮಂಡ ನಡುವಿನ ಹಣಾಹಣಿಯಲ್ಲಿ ಆದೇಂಗಡ 7 ವಿಕೆಟ್…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕುಂಜಿರ ಮತ್ತು ಅಪ್ಪಾರಂಡ ತಂಡಗಳ ನಡುವಿನ ಪಂದ್ಯದಲ್ಲಿ ಕುಂಜಿರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಪ್ಪಾರಂಡ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕುಂಜಿರ ತಂಡ 3.4 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 66 ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಕುಟ್ಟಂಡ (ಕಾರ್ಮಾಡು) ಮತ್ತು ಬಾಚಿನಾಡಂಡ ನಡುವಿನ ಪಂದ್ಯದಲ್ಲಿ ಬಾಚಿನಾಡಂಡ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಟ್ಟಂಡ 6 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 99 ರನ್ ಗಳನ್ನು ಗಳಿಸಿತು. ಬಾಚಿನಾಡಂಡ ತಂಡ 5.4 ಓವರ್ಗಳಲ್ಲಿ 1…






