ಲೇಖಕ: admin

ವಿರಾಜಪೇಟೆ ಫೆ.24 NEWS DESK : ಪೆರುಂಬಾಡಿಯ ಝೆನ್ ಶಿಟೋ ರಿಯೋ ಸ್ಕೂಲ್ ಆಫ್ ಇಂಡಿಯಾ ವತಿಯಿಂದ ಸೆನ್ಸಾಯಿ ಪಿ.ಆರ್ ಶಿವಪ್ಪ ಅವರ ನೇತೃತ್ವದಲ್ಲಿ ಪೆರುಂಬಾಡಿಯ ಸಮುದಾಯ ಭವನದಲ್ಲಿ ದ್ವಿತೀಯ ವರ್ಷದ ಕರಾಟೆ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಹಲವು ವಿದ್ಯಾರ್ಥಿಗಳು ಪದಕವನ್ನು ತಮ್ಮದಾಗಿಸಿಕೊಂಡರು. ಈ ಸಂದರ್ಭ ಸ್ಥಳಿಯರು, ಕರಾಟೆ ಶಿಕ್ಷಕರಾದ ಸೆನ್ಸಾಯಿ ಸುಮನ್, ಸೆನ್ಸಾಯಿ ಅನಿಲ್ ಕುಮಾರ್, ಸೆನ್ಸಾಯಿ ಆಂಟೋನಿ, ಸೆನ್ಸಾಯಿ ಪಿ.ಆರ್ ಶಿವಪ್ಪ ಹಾಗೂ ಮಕ್ಕಳ ಪೋಷಕರು ಹಾಜರಿದ್ದರು.

Read More

ವಿರಾಜಪೇಟೆ ಫೆ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ವಿರಾಜಪೇಟೆ ತಾಲ್ಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಂಜುಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೃಜನಶೀಲ ಕಾರ್ಯಕ್ರಮವಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರದ ಬಗ್ಗೆ ತರಬೇತಿ ಕಾರ್ಯಕ್ರಮ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗೋಣಿಕೊಪ್ಪ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪ, ತರಬೇತುದಾರರಾದ ರಶ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಗ್ರಾ.ಪಂ ಉಪಾಧ್ಯಕ್ಷೆ ಮಂಜುಳಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ನಿಧಿಯನ್ನು ಪಡೆಯುವುದಲ್ಲದೆ ಅನೇಕ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುವ ಜ್ಞಾನವಿಕಾಸ ಕಾರ್ಯಕ್ರಮದಿಂದ ಅನೇಕ ಕಾರ್ಯಕ್ರಮಗಳನ್ನೂ ಅನುಷ್ಠಾನ ಮಾಡಲು ಸಹಕಾರಿಯಾಗಿದೆ. ವಿಶೇಷವಾಗಿ ನಮ್ಮಲ್ಲಿ ಇಂದು ಮಹಿಳೆಯರಿಗೆ ಅತ್ಯವಶ್ಯಕವಾಗಿ ಕಲಿಯಬೇಕಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರ ಕಾರ್ಯಕ್ರಮ ಪ್ರಯೋಜನಕಾರಿ ಎಂದು…

Read More

ಸುಳ್ಯ ಫೆ.24 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು.  ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌‌ನ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಭಾಷೆಗಳು ಉಳಿಯಬೇಕಾದರೆ ಅದನ್ನು ಹೆಚ್ಚೆಚ್ಚು ಬಳಸಬೇಕು, ಮುಂದಿನ ತಲೆಮಾರಿಗೆ ಪಸರಿಸುವ ಕೆಲಸ ಆಗಬೇಕು. ಆಧುನೀಕರಣದಿಂದ ಭಾಷೆ ನಾಶ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಬಹಳಷ್ಟು ಕೆಲಸಗಳು ನಡೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.  ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆ ರಾಜ್ಯದಿಂದಾಚೆ ಬೆಳೆದು‌ ನಿಲ್ಲಬೇಕು, ಅದು ದೇಶ ಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಅಕಾಡೆಮಿ ಈಗ ಬಹಳಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ಭಾಷೆಯನ್ನು…

Read More

ವಿರಾಜಪೇಟೆ ಫೆ.24 NEWS DESK : ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸವನ್ನು ಇಂದಿನ ಪೀಳಿಗೆಯ ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆಯ ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್ ಹೇಳಿದರು. ಪಂಜರಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಭಾರತದ 2600 ವರ್ಷ ಪುರಾತನ, ನಂತರದ ಇತಿಹಾಸ ಪುರಾತನ ಹಾಗೂ ವಿಶ್ವದ 196 ದೇಶಗಳ ವಿವಿಧ ಕಾಲಘಟ್ಟದ ನಾಣ್ಯ ನೋಟುಗಳ ಬೃಹತ್ ಪ್ರದರ್ಶನ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು. ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ. ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ ದೇಶ, ವಿದೇಶಗಳ, ಅರಸರ ಕಾಲದ ವೈವಿಧ್ಯಮಯ ನಾಣ್ಯ ಹಾಗೂ ನೋಟುಗಳಿದ್ದು, ಇವು ನಮ್ಮ ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ. ಆಯಾ ಕಾಲದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿಗತಿಗಳನ್ನು ಅನಾವರಣ ಮಾಡುತ್ತವೆ ಎಂದರಲ್ಲದೆ ನಾಣ್ಯಗಳು ಎಲ್ಲರನ್ನು ಆಕರ್ಷಿಸುತ್ತಿದೆ. ಈ ಪ್ರದರ್ಶನ ವೀಕ್ಷಿಸಲು ಒಂದು ದಿನವಾದರೂ ಬೇಕು, ಅಷ್ಟೊಂದು ನಾಣ್ಯ ನೋಟುಗಳ ಸಂಗ್ರಹ ಇಲ್ಲಿದೆ. ಸಂಗ್ರಹಕಾರರ ಶ್ರಮ ಈ ಪ್ರದರ್ಶನದಲ್ಲಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಿ…

Read More

ನಾಪೋಕ್ಲು ಫೆ.24 NEWS DESK  : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಕದನೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ.ಕೆ.ನಳಿನಾಕ್ಷಿ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಶೈಕ್ಷಣಿಕ ವಿಚಾರ ಸಂಕಿರಣ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯದ ವಿವಿಧ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದೆ. 2025ರ ಸಾಲಿಗೆ ಕೊಡ ಮಾಡುವ ಅನಿತಾ ಕೌಲ್ ಸ್ಮರಣಾರ್ಥ ರಾಜ್ಯಮಟ್ಟದ ಪ್ರಶಸ್ತಿಗೆ ಶಿಕ್ಷಕಿ ಎಂ.ಕೆ.ನಳಿನಾಕ್ಷಿ ಭಾಜನರಾಗಿದ್ದಾರೆ. ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಳಿನಾಕ್ಷಿ ಅವರಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ, NEWS DESK ಫೆ.24 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಶಾಸಕರ ಅನುದಾನದಲ್ಲಿ ನವೀಕರಣಗೊಂಡ ಸಭಾಂಗಣವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಇದೇ ಸಂದರ್ಭ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ, ವಿಶ್ವ ಚಿಂತನಾ, ವಿಶ್ವ ಭ್ರಾತೃತ್ವ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಸಂಸ್ಥೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ನಾನು ಬಾಲಕನಾಗಿದ್ದಾಗ ಕಬ್ ಆಗಿದ್ದು, ಈ ಸಂಸ್ಥೆಯು ಶಿಸ್ತು ಮತ್ತು ಪ್ರಮಾಣಿಕತೆಗೆ ಮಾದರಿಯಾದ ಸಂಸ್ಥೆಯಾಗಿದೆ. ಸೇವಾ ಮನೋಭಾವನೆ ಇದರ ಆದರ್ಶವಾಗಿದ್ದು, 2018ರಲ್ಲಿ ನಡೆದ ಪ್ರಕೃತಿ ವಿಕೋಪದ ಸಂದರ್ಭ ಕೂಡ ಈ ಸಂಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದೆ. ಸೇವಾ ಮನೋಭಾವ ಹೊಂದಿರುವ ಈ ಸಂಸ್ಥೆಯ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ ಎಂದರು. ಜಿಲ್ಲಾ ಉಪವಿಭಾಗಧಿಕಾರಿ ನಿತಿನ್ ಚೆಕ್ಕಿ ಅವರು ಜಿಲ್ಲಾ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ ನನಗೆ…

Read More

ಮಡಿಕೇರಿ ಫೆ.24 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಿಕಾಭವನದಿಂದ ಅರ್ಜಿಗಳನ್ನು ಪಡೆದುಕೊಂಡು ಮಾರ್ಚ್ 3 ರೊಳಗೆ ತಮ್ಮ ಇತ್ತೀಚೆಗಿನ ಒಂದು ಭಾವಚಿತ್ರದೊಂದಿಗೆ ಸಲ್ಲಿಸಬೇಕಾಗಿದೆ.ನವೀಕರಣಕ್ಕೆ ರೂ.600 ಹಾಗೂ ನೂತನ ಸದಸ್ಯರಿಗೆ ರೂ.1600 ಎಂದು ನಿಗದಿಪಡಿಸಲಾಗಿರುತ್ತದೆ. ಮಾ.3 ರ ನಂತರ ಬರುವ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. :: ಸದಸ್ಯತ್ವಕ್ಕೆ ಮಾನದಂಡಗಳು :: 1. ರಾಜಕೀಯದಲ್ಲಿರುವವರಿಗೆ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿರುವವರಿಗೆ ಪತ್ರಕರ್ತರ ಸಂಘದ ಸದಸ್ಯತ್ವ ನೀಡಲಾಗುವುದಿಲ್ಲ. 2. ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಜಿಲ್ಲಾ ವರದಿಗಾರರು/ಸಂಪಾದಕರು ಗಳಿಂದ ದೃಢೀಕರಿಸಿದ ಪತ್ರ ಲಗತ್ತಿಸಬೇಕು. 3.ಮಾಧ್ಯಮ ಕ್ಷೇತ್ರದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುವವರಿಗೆ ಮಾತ್ರ ಸದಸ್ಯತ್ವ ನೀಡಲಾಗುತ್ತದೆ. ನೂತನವಾಗಿ ಸದಸ್ಯತ್ವ ಪಡೆಯುವವರು ಮಾಧ್ಯಮ ಕ್ಷೇತ್ರದಲ್ಲಿ ಎರಡು ವರ್ಷ ಅನುಭವ ಹೊಂದಿರಬೇಕು ಹಾಗೂ 21 ವರ್ಷ ಮೇಲ್ಪಟ್ಟಿರಬೇಕು.ಜೊತೆಗೆ ಕ್ಯಾಮೆರಾಮೆನ್‍ಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣವಾದ ಅಂಕಪಟ್ಟಿ ಹಾಗೂ ವರದಿಗಾರರು ಪದವಿ ಅಂಕಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ದಾಖಲೆಗಳು ಅಪೂರ್ಣವಾಗಿದ್ದರೆ ಮಾನ್ಯಮಾಡಲಾಗುವುದಿಲ್ಲ. 4.ಕ್ರಿಮಿನಲ್ ಹಿನ್ನಲೆಯುಳ್ಳವರಿಗೆ ಸದಸ್ಯತ್ವ ನೀಡಲಾಗುವುದಿಲ್ಲ.ಸೂಚಕರು…

Read More

ಗೋಣಿಕೊಪ್ಪ ಫೆ.24 NEWS DESK : ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದಾನಿಗಳು ದತ್ತಿನಿಧಿ ಸ್ಥಾಪಿಸಿದ ಉದ್ದೇಶವನ್ನು ಈಡೇರಿಸಲಾಯಿತು. ಮಕ್ಕಳು ಕಪ್ಪೆ ಓಟ, ಬಾಲ್ ಹಾಕುವುದು, ವಿಷದಚೆಂಡು, ರಿಂಗ್‍ಎಸೆತ, ಟಿನ್ ಒಡೆಯುವುದು ಸೇರಿದಂತೆ ಹಲವಾರು ಗ್ರಾಮೀಣ ಸೊಗಡಿನ ಕ್ರೀಡೆಗಳನ್ನು ಆಡಿ ಸಂಭ್ರಮಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ ನೇತೃತ್ವದಲ್ಲಿ ಕ್ರೀಡೆಗಳು ನಡೆದವು. ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬಿಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಎನ್.ಎನ್.ದಿನೇಶ್, ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್, ಸಹ ಶಿಕ್ಷಕರುಗಳಾದ ಕಲಾ ಶಿಕ್ಷಕ ಸತೀಶ್ ಬಿ.ಆರ್, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ ಟಿ.ಡಿ, ಸಹಾಯಕ ಶಿಕ್ಷಕರುಗಳಾದ ಜೋಸ್ಲಿಯಾ ಎಂ.ಟಿ, ಜಯಶ್ರೀ ಎನ್.ಕೆ, ಇಂದಿರಾ ಎಂ.ಸಿ, ಅನಿತಕುಮಾರಿ ಹೆಚ್.ಇ.ದಮಯಂತಿ ಎ.ಎಮ್, ಅರ್ಶಿಯಾ.ಬಿ, ಕ್ಲ್ಯೆಮಿಂಟನ್, ಸಹನ್ ಎಂ.ಬಿ, ಶಾರದ ಕೆ.ಎಸ್, ನಾಗರಾಜು, ಸ್ನೇಹಾ ಕಾವೇರಮ್ಮ, ಸಿದ್ದರಾಜು, ಎನ್, ಮಂಜುಳ ವಿ ಹಾಗೂ ವಿದ್ಯಾರ್ಥಿಗಳು ಇದ್ದರು.

Read More

ಸುಂಟಿಕೊಪ್ಪ ಫೆ.24 NEWS DESK : ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಸಮಿತಿಯ 2026-27ನೇ ಸಾಲಿನ 3ನೇ ಬಾರಿಗೆ ಅಧ್ಯಕ್ಷರಾಗಿ ಪಟ್ಟೆಮನೆ ಉದಯಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಸಿ.ಮೋಹನ್ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಯಂಕನ ಶ್ರೀರಾಮ್, ಬಿ.ಡಿ.ರಾಜು ರೈ, ಖಜಾಂಚಿಯಾಗಿ ರಮೇಶ್‍ಪಿಳ್ಳೆ, ಸಂಘಟನಾ ಕಾರ್ಯದರ್ಶಿಯಾಗಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಪಿ.ವಿನೋದ್, ಟಿ.ಕೆ.ಹರೀಶ್, ತಮಿಳ್ ಸಂಘದ ಅಧ್ಯಕ್ಷ ಅಯ್ಯಪ್ಪ, ಮಣಿಮುಖೇಶ್, ಚಂದು ಸುರೇಶ್, ಪವಿತ್ರಶೆಟ್ಟಿ, ನಳಿನಿ ಲೋಕೇಶ್, ಜಾನ್ ಭಾಸ್ಕರ, ವೀಣಾ ರೈ ಸೇರಿದಂತೆ 25 ಮಂದಿಯನ್ನು ಆಯ್ಕೆ ಮಾಡಲಾಯಿತು. ಸಲಹಾ ಸಮಿತಿ ಸದಸ್ಯರುಗಳಾಗಿ ಕೆ.ಪಿ.ಜಗನ್ನಾಥ್, ಎಸ್.ಜಿ.ಶ್ರೀನಿವಾಸ್, ಶಶಿಕಾಂತ್‍ರೈ, ಜೆ.ಎನ್.ಚಂದ್ರಶೇಖರ್, ಕೆ.ಪಿ.ಜಗದೀಶ್ ರೈ ಅವರು ನೇಮಕಗೊಂಡರು. ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಇದೇ ವಾರ್ಷಿಕ ಮಹಾಸಭೆಯು ಪಟ್ಟೆಮನೆ ಉದಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿದ್ದು, ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.

Read More

ಕುಶಾಲನಗರ ಸಮೀಪ ದುಬಾರೆ ಸಾಕಾನೆ  ಶಿಬಿರದ ಬಳಿ ಅರಣ್ಯದಲ್ಲಿ ಅಮ್ಮಾಳೆ ಹಬ್ಬ ಭಕ್ತಿ ಭಾವದಿಂದ ನಡೆಯಿತು. ವಾರ್ಷಿಕ ಕಾರ್ಯಕ್ರಮದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರಣ್ಯ ಅಧಿಕಾರಿಗಳು, ಅರಣ್ಯ ಸಮಿತಿ ಪದಾಧಿಕಾರಿಗಳು, ಆನೆ ಶಿಬಿರದ ಮಾವುತರು ಕಾವಾಡಿಗಳು ಮತ್ತು ಹಾಡಿ ನಿವಾಸಿಗಳು ಸುತ್ತಮುತ್ತಲ ಗ್ರಾಮಸ್ಥರು ಪೂಜೆಯಲ್ಲಿ ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು. ಅರಣ್ಯದಲ್ಲಿ ಪ್ರಾಣಿ ಸಂಕುಲಕ್ಕೆ ಯಾವುದೇ ರೀತಿಯ ತೊಂದರೆಗಳು, ವಿಘ್ನಗಳು ಉಂಟಾಗದಂತೆ ಮತ್ತು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ ಎ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್, ದುಬಾರೆ ಶಿಬಿರದ ಅಧಿಕಾರಿಗಳಾದ ರಂಜನ್, ವೆಂಕಟೇಶ್ ಮತ್ತಿತರರು ಇದ್ದರು.

Read More