ವಿರಾಜಪೇಟೆ, NEWS DESK ಸೆ.7: ಮದರ್ ಥೆರೇಸಾ ಸೇವಾ ಕೇಂದ್ರವು ಸಮಾಜಮುಖಿ ಚಟುವಟಿಕೆಗಳ ಮೂಲಕ ಸಲ್ಲಿಸುತ್ತಿರುವ ಸೇವೆ ಹಾಗೂ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ ಎಂದು ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಗುರುಗಳು ಹಾಗೂ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಹೇಳಿದರು. ವಿರಾಜಪೇಟೆಯ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಹಿರಿಯರ ದಿನಾಚರಣೆ ಹಾಗೂ ಮದರ್ ಥೆರೇಸಾ ಜನ್ಮ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯರನ್ನು ಗೌರವಿಸುವ ಕಾರ್ಯ ಅತ್ಯಂತ ವಿಶೇಷವಾದದ್ದು. ಮದರ್ ಥೆರೇಸಾ ಸೇವಾ ಕೇಂದ್ರವು ಸಮಾಜದಲ್ಲಿ ಸಾಧನೆ ಮಾಡಿದವರ ವ್ಯಕ್ತಿತ್ವ ಹಾಗೂ ಸೇವೆಯನ್ನು ಗುರುತಿಸಿ ಪ್ರಶಂಸಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸಂಸ್ಥೆಯು ಹಲವು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸರ್ವರ ಸಹಕಾರದಿಂದ ಪ್ರಗತಿಯತ್ತ ಸಾಗುತ್ತಿದೆ. ಇದು ನಮ್ಮ ಧರ್ಮಕೇಂದ್ರದ ಹೆಮ್ಮೆಯ ಸೇವಾ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಮಾಜ ಸೇವೆ ಸಲ್ಲಿಸುವಂತಾಗಲಿ…
ಲೇಖಕ: admin
ಮಡಿಕೇರಿ, ಸೆ.7 NEWS DESK : ಇತ್ತೀಚೆಗೆ ನಿಧನರಾದ ಚೌರೀರ ದಿ.ಕಾವೇರಿ ಪೂವಯ್ಯ ಅವರ ಜ್ಞಾಪಕಾರ್ಥ ಅವರ ಸಹೋದರ ಮೇಜರ್ ಬಿ.ಎ.ನಂಜಪ್ಪ ಹಾಗೂ ಸಹೋದರಿಯರು ಸೆ.12 ರಂದು ನಗರದ ಭಾರತೀಯ ವಿದ್ಯಾ ಭವನ ಸಭಾಂಗಣದಲ್ಲಿ ಮಡಿಕೇರಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಂದೇ ಮಾತರಂ ಹಾಡಿನ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಶಕ್ತಿ ಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾವೇರಿ ಪೂವಯ್ಯ ಅವರು ಬಾಂಬೆ, ಪೂನಾ, ಬೆಂಗಳೂರಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆ, ಸಂತ ಜೋಸೆಫರ ಶಾಲೆಯಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಸಂತಜೋಸೆಫರ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಏಳೆಂಟು ವರ್ಷ ಕೆಲಸ ಮಾಡಿದ್ದು, ಬಹಳಷ್ಟು ವಿದ್ಯಾರ್ಥಿಗಳಿಗೆ ಗಣಿತ ಹಾಗೂ ಸಂಗೀತ ಶಿಕ್ಷಣವನ್ನು ನೀಡಿದ್ದಾರೆ ಎಂದು ಕಾರ್ಯಕ್ರಮ ಸಂಚಾಲಕಿ ಶೋಭಾ ಸುಬ್ಬಯ್ಯ ತಿಳಿಸಿದ್ದಾರೆ.
ಕಂಬಿಬಾಣೆ–ಅತುರ್ನಲ್ಲೂರು, NEWS DESK ಸೆ.7: ಮಲೇಷ್ಯಾದ ಸೆಲಾಂಗೋರ್ನಲ್ಲಿ ಸೆ.4ರಿಂದ 6ರವರೆಗೆ ನಡೆದ ಅಂತಾರಾಷ್ಟ್ರೀಯ ಐಟಿಎಫ್ ಟೇಕ್ವಾಂಡೋ ಸ್ಪರ್ಧೆ **‘ಹ್ವಾ ರಂಗ್ ವಾರಿಯರ್ ಏಷ್ಯಾ ಕಪ್ 2026’**ರಲ್ಲಿ ಭಾರತವನ್ನು ಪ್ರತಿನಿಧಿಸಿದ ಕೊಡಗಿನ ಇಬ್ಬರು ಯುವ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಕಂಬಿಬಾಣೆ–ಅತುರ್ನಲ್ಲೂರಿನ ಕುಯ್ಯಮುಡಿ ಚರಣ್ ಕುಮಾರ್ ಹಾಗೂ ದೀಕ್ಷಾ ದಂಪತಿಯ ಪುತ್ರಿಯರಾದ ಕುಯ್ಯಮುಡಿ ಕುಮಾರಿ ದೇವಾಂಗಿ ಜನ್ಮೋಹ್ ಮತ್ತು ಕುಯ್ಯಮುಡಿ ಕುಮಾರಿ ತರಂಗ ಜನ್ಮೋಹ್ ಅವರು ಭಾರತ ತಂಡವನ್ನು ಪ್ರತಿನಿಧಿಸಿ ಈ ಸಾಧನೆ ಮಾಡಿದ್ದಾರೆ. ಕುಯ್ಯಮುಡಿ ಕುಮಾರಿ ದೇವಾಂಗಿ ಜನ್ಮೋಹ್ ಅವರು ತಂಡ ಹಾಗೂ ವೈಯಕ್ತಿಕ ಸ್ಪಾರಿಂಗ್ ವಿಭಾಗಗಳಲ್ಲಿ ಸ್ಪರ್ಧಿಸಿದ್ದು, ಯಾವುದೇ ವಿಶ್ರಾಂತಿಯಿಲ್ಲದೆ ಸತತ ಎಂಟು ಪಂದ್ಯಗಳಲ್ಲಿ ಸೆಣಸಾಡಿದ್ದಾರೆ. ವೈಯಕ್ತಿಕ ಸ್ಪಾರಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಅವರು, ತಂಡ ವಿಭಾಗದಲ್ಲಿ ಭಾರತಕ್ಕೆ ಕಂಚಿನ ಪದಕ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೇ ಭಾರತ ತಂಡದ ಸದಸ್ಯೆಯಾಗಿದ್ದ ಕುಯ್ಯಮುಡಿ ಕುಮಾರಿ ತರಂಗ ಜನ್ಮೋಹ್ ಅವರು ತಂಡ ವಿಭಾಗದಲ್ಲಿ ಕಂಚಿನ ಪದಕ…
ಸೋಮವಾರಪೇಟೆ, NEWS DESK ಸೆ.7: ತಾಲೂಕಿನ ಶಾಂತಳ್ಳಿ-ಬೆಟ್ಟದಳ್ಳಿ ಎಸ್ಕೆಎಲ್ಪಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು ಶ್ರೀ ಕೃಷ್ಣ ಹಾಗೂ ರಾಧೆಯರ ವೇಷಭೂಷಣ ಧರಿಸಿ ಗಮನ ಸೆಳೆದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶ್ರೀ ಕೃಷ್ಣನ ಬಾಲಲೀಲೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮವನ್ನು ಹಂಚಿಕೊಂಡರು.
ಮಡಿಕೇರಿ, NEWS DESK ಸೆ.7: ಮಡಿಕೇರಿಯ ಯುವ ಪ್ರತಿಭೆ ಪಾಲೆಯಂಡ ಕುಶಾಲ್ ನಾಣಯ್ಯ ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ದೇಶದ ಹೆಸರಾಂತ ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಅವರ ನೇತೖತ್ವದಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ದೇಶದ ವಿವಿಧ ಭಾಗಗಳಿಂದ 1 ಸಾವಿರಕ್ಕೂ ಅಧಿಕ ಯುವಕ, ಯುವತಿಯರು ಪಾಲ್ಗೊಂಡಿದ್ದರು. ಬುದ್ದಿಮತ್ತೆ, ಸೌಂದಯ೯, ಚತುರತೆ ಮಾಡೆಲಿಂಗ್ ವ್ಯಕ್ತಿತ್ವಗಳ ಆಧಾರದ ಮೇಲೆ ಈ ಸ್ಪಧೆ೯ಯ ಅಂತಿಮ ಹಂತದಲ್ಲಿ ಮಡಿಕೇರಿ ಬಳಿಯ ಕಣ೯ಂಗೇರಿ ಗ್ರಾಮದ ನಿವಾಸಿ ಪಾಲೆಯಂಡ ಕಿಶನ್ ಸುಬ್ಬಯ್ಯ ಮತ್ತು ರೂಪಾ ಸುಬ್ಬಯ್ಯ ದಂಪತಿಯ ಪುತ್ರನಾಗಿರುವ ಕುಶಾಲ್ ಪ್ರಥಮ ಸ್ಥಾನ ಪಡೆದು ಫೋನಿಕ್ಸ್ ಮೆಘಾ ಮಾಡೆಲ್ -2026 ಆಗಿ ಆಯ್ಕೆಯಾದರು. ಭಾರತೀಯ ಮಾಡೆಲಿಂಗ್ ಕ್ಷೇತ್ರದ ಅತ್ಯುತ್ತಮ ವ್ಯಕ್ತಿತ್ವಗಳ ಆಯ್ಕೆಯನ್ನು ಆದ್ಯತೆಯಾಗಿಸಿಕೊಂಡ ಈ ಸ್ಪಧೆ೯ಯ ಪುರುಷರ ವಿಭಾಗದಲ್ಲಿ ಕುಶಾಲ್ ಬೆಸ್ಟ್ ರನ್ ವೇ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು. ತನ್ನ ಆಸಕ್ತಿ ಮತ್ತು ಹವ್ಯಾಸದ ಮಾಡೆಲಿಂಗ್…
ವಿರಾಜಪೇಟೆ, NEWS DESK ಸೆ.07: ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವಿರಚಿತ ಆಯ್ದ ಕೃತಿಗಳಿಗೆ ಎರಡು ಸಾವಿರ ಮಕ್ಕಳು ಭರತನಾಟ್ಯ ಸಮರ್ಪಣೆ ಮಾಡಿದರು. ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನ ಇದಾಗಿದ್ದು ಹೊಸ ವಿಶ್ವ ದಾಖಲೆಯನ್ನು ಇದು ನಿರ್ಮಾಣ ಮಾಡಲಿದೆ. ಈ ಭರತನಾಟ್ಯ ನೃತ್ಯ ಸಮರ್ಪಣೆಯಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಹಾಗೂ ಯುವ ಪ್ರತಿಭೆ ಲಾವಣ್ಯ ಬೋರ್ಕರ್ ಅವರು ಭಾಗವಹಿಸಿ ಭರತನಾಟ್ಯ ಪ್ರದರ್ಶನವನ್ನು ನೀಡುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರತಿನಿಧಿಗಳು ಆಗಮಿಸಿ ಇದರ ದಾಖಲೀಕರಣವನ್ನು ಮಾಡಿಕೊಂಡಿರುತ್ತಾರೆ. ಹಲವಾರು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾದ ಲಾವಣ್ಯ ಬೋರ್ಕರ್ ಅವರು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಮುಖ್ಯಸ್ಥರಾದ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆಯಾಗಿದ್ದಾಳೆ. ಮೂಲತ ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ರಾಮನಗರದ ನಿವಾಸಿಯಾಗಿರುವ ಲಾವಣ್ಯ ಬೋರ್ಕರ್, ನಾಟಿ ವೈದ್ಯ ನಟರಾಜ್…
ಸೋಮವಾರಪೇಟೆ, NEWS DESK ಸೆ. 7: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಬಾಸ್ಕೆಟ್ಬಾಲ್ ಮೈದಾನದ ಬದಿಯಲ್ಲಿ ನಿರ್ಮಿಸುತ್ತಿರುವ ತಡೆಗೋಡೆ ಅವೈಜ್ಞಾನಿಕ ಹಾಗೂ ಕಳಪೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು, ಕಳಪೆ ಕಾಮಗಾರಿ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಮಗಾರಿಗೆ ತಡೆಯೊಡ್ಡಿದ್ದೇವೆ. ಅಧಿಕಾರಿಗಳು ಕಾಮಗಾರಿಯನ್ನು ಸರಿಯಾಗಿ ಪರಿಶೀಲಿಸುತ್ತಿಲ್ಲ. ಕಳಪೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಸಂಚರಿಸಲೂ ಭಯಪಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅರ್ಧಕ್ಕೆ ಸ್ಥಗಿತಗೊಂಡಿರುವ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್, ಬಾಸ್ಕೆಟ್ಬಾಲ್ ಮೈದಾನಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ನಂತರ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಕಳೆದ ಬಾರಿ ಸಣ್ಣ ನೀರಾವರಿ ಇಲಾಖೆಯಿಂದ ಟರ್ಫ್ ಮೈದಾನದ ಬದಿಯಲ್ಲಿ ನಿರ್ಮಿಸಿದ್ದ ತಡೆಗೋಡೆ ಕುಸಿದು ಬಿದ್ದಿತ್ತು. ಇಂತಹ ಕಳಪೆ ಕಾಮಗಾರಿಗೆ ಯಾರು…
ಮಡಿಕೇರಿ, NEWS DESK ಸೆ. 7: ಭಾರತ-ಪಾಕ್ ನಡುವಿನ 1965ರ ಯುದ್ಧದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಸಾಹಸಿ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣಾ ಕಾರ್ಯಕ್ರಮವನ್ನು ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ವಾ.ಲೀ. ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಮಡಿಕೇರಿಯಲ್ಲಿ ನಡೆಸಲಾಯಿತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿಯ ಸ್ಕ್ವಾ.ಲೀ. ದೇವಯ್ಯ ವೃತ್ತದಲ್ಲಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸುವ ಮೂಲಕ ವೀರ ಸೇನಾನಿಗೆ ಗೌರವ ಅರ್ಪಿಸಲಾಯಿತು. ಸ್ಕ್ವಾ.ಲೀ. ಅಜ್ಜಮಾಡ ದೇವಯ್ಯ ಅವರ ಭವ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅವರು, ಮಹಾನ್ ಯೋಧನ ಸಾಹಸ ಮತ್ತು ರಾಷ್ಟ್ರಕ್ಕಾಗಿ ಮಾಡಿದ ಬಲಿದಾನದ ಕುರಿತು ಸ್ಮರಿಸುವ ಮೂಲಕ ಯುವ ಸಮೂಹದಲ್ಲಿ ಪ್ರೇರಣೆಯನ್ನು ತುಂಬಬೇಕೆಂದು ಕರೆ ನೀಡಿದರು. ಸ್ಕ್ವಾ.ಲೀ. ದೇವಯ್ಯ…
ಮಡಿಕೇರಿ, NEWS DESK ಸೆ. 7: ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ವಿನ ಏಳನೇ ಆವೃತ್ತಿಯನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಸಾಹಿತಿ ಬೊಜ್ಜಂಗಡ ಡಾ. ಅವನಿಜ ಸೋಮಯ್ಯ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಕೊಡವ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆ ಇಡೀ ವಿಶ್ವದಲ್ಲೇ ವಿಶಿಷ್ಟವಾಗಿದೆ. ಈ ಅಪರೂಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಮಕ್ಕಳಲ್ಲಿ ಅರಿವು ಮೂಡಿಸಬೇಕಾಗಿದೆ. ‘ಆಟ್-ಪಾಟ್ ಪಡಿಪು’ ಅತ್ಯಂತ ಉಪಯುಕ್ತ ಪುಸ್ತಕವಾಗಿದ್ದು, ಇದನ್ನು ಮಕ್ಕಳಿಗೆ ನೀಡಬೇಕು ಎಂದು ಕರೆ ನೀಡಿದರು. ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಾ ಬಂದಿರುವ ಕೊಡವ ಮಕ್ಕಡ ಕೂಟದ ಸಾಹಿತ್ಯ ಕೃಷಿ ಮುಂದುವರಿಯಲಿ ಎಂದು ಅವರು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರು, ಕೂಟವು ಕಳೆದ 13 ವರ್ಷಗಳಿಂದ ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರಕ್ಕೆ ಮೊದಲ…
ಸೋಮವಾರಪೇಟೆ, NEWS DESK ಸೆ.07: ತಾಲ್ಲೂಕಿನ ಹೆಗ್ಗುಳ ಗ್ರಾಮದ ಶ್ರೀ ತಿರುಮಲ ದೇವಸ್ಥಾನಕ್ಕೆ ಸೇರಿದ ಗದ್ದೆಯಲ್ಲಿ ಗ್ರಾಮಸ್ಥರು ಶುಕ್ರವಾರ ಸಾಮೂಹಿಕ ನಾಟಿ ಕಾರ್ಯ ನಡೆಸಿದರು. ಸುಮಾರು 3.25 ಏಕರೆ ಪ್ರದೇಶದಲ್ಲಿ ನಡೆಯುವ ನಾಟಿ ಕಾರ್ಯದಲ್ಲಿ ಗ್ರಾಮದ ಪ್ರತಿಯೊಂದು ಕುಟುಂಬವೂ ಉತ್ಸಾಹದಿಂದ ಪಾಲ್ಗೊಂಡಿದ್ದರು. ಮೊದಲ ದಿನ ಪ್ರತಿ ಮನೆಯಿಂದ ಒಬ್ಬರು ಹಾಗೂ ಎರಡನೇ ದಿನ ಇಬ್ಬರಂತೆ ಗ್ರಾಮಸ್ಥರು ಗದ್ದೆಗೆ ಆಗಮಿಸಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು. ಸಾಮೂಹಿಕ ನಾಟಿ ಕಾರ್ಯದ ಕುರಿತು ಗ್ರಾಮದ ಅಧ್ಯಕ್ಷ ಎಚ್.ಎನ್. ವಸಂತ ಮಾತನಾಡಿ, ಗದ್ದೆಯಲ್ಲಿ ಬೆಳೆಯುವ ಭತ್ತದಿಂದ ದೊರೆಯುವ ಆದಾಯವನ್ನು ದೇವಸ್ಥಾನದ ಹರಿಸೇವೆ, ಅರ್ಚಕರ ವೇತನ ಸೇರಿದಂತೆ ವರ್ಷವಿಡೀ ದೇವಸ್ಥಾನಕ್ಕೆ ತಗಲುವ ಖರ್ಚುಗಳಿಗೆ ಬಳಸಲಾಗುತ್ತದೆ. ಗ್ರಾಮಸ್ಥರು ನಿಗದಿತ ಸಮಯಕ್ಕೆ ಆಗಮಿಸಿ ಒಟ್ಟಾಗಿ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. ನಂತರ ಎಲ್ಲರೂ ಒಂದೆಡೆ ಸೇರಿ ಊಟ ಮಾಡುವ ಮೂಲಕ ಗ್ರಾಮದ ಒಗ್ಗಟ್ಟನ್ನು ಕಾಪಾಡಿಕೊಂಡು ಬರಲಾಗುತ್ತಿದೆ ಎಂದರು. ಉಪಾಧ್ಯಕ್ಷ ಎಚ್.ಕೆ. ಪ್ರಕಾಶ್ ಮಾತನಾಡಿ, ಕಳೆದ 25 ವರ್ಷಗಳಿಂದ ಗ್ರಾಮಸ್ಥರು ಒಗ್ಗಟ್ಟಿನಿಂದ ದೇವಸ್ಥಾನದ ಗದ್ದೆಯಲ್ಲಿ…






