ಲೇಖಕ: admin

ಸೋಮವಾರಪೇಟೆ ಏ.24 : ಇಲ್ಲಿಗೆ ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು.   13 ವರ್ಷಗಳ ಹಿಂದೆ ದೇವಾಲಯ ನಿರ್ಮಾಣಕ್ಕೆ ಸಂಕಲ್ಪ ತೊಟ್ಟರೂ ಕಳೆದ 2,3 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಬಸವೇಶ್ವರ ದೇವಾಲಯ ಸಮಿತಿಯು ಗ್ರಾಮಸ್ಥರು ಹಾಗೂ ದಾನಿಗಳ ನೆರವಿನಿಂದ ಸು 80 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ದೇವಾಲಯ ನಿರ್ಮಿಸಿ,ಲೋಕಾರ್ಪಣೆ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಡೆದ ಧಾರ್ಮಿಕ ವಿಧಿ,ವಿಧಾನ ಗಳ ಮೂಲಕ ಲಿಂಗರೂಪಿ ಶ್ರೀ.ವೀರಭದ್ರ ಸ್ವಾಮಿ,ಗಣಪತಿ ಹಾಗೂ ಬಸವೇಶ್ವರ ದೇವರುಗಳ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಇಂದು ವಿದ್ಯುಕ್ತವಾಗಿ ಅಂತ್ಯಗೊಂಡಿತು. ಮೂಡಿಗೆರೆಯ ವೇದವಿದ್ವಾನ್ ವೇದಮೂರ್ತಿ ಶಿವಪ್ರಸಾದ್ ಭಟ್ ಪುರೋಹಿತ್ವದ ಅರ್ಚಕರ ತಂಡ ದಿನಾಂಕ 21ರ ಮಂಗಳವಾರದಂದು ಸಾಮೂಹಿಕ ಪ್ರಾರ್ಥನೆ, ಭೂ ಶುಧಿ ಹೋಮದೊಂದಿಗೆ ಆರಂಭಗೊಂಡು 22 ರ ಬುಧವಾರದಂದು ನವಗ್ರಹ ಹೋಮ,ಶಾಂತಿ ಪ್ರಾಯಶ್ಚಿತ ಹೋಮ ಸೇರಿದಂತೆ ವಿವಿಧ, ಪೂಜೆಗಳು ನಡೆದವು.23 ರ ಗುರುವಾರ…

Read More

ಮಡಿಕೇರಿ NEWS DESK ಏ.24 : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಡಿಕೇರಿ ತಾ.ಪಂ ಕಚೇರಿ ಎದುರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ತಕ್ಷಣ ಚುನಾವಣೆ ನಡೆಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದರಿಂದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಹಂಚಿಕೆಯಾಗದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿದರು. ಹೊರಗಿನಿಂದ ಬಂದ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಆದ್ದರಿಂದ ಸರಕಾರ ಶೀಘ್ರ ಚುನಾವಣೆಯನ್ನು ನಡೆಸಿ ಜನರಿಗೆ ಅಧಿಕಾರವನ್ನು ನೀಡಬೇಕೆಂದು…

Read More

ಮಡಿಕೇರಿ NEWS DESK ಏ.24 : ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ಹೋಂಸ್ಟೇಯೊoದರಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿದೆ ಎನ್ನಲಾಗಿರುವ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ವಿಷಾದಕರ. ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿದ್ದು, ಸರಕಾರ ತಕ್ಷಣ ಪ್ರವಾಸೋದ್ಯಮ ನಿಯಮವನ್ನು ರೂಪಿಸಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಬೇಕೆಂದು ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ಅಧ್ಯಕ್ಷರಾದ ಮೋಂತಿ ಗಣೇಶ್ ಕುಟ್ಟ ಹೋಂಸ್ಟೇ ಪ್ರಕರಣಕ್ಕೆ ಸಂಬoಧಿಸಿದoತೆ ಹೋಂಸ್ಟೇಯ ಪರವಾನಗಿಯನ್ನು ಜಿಲ್ಲಾಧಿಕಾರಿಗಳು ರದ್ದು ಮಾಡಿರುವುದು ಸರಿಯಾದ ಕ್ರಮವಲ್ಲ. ಪ್ರಕರಣ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗುವಲ್ಲಿಯವರೆಗೆ ಪರವಾನಗಿಯನ್ನು ಅಮಾನತಿನಲ್ಲಿಡಬಹುದಾಗಿತ್ತು ಎಂದು ಅಭಿಪ್ರಾಯಪಟ್ಟರು. ಹೋಂಸ್ಟೇ ಮಾಲೀಕರು ಅಸೋಸಿಯೇಷನ್ ನ ಸದಸ್ಯರಾಗಿದ್ದು, ಇವರ ವಿರುದ್ಧದ ಆರೋಪದ ಕುರಿತು ಸಮಗ್ರ ತನಿಖೆಯಾಗಲಿ, ಹೋಂಸ್ಟೇಯಲ್ಲಿರುವ ಸಿಸಿ ಕ್ಯಾಮರಾದ ದೃಶ್ಯಗಳನ್ನು ಮತ್ತು ವೈಫೈ ವ್ಯವಸ್ಥೆಗಳನ್ನು ತನಿಖೆಗೆ ಒಳಪಡಿಸಲಿ ಎಂದು ಒತ್ತಾಯಿಸಿದರು. ಹೋಂಸ್ಟೇ ಪರಿಕಲ್ಪನೆಯಿಂದ ಕೊಡಗಿನಲ್ಲಿ ಪ್ರವಾಸೋದ್ಯಮ ಹೆಚ್ಚು ಅಭಿವೃದ್ಧಿ ಹೊಂದುತ್ತಿದ್ದು, ಪ್ರತಿಯೊಂದು ಕ್ಷೇತ್ರದ ವ್ಯಕ್ತಿಗೂ ಇದರಿಂದ ಲಾಭವಾಗುತ್ತಿದೆ…

Read More

ಮಡಿಕೇರಿ ಏ.23 NEWS DESK :  ಭಾರತದ ಪ್ರಮುಖ ಕೃಷಿ ಪರಿಹಾರ ಒದಗಿಸುವ ಸಂಸ್ಥೆಯಾದ ಕೋರಮಂಡಲ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ತನ್ನ 1200ನೇ ‘ನಮ್ಮ ಗ್ರೋಮೋರ್’ ರಿಟೇಲ್ ಮಳಿಗೆಯನ್ನು ಇಂದು ಉದ್ಘಾಟಿಸಿದೆ. ಇದು ರಾಜ್ಯದಲ್ಲಿ ಸಂಸ್ಥೆಯ 270ನೇ ಮಳಿಗೆಯಾಗಿದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಮಳಿಗೆಯನ್ನು ಆರಂಭಿಸಿದ್ದು, ಕೃಷಿ ಸಮುದಾಯದೊಂದಿಗೆ ನೇರ ಸಂಪರ್ಕವನ್ನು ಬಲಪಡಿಸುವ ಸಂಸ್ಥೆಯ ಪಯಣದಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ. ಈ ಮಳಿಗೆಯನ್ನು ಕುಟ್ಟಪ್ಪ ಕಾಫಿ ಸಂಸ್ಥೆಯ ಸಂಸ್ಥಾಪಕರಾದ, ಇಂಡಿಯನ್ ವ್ಯಾನಿಲ್ಲಾ ಇನಿಶಿಯೇಟಿವ್‍ನ ಸಹ-ಸಂಸ್ಥಾಪಕ ಐ.ಕೆ. ಅನಿಲ್ ಉದ್ಘಾಟಿಸಿದರು. ಕೋರಮಂಡಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಎಸ್. ಶಂಕರಸುಬ್ರಮಣಿಯನ್ ಮತ್ತು ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶಿಷ್ಟ ಕಾಫಿ ಮಳಿಗೆಯಾಗಿ ಆರಂಭಗೊಂಡಿರುವ ಈ ಕೇಂದ್ರವನ್ನು ಅರ್ಜಿ ಮತ್ತು ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿರಾಜಪೇಟೆ ತಾಲ್ಲೂಕಿನ ಪ್ರಮುಖ ಕಾಫಿ ಬೆಳೆಯುವ ಪ್ರದೇಶಗಳಿಗೆ ಹಾಗೂ ಕೊಡಗು ಜಿಲ್ಲೆಯ ಪ್ರಮುಖ…

Read More

ಮಡಿಕೇರಿ ಏ.23 NEWS DESK : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ ಪ್ರದರ್ಶನದೊಂದಿಗೆ ಸಮಾಪನಗೊಂಡಿತು. ನಗರದ ಕೊಡಗು ವಿದ್ಯಾಲಯದಲ್ಲಿ 22 ದಿನಗಳಿಂದ ನಡೆದ ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ವಿಜೃಂಭಣೆಯ ತೆರೆ ಬಿದ್ದಿತು. ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಪಿಕಲ್‌ಬಾಲ್ ತರಬೇತುದಾರರು ಹಾಗೂ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಮತ್ತು ಏಷ್ಯಾ ಪಿಕಲ್‌ಬಾಲ್ ಮಹಾಸಂಘದ ಉಪಾಧ್ಯಕ್ಷ ರಜತ್ ಕಂಕರ್ ಎಂ. ಆರ್ ಆಗಮಿಸಿದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಜತ್ ಕಂಕರ್ , ಪೋಷಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು ಹಾಗೂ ಅವರೊಂದಿಗೆ ಆಟವಾಡಬೇಕು ಎಂದು ಸಲಹೆ ನೀಡಿದರು. ಎಂಟು ವರ್ಷ ಮೇಲ್ಪಟ್ಟವರು ಪಿಕಲ್‌ಬಾಲ್ ಕ್ರೀಡೆಗಳಲ್ಲಿ ಭಾಗವಹಿಸಬಹುದು ಎಂದೂ ರಜತ್ ಕಂಕರ್ ಅವರು ಮಾಹಿತಿ ನೀಡಿದರು. ಈ ಕ್ರೀಡೆಯಲ್ಲಿ ಹಲವಾರು ವಿಭಾಗಗಳಿದ್ದು ಎಲ್ಲರಿಗೂ ಅವಕಾಶಗಳಿವೆ ಎಂದರು.ಮಕ್ಕಳು ವರ್ಷಪೂರ್ತಿ ಓದುವುದಷ್ಟೇ ಸಾಕಾಗುವುದಿಲ್ಲ,…

Read More

ಮಡಿಕೇರಿ NEWS DESK ಏ.23 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆಯ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ರೆನಿತ್ ಎಂ. 617 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ, ಅಲ್ಲದೆ ಜಿಲ್ಲೆಗೆ 5ನೇ ಸ್ಥಾನ ಪಡೆದುಕೊಂಡಿದ್ದಾನೆ. ರೆನಿತ್ ಎಂ. ಪೊಲೀಸ್ ಅಧಿಕಾರಿ ಕುಶಾಲನಗರದ ನಿವಾಸಿ ಮಂಜುನಾಥ್ ಹಾಗೂ ತಾರಾಮಣಿ ದಂಪತಿಯ ಪುತ್ರ.

Read More

ಮಡಿಕೇರಿ ಏ.23 NEWS DESK :  ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಸುಬ್ರಹ್ಮಣ್ಯ – ಚಾಮಾ೯ಡಿ ಘಾಟ್ ಗಾಗಿ ಬೈಕ್ ರೈಡ್ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಪ್ರಮುಖರಾದ ಬಿ.ಜಿ. ಅನಂತಶಯನ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ನಿದೇ೯ಶಕರಾದ ಹರೀಶ್ ಕಿಗ್ಗಾಲು, ರಂಜಿತ್ ಕಿಗ್ಗಾಲು, ಚೇಂದ್ರಿಮಾಡ ವಿನು, ಕಶ್ಯಪ್ ಮತ್ತು ಚೇತನ್ ಪಾಲ್ಗೊಂಡಿದ್ದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೖತ್ತದಲ್ಲಿ ಬೈಕ್ ರೈಡ್ ಗೆ ರೋಟರಿ ಜಿಲ್ಲೆಯ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ, ಮತ್ತು ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ವಸಂತ್ ಕುಮಾರ್ ಚಾಲನೆ ನೀಡಿದರು. ಸಂಪಾಜೆ ಮಾಗ೯ವಾಗಿ ಸುಬ್ರ್ರಹ್ಮಣ್ಯ ತಲುಪಿದ ಬೈಕ್ ರೈಡರ್ ಗಳನ್ನು ಸುಬ್ರಹ್ಮಣ್ಯ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಯಪ್ರಕಾಶ್ , ನಿದೇ೯ಶಕರಾದ ಚಂದ್ರಶೇಖರ್,. ರೋಹಿತ್ ಮತ್ತು ಸದಸ್ಯರು ಸ್ವಾಗತಿಸಿದರು. ಚಾಮಾ೯ಡಿ ಘಾಟ್ ಗಾಗಿ ಬಂದ ರೈಡರ್ ಗಳನ್ನು ಸೋಮವಾರಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ವೀಣಾ ಮನೋರ್, ನಿದೇ೯ಶಕ ದಿನೇಶ್ , ಆಶಾ ಪುಟ್ಟರಾಜು ಮತ್ತು ಸದಸ್ಯರು…

Read More

ಮಡಿಕೇರಿ NEWS DESK ಏ.23 : ಕೊಡಗು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿಯ ಒಟ್ಟು 625 ಅಂಕಕ್ಕೆ 621 ಅಂಕವನ್ನು ಪಡೆದು ಪ್ರಥಮ ಸ್ಥಾನ ಹೊಂದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಲಿನ್ಸಿ ದೇಚಮ್ಮ ಟಿ.ಟಿ. ಅವರು 621, ಹಾಗೆಯೇ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ಸಿಂಚನ ಕೆ.ಐ. ಅವರು 621 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಡೀನ್ ಸೆಲ್ವ ಡಿ’ಸೋಜ 620, ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಶಿವಾನಿ ಶಾರದಮಣಿ, ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ಯು.ಎಸ್.ಶ್ರೀವತ್ಸ, ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ಸಿದ್ಧಾರ್ಥ ಕಾವೇರಪ್ಪ ಇವರು 619 ಅಂಕ ಪಡೆದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಸೋನಶ್ರೀ ಕೆ.ಇ., ಗೋಣಿಕೊಪ್ಪ ಸೆಂಟ್ ಥಾಮಸ್ ಪ್ರೌಢ ಶಾಲೆಯ ನಮನ ಈ ಇಬ್ಬರು 618 ಅಂಕ ಪಡೆದಿದ್ದಾರೆ. ಉಳಿದಂತೆ ಸೋಮವಾರಪೇಟೆಯ ಅವರ್ ಲೇಡಿ…

Read More

ಮಡಿಕೇರಿ ಏ.23 NEWS DESK : ಕಠಿಣ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಬಹುದು ಎಂದು ತೋರಿಸಿಕೊಟ್ಟ ಭಗೀರಥ ಅವರ ಪ್ರಯತ್ನ ಮನುಕುಲಕ್ಕೆ ಮಾದರಿಯಾಗಿದೆ ಎಂದು ಚಿಂತಕರು ಹಾಗೂ ಸಾಹಿತಿಗಳಾದ ಚಿ.ನಾ.ಸೋಮೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗಂಗೆಯನ್ನು ಧರೆಗಿಳಿಸಿ ಗಂಗಾ ನದಿಯನ್ನಾಗಿಸಿ ಜನರ ನೀರಿನ ದಾಹ ತೀರಿಸಿದ ಭಗೀರಥರು ಪ್ರಯತ್ನ ಶೀಲತೆಯ ರೂಪಕವಾಗಿ ನಿಲ್ಲುತ್ತಾರೆ. ಅತ್ಯಂತ ಕಠಿಣವಾದ ಅಥವಾ ಅಸಾಧ್ಯವೆನಿಸುವ ಕಾರ್ಯವನ್ನು ಅಚಲವಾದ ಛಲ ಮತ್ತು ನಿರಂತರ ಪರಿಶ್ರಮದಿಂದ ಸಾಧಿಸುವ ಭಗೀರಥ ಅವರ ಪ್ರಯತ್ನದ ಮೂಲಕ ಯುವ ಸಮೂಹ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕುಶಾಲನಗರದ ಬಿ.ಸಿ.ಶಂಕರಯ್ಯ ಅವರು ಉಪನ್ಯಾಸ ನೀಡಿ, ಭಗೀರಥನು ಪೌರಾಣಿಕ ರಾಜ. ತನ್ನ ಪೂರ್ವಜರ ಭೀಕರ ಅಂತ್ಯವನ್ನು ತಿಳಿದು, ತನ್ನ ಪೂರ್ವಜರಿಗೆ ಸದ್ಗತಿ ಪ್ರಾಪ್ತಿಯಾಗಲಿಲ್ಲವೆಂಬ ವಿಷಾದದಿಂದ ತನ್ನ ಮಂತ್ರಿಗೆ…

Read More

ಮಡಿಕೇರಿ ಏ.23 NEWS DESK : ಮನೆ ಸಂಸಾರದಲ್ಲಿ ಓದು-ಬರಹದಂತಹ ಅಭ್ಯಾಸಗುಣಗಳು ಒಳ್ಳೆಯ ಸಂಸ್ಕಾರಕ್ಕೆ ದಾರಿ ತೋರಿಸಬಲ್ಲದು. ಇದರಿಂದ ಒಳ್ಳೆಯ ಸಂಸ್ಕೃತಿಯು ರೂಪುಗೊಳ್ಳುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಿಸಿದರು.  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ 8ನೇ ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಿ ಮಾತನಾಡಿದ ಮಹೇಶ್ ನಾಚಯ್ಯ, ಒಂದು ಒಳ್ಳೆಯ ಸಂಸ್ಕøತಿಯಿಂದ ಜನರು ಒಂದು ಕುಟುಂಬದಲ್ಲಿ ಉತ್ತಮ ಪರಿಸರ ಹೊಂದಬಹುದು. ಮೊದಲು ಮನೆಯಿಂದಲೇ ಸಂಸ್ಕಾರವನ್ನು ಕಲಿಯಬೇಕು. ಯಾವುದೇ ಭಾಷೆಯಲ್ಲಿ ಪರಿಣತಿ ಹೊಂದಿದ್ದರೂ ಮುಖ್ಯ ಭಾಷೆ ಕೊಡವ ಭಾಷೆ ಮನೆಯ ವ್ಯವಹಾರಿಕ ಭಾಷೆಯಾಗಿರಬೇಕು. ಮಾತೃ ಭಾಷೆಯ ಮೇಲಿನ ಕೀಳರಿಮೆ ಸಲ್ಲದು. ಇದು ತಂದೆ-ತಾಯಿಯನ್ನು ಕಡೆಗಣಿಸಿದಂತೆ. ಕೊಡವ ಭಾಷೆಯಲ್ಲಿ ತನ್ನದೇ ಆದ ನಾಲ್ಕು ಸಾವಿರದಷ್ಟು ಮೂಲ ಶಬ್ಧಗಳಿವೆ. ಅವೆಲ್ಲದರ ಬಳಕೆಯಾದಲ್ಲಿ ಭಾಷೆಗೆ ತನ್ನತನ ಉಳಿಯಲು ಸಾಧ್ಯವಾಗುತ್ತದೆ. ಕೊಡವ ಪುಸ್ತಕ ಪತ್ತಾಯ ಅಕಾಡೆಮಿಯ ನೂತನ ಯೋಜನೆಯಾಗಿದ್ದು ಕೊಡವ ಸಮಾಜಗಳಲ್ಲಿ ಐನ್‍ಮನೆಗಳಲ್ಲಿ ಇದರ ಸ್ಥಾಪನೆಗೆ ಸಂಬಂಧಪಟ್ಟವರು…

Read More