ಮಡಿಕೇರಿ ಡಿ.3 NEWS DESK : ಕುಂಗ್ ಫೂ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಒಡಿಶಾದಲ್ಲಿ ನಡೆದ 9ನೇ ರಾಷ್ಟ್ರೀಯ ಕುಂಗ್ಫೂ ಚಾಂಪಿಯನ್ಶಿಪ್ನಲ್ಲಿ ಕೊಡಗಿನ ಕುಂಗ್ ಫೂ ಸಂಸ್ಥೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಯು.ಸಿ.ಕೌಶಿಕ್ ಕುಮಾರ್ ಚಿನ್ನ, ವಿವಕ್ರ ಚೋಂದಮ್ಮ ಚಿನ್ನ, ಶರ್ನಿ ಎ.ಶೆಟ್ಟಿ ಬೆಳ್ಳಿ, ಎಬೆನ್ ಕೆ.ಜೋನಾಫ್ರೆಡ್ ಬೆಳ್ಳಿ ಹಾಗೂ ಎಂ.ಮನ್ವಿತ್ ಮೋಹನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರಿಗೆ ರಾಜ್ಯ ಐಕೆಸಿ ಕುಂಗ್ ಫೂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದರು.
ಲೇಖಕ: admin
ಮಡಿಕೇರಿ ಡಿ.3 NEWS DESK : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿಯಿಂದ ಡಿ.5 ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜಾಗೃತಿ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಪ್ರಮುಖ ಕುಕ್ಕೇರ ಅಜಿತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ನಂತರ ಗಾಂಧಿ ಮೈದಾನದಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದು ಸಮುದಾಯದ ಮೇಲಿನ ಅಮಾನವೀಯ ದೌರ್ಜನ್ಯ ಪ್ರಕರಣಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿದೆ. ಹೋರಾಟದ ಮೂಲಕ ನೆರೆಯ ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯಕ್ಕೆ ನಾವು ನಿಮ್ಮೊಂದಿಗೆ ಇದ್ದೇವೆ ಎನ್ನುವ ಸಂದೇಶವನ್ನು ನೀಡಲಾಗುತ್ತಿದೆ. ಹಿಂದುಗಳ ಮೇಲೆ ನಡೆಯುತ್ತಿರುವ ಅಮಾನವೀಯ ಕೃತ್ಯವನ್ನು ‘ವಿಶ್ವಸಂಸ್ಥೆ’ ಗಮನಿಸಬೇಕು ಮತ್ತು ಸಂಕಷ್ಟಕ್ಕೆ ಪರಿಹಾರ…
ಮಡಿಕೇರಿ ಡಿ.3 NEWS DESK : ಉಡೋತ್ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6 ಮತ್ತು 7 ರಂದು ನಾಲ್ಕನೇ ವರ್ಷದ ನೇಮೋತ್ಸವ ನಡೆಯಲಿದೆ. ಡಿ.6 ರಂದು ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಗಂಟೆಗೆ ದೈವದ ಭಂಡಾರ ಇಳಿಯುವುದು, ರಾತ್ರಿ 10.30 ಗಂಟೆಯಿಂದ ಡಿ.7 ರಂದು ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮವು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9900931278, 9591304757, 9483399077 ಸಂಪರ್ಕಿಸಬಹುದಾಗಿದೆ.
ವಿರಾಜಪೇಟೆ ಡಿ.3 NEWS DESK : ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಟಿಯ 226 ಸಂಚಿಕೆ ಅರಮೇರಿ ಕಳಂಚೇರಿ ಮಠದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ ನನ್ನ ತಂದೆಯವರಾದ ದಿವಂಗತ ಡಿ.ಜೆ ಪದ್ಮನಾಭ ಅವರು ಕರ್ನಾಟಕ ಸಂಘವನ್ನು ನಿರ್ಮಾಣ ಮಾಡುವ ಸಮಯದಲ್ಲಿ ಅಂದಿನ ಕಾಲದಲ್ಲಿ ಮಠದ ವತಿಯಿಂದ ಹತ್ತು ಸಾವಿರ ರೂಗಳ ದೇಣಿಗೆಯನ್ನು ನೀಡಿದ್ದರು. ತಂದೆಯವರಿಗೆ ಮಠದೊಂದಿಗೆ ಉತ್ತಮ ಬಾಂಧವ್ಯವಿತ್ತು. ನನ್ನ ತಂದೆಯವರ ಬೆಳವಣಿಗೆಯಲ್ಲಿ ಮಠದ ಪಾತ್ರವೂ ಇದೆ ಎನ್ನುವುದನ್ನು ಸ್ಮರಣೆ ಮಾಡಲು ಬಯಸುತ್ತೇನೆ. ಮಾಧ್ಯಮಗಳು ಇಂದಿನ ಸಮಯದಲ್ಲಿ ಸಕಾರತ್ಮಕತೆಗಿಂತ ನಕಾರತ್ಮಕತೆಯನ್ನು ಹೆಚ್ಚು ಬಿತ್ತುತ್ತಿವೆ. ಹೀಗಾಗಿ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ. ಜನರ ವಿಶ್ವಾಸವನ್ನು ಮಾಧ್ಯಮಗಳು ಕಳೆದುಕೊಳ್ಳುತ್ತಿವೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತೆ ಉಷಾಪ್ರೀತಮ್ ಮಾತನಾಡಿ, ಪ್ರಪಂಚದ ಯಾವ ಆವಿಷ್ಕಾರಗಳು ಮನುಕುಲಕ್ಕೆ ಕೆಡುಕು ಮಾಡಬೇಕು ಎನ್ನುವ ಉದ್ದೇಶ ಇಟ್ಟುಕೊಂಡು ಬಂದಿರುವುದಿಲ್ಲ. ಹಾಗೇ ಇಂದು ನವಮಾಧ್ಯಮಗಳು ಕೆಡುಕನ್ನೇ ಬಯಸುತ್ತಿಲ್ಲ. ಆದರೆ ಅವುಗಳನ್ನು ಬಳಕೆ ಮಾಡುವ ಬಳಕೆದಾರರ…
ಮಡಿಕೇರಿ ಡಿ.3 NEWS DESK : ಮೂರ್ನಾಡು ಶಾದಿಮಹಲ್ ನಲ್ಲಿ ಮೈಮಾ ಸಂಘಟನೆ ವತಿಯಿಂದ ನಡೆದ ಅನುಸ್ಮರಣಾ ಕಾರ್ಯಕ್ರಮ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಹು ನಿಝಾರ್ ಅಹ್ಸನಿ ಕಕ್ಕಡಿಪುರಂ (ಕುಂಜಿಲ0 ಉಸ್ತಾದ್) ಸಂಘಟನೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಡಿನಲ್ಲಿ ಬದುಕಿ ಬಾಳಿದ್ದ ಹಿರಿಯರು ಸ್ನೇಹಿತರು ಕುಟುಂಬದವರು ಸೇರಿದಂತೆ ಮರಣ ಹೊಂದಿದ ಸರ್ವ ಸತ್ಯವಿಶ್ವಾಸಿಗಳ ಪಾರತ್ರಿಕ ಕ್ಷೇಮ ಆಗ್ರಹಿಸಿ ನಡೆಸಲಾದ ಪವಿತ್ರ ಖುರ್ಆನ್ ಖತಮ್ ದುಆ ದಿಕ್ರ್ ಸ್ವಲಾತ್ ಹದಿಯ ಅರ್ಪಣೆ ಕಾರ್ಯವು ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸುವಂತಾಗಲಿ ಎಂದರು. ಪ್ರಾರ್ಥನಾ ಸಂಗಮದ ದುಆ ಕಾರ್ಯಕ್ಕೆ ಕಕ್ಕಡಿಪುರಂ ಅಹ್ಸನಿ ಮುಖ್ಯ ನೇತೃತ್ವ ವಹಿಸಿದ್ದರು.
ಮಡಿಕೇರಿ ಡಿ.3 NEWSDESK : ಅತಿ ಕಡಿಮೆ ಗೌರವಧನ ಪಡೆದು ಹೆಚ್ಚಿನ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರಕಾರಿ ನೌಕರರೆಂದೇ ಪರಿಗಣಿಸಲು ಮತ್ತು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದೊಂದಿಗೆ ಸಮಾಲೋಚನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಭರವಸೆ ನೀಡಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನ ಪಡೆದು ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸರಕಾರ ಇವರನ್ನು ಕೂಡ ಸರಕಾರಿ ಉದ್ಯೋಗಿಗಳೆಂದು ಪರಿಗಣಿಸುವ ಅಗತ್ಯವಿದೆ. ನಿವೃತ್ತಿ ವೇತನ ಮತ್ತು ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದ ಗಮನ ಸೆಳೆಯಲಾಗಿದೆ. ಸರಕಾರಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವ ಬೇಡಿಕೆ ಕುರಿತು ರಾಜ್ಯಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂಡ ಮಾಜಿ ಅಧ್ಯಕ್ಷರಾದ ಸುರಯ್ಯ ಅಬ್ರಾರ್, ಮಹಿಳೆಯರ ಒಗ್ಗಟ್ಟಿನಲ್ಲಿ…
ಸುಂಟಿಕೊಪ್ಪ ಡಿ.3 NEWS DESK : ಕುಶಾಲನಗರ ಬಸ್ ನಿಯಂತ್ರಕ ಅಶೋಕ್ ಅವರನ್ನು ವಾಸ್ತವ ಪರಿಸ್ಥಿತಿಯ ಬಗ್ಗೆ ಗಮನ ಹರಿಸಲು ಸುಂಟಿಕೊಪ್ಪದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಸಂದರ್ಭ ಖಾಸಗಿ ವಲಯ ಹಾಗೂ ಸರಕಾರಿ ಹುದ್ದೆಗಳಿಗೆ ತೆರಳುವ ಮಂದಿ, ಶಾಲಾ ಕಾಲೇಜು ಮಕ್ಕಳು ಹಾಗೂ ಸಾರ್ವಜನಿಕರು ನಿಯಂತ್ರಕರ ಬಳಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಖಾಸಗಿ ವಾಹನಗಳಿಗೆ ಮಾತ್ರ ನಿಗಧಿತ ಆಸನಕ್ಕಿಂತ ಒಂದು ಆಸನದ ಮಂದಿ ಹೆಚ್ಚಿದರೂ ಕಾನೂನು ರೀತಿಯಲ್ಲಿ ದಂಡ ವಿಧಿಸುವ ಅಧಿಕಾರಿಗಳು, ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ನಿತ್ಯವು ಜನತೆಯು ಕಿಕ್ಕಿರಿದು ಉಸಿರುಗಟ್ಟಿದ ವಾತಾವರಣದಲ್ಲೇ ಸಂಚರಿಸುತ್ತಿರುತ್ತಾರೆ. ಆದರೆ ಇವರಿಗೆ ಕಾನೂನು ಅನ್ವಯಿಸುವುದಿಲ್ಲಾವೇ ಎಂದು ಸಾರಿಗೆ ಇಲಾಖೆಯ ಅಧಿಕಾರಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಅರಿತ ಬಸ್ ನಿಯಂತ್ರಕ ಅಶೋಕ್, ಜಿಪಿಎಸ್ ಚಿತ್ರಗಳನ್ನು ತೆಗೆದು ತಮ್ಮ ಮೇಲಾಧಿಕಾರಿಗಳಿಗೆ ಕಳುಹಿಸಿ, ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸೋಮವಾರಪೇಟೆ ಡಿ.3 NEWS DESK : ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಮಹಿಳೆಯರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ನ್ಯಾಷನಲ್ ರೂರಲ್ ಲವ್ಲಿಹುಡ್ ಮಿಷನ್(ಎನ್ಆರ್ಎಲ್ಎಂ)ಯೋಜನೆಯಡಿ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಮಲ್ಲಳ್ಳಿ ಜಲಪಾತದ ಸಮೀಪ ನಿರ್ಮಾಣವಾಗಿರುವ ಮತ್ಸ್ಯ ಸಂಜೀವಿನಿ ಫಿಶ್ ಕ್ಯಾಂಟಿನ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ಸಂಜೀವಿನಿ ಒಕ್ಕೂಟದ ಸಂಘದ ಮೂಲಕವೇ ಕ್ಯಾಂಟಿನ್ ನಡೆಯಲಿದೆ. ಪ್ರವಾಸಿಗರಿಗೆ ರುಚಿಯಾದ, ಗುಣಮಟ್ಟದ ಆಹಾರವನ್ನು ಕಲ್ಪಿಸುವುದು ಸ್ವಸಹಾಯ ಸಂಘದವರ ಜವಾಬ್ದಾರಿಯಾಗಿದೆ. ಮೀನುಗಾರಿಕೆ ಇಲಾಖೆಯ ವತಿಯಿಂದ ಹಾರಂಗಿ ಹಿನ್ನಿರಿನಲ್ಲಿ ಬೆಳೆದಿರುವ ತಾಜಾ ಮೀನನ್ನು ಕಡಿಮೆ ದರದಲ್ಲಿ ನೀಡಲಾಗುತ್ತದೆ. ಅದರ ಜೊತೆಯಲ್ಲಿ ಕೋಳಿ ಮಾಂಸಾಹಾರವನ್ನು ಮಾಡಲು ಅವಕಾಶವಿದೆ ಎಂದು ಹೇಳಿದರು. ಜಲಪಾತಕ್ಕೆ ಬಂದ ಪ್ರವಾಸಿಗರಿಗೆ ಇಲ್ಲಿ ಊಟ ಸಿಗುತ್ತಿರಲಿಲ್ಲ. ಇನ್ನು ಸಮಸ್ಯೆಯಾಗುವುದಿಲ್ಲ. ಪ್ರವಾಸಿಗರೊಂದಿಗೆ ಆತ್ಮಿಯತೆಯಿಂದ ಮಾತನಾಡಬೇಕು ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕಾಗಿದೆ. ಅದಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಲಾಗುವುದು. ಪ್ರವಾಸೋದ್ಯಮ ಬೆಳೆದರೆ ಗ್ರಾಮೀಣ ಜನರಿಗೂ…
ಮಡಿಕೇರಿ ಡಿ.3 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಡಿ.5 ರಿಂದ ಡಿ.8 ರವರೆಗೆ “ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.5 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಡಿ.6 ರಂದು ಶ್ರೀ ಭಗಂಡೇಶ್ವರ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ…
ಮಡಿಕೇರಿ ಡಿ.3 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.7 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಪ್ರಯುಕ್ತ ಭಕ್ತಾದಿಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.






