ಮಡಿಕೇರಿ ನ.4 NEWS DESK : ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನ.18 ರಂದು ‘ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ’ ನಡೆಯಲಿದೆ. ಹೆಸರು ನೋಂದಾಯಿಸಲು ನ.15 ಕೊನೆಯ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಚೇತನ ಚಿಲುಮೆ (ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹತ್ತಿರ) ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939, 9480745776 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.4 NEWS DESK : ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ `ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ’ಯು ನ.10 ಮತ್ತು 11 ರಂದು ಕೊಡಗು ಜಿಲ್ಲೆಯ ಐದು ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸಂಚರಿಸಲಿದ್ದು, ಕನ್ನಡ ರಥಯಾತ್ರೆಯನ್ನು ಬರಮಾಡಿಕೊಳ್ಳುವ ಸಂಬಂಧ ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಸಂಸ್ಥೆಗಳು, ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ಕನ್ನಡ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ನ.10 ರಂದು ಬೆಳಗ್ಗಿನ ವೇಳೆ ಸಂಪಾಜೆಗೆ ಆಗಮಿಸಲಿದ್ದು, ಎಲ್ಲರೂ ಸೇರಿ ಬರಮಾಡಿಕೊಳ್ಳಬೇಕಿದೆ. ನಂತರ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಆಗಮಿಸಲಿದೆ. ನಂತರ ಪೊನ್ನಂಪೇಟೆಗೆ ತೆರಳಲಿದೆ. ಬಳಿಕ ನ.11 ರಂದು ಪೊನ್ನಂಪೇಟೆಯಿಂದ ಪಾಲಿಬೆಟ್ಟ-ಸಿದ್ದಾಪುರ ಮಾರ್ಗ ಕುಶಾಲನಗರ ತಲುಪಿ, ಕನ್ನಡ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಳಿಕ ಸೋಮವಾರಪೇಟೆ…
ಮಡಿಕೇರಿ NEWS DESK ನ.4 : ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿಯನ್ನು ಬಳಸಿಕೊಂಡು ರಾಜ್ಯ ವ್ಯಾಪಿ ಬಡವರ್ಗದ ಮಂದಿಯ ಭೂಮಿಯನ್ನು ಕಬಳಿಸುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ವಕ್ಫ್ ನಿಯಮಗಳನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಜಾಗದ ಆರ್ಟಿಸಿಯಲ್ಲಿ “ವಕ್ಫ್ ಆಸ್ತಿ” ಎಂದು ನಮೂದಿಸಿ ಬಡ ರೈತರಿಗೆ ನೋಟಿಸ್ ನೀಡುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೆಂದೂ ಕಾಣದಷ್ಟು ಇಂಧನ ಬೆಲೆ ಹೆಚ್ಚಳವಾಗಿದೆ. ವಿವಿಧ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಬಡವರ್ಗದ ಹಿತಕ್ಕಾಗಿ ಇರುವ ವಾಲ್ಮೀಕಿ ಕಲ್ಯಾಣ ನಿಗಮದ ಹಗರಣ ಸೇರಿದಂತೆ, ಸ್ವತಃ ಸಿಎಂ ಅವರೆ ಸಿಲುಕಿಕೊಂಡಿರುವ ಮುಡಾ…
ಮಡಿಕೇರಿ ನ.4 NEWS DESK : ಚನ್ನಪಟ್ಟಣ ತಾಲ್ಲೂಕು ವಕೀಲರ ಸಂಘದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಸಂಘದ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಎ.ಎಸ್.ಪೊನ್ನಣ್ಣರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಕೆಪಿಸಿಸಿ ಕಾನೂನು ಘಟಕದ ಸೂರ್ಯ ಮುಕುಂದರಾಜ್ ಮತ್ತಿತರ ಪ್ರಮುಖರು ಹಾಜರಿದ್ದದರು.
ಮಡಿಕೇರಿ ನ.4 NEWS DESK : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ ಪ್ರಸನ್ನ ಉದ್ಘಾಟಿಸಿದರು. ಹಿರಿಯ ಕವಿಗಳಾದ ಮೂಕಳೆರ ಟೈನಿ ಪೂಣಚ್ಚ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಕಾನಡ್ಕ ಡೀನ ದೇವಯ್ಯ ಪ್ರಾಸ್ತವಿಕ ನುಡಿಗಳನ್ನಾಡಿದರು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದು, ಕನ್ನಡ ನಾಡು -ನುಡಿ ಸಂಸ್ಕೃತಿ ಯ ಬಗ್ಗೆ,ಕವನಗಳನ್ನು ವಾಚಿಸಿದರು.ಯಶಿಕ ದೇವಯ್ಯ ಕಾನಡ್ಕ ಪ್ರಾರ್ಥನಾ ನೃತ್ಯ ಮಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ.ವಿದ್ಯಾರ್ಥಿನಿಯಾರಾದ ವೃಂದ ನಿರೂಪಣೆ ಮಾಡಿದರು. ಶ್ವೇತಾ ಅತಿಥಿಗಳನ್ನು ಸ್ವಾಗತಿಸಿದರು. ಕವಿಗೋಷ್ಠಿಯಲ್ಲಿ ಕವಿಗಳಿಗೆ ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವದ ಶಾಲನ್ನು ಹಾಕಿ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಹಾಗೂ ಪುಸ್ತಕವನ್ನು ನೀಡಿ ಗೌರವಿಸಲಾಯಿತು.
ಮಡಿಕೇರಿ ನ.4 NEWS DESK : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ “ವಿಷ್ಣುಮೂರ್ತಿ ಕೋಲ” (ಚಾಮುಂಡಿ)ವು ನ.8 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ವಿಷ್ಣುಮೂರ್ತಿ ಕೋಲ” ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.
ಮಡಿಕೇರಿ ನ.4 NEWS DESK : ನಗರದ ತನಲ್ ನೆರಳಿನ ಮನೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ತನಲ್ ಆಶ್ರಮ ವಾಸಿಗಳು ಹಬ್ಬದ ಪ್ರಯುಕ್ತ ಮಣ್ಣಿನ ಹಣತೆಯನ್ನು ಹಚ್ಚಿ, ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಹಿರಿಯ ನಿರಾಶ್ರಿತರ ಪಾಲಿಗೆ ಆಶಾ ಕಿರಣವಾಗಿರುವ ಮಡಿಕೇರಿಯ ತನಲ್ ಆಶ್ರಮದಲ್ಲಿ ಪ್ರತಿಯೊಂದು ಹಬ್ಬ ಹರಿ ದಿನಗಳನ್ನು ಆಚರಿಸುವ ಮೂಲಕ ನೊಂದ ಜೀವಗಳ ಮನಸುಗಳಿಗೆ ಸಂತಸ ತುಂಬುತ್ತದೆ ಎಂದು ತನಲ್ ಪ್ರಮುಖರು ತಿಳಿಸಿದರು.
ಮಡಿಕೇರಿ ಸೆ.4 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್.ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದ್ದು, ಸುರ್ಜಿತ್ ನಾಯಕತ್ವದ ರಾಕ್ ಸ್ಟಾರ್ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಮಾಸ್ಟರ್ ಎಫ್.ಸಿ ತಂಡದ ಮುನ್ನಡೆ ಆಟಗಾರ ಸವಾದ್ ಉಸ್ಮಾನ್ ಮೊದಲಾರ್ಧದಲ್ಲಿ ಒಂದು ಗೋಲು ಬಾರಿಸಿ ಮಾಸ್ಟರ್ಸ್ ಎಫ್.ಸಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ದ್ವಿತೀಯಾರ್ಧದಲ್ಲಿ ಕೂಡ ಸವಾದ್ ಉಸ್ಮಾನ್ ಮತ್ತೊಂದು ಗೋಲು ಬಾರಿಸುವುದರ ಮೂಲಕ ಮಾಸ್ಟರ್ಸ್ ಎಫ್.ಸಿ ತಂಡವು 2-0 ಗೋಲುಗಳ ಅಂತರದಿಂದ ಫೈನಲ್ ಪಂದ್ಯವನ್ನು ಗೆದ್ದು ಚಾಂಪಿಯನ್ಸ್ ಪ್ರಶಸ್ತಿಯನ್ನು ಅಲಂಕರಿಸುವುದರ ಮೂಲಕ ಕೆನೇಡಿಯನ್ ಮಾದರಿಯ ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ರಾಕ್ ಸ್ಟಾರ್ ತಂಡವು ಫೀನಿಕ್ಸ್ ಹಂಟರ್ ತಂಡವನ್ನು ಮಣಿಸಿತು. ಸೆಮಿಫೈನಲ್ ಪಂದ್ಯದ ಮೊದಲಾರ್ಧದಲ್ಲಿ ಫೀನಿಕ್ಸ್ ತಂಡದ ನಾಯಕ…
ಮಡಿಕೇರಿ ನ.4 NEWS DESK : ಸಮಥ೯ ಕನ್ನಡಿಗರು ಸಂಸ್ಥೆಯು ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ವಾಷಿ೯ಕ ಪ್ರಶಸ್ತಿಯನ್ನು ಹಿರಿಯ ಲೇಖಕಿ ರಾಜಲಕ್ಷ್ಮಿ ಗೋಪಾಲಕೖಷ್ಣ ಸನ್ಮಾನಿತರಿಗೆ ಗೌರಪಾವ೯ಣೆ ಮೂಲಕ ವಿತರಿಸಿದರು. ನಗರದ ಓಂಕಾರ ಸದನದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 11 ಸಾಧಕರಿಗೆ ಸಮಥ೯ ಕನ್ನಡಿಗ ಪ್ರಶಸ್ತಿ ವಿತರಿಸಿ ಮಾತನಾಡಿದ ರಾಜಲಕ್ಷ್ಮಿ ಗೋಪಾಲಕೖಷ್ಣ, ವಿವಿಧ ರಂಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ವಾಷಿ೯ಕ ಪ್ರಶಸ್ತಿ ನೀಡಿ ಗೌರವಿಸುವ ಕಾಯ೯ ಶ್ಲಾಘನೀಯ ಇಂಥ ಪ್ರಶಸ್ತಿ, ಸನ್ಮಾನಗಳು ಸಾಧಕರಿಗೆ ತಮ್ಮ ಕಾಯ೯ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗುತ್ತದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ.ಮಾತನಾಡಿ, ಕನಾ೯ಟಕಕ್ಕೆ ರಾಜ್ಯದ ಸ್ಥಾನ ದೊರಕಿ 68 ವಷ೯ಗಳೇ ಕಳೆದರೂ ಕನ್ನಡ ಸಾಹಿತ್ಯ ಸಂಸ್ಕೃತಿಗಾಗಿನ ಹೋರಾಟಗಳು ಅಂತ್ಯಕಾಣುತ್ತಿಲ್ಲ, ಬದಲಿಗೆ ದಿನೇ ದಿನೇ ಪರಭಾಷೆಯ ಸವಾರಿ ಕನ್ನಡದ ಮೇಲೆ ಹೆಚ್ಚುತ್ತಲೇ ಇದೆ, ಬಾಲ್ಯದಲ್ಲಿಯೇ ಸಂಸ್ಕಾರದ ಜತೆಜತೆಗೇ ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಪ್ರೇಮವನ್ನು ಕಲಿಸಿದರೆ ಕನ್ನಡ ಎಂದೆಂದಿಗೂ…
ಮಡಿಕೇರಿ ನ.4 NEWS DESK : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 26ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನ.3ರ ಸಂಜೆಯಿಂದಲೇ ದೇವಾಲಯದಲ್ಲಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಇಂದು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.






