*ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. (ಕೆ.ಕೆ.ಗೋಪಾಲ, ಉಪಾಧ್ಯಕ್ಷರು, ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘ, ನಿಯಮಿತ)*
ಲೇಖಕ: admin
*ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀದುರ್ಗಾ ದೇವಿ ಹಾಗೂ ಮಾತೆ ಕಾವೇರಿ ನಾಡನ್ನು, ನಾಡಿನ ಜನರನ್ನು ಸಮೃದ್ಧಿಗೊಳಿಸಲಿ* (ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರು ವಿರಾಜಪೇಟೆ ಕ್ಷೇತ್ರ)*
*ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಚಾಮುಂಡೇಶ್ವರಿ ತಾಯಿಯ ಕೃಪೆಯಿಂದ ದೇಶ, ನಮ್ಮ ರಾಜ್ಯ ಸಮೃದ್ಧಿಯಾಗಲಿ. ಎಲ್ಲರಿಗೂ ಒಳಿತಾಗಲಿ. (ಬಲ್ಲಾರಂಡ ಕಂಠಿ ಕಾರ್ಯಪ್ಪ, ವಕ್ತಾರರು, ಸೋಮವಾರಪೇಟೆ ಬಿಜೆಪಿ)*
*ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳು. ಶಕ್ತಿ ಸ್ವರೂಪಿಣಿಯಾದ ಶ್ರೀ ದುರ್ಗಾ ಮಾತೆಯ ಆಶೀರ್ವಾದದಿಂದ ನಾಡಿನೆಲ್ಲೆಡೆ ಆರೋಗ್ಯ, ಶಾಂತಿ, ಸಮೃದ್ಧಿ ನೆಲೆಸಲಿ. (ತೇಲಪಂಡ ಶಿವಕುಮಾರ್ ನಾಣಯ್ಯ, ಜಿಲ್ಲಾ ಸಂಚಾಲಕರು, ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ)*
ಮಡಿಕೇರಿ ಅ.10 NEWS DESK : ರಾಷ್ಟ್ರದಲ್ಲಿ ಹಲವು ಸಂಸ್ಕೃತಿ, ಜಾನಪದ ಕಲೆಗಳನ್ನು ಒಳಗೊಂಡಿದ್ದರೂ ಸಹ ಮೂಲ ಒಂದೇ ಆಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಸಮಿತಿ ವತಿಯಿಂದ ನಡೆದ ಜಾನಪದ ದಸರಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಾನಪದ ಕಲೆಗಳು ಭಾರತೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ತಿಳಿಸುತ್ತವೆ. ಆ ನಿಟ್ಟಿನಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಹಿಂದಿನ ಕಲೆ ಮತ್ತು ಸಂಸ್ಕೃತಿ ಸಂಬಂಧಿಸಿದಂತೆ ಮಕ್ಕಳಿಗೆ ಮಾಹಿತಿ ನೀಡುವಂತಾಗಬೇಕು. ಜಿಲ್ಲಾಡಳಿತ ವತಿಯಿಂದ ಜಾನಪದ ಪರಿಷತ್ಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು. ಜಾನಪದ ಪರಿಷತ್ಗೆ ಜಾಗ ಕಲ್ಪಿಸುವ ಸಂಬಂಧ ಕ್ರಮವಹಿಸಲಾಗುವುದು ಎಂದು ಹೇಳಿದರು. ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಕೊಡಗಿನ ಜಾನಪದ ಸಂಸ್ಕೃತಿಯು ಶ್ರೀಮಂತಿಕೆ ಹೊಂದಿದೆ ಎಂದು ಹೇಳಿದರು. ಜಾನಪದ ಕಲೆಗಳ ಸಂಬಂಧ ಪದವಿ ಕೋರ್ಸ್ ಇದ್ದು, ಇದನ್ನು ಆಸಕ್ತರು…
ಮಡಿಕೇರಿ ಅ.10 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ವಿಶೇಷ ಮೆರುಗನ್ನು ನೀಡುವ ದಶಮಂಟಪಗಳ ಶೋಭಾಯಾತ್ರೆಯನ್ನು ಕಾನೂನು ನಿಯಮಗಳಿಗೆ ಬದ್ಧವಾಗಿ ಆಚರಿಸಲು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ದಶಮಂಟಪ ಸಮಿತಿ ಅಧ್ಯಕ್ಷ ಜಿ.ಸಿ.ಜಗದೀಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಮುಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಸಲುವಾಗಿ ದಸರಾ ಸಮಿತಿಯ ಪ್ರಮುಖರು ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಈ ಬಾರಿಯ ದಶಮಂಟಪ ಶೋಭಯಾತ್ರೆಯಲ್ಲಿ ಹಲವು ಬದಲಾವಣೆಯನ್ನು ತರಲಾಗಿದೆ ಎಂದರು. ಶೋಭಾಯಾತ್ರೆಯಲ್ಲಿ ಮಂಟಪಗಳ ಕಥಾ ಸಾರಾಂಶವನ್ನು ಜನರಿಗೆ ತಲುಪಿಸಲು ಧ್ವನಿವರ್ಧಕ ಅತ್ಯವಶ್ಯ. ಆದರೆ ಪ್ರಸ್ತುತ ದಿನಗಳಲ್ಲಿ ಇದರಿಂದ ಜನರ ಆರೋಗ್ಯದ ಮೇಲೆ ಹಾನಿ ಉಂಟುಮಾಡುತ್ತಿದ್ದು, ಈ ನಿಟ್ಟಿನಲ್ಲಿ ಅಬ್ಬರದ ಧ್ವನಿ ಬಳಕೆಗೆ ಕಡಿವಾಣ ಹಾಕಿ, ಇತಿ ಮಿತಿಯಲ್ಲಷ್ಟೆ ಧ್ವನಿವರ್ಧಕ ಬಳಸುವಂತೆ ಎಲ್ಲಾ ಮಂಟಪಗಳಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಬಾರಿಯ ಶೋಭಾ ಯಾತ್ರೆಯಲ್ಲಿ ದಶ ಮಂಟಪಗಳು ಲೇಸರ್ ಲೈಟ್ ಮತ್ತು…
ಮಡಿಕೇರಿ ಅ.10 NEWS DESK : ವಿಜಯದಶಮಿಯ ಅ.12 ರ ರಾತ್ರಿ ಮಡಿಕೇರಿ ನಗರದಲ್ಲಿ ನಡೆಯುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಮಂಟಪಗಳ ತೀರ್ಪಗಾರಿಕೆ ಎಷ್ಟು ಗಂಟೆಗೆ ಎಲ್ಲೆಲ್ಲಿ ನಡೆಯುತ್ತದೆ ಎನ್ನುವ ಬಗ್ಗೆ ಸಮಿತಿ ಅಧ್ಯಕ್ಷ ಅಧ್ಯಕ್ಷ ಜಿ.ಸಿ.ಜಗದೀಶ್ ಮಾಹಿತಿ ನೀಡಿದ್ದಾರೆ. ರಾತ್ರಿ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಶ್ರೀ ಪೇಟೆ ಶ್ರೀ ರಾಮಮಂದಿರ, 11 ಗಂಟೆಗೆ ನಗರಸಭೆ ಮತ್ತು ಕೆ.ಇ.ಬಿ ರಸ್ತೆ ಮುಂಭಾಗ ದೇಚೂರು ಶ್ರೀ ರಾಮ ಮಂದಿರ, 11.40 ಗಂಟೆಗೆ ಹೊಟೇಲ್ ಪಾಲ್ಯುಲರ್ ಮುಂಭಾಗ ಶ್ರೀ ಚೌಡೇಶ್ವರಿ, ಬೆಳಿಗ್ಗೆ 12.20 ಗಂಟೆಗೆ ನಗರ ಪೊಲೀಸ್ ಠಾಣೆ ಮುಂಭಾಗ ಶ್ರೀ ಕೋಟೆ ಗಣಪತಿ, 1 ಗಂಟೆಗೆ ಮೆಟ್ರೋ ಫ್ರೆಷ್ ಮುಂಭಾಗ ಕೋದಂಡ ರಾಮ, 1.35 ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗ ಶ್ರೀ ಕೋಟೆ ಮಾರಿಯಮ್ಮ, 2.10ಕ್ಕೆ ಸಿಂದೂರ್ ಬಟ್ಟೆ ಮಳಿಗೆ ಮುಂಭಾಗ ಶ್ರೀ ಕರವಲೆ ಭಗವತಿ, ಬೆಳಿಗ್ಗೆ 2.50 ಗಂಟೆಗೆ ಕೊಡವ ಸಮಾಜ ಮುಂಭಾಗ ಶ್ರೀ ದಂಡಿನ ಮಾರಿಯಮ್ಮ, 3.25…
ನಾಪೋಕ್ಲು ಅ.10 NEWS DESK : ನಮ್ಮ ಕ್ರೈಸ್ತ ಜೀವನವು ಉತ್ತಮ ಗುಣಗಳನ್ನು ಒಳಗೊಂಡ ಫಲದಾಯಕ ಜೀವನವಾಗಬೇಕು ಎಂದು ಮೈಸೂರು ಧರ್ಮ ಪ್ರಾಂತ್ಯದ ಪ್ರೇಷಿತ ಆಡಳಿತ ಅಧಿಕಾರಿ ಬರ್ನಾಡ್ ಮೊರಾಸ್ ಹೇಳಿದರು. ನಾಪೋಕ್ಲು ಮೇರಿ ಮಾತೆಯ ದೇವಾಲಯದ 31ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ದಿವ್ಯ ಬಲಿ ಪೂಜೆಯನ್ನು ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ದೇವರ ಮಕ್ಕಳು ದೇವರಲ್ಲಿ ವಿಶ್ವಾಸ, ನಂಬಿಕೆ ಇಟ್ಟು ಮಾಡುವ ಕೆಲಸದಲ್ಲಿ ಶ್ರದ್ಧೆ, ದ್ಯಾನ, ಬುದ್ಧಿ, ತಿಳುವಳಿಕೆ ಇರಿಸಿ ಸಂಸ್ಕಾರವಂತರಾಗಿ ಬಾಳಬೇಕು ಎಂದರು. ಕಾರ್ಯಕ್ರಮದಲ್ಲಿ 13 ಮಂದಿ ಕ್ರೈಸ್ತ ಬಾಲಕ, ಬಾಲಕಿಯರಿಗೆ ದೃಢೀಕರಣ ಸಂಸ್ಕಾರವನ್ನು ನೀಡಿ ಪ್ರವಚನ ಬೋಧಿಸಿ ಶುಭ ಹಾರೈಸಿದರು. ಈ ಸಂದರ್ಭ ಗುರುಗಳ ನೂತನ ನಿವಾಸಕ್ಕೆ ಸಂಕುಸ್ಥಾಪನೆ ಮಾಡಿ ಆಶೀರ್ವದಿಸಿದರು. ಉತ್ಸವದಲ್ಲಿ ಮೈಸೂರು ಧರ್ಮ ಗುರುಗಳಾದ ಆಬಿಲಾಸ್, ಮೇರಿ ಮಾತೆಯ ದೇವಾಲಯದ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್, ಪಾಲನಾ ಸಮಿತಿ ಮತ್ತು ಯುವಕ ಸಂಘದ ಪದಾಧಿಕಾರಿಗಳು, ಸದಸ್ಯರು ಕ್ರೈಸ್ತ ಸಮುದಾಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ…
ನಾಪೋಕ್ಲು ಅ.10 NEWS DESK : ನೆಲಜಿ ಗ್ರಾಮದಲ್ಲಿ ಕಾಡಾನೆಗಳು ಭತ್ತದ ಗದ್ದೆಗಳಿಗೆ ದಾಳಿ ಮಾಡಿ ಪೈರು ಹಾಗೂ ತೋಟದಲ್ಲಿದ್ದ ಕಾಫಿ, ಅಡಿಕೆ ಗಿಡಗಳನ್ನು ನಾಶವಾಗಿವೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ನೆಲಜಿ ಗ್ರಾಮದ ಅಪ್ಪುಮಣಿಯಂಡ ರಘು ಸುಬ್ಬಯ್ಯ ಎಂಬವರ ಭತ್ತದ ಗದ್ದೆಗಳಲ್ಲಿ ಪೈರುಗಳನ್ನು ತಿಂದು, ತುಳಿದು ನಾಶಮಾಡಿವೆ. ಮಾತ್ರವಲ್ಲದೇ ತೋಟದಲ್ಲಿದ್ದ ಕಾಫಿ ಅಡಿಕೆ ಇನ್ನಿತರ ಫಸಲು ಕಾಡಾನೆಗಳು ನಾಶಪಡಿಸಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಆರಂಭಗೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಹಾಗೂ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.10 NEWS DESK : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ ನೂರಾರು ವರ್ಷಗಳಿಂದ ಭಾಗವಹಿಸುತ್ತಾ ದಶಮಂಟಪಗಳ ಸಾರಥಿಯಾಗಿರುವ ನಗರದ ಪೇಟೆ ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿಯ ಉತ್ಸವಕ್ಕಾಗಿ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಎಂ. ಚೇತನ್ ತಿಳಿಸಿದ್ದಾರೆ. ಮಂಟಪಕ್ಕಾಗಿ ಎರಡು ಟ್ರ್ಯಾಕ್ಟರ್ಗಳನ್ನು ಬಳಸಲಾಗುತ್ತಿದ್ದು, ಲೋಕ ಕಲ್ಯಾಣಕ್ಕಾಗಿ ವಿಷ್ಣುವಿನ ಮತ್ಸಾವತಾರ ಎಂಬ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ಲೈಟಿಂಗ್ ಬೋರ್ಡನ್ನು ದಿಂಡಿಗಲ್ನ ಸೆಲ್ವಂ ಎಲೆಕ್ಟಿಕಲ್ಸ್ನವರು ಒದಗಿಸಲಿದ್ದಾರೆ. ಪ್ಲಾಟ್ ಫಾರಂ ನಿರ್ಮಾಣ ಸ್ಟುಡಿಯೋ ಸೆಟ್ಟಿಂಗ್ಸ್, ಟ್ರ್ಯಾಕ್ಟರ್ ಸೆಟ್ಟಿಂಗ್ಸ್ನ್ನು ಮಡಿಕೇರಿಯ ಎಸ್ಕೈವೈಸಿ ತಂಡದವರು ಮಾಡಲಿದ್ದಾರೆ. ಒಟ್ಟು 4 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕೇರಳದ ಪಯ್ಯನೂರಿನ ಕಲಾವಿದ ಮಧುಕರ್ ಮತ್ತು ತಂಡದವರು ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ರೂ.10 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಧ್ವನಿವರ್ಧಕ ಮಂಟಪವನ್ನು ಮುನ್ನಡೆಸಲಿದೆ ಎಂದು ಚೇತನ್ ಮಾಹಿತಿ ನೀಡಿದ್ದಾರೆ.






