ಮಡಿಕೇರಿ ನ.2 NEWS DESK : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಇಂದಿರಾ ಕ್ಯಾಂಟಿನ್ಬಳಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ನ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಕರ್ನಾಟಕದಲ್ಲಿ ಇರುವವರೆಗೆ ಮಾನವೀಯ ದೃಷ್ಟಿಯಿಂದ ಎಲ್ಲರೂ ಸಮಾನರು. ಯಾರು ಮೇಲು ಕೀಳು ಎಂಬ ಬೇಧ-ಭಾವವಿಲ್ಲ. ಎಲ್ಲರೂ ಕನ್ನಡದ ಮಕ್ಕಳೇ ಎಂದರು. ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರೊಂದಿಗೆ ನಾವು ಕನ್ನಡದಲ್ಲಿ ವ್ಯವಹರಿಸಿದಾಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಎಂದ ಅವರು, ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ವತಿಯಿಂದ ಸಾರ್ವಜನಿಕರು, ವಿವಿಧ ಸಂಘಸಂಸ್ಥೆಗಳ ಸಹಕಾರದಿಂದ ಕನ್ನಡದ ಶಾಲೆಗಳನ್ನು ದತ್ತು ಪಡೆದು ಆ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಕೇವಲ ಕನ್ನಡ ರಾಜ್ಯೋತ್ಸವದ ದಿನದಂದು ಮಾತ್ರ ಕನ್ನಡಭಿಮಾನವನ್ನು ತೋರದೆ ಪ್ರತಿದಿನ ಕನ್ನಡದ ಬಳಕೆಯಾಗಬೇಕು ಆ ನಿಟ್ಟಿನಲ್ಲಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ವತಿಯಿಂದ ಮತ್ತೊಮ್ಮೆ ಕನ್ನಡ…
ಲೇಖಕ: admin
ಮಡಿಕೇರಿ ನ.2 NEWS DESK : ಸಿಂಬಾಸ್ ಹೋಮ್ ತಂಡ ಮತ್ತು ಕೊಡಗು ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಬೆಕ್ಕು ಹಾಗೂ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಶಿಬಿರ ನಡೆಯಿತು. ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲಾ ಆವರಣದಲ್ಲಿ ನಡೆದ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ತಮ್ಮ ಸಾಕು ಪ್ರಾಣಿಗಳಿಗೆ ಉಚಿತ ರೇಬಿಸ್ ಲಸಿಕೆಯನ್ನು ಹಾಕಿಸಿದರು. ಕೊಡಗು ಪಶು ವೈದ್ಯಾಧಿಕಾರಿ ಡಾ.ತಿಮ್ಮಯ್ಯ, ಪಶು ವೈದ್ಯಕೀಯ ನಿರೀಕ್ಷಕ ಪಾಲಾಕ್ಷ, ವನಿತಾ, ಸಿಂಬಾಸ್ ಹೋಮ್ ಸಂಸ್ಥಾಪಕರಾದ ವಾತ್ಸಲ್ಯ ರಮೇಶ್ ಪ್ರಾಣಿಗಳಿಗೆ ಲಸಿಕೆ ನೀಡಿ, ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ರೇಬಿಸ್ ಕುರಿತು ಪ್ರಾಣಿ ಪಾಲಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಸ್ವಯಂ ಸೇವಕರಾದ ಗಜೇಂದ್ರ, ಶಿಲ್ಪಾ, ಮಹೇಶ್, ಎಂ.ಜಿ.ಧನ್ವಿತ್, ನಿಶಿತ್, ನಿದರ್ಶ್, ದಿಲನ್ ಹಾಜರಿದ್ದರು.
ಮಡಿಕೇರಿ ನ.2 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಕೋಲಾರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸoಯುಕ್ತ ಆಶ್ರಯದಲ್ಲಿ ಕೋಲಾರ ಜಿಲ್ಲೆಯ ಬೈರೇಗೌಡ ನಗರ ಮೈದಾನದಲ್ಲಿ ನ.22 ರಿಂದ 24ರ ವರೆಗೆ ನಡೆಯಲಿರುವ ಯುವಕ-ಯುವತಿಯರ ಕಬಡ್ಡಿ ಜೂನಿಯರ್ ಸ್ಟೇಟ್ ಚಾಂಪಿಯನ್ಶಿಪ್ ಪಂದ್ಯಾವಳಿಗೆ ನ.10 ರಂದು ಕೊಡಗು ತಂಡದ ಆಡಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದು ಬೆಳಗ್ಗೆ 9.30ಗಂಟೆ ಗೆ ಕುಶಾಲನಗರದ ಜ್ಞಾನ ಭಾರತಿ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಯುವಕ ಆಟಗಾರರು 70 ಕೆ.ಜಿ ಮೀರಿರಬಾರದು, ಯುವತಿ ಆಟಗಾರರು 65 ಕೆ.ಜಿ ಮೀರಿರಬಾರದು. ವಯಸ್ಸು ದಿನಾಂಕ 31-1-25ಕ್ಕೆ 20ವರ್ಷ ಮೀರಿರಬಾರದು. ಆಸಕ್ತ ಬಾಲಕ -ಬಾಲಕಿಯರು ಸೂಕ್ತ ವಯಮಿತಿಯ ಮೂಲ ದಾಖಲೆ ಹಾಗೂ ಸಮವಸ್ತ್ರ ದೊಂದಿಗೆ ಹಾಜರಿರುವಂತೆ ಆಮೇಚೂರ್ ಕಬಡ್ಡಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕಪಿಲ್- 9731009841, ಅವಿನಾಶ್ -…
“ಸ್ವಚ್ಚ ದೀಪಾವಳಿ”, “ಸ್ವಸ್ಥ ದೀಪಾವಳಿ” : ಲೇಖನ: ಟಿ.ಜಿ.ಪ್ರೇಮಕುಮಾರ್ ಮಡಿಕೇರಿ ನ.2 NEWS DESK : ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಮೂಲಕ ಪರಿಸರ ಸ್ನೇಹಿ ಹಸಿರು ದೀಪಾವಳಿ ಹಬ್ಬವನ್ನು ಆಚರಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ. ದೀಪಾವಳಿ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು, ವಯೋವೃದ್ಧರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾಗರಿಕರಿಗೆ ಮನವಿ ಮಾಡಿವೆ. ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು…
ವಿರಾಜಪೇಟೆ ನ.2 NEWS DESK : ಬೇಟೋಳಿ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪಾವಳಿಯ ಪ್ರಯುಕ್ತ ಗೋ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಎರಡು ದಿವಸಗಳ ಕಾಲ ದೇವಾಲಯದಲ್ಲಿ ದೀಪಾವಳಿಯ ಪ್ರಯುಕ್ತ ಹಣತೆಗಳನ್ನು ಹಚ್ಚಲಾಗಿತ್ತು. ಅರ್ಚಕರು ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ, ಶ್ರೀ ವನದುರ್ಗಾ ದೇವರುಗಳಿಗೆ ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ದೇವಾಲಯದ ಆವರಣದಲ್ಲಿ ಗೋವು ಹಾಗೂ ಹಸುವಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು. ಗೋ ಪೂಜೆಯನ್ನು ದೇವಾಲಯದಲ್ಲಿ ಅರ್ಚಕರಾದ ವಿಶ್ವನಾಥ ಭಟ್ ನೆರವೇರಿಸಿದರು. ಮಾತ್ರವಲ್ಲದೆ ನೈವೇದ್ಯವನ್ನು ಸಮರ್ಪಿಸಲಾಯಿತು. ಈ ಸಂದರ್ಭ ಆಡಳಿತ ಮಂಡಳಿಯವರು, ಗ್ರಾಮಸ್ಥರು ಹಾಜರಿದ್ದರು.
ಕುಶಾಲನಗರ ನ.2 NEWS DESK : ಕನ್ನಡ ನಾಡಿನಲ್ಲಿರುವ ಭಾಷಾ ಶ್ರೀಮಂತಿಕೆ ಜಗತ್ತಿನ ಯಾವುದೇ ಭಾಷೆಯಲ್ಲಿ ಇಲ್ಲ ಎಂದರೆ ಅದು ಅತಿಶಯೋಕ್ತಿಯಾಗಲಾರದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಚಿಕ್ಕ ಅಳುವಾರ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಹುಟ್ಟಿರುವ ಹೆಮ್ಮೆ ನಮ್ಮದು. ಸಾಂಸ್ಕೃತಿಕವಾಗಿ ಮತ್ತು ಭೌಗೋಳಿಕವಾಗಿ ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿರುವ ನಮ್ಮ ಕರ್ನಾಟಕ ರಾಜ್ಯವು ಪ್ರಾಕೃತಿಕವಾಗಿ ಮತ್ತು ವೈಜ್ಞಾನಿಕವಾಗಿ ಪ್ರಾದೇಶಿಕವಾರು ಜಿಲ್ಲೆಗಳನ್ನು ವಿಂಗಡಣೆಗೊಂಡಿದ್ದು, ಇಲ್ಲಿನ ಭಾಷೆ, ಮಣ್ಣು ಮತ್ತು ಜೀವರಾಶಿಗಳಿಂದ ಸಂಪದ್ಭರಿತವಾಗಿರುವುದನ್ನು ಕಾಣಬಹುದು. ಕರ್ನಾಟಕದಲ್ಲಿ ಕನ್ನಡ ತಾಯಿ ಮಕ್ಕಳಾಗಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು ಮತ್ತು ಉಳಿಸಬೇಕು. ಆದರೆ ಇಂದಿಗೂ ಅದೆಷ್ಟೋ ಮಕ್ಕಳಿಗೆ ಸರಿಯಾಗಿ ಕನ್ನಡವನ್ನು ಮಾತನಾಡುವುದಕ್ಕೆ ಬರುವುದಿಲ್ಲ. ಬದಲಿಗೆ ಇಂಗ್ಲೀಷ್ ಭಾಷೆಯನ್ನು ಮಾತನಾಡುವುದೇ ಬಹಳ ದೊಡ್ಡ ಗೌರವ ಎಂಬ ಕಲ್ಪನೆಯಲ್ಲಿರುವುದು ಕಂಡುಬರುತ್ತದೆ. ಕನ್ನಡ ಭಾಷೆಯನ್ನು ಹೊರತುಪಡಿಸಿ…
ಮಡಿಕೇರಿ ನ.2 NEWS DESK : ಗುಡ್ಡೆಹೊಸೂರು ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಾದ್ಯಗೋಷ್ಠಿ, ಕನ್ನಡ ಡಿಂಡಿಮ ಘೋಷಣೆಯೊಂದಿಗೆ ಗುಡ್ಡೆಹೊಸೂರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಂದ ಕನ್ನಡ ಭಾಷೆ, ನೆಲ, ಜಲದ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ರುಕ್ಮಿಣಿ, ಮುಖ್ಯ ಶಿಕ್ಷಕರಾದ ಸಣ್ಣಸ್ವಾಮಿ, ಮರಿಯಾ, ಗೀತ, ಯಶುಮತಿ, ಚಂದ್ರಶೇಖರ್, ಸದಸ್ಯರಾದ ಶೀಲಾ, ಅಂಜು ಮಕ್ಕಳು ಪಾಲ್ಗೊಂಡಿದ್ದರು.
ಮಡಿಕೇರಿ ನ.2 NEWS DESK : ಮಲಯಾಳಿಗರ ಸಂಸ್ಕೃತಿ, ಸಂಪ್ರದಾಯದ ಅನಾವರಣದೊಂದಿಗೆ ಮಡಿಕೇರಿಯಲ್ಲಿ ಓಣಾಘೋಷಂ ಹಾಗೂ ಓಣಂ ಸಧ್ಯ ಕಾರ್ಯಕ್ರಮ ನಡೆಯಿತು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಮಾಜ ಮಡಿಕೇರಿ ಘಟಕದ ವತಿಯಿಂದ ಓಣಂ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲಯಾಳಿಗರು ಒಂದಾಗಿ ಸಂಭ್ರಮಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯಗಳು, ಹಾಡು ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮಕ್ಕೆ ಮೆರುಗು ನೀಡಿದವು. ಇದರೊಂದಿಗೆ ಹಬ್ಬದ ಸಧ್ಯ (ಭೋಜನ) ಸವಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಓಣಂ ಅದ್ಭುತ ಐತಿಹ್ಯ, ಸಂಪ್ರದಾಯ ಹೊಂದಿರುವ ಹಬ್ಬವಾಗಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗಟ್ಟಿಸುವ ಕೆಲಸವಾಗುತ್ತಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲಿದ್ದರೂ ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಎಂದು ಕರೆ ನೀಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೂ ಸಮಾಜದಲ್ಲಿ ವಿವಿಧ ಆಚಾರ, ವಿಚಾರ, ಪದ್ಧತಿಗಳಿವೆ. ಆದರೆ ವಿವಿಧತೆಯಲ್ಲಿ ಏಕತೆಯನ್ನು…
ಸುಂಟಿಕೊಪ್ಪ ನ.1 NEWS DESK : ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಪರಂಪರೆ ಮತ್ತು ಜನತೆ ಎಲ್ಲಾದರಲ್ಲಿಯೂ ಒಂದು ದಿಮಂತ ಶಕ್ತಿಯನ್ನು ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡಿದ್ದು, ಐತಿಹಾಸಿಕ ಸಾಂಸ್ಕೃತಿಕ ಶ್ರೀಮಂತಿಕೆಯಿಂದ ಇಡೀ ವಿಶ್ವದ ಗಮನಸೆಳೆದ ನಾಡು ಕರ್ನಾಟಕ ಎಂದು ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಬಣ್ಣಿಸಿದ್ದಾರೆ. ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮುಖ್ಯ ಭಾಷಣ ಮಾಡಿದ ಅವರು, ಕರ್ನಾಟಕದಂತಹ ಪುಣ್ಯಭೂಮಿ ತಪಸ್ಸಿನ ಭೂಮಿಯಲ್ಲಿ ಜನಸಿ ಬಾಳುತ್ತಿರುವವರು ನಮ್ಮ ಸುದೈವ ಮತ್ತು ಪೂರ್ವ ಜನ್ಮದ ಪುಣ್ಯಫಲವೆಂದು ವರ್ಣಿಸಿದರು. ಇಂತಹ ನಾಡು, ನುಡಿ, ಸಂಸ್ಕೃತಿಗಾಗಿ ಕನ್ನಡ ನಾಡಿನ ಏಕೀಕರಣಕ್ಕಾಗಿ ಹೋರಾಡಿದಂತಹ ಮಹಾನು ಚೇತನಗಳನ್ನು ಸ್ಮರಿಸಿಕೊಳ್ಳುತ್ತಾ ಅವರಿಗೆ ನುಡಿ ನಮನ ಸಲ್ಲಿಸಿ ಶಿರಬಾಗಿ ನಮಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು. ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಪಾರವಾದ ಸಾಧನೆ ಮಾಡಿದವರು ರಾಜ್ಯಕ್ಕೆ ಹೆಸರು ತಂದವರು ವಿಶ್ವಮಟ್ಟದಲ್ಲಿ ಹೆಸರು ತಂದವರು…
ವಿರಾಜಪೇಟೆ ನ.2 NEWS DESK : ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ನುಡಿನೃತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು. ಕನ್ನಡ ಭಾಷಾ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ನಗಾರಿ ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ಎಲ್ಲಾ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ನಡೆಯಿತು. ನಂತರ ಪದವಿ ವಿಭಾಗದ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಅವರು ಸೈಂಟ್ ಆನ್ಸ್ ನುಡಿನೃತ್ಯ ಸಂಭ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಕನ್ನಡ ಬಳಗದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಕನ್ನಡ…






