ಲೇಖಕ: admin

ಸಿದ್ದಾಪುರ ಅ.10 NEWS DESK : ಭಾರತ ಮಾರ್ಕ್ಸವಾದಿ ಕಮ್ಯುನಿಸ್ಟ್ ಸಿ.ಪಿ.ಐ.(ಎಂ) ಪಕ್ಷದ ಮಹಾ ಅಧಿವೇಶನ ಏಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನಲ್ಲಿ, ಡಿಸೆಂಬರ್ ತಿಂಗಳಲ್ಲಿ ರಾಜ್ಯ ಸಮ್ಮೇಳನ ತುಮಕೂರಿನಲ್ಲಿ, ನವೆಂಬರ್‌ ನಲ್ಲಿ ಜಿಲ್ಲಾ ಸಮ್ಮೇಳನ ವಿರಾಜಪೇಟೆಯಲ್ಲಿ ನಡೆಯಲಿದ್ದು, ಅದರ ಭಾಗವಾಗಿ 6ನೇ ಶಾಖಾ ಸಮ್ಮೇಳನವು ನೆಲ್ಯಹುದಿಕೇರಿಯಲ್ಲಿ ನಡೆಯಿತು.  ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಪಕ್ಷದ ಕಾರ್ಯಕರ್ತರು ಹಾಗೂ ಪ್ರತಿನಿಧಿಗಳು ಚಂಡೆ ವಾದ್ಯ ಕಲಾ ತಂಡಗಳೊಂದಿಗೆ ಕೆಂಪು ಧ್ವಜಗಳನ್ನ ಹಿಡಿದು ಮುಖ್ಯರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಸಮ್ಮೇಳನ ಆಯೋಜನಗೊಂಡ ನೆಲ್ಯಹುದಿಕೇರಿ ಸೂರ್ಯನಾರಾಯಣರಾವ್ ನಗರಕ್ಕೆ ತಲುಪಿತು. ಕಾಂ. ವೀರಸ್ವಾಮಿ ಸಭಾಂಗಣದ ಕಾಂ. ಆಲ್‌ಪೋನ್ಸ್ ವೇದಿಕೆಯಲ್ಲಿ ನಡೆದ ಸಮ್ಮೇಳನವನ್ನ ಸಿ.ಪಿ.ಐ.(ಎಂ) ಪಕ್ಷದ ರಾಜ್ಯ ಮುಖಂಡ ಕೆ.ಎನ್.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ, ಯಾವುದೇ ಸರ್ಕಾರಗಳು ಬಂದರೂ ಶ್ರಮಿಕ ವರ್ಗವನ್ನ ಕಡೆಗಣಿಸುತ್ತಿವೆ. ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿರುವ ದುಡಿಯುವ ವರ್ಗ ಇಂದಿಗೂ ಮೂಲ ಸೌಕರ್ಯ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ರಾಜಕೀಯ ಪಕ್ಷಗಳು ಶ್ರೀಮಂತ ರಾಜಕಾರಣಿಗಳನ್ನ ಬೆಳೆಸುತ್ತಿದ್ದಾರೆ. ಆ ರಾಜಕಾರಣಿಗಳು ಬಂಡವಾಳ ಶಾಹಿಗಳೊಂದಿಗೆ ಕೈಜೋಡಿಸಿ ಲಾಭ…

Read More

ಕುಶಾಲನಗರ ಅ.10 NEWS DESK : ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುವ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಂ.ವಿ.ಜಿಸ್ನಳಿಗೆ ಶಾಲೆಯ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಕ್ರೀಡಾಪಟು ಎಂ.ವಿ.ಜಿಸ್ನ, ಜಿಲ್ಲಾಮಟ್ಟದ‌ ಅಥ್ಲೆಟಿಕ್ಸ್ ನಲ್ಲಿ ನಡೆದ ಡಿಸ್ಕಸ್ ಎಸೆತ, ಭಾರದ ಗುಂಡು ಎಸೆತ ಹಾಗೂ ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾಳೆ. ವಿದ್ಯಾರ್ಥಿನಿ ಜಿಸ್ನಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಎ.ಜೆ.ಚಂದ್ರಾವತಿ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ತಿಳಿಸಿದ್ದಾರೆ. ಶಾಲೆಯ ವತಿಯಿಂದ ಕ್ರೀಡಾಪಟು ಜಿಸ್ನಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಜೆಸಿಐ ಸಂಸ್ಥೆಯ ‌ಎಸ್.ಎಂ.ಎ.ವಿಭಾಗದ ವಲಯಾಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ವಿದ್ಯಾರ್ಥಿನಿ ಜಿಸ್ನಳ ಉತ್ತಮ ಸಾಧನೆಯು ಇತರೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿನಿ ಜಿಸ್ನ , ಮುಂದಿನ ದಿನಗಳಲ್ಲಿ ಕೂಡ ಕ್ರೀಡಾಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ, ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷ ಜಗದೀಶ್,…

Read More

ಮಡಿಕೇರಿ ಅ.10 NEWS DESK : ಕಳೆದ ಹತ್ತು ವರ್ಷಗಳಿಂದ ವಿರಾಜಪೇಟೆ ತಾಲ್ಲೂಕಿನ ಹುಂಡಿ ಗ್ರಾಮವನ್ನು ಕೇಂದ್ರೀಕರಿಸಿ ಸಮಾಜಮುಖಿ ಕಾರ್ಯಗಳಿಂದ ತೊಡಗಿಕೊಂಡಿರುವ ಸ್ನೇಹತೀರಂ ಬಳಗದ 2024-25ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಟಿ.ಎಂ.ಸುಬೈರ್  ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಬೂತಾಹಿರ್ ಲೆಕ್ಕಪತ್ರವನ್ನು ಮಂಡಿಸಿದರು. ನಂತರ ನೂತನ ಸಮಿತಿಯ ರಚನೆ ಮಾಡಲಾಯಿತು. 2024-25ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎನ್.ಎಂ.ನೌಷಾದ್, ಪಿ.ಐ.ಉನೈಸ್ ಅವರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ.ಉನೈಸ್,  ಸಹ ಕಾರ್ಯದರ್ಶಿಯಾಗಿ ಸಿ.ಎ.ಜಾಫರ್ ಹಾಗೂ ಕೋಶಾಧಿಕಾರಿಗಳಾಗಿ ಪಿ.ಎಂ.ನೌಷಾದ್  ಹಾಗೂ ಪಿ.ಎ.ಹಕೀಂ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಸುಬೈರ್ ಟಿ.ಎಂ, ಇಸ್ಮಾಯಿಲ್ ಬಿ.ಕೆ, ರಝಾಕ್ ಕೆ.ಎಚ್, ಸಲೀಂ ಪಿ.ಎ ನಿಸಾರ್ ಪಿ.ಎಸ್, ಹಕೀಂ ಪಿ.ಎಂ ತನ್ಸೀರ್ ಪಿ.ಐ ಆಯ್ಕೆಯಾಗಿದ್ದಾರೆ. ಸ್ನೇಹತೀರಂ ಬಳಗವು ಕಳೆದ ಹತ್ತು ವರ್ಷಗಳಿಂದ ಗ್ರಾಮದಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಹಾಗೂ ಬಡ ರೋಗಿಗಳಿಗೆ ನೆರವು ನೀಡುತ್ತಾ ಬಂದಿದೆ.

Read More

ಮಡಿಕೇರಿ ಅ.10 NEWS DESK :  ದಸರಾ ಜನೋತ್ಸವ ಸಂಬಂಧ ಇಂದು (ಅ.10) ಮಡಿಕೇರಿಯ ಗಾಂಧಿ ಮೈದಾನದಲ್ಲಿ ಹಗಲು ಕಬ್ಬಡಿ ಪಂದ್ಯಾವಳಿ ಹಾಗೂ ರಾತ್ರಿ ಯುವ ದಸರಾ ಕಾರ್ಯಕ್ರಮ ಮತ್ತು ಅ.11 ರಂದು ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ರಾಜಾಸಿಟ್ ರಸ್ತೆಯ ವಾಹನ ಸಂಚಾರವನ್ನು ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿಲಾಗಿದೆ ಎಂದು  ಮಡಿಕೇರಿ ಸಂಚಾರಿ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ. ರಸ್ತೆ ಮತ್ತು ಗಾಂಧಿ ಮೈದಾನ ಬಹಳ ಚಿಕ್ಕದಾಗಿರುವುದರಿಂದ ಪಾರ್ಕಿಂಗ್ ವ್ಯವಸ್ಥೆಗೆ ಬಹಳ ಅನಾನುಕೂಲವಾಗಿರುತ್ತದೆ. ಆದ್ದರಿಂದ ಇಂದು (ಅ.10) ಮತ್ತು ಅ.11 ರಂದು ವೇದಿಕೆಯ ಪಕ್ಕದಲ್ಲಿ VIP ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈದಾನದಲ್ಲಿ ಕೇವಲ ಸಮಿತಿಯ ಮುಖ್ಯ ಸದಸ್ಯರುಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ನಾಡ ಹಬ್ಬ ದಸರಾ ಕಾರ್ಯಕ್ರಮವನ್ನು ಯಶಸ್ವಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲಕ್ಕಾಗಿ ಸಂಜೆ 5 ಗಂಟೆಯ ನಂತರ ರಾಜಾಸಿಟ್ ರಸ್ತೆಯ…

Read More

ಮಡಿಕೇರಿ ಅ.10 NEWS DESK : ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಅ.20 ರಂದು “ಉದ್ಯೋಗ ಮೇಳ” ನಡೆಯಲಿದೆ. ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ…

Read More

ಮಡಿಕೇರಿ ಅ.10 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಿದರು. ಸುಮಾರು 180 ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 16 ಯುಡಿಐಡಿ ಕಾರ್ಡ್ ಗಳು, 100 ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಪಡೆದುಕೊಂಡರು ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ ರೆಫರ್ ಮಾಡಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಉದ್ಘಾಟಿಸಿ, ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ…

Read More

ಮಡಿಕೇರಿ ಅ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಶು ಅಭಿವೃದ್ದಿ ಯೋಜನಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆಯ-ಬೇಟಿ ಬಚಾವೊ-ಬೇಟಿ ಪಡಾವೊ ಯೋಜನೆಯಡಿ ‘ಅಂತರಾಷ್ರ್ಟೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ’ ‘ಹೆಣ್ಣು ಮಗುವಿನ ಪ್ರಾಮುಖ್ಯತೆಯ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ, ಮಕ್ಕಳ ತಾಯಂದಿಯರಿಗೆ ಹಾಗೂ ಕಿಶೋರಿಯರಿಗೆ ಅರಿವು ಕಾರ್ಯಕ್ರಮ ನಡೆಯಿತು. ಗುಡ್ಡೆಹೊಸೂರಿನ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗುಡ್ಡೆಹೊಸೂರು ಗ್ರಾ.ಪಂ.ಅಧ್ಯಕ್ಷರಾದ ಸೌಮ್ಯ, ಮಕ್ಕಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಗೀಳಿಗೆ ತುತ್ತಾಗಿದ್ದು, ಓದಿನ ಕಡೆ ಹೆಚ್ಚು ಗಮನ ಹರಿಸದೇ ಇರುವುದು ಇಂದಿನ ದಿನಗಳಲ್ಲಿ ವಿಪರ್ಯಾಸವೇ ಸರಿ ಎಂದರು. ಹಾಡಿಗಳಂತಹ ವಾತವರಣದಲ್ಲಿ ಬೆಳೆಯುವ ಮಕ್ಕಳು ಹೆಚ್ಚಿನದ್ದಾಗಿ ಶಿಕ್ಷಣದ ಮಹತ್ವ ಅರಿಯಬೇಕಾಗಿದೆ. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಮುಂದಿನ ದಿನಗಳಲ್ಲಿ ಉತ್ತಮ…

Read More

ಮುಂಬೈ ಅ.10 NEWS DESK : ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA)ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

Read More

ಸೋಮವಾರಪೇಟೆ NEWS DESK ಅ.9 : ಕಾಡಾನೆ ದಾಳಿಯಿಂದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಲ್ತಾರೆಶೆಟ್ಟಳ್ಳಿ ಗ್ರಾಮದ ಬಿ.ಸಿ.ಪ್ರಮೋದ್ ಮತ್ತು ಅವರ ಸ್ನೇಹಿತ ಕೌಶಿಕ್ ಅವರುಗಳು ಮೈಸೂರಿನಿಂದ ವಾಪಾಸ್ಸಾಗಿ ಯಡವನಾಡು ಮೀಸಲು ಅರಣ್ಯದ ಸನಿಹದಲ್ಲಿರುವ ಕಾರೇಕೊಪ್ಪ ಗ್ರಾಮದ ರಸ್ತೆಗೆ ರಾತ್ರಿ 10.30ಕ್ಕೆ ಬರುತ್ತಿದ್ದಂತೆ ಒಂಟಿ ಸಲಗ ಎದುರಿಗೆ ಬಂದು ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನಲ್ಲಿದ್ದವರು ಜೀವಭಯದಿಂದ ಕಾರಿನಿಂದ ಹೊರಬಂದು ತಪ್ಪಿಸಿಕೊಂಡಿದ್ದಾರೆ. ಓರ್ವ ಕಾಫಿ ತೋಟದೊಳಗೆ ಓಡಿದ್ದಾರೆ. ಸೋಲಾರ್ ತಂತಿ ಬೇಲಿಯಿದ್ದ ಕಾರಣ ಕಾಡಾನೆ ಅಟ್ಟಿಸಿಕೊಂಡು ಹೋಗಿಲ್ಲ. ಇನ್ನೋರ್ವ ಮನೆಯೊಂದರ ಗೇಟ್ ದಾಟಿ ತಪ್ಪಿಸಿಕೊಂಡಿದ್ದಾರೆ. ನಂತರ ಕಾಡಾನೆ ಕಾರನ್ನು 10 ಮೀಟರ್ ದೂರಕ್ಕೆ ಕಾರನ್ನು ತಳ್ಳಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಜಖಂಗೊAಡಿರುವ ಕಾರನ್ನು ದುರಸ್ತಿಪಡಿಸಲು ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ವಿಳಂಬವಾಗಿ ಬಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆ ಹಾವಳಿ ನಿಯಂತ್ರಣದ ಯೋಜನೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ…

Read More

ಮಡಿಕೇರಿ NEWS DESK ಅ.9 : ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಸಾಹಿತ್ಯ ಕ್ಷೇತ್ರ ಮತ್ತು ಕವಿಗೋಷ್ಠಿಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ನೀಡಿದರು. ಕತೆ, ಕವನ, ಕಾದಂಬರಿ, ಹಾಸ್ಯ ಲೇಖನಗಳು, ವಿಡಂಬಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವಕಾಶಗಳು ಹೆಚ್ಚು ಲಭಿಸಲಿವೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಪ್ರೋತ್ಸಾಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಂಗೀತ ನಿರ್ದೇಶಕ ಎಂ.ಆರ್.ಚರಣ್ ರಾಜ್ ಅವರು ಮಾತನಾಡಿ ಸಾಹಿತ್ಯ ಮತ್ತು ಸಂಗೀತಕ್ಕೆ ಒಂದಕ್ಕೊಂದು ಅವಿನಾಭಾವ ಸಂಬಂಧವಿದೆ ಎಂದು ತಿಳಿಸಿದರು.…

Read More