ಲೇಖಕ: admin

ವಿರಾಜಪೇಟೆ NEWS DESK ನ.30 : ವಿರಾಜಪೇಟೆಯ ಅರ್ಜಿ ಗ್ರಾಮದ  ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅವರನ್ನು ಕರ್ತವ್ಯಲೋಪದ ಆರೋಪದಡಿ ಅಮಾನತು ಮಾಡಲಾಗಿದೆ. ಮಮತ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಮತ್ತು ಶಿಸ್ತು ಪ್ರಾಧಿಕಾರದ ಅಧಿಕಾರಿ ಜೀಲಾನಿ ಹೆಚ್.ಮೊಕಾಶಿ ಆದೇಶ ಹೊರಡಿಸಿದ್ದಾರೆ. ವಸತಿ ಶಾಲೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ .ಪೊನ್ನಣ್ಣ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭ ಕೆಲವು ನ್ಯೂನತೆಗಳು ಕಂಡು ಬಂದಿತ್ತು.  ಶಾಲೆಯ ಅಡುಗೆ ಕೋಣೆ ನೊಣಗಳಿಂದ ಕೂಡಿರುವುದು, ಶಾಲೆಯ ಕಿಟಕಿಗಳು ಪಾಳು ಬಿದ್ದಿರುವುದು, ಶೌಚಾಲಯದಲ್ಲಿ ಶುಚಿತ್ವ ಕಾಪಾಡದೇ ಇರುವುದು, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಯೋಗ್ಯವಾಗಿಲ್ಲದಿದ್ದರೂ ಶಾಲೆಯಲ್ಲಿರುವ ಹೊಸ ಹಾಸಿಗೆಯನ್ನು ವಿತರಣೆ ಮಾಡದೇ ಇರುವುದು, ದಾಸ್ತಾನು/ವಿತರಣೆ ನಿರ್ವಹಣೆ ಮಾಡದೇ ಇರುವುದು, ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದದೆ ಇರುವುದು ಗೋಚರಿಸಿತ್ತು. ಕಳೆದ 6 ವರ್ಷಗಳಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಾಂಶುಪಾಲರು ಶಾಲೆಯ ನ್ಯೂನ್ಯತೆಗಳ ಬಗ್ಗೆ ಮೇಲಾಧಿಕಾರಿಗಳ…

Read More

ಮಡಿಕೇರಿ NEWS DESK ನ.30 : ಕರ್ನಾಟಕ ಸರಕಾರ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದೊಂದಿಗೆ ಗಣಿತ ಕಲಿಕಾ ಆಂದೋಲನ ಯೋಜನೆಯು ಸುಮಾರು ವರ್ಷಗಳಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಮಕ್ಕಳು ಗಣಿತ ವಿಷಯವನ್ನು ಸರಳವಾಗಿ, ಅನುಭವಾತ್ಮಕವಾಗಿ ಕಲಿಯಲು ಜಿಲ್ಲೆಯ ಪ್ರತಿ ಶಾಲೆಗಳಿಗೆ ಗಣಿತ ಕಿಟ್ ನೀಡುವುದರ ಮೂಲಕ ಅನುಷ್ಠಾನಗೊಂಡಿರುತ್ತದೆ. ಈ ಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಸಮುದಾಯ, ಶೈಕ್ಷಣಿಕ ಸ್ವಯಂ ಸೇವಕರು, ಗ್ರಾಮ ಪಂಚಾಯತ್ ಮಟ್ಟದ ಶೈಕ್ಷಣಿಕ ತಂಡದ ನಾಯಕರು ಹಾಗೂ ಅಕ್ಷರ ಫೌಂಡೇಶನ್ ಸಹಭಾಗಿತ್ವದಲ್ಲಿ “ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳನ್ನು 4ನೇ ತರಗತಿ ಯಿಂದ 6ನೇ ತರಗತಿಯ ಮಕ್ಕಳಿಗೆ ಒಟ್ಟು 102 ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಯಿತು. ಸುಮಾರು 7600 ಮಕ್ಕಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಯಶಸ್ಸು ಸಾಧಿಸಿದೆ.…

Read More

ಮಡಿಕೇರಿ NEWS DESK ನ.30 : ಮಳೆಗಾಲ ಮುಗಿದಿರುವ ಹಿನ್ನೆಲೆ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಕೊಡಗು ಜಿಲ್ಲೆಯಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ನವೆಂಬರ್ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಈ ಐದು ತಿಂಗಳು ಸೂಕ್ತವಾಗಿದ್ದು, ಈ ಹಿನ್ನೆಲೆ ಮಳೆಹಾನಿ ಕಾಮಗಾರಿಗಳು ಸೇರಿದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ-ಮಡಿಕೇರಿ ಮಾರ್ಗದ…

Read More

ಮಡಿಕೇರಿ ನ.30 NEWS DESK : “ಇಂಗ್ಲೀಷ್”ನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೆ ಮಕ್ಕಳಿಗೆ ಕಲಿಸುವುದರ ಜೊತೆ ಜೊತೆಯಲ್ಲೆ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆಯೆಂದು ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿತ “ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೆ, ಕನ್ನಡ ಭಾಷೆಯ ಆಳವಾದ ಜ್ಞಾನವನ್ನು ಹೊಂದಿರುವ ಶಿಕ್ಷಕ ವರ್ಗದ ಮೂಲಕ, ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ ನಾವೆಲ್ಲ ಒಂದೆನ್ನುವ ಭಾವವನ್ನು ಮನದಲ್ಲಿ ತುಂಬಿಕೊಂಡು ಒಟ್ಟಾಗಿ…

Read More

ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು, ವಿದ್ಯಾ ಸಂಸ್ಥೆಗಳು ಹಾಗೂ ವಿವಿಧ ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮೂರ್ನಾಡುವಿನ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಕೊಡಗಿನ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು, ಮಡಿಕೇರಿ ಪೊಲೀಸ್ ಉಪ ಅಧೀಕ್ಷಕ ರವಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಡೊಳ್ಳು ಬಾರಿಸುವ ಮೂಲಕ ವರ್ಣರಂಜಿತ ಬೃಹತ್ ಕನ್ನಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೂರ್ನಾಡುವಿನ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸ್ತ್ರೀ ಶಕ್ತಿ ಸಂಘಗಳು, ಟೈಲರ್ ಅಸೋಸಿಯೇಷನ್, ಗಜಾನನ, ಆಪ್ತಮಿತ್ರ, ಸ್ವಸ್ತಿಕ್, ರಾಮ ಮಂದಿರ, ಮೂರ್ನಾಡು, ಗಾಂಧಿನಗರ, ಜೈಭೀಮ್…

Read More

ಡಿ.2 ರಿಂದ 8ರ ವರೆಗಿನ ಹನ್ನೆರಡು ರಾಶಿಗಳ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು  81056 34429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ, ದೂರ ಪ್ರಯಾಣ ಯೋಗವಿದೆ. :: ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರದ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ನೆಗಡಿ,…

Read More

ಮಡಿಕೇರಿ ನ.30 NEWS DESK : ಸುಂಟ್ಟಿಕೊಪ್ಪದಲ್ಲಿ ನಡೆದ ಕುಶಾಲನಗರ ವಲಯ ಮಟ್ಟದ ಎಸ್.ಕೆ.ಎಸ್.ಎಸ್‌.ಎಫ್ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡ್ಲಿಪೇಟೆ ಯೂನಿಟ್ (286) ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 284 ಅಂಕಗಳೊಂದಿಗೆ ಕುಶಾಲನಗರ ದ್ವಿತೀಯ ಹಾಗೂ 251 ಅಂಕಗಳನ್ನುಗಳಿಸಿ ಮಡಿಕೇರಿ ಯೂನಿಟ್ ತೃತೀಯ ಸ್ಥಾನ ಪಡೆದುಕೊಂಡಿತ್ತು. ಸಬ್ ಜೂನಿಯರ್ ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ ಕೊಡ್ಲಿಪೇಟೆ, ಜೂನಿಯರ್,ಜನರಲ್ ಗ್ರೂಪ್,ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ಯೂನಿಟ್ ಪ್ರಥಮ ಸ್ಥಾನ ಪಡೆಯಿತು. ಸಬ್ ಜೂನಿಯರ್ ವಿಭಾಗದ ಫೆಸ್ಟ್ ಐಕಾನ್ ಆಗಿ ಮೊಹಮ್ಮದ್ ಆಶಿಮ್ ಕೊಡ್ಲಿಪೇಟೆ, ಜೂನಿಯರ್ ವಿಭಾಗದಲ್ಲಿ ತಬೀಶ್ ಶನಿವಾರಸಂತೆ,ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ಸಿನಾನ್ ಕುಶಾಲನಗರ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ರಾಜಿಕ್ ಕುಶಾಲನಗರ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಏಳು ಯೂನಿಟ್ ಭಾಗವಹಿಸಿದ್ದ ಕುಶಾಲನಗರ ವಲಯ ಎಸ್.ಕೆ.ಎಸ್.ಎಸ್‌.ಎಫ್. ಇಸ್ಲಾಮಿಕ್ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಸಮದ್ ಬಾಖವಿ ಚಿಕ್ಕಮಗಳೂರು, ಅಬ್ಬಾಸ್ ಅಝ್ಹರಿ ಸಕಲೇಶಪುರ, ರಝಾಕ್ ಫೈಝಿ ಸಕಲೇಶಪುರ, ಕಮರುದ್ದೀನ್ ಫೈಝಿ ಕುಂಜಿಲ,ಮನಾಫ್ ಅಝ್ಹರಿ ಸುಂಟ್ಟಿಕೊಪ್ಪ, ಹಾಗೂ…

Read More

ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ನಗರದ ಲಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ಉದ್ಘಾಟಿಸಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾದಾಪುರದ ಚನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯು.ಅದವಿಯ ಗೆ…

Read More

ಪುತ್ತೂರು ನ.30 NEWS DESK : ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿವೆ. ಈ ಕ್ಷಿಪ್ರ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಪಠ್ಯಕ್ರಮದ ಜತೆಯಲ್ಲಿ ಅನೇಕ ಪೂರಕ ವಿಷಯಗಳನ್ನು ಕಲಿತುಕೊಳ್ಳುವುದು ತುಂಬಾ ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ತಾಂತ್ರಿಕ ಉತ್ಸವ ಔರ-2ಕೆ24 (AURA 2K24) ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ಸಮಾಜದ ಆವಶ್ಯಕತೆಗಳನ್ನು ಅರಿತುಕೊಂಡು ಕಟ್ಟ ಕಡೆಯ ವ್ಯಕ್ತಿಗೂ ಉಪಕಾರವಾಗುವ ರೀತಿಯಲ್ಲಿ ವಿದ್ಯಾರ್ಥಿಗಳು ಹೊಸತನ್ನು ಸಾಧಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಆವಶ್ಯಕತೆಗೆ ಅನುಗುಣವಾಗಿ ಕಾಲೇಜು ಇಂತಹ ಅನೇಕ ಚಟುವಟಿಕೆಗಳನ್ನು ಸಂಘಟಿಸುತ್ತದೆ ಇದರಲ್ಲಿ ಭಾಗಿಗಳಾಗಿ ಪ್ರಯೋಜನವನ್ನು ಪಡೆಯುವುದು ಪ್ರತಿಯೊಬ್ಬರ ಕರ್ತ್ಯವಾಗಬೇಕು ಎಂದರು. ಮೂರು ದಿನಗಳ…

Read More

ಮಡಿಕೇರಿ ನ.30 NEWS DESK : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.

Read More