ಕುಶಾಲನಗರ, ನ.1 NEWS DESK : ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ’: ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನ : 2024 ದಡಿ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಂಬಂಧ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಶಾಲೆಯಲ್ಲಿ *”ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಸಮಾಜ ವಿಜ್ಞಾನ ಶಿಕ್ಷಕ ಹೆಚ್.ಆರ್.ಶೇಖರ್ ಮಾತನಾಡಿ, ದೀಪಾವಳಿ ಹಬ್ಬದಲ್ಲಿ ನಾವು ಸ್ವಚ್ಛ ಮತ್ತು ಸ್ವಸ್ಥ ಪರಿಸರಕ್ಕಾಗಿ ಹಾಗೂ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವ ಮೂಲಕ ಹಸಿರು ದೀಪಾವಳಿ…
ಲೇಖಕ: admin
ವಿರಾಜಪೇಟೆ ನ.1 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ದ್ವಜಾರೋಹಣವನ್ನು ನೆರವೇರಿಸಿ ಕನ್ನಡ ನಾಡು, ನುಡಿ, ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು. ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕರೆಯನ್ನು ನೀಡಿದರು. ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಶಾಲಾ ಮಕ್ಕಳು ನಾಡಗೀತೆ ಹಾಗೂ ಕನ್ನಡ ನಾಡು ನುಡಿಯ ಇತರ ಗೀತೆಗಳನ್ನು ಹಾಡಿದರು. ಈ ಸಂದರ್ಭ ಸಹ ಶಿಕ್ಷಕಿ ಕಮರುನ್ನಿಸ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಲತಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಗೋಣಿಕೊಪ್ಪ NEWS DESK ನ.1 : ಪರಿಸರ ಮತ್ತು ವನ್ಯಜೀವಿಗಳನ್ನು ಪ್ರೀತಿಸುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ಏಕಾಗ್ರತೆಯನ್ನು ಸಂಪಾದಿಸಬೇಕು ಎಂದು ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಸಲಹೆ ನೀಡಿದ್ದಾರೆ. 69ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವನ್ಯಜೀವಿಗಳ ಕುರಿತು ಅವರು ವಿವರಿಸಿದರು. ಕಾಡುಪ್ರಾಣಿಗಳು ತಮ್ಮ ಬದುಕನ್ನು ವಿಶೇಷ ರೀತಿಯಲ್ಲಿ ನಡೆಸುತ್ತವೆ. ಮೂಕ ಪ್ರಾಣಿಗಳು ವಿಶೇಷ ಜ್ಞಾನವನ್ನು ಹೊಂದಿರುತ್ತವೆ. ಮಾನವನ ಕಲಹಕ್ಕೆ ಮಾತನಾಡುವ ಶಕ್ತಿಯೇ ಕಾರಣವಾಗಿದೆ. ಮೌನದಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಏಕಾಗ್ರತೆಯಿಂದ ಓದುವ ಆಸಕ್ತಿ ಹೆಚ್ಚಾಗಿ ಜ್ಞಾನ ವೃದ್ಧಿಸುತ್ತದೆ ಎಂದರು. ಮೌಲ್ಯಾಧಾರಿತ ಬದುಕು ಸಾಗಿಸಲು ನಾವು ಉತ್ತಮ ಗೆಳೆಯರನ್ನು ಸಂಪಾದಿಸಬೇಕು. ಗೆಳೆಯರ ಸಹಕಾರದಿಂದ ನಾವು ಬಹುದೊಡ್ಡ ಸಾಧನೆಯನ್ನೇ ಮಾಡಬಹುದು, ಈ ಸತ್ಯವನ್ನು ನಾವು ಅರಿತಿರಬೇಕು ಎಂದು ರಮೇಶ್ ಉತ್ತಪ್ಪ ಕಿವಿಮಾತು ಹೇಳಿದರು. ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಬೋಸ್ ಪೆಮ್ಮಯ್ಯ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಸಿ.ಟಿ.ಅಪ್ಪಣ್ಣ, ಉಪಾಧ್ಯಕ್ಷ ಧನು ಉತ್ತಯ್ಯ, ಕಾರ್ಯದರ್ಶಿ ಶ್ರೀಮಂತ್…
ಮಡಿಕೇರಿ ನ.1 NEWS DESK : ಕೊಡಗು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ.ಎಂ.ಪಿ. ಕೃಷ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಪ್ರಾಂಶುಪಾಲ ಪ್ರೊ. ಎಂ.ಪಿ.ಕೃಷ್ಣ ಅವರು ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಇಂತಹ ಕನ್ನಡಾಭಿಮಾನ ಮೂಡಿಸುವ ಚಟುವಟಿಕೆಗಳು ನಡೆಯುವಂತೆ ವಿಶೇಷ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು. ಗಣಕ ವಿಜ್ಞಾನ ವಿಭಾಗದ ಎಂ.ಎನ್.ರವಿಶಂಕರ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ರಾಜ್ಯ ಭಾಷೆಯಾಗಿರಬೇಕಾದದ್ದು ಸಹಜ. ಆದರೆ ಈಗ ಕನ್ನಡದ ಅವಶ್ಯಕತೆಯ ಬಗ್ಗೆ ಮಾತಾಡಬೇಕಾಗಿ ಬಂದದ್ದು ದುರದೃಷ್ಟಕರ. ಅಧ್ಯಯನ ವಿಷಯಗಳು ಯಾವುದೇ ಆಗಿರಲಿ ಮಾತೃಭಾಷೆಯ ಕುರಿತ ಅಭಿಮಾನಕ್ಕೆ ಎಂದೂ ಚ್ಯುತಿ ಬರಬಾರದು ಎಂದರು. ಇಡೀ ಕನ್ನಡ ಸಂಸ್ಕೃತಿಯ ಅಸ್ಥಿತ್ವ ಇರುವುದು ಆ ಭಾಷೆಯಲ್ಲಿ. ಹೀಗಾಗಿ ಪ್ರತಿಯೊಬ್ಬರು ಕನ್ನಡ ಭಾಷೆಯ ಕುರಿತು ಆಸಕ್ತಿಯನ್ನು, ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ವಿಭಾಗದ ಡಾ.ಕರುಣಾಕರ ಮಾತನಾಡಿ, ಕಾಲೇಜುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕನ್ನಡ…
ಕುಶಾಲನಗರ ನ.1 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಕೆ.ಎಸ್.ಹರೀಶ್, ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಇತಿಹಾಸ,ಪರಂಪರೆಯ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ, ಕನ್ನಡ ನಮ್ಮ ಮಾತೃಭಾಷೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಂಡು ಕನ್ನಡ ನಾಡು- ನುಡಿ, ಕಲೆ- ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯಬೇಕು ಹೇಳಿದರು. ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ಕನ್ನಡದ ಕಂಪು ಪಸರಿಸುವ ಈ ವಿಶೇಷ ದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕರ್ನಾಟಕ, ಕನ್ನಡ ಹಬ್ಬದ ಇತಿಹಾಸ, ಮಹತ್ವ ತಿಳಿದುಕೊಳ್ಳಬೇಕು ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ,ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮರೆಯಬೇಕು ಎಂದರು. ಶಿಕ್ಷಕರಾದ ಬಿ.ಎನ್.ಸುಜಾತ, ಬಿ.ಡಿ.ರಮ್ಯ,…
ಪೊನ್ನಂಪೇಟೆ ನ.1 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ ವಿಶೇಷ ಪ್ರತಿಭಾ ಪುರಸ್ಕಾರ-2024ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಎನ್.ಸಿ.ಟಿ ಗ್ರೂಪ್ ಮಾಲೀಕರಾದ ಕೆ.ಎಂ.ಎ ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಅವರು ತಮ್ಮ ಸಹೋದರ ದಿ.ಅಕ್ಕಳತಂಡ ಎಸ್. ಹಂಸ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸುತ್ತಿರುವ ಕೆ.ಎಂ.ಎ ವಿಶೇಷ ಪ್ರತಿಭಾ ಪುರಸ್ಕಾರಕ್ಕೆ 2023-24 ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಗೋಣಿಕೊಪ್ಪಲಿನ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಡಿ. ಭಾಷಿತ (ರಾಜ್ಯಮಟ್ಟದಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿ) ಮತ್ತು ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಡಿಯಾನ ನವೀನ್ ಕ್ರಮವಾಗಿ ಆಯ್ಕೆಗೊಂಡಿದ್ದಾರೆ. ಈ ಪುರಸ್ಕಾರವು ತಲಾ ರೂ. ಹತ್ತು ಸಾವಿರ ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಂಸನಾ…
ಗೋಣಿಕೊಪ್ಪ NEWS DESK ನ.1 : ಪೊನ್ನಂಪೇಟೆ ತಾಲ್ಲೂಕಿನ ಬ್ರಹ್ಮಗಿರಿ ವನ್ಯಜೀವಿ ವ್ಯಾಪ್ತಿಗೆ ಒಳಪಟ್ಟ ಹನುಮಂತ ಬೆಟ್ಟದಲ್ಲಿ ಪರಿಸರಕ್ಕೆ ಮಾರಕವಾಗಬಲ್ಲ ರೆಸಾರ್ಟ್ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಸ್ಥಳೀಯ ಗ್ರಾಮಸ್ಥರು, ತಕ್ಷಣ ಇದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ. ಶ್ರೀಮಂಗಲದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥ ಕುಪ್ಪಂಡ ಬೋಪಣ್ಣ, ಶ್ರೀಮಂಗಲ ಗ್ರಾ.ಪಂ ವ್ಯಾಪ್ತಿಯ ಕುರ್ಚಿ ಗ್ರಾಮದ ಬ್ರಹ್ಮಗಿರಿ ಅರಣ್ಯ ವಿಭಾಗದ ಕೇವಲ 50 ಮೀಟರ್ ಅಂತರದಲ್ಲಿ ರೆಸಾರ್ಟ್ ಚಟುವಟಿಕೆ ನಡೆಯುತ್ತಿದೆ. ಎರಡು ತಿಂಗಳ ಹಿಂದೆ ಅರಣ್ಯ, ಕಂದಾಯ, ಪ್ರವಾಸೋದ್ಯಮ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಕೆ.ಎನ್.ಬೋಸ್ ಮಾದಪ್ಪ ಮಾತನಾಡಿ, ಬ್ರಹ್ಮಗಿರಿ ಬೆಟ್ಟ ಪ್ರದೇಶ ವನ್ಯಜೀವಿ ಧಾಮ ಮತ್ತು ಪಶ್ಚಿಮಘಟ್ಟದ ಬೆಟ್ಟ ಸಾಲುಗಳ ಅತೀ ಸೂಕ್ಷ್ಮ ಪ್ರದೇಶವಾಗಿದೆ. ಮುಂದೆ ಅನಾಹುತ ಸಂಭವಿಸಿದರೆ ನಿರಾಪೇಕ್ಷಣಾ ಪತ್ರ ನೀಡಿದ ಅಧಿಕಾರಿಗಳು ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ರೆಸಾರ್ಟ್ ಚಟುವಟಿಕೆಯನ್ನು ಸ್ಥಗಿತಗೊಳಿಸದಿದ್ದಲ್ಲಿ ಗ್ರಾಮಸ್ಥರು…
ಮಡಿಕೇರಿ NEWS DESK ನ.1 : ನಗರದ ಕೊಡಗು ವಿದ್ಯಾಲಯದಲ್ಲಿ ದೀಪಾವಳಿ ಸಂಭ್ರಮವನ್ನು ಚಿಣ್ಣರು ನೃತ್ಯ ರೂಪಕದ ಮೂಲಕ ಪ್ರಸ್ತುತಪಡಿಸಿದರು. ಕೊಡಗು ವಿದ್ಯಾಲಯದ ಚಿಗುರು ಸಭಾಂಗಣದಲ್ಲಿ ದೀಪಾವಳಿ ಅಂಗವಾಗಿ ನಡೆದ ಸಾಂಸ್ಕೃತಿಕ ಕಾಯ೯ಕ್ರಮದಲ್ಲಿ ದೀಪಾವಳಿಯ ಮಹತ್ವ ಸಾರುವ ನೃತ್ಯ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ನೂರಾರು ಚಿಣ್ಣರು ಇತಿಹಾಸ, ಧಾಮಿ೯ಕ ಪರಂಪರೆ ಸಾರುವ ಉಡುಗೆ ಧರಿಸಿ ನೃತ್ಯದಲ್ಲಿ ಸಂಭ್ರಮಿಸಿದರು. ಸೀತಾ ಅಪಹರಣದ ಪ್ರಸಂಗ, ರಾವಣ ಸಂಹಾರ ಸೇರಿದಂತೆ ದೀಪಗಳ ಮಹತ್ವ ಸಾರುವ ನೃತ್ಯ ಗಮನ ಸೆಳೆಯಿತು. ಕಾಯ೯ಕ್ರಮದಲ್ಲಿ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ, ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕ ಸಿ.ಎಸ್ ಗುರುದತ್, ಸಲಹೆಗಾರ ಕೊಕ್ಕಲೇರ ಕುಮಾರ್ ಸುಬ್ಬಯ್ಯ, ಪ್ರಾಂಶುಪಾಲರಾದ ಕೆ.ಎಸ್ .ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ನ.1 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ಮಹಾಸಭೆಯು ನ.5 ರಂದು ಸಂಘದ ಅಧ್ಯಕ್ಷ ಕೋರನ ಸಿ.ವಿಶ್ವನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ಸಭೆಗೆ ಮುಖ್ಯ ಅತಿಥಿಗಳಾಗಿ ವಿಶಿಷ್ಟ ಸೇವಾ ಮೆಡಲ್ (Indian Navy) ನಿವೃತ್ತ ಬೆಂಗಳೂರು. ಕಮೋಡೋರ್ ಕೆದಂಬಾಡಿ ಸತೀಶ್ ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಸದಸ್ಯರಾದ ನಿವೃತ್ತ ಮುಖ್ಯೋಪಾಧ್ಯಾಯಿನಿ ಚೆರಿಯಮನೆ ಕಮಲ ಬೋಪಯ್ಯ ಅವರನ್ನು ಸನ್ಮಾನಿಸಲಾಗುವುದು.
ಮಡಿಕೇರಿ ನ.1 NEWS DESK : ಕರ್ನಾಟಕ ರಾಜ್ಯ ಸರ್ಕಾರದ ನಿವೃತ್ತ ನೌಕರರ ವೇದಿಕೆಯ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿದರು. 7 ವೇತನ ಆಯೋಗದ ಜಾರಿಗೊಳಿಸುವಲ್ಲಿ ಮಹತ್ವದ ಜವಾಬ್ದಾರಿ ನಿಭಾಯಿಸಿದ ಸಲುವಾಗಿ ಶಾಸಕರನ್ನು ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿರುವ ಶಾಸಕರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.ಇದೇ ಸಂಧರ್ಭದಲ್ಲಿ ನೌಕರರ ವೇದಿಕೆಯ ಪದಾಧಿಕಾರಿಗಳು ನಿವೃತ್ತ ನೌಕರಿಗೆ ಸಲ್ಲಬೇಕಾದ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರಕ್ಕೆ ನಿವೇದನೆಯನ್ನು ಸಲ್ಲಿಸಿದರು. ನಿವೃತ್ತ ನೌಕರರ ನಿವೇದನೆಯನ್ನು ಸ್ವೀಕರಿಸಿದ ಪೊನ್ನಣ್ಣ ಅವರು, ಬೇಡಿಕೆ ಸಮಂಜಸ ಮತ್ತು ಸಮಯೋಚಿತವಾಗಿದ್ದು, ಖಂಡಿತವಾಗಿ ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಚರ್ಚಿಸಿ ಬಗೆ ಹರಿಸುವ ಭರವಸೆ ನೀಡಿದರು. ಜಿಲ್ಲಾ ನೌಕರರ ವೇದಿಕೆಯ ಪ್ರಧಾನ ಸಂಚಾಲಕರಾದ ಪಿ.ಎಸ್.ಜನಾರ್ದನ, ಮುಖ್ಯ ಸಂಚಾಲಕರಾದ ಜಿ.ಎಂ.ಚಿನ್ನಯ್ಯ, ಜಿಲ್ಲಾ ಸಂಚಾಲಕರಾದ ಎಂ.ಎಂ.ಬೆಳ್ಯಪ್ಪ, ಪಿ.ಎಸ್.ಸೋಮಯ್ಯ, ಹೆಚ್.ಇ.ದೇವರಾಜ್, ಕೆ.ಪಿ.ಮೋಹನ್ ರವರು ನಿಯೋಗದಲ್ಲಿ ಉಪಸ್ಥಿತರಿದ್ದರು.






