ಲೇಖಕ: admin

ಮಡಿಕೇರಿ ಅ.9 NEWS DESK : ಕೊಡವರ ಸ್ವಾಧೀನದಲ್ಲಿರುವ ಯುಗ ಯುಗಗಳ ಭೂಮಿಯನ್ನು 30 ವರ್ಷಗಳಿಗೆ ಗುತ್ತಿಗೆಗೆ ನೀಡುವ ಸರ್ಕಾರದ ಯೋಜನೆಯನ್ನು ದುಷ್ಟಕೂಟಗಳು ವಿಫಲಗೊಳಿಸಲು ಯತ್ನಿಸುತ್ತಿವೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಅಮ್ಮತ್ತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವರಿಗೆ ಭೂಮಿ ಸಿಗದಂತೆ ಮಾಡಿ ಸಂಕಷ್ಟಕ್ಕೆ ಸಿಲುಕಿಸಿ ಆತಂಕಕ್ಕೆ ತಳ್ಳುವ ಪ್ರಯತ್ನಗಳು ನಡೆಯುತ್ತಿದೆ. ಕೊಡಗಿನಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಬಂಡವಾಳಶಾಹಿಗಳು ಹಾಗೂ ಅವರು ಕರೆ ತಂದಿರುವ ಜನರಿಂದ ಇಲ್ಲಿನ ಪರಿಸರ, ಪ್ರಕೃತಿ, ಸಂಸ್ಕೃತಿ, ಜಲಮೂಲ, ಸಾಮಾಜಿಕ ಭದ್ರತೆ ಮತ್ತು ಜನಾಂಗೀಯ ಶಾಸ್ತ್ರ ಸಂಪೂರ್ಣ ಬುಡಮೇಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಇವರು ಇಂದು ಬೃಹತ್ ಭೂಪರಿವರ್ತನೆ…

Read More

ಮಡಿಕೇರಿ ಅ.9 NEWS DESK : ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ 48ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ವಿ.ಅರವಿಂದ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಲೈಟಿಂಗ್ ಬೋರ್ಡನ್ನು ಮಡಿಕೇರಿ ಪೂಜಾ ಲೈಟಿಂಗ್‍ನ ನಜೀರ್ ಒದಗಿಸಲಿದ್ದಾರೆ. ಶ್ರೀ ಮಹಾಗಣಪತಿಯಿಂದ ಅಜಗರ – ಶಲಭಾಸುರ ದೈತ್ಯರ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆಯನ್ನು ಮಡಿಕೇರಿ ಸಂಗೀತ ಇವೆಂಟ್‍ನ ಲೋಕೇಶ್ ಮಾಡಲಿದ್ದಾರೆ. 21 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕಲಾಕೃತಿಗಳ ರಚನೆ, ಚಲನವಲನ ಹಾಗೂ ಸೆಟ್ ವರ್ಕ್‍ನ್ನು ಎಸ್‍ಕೆಎಂಜಿ ಕ್ರಿಯೇಷನ್ಸ್‍ನ ಎಂ.ವಿ.ನವೀನ್ ಹಾಗೂ ಅರ್ಮೊನ್, ಸುಲ್ತಾನ್ ಮತ್ತು ತಂಡದವರು ಮಾಡಲಿದ್ದಾರೆ. ಫೈರ್ ವರ್ಕ್ ಹಾಗೂ ಕಲಾಕೃತಿಗಳಿಗೆ ಸ್ಪೆಷಲ್ ಎಫೆಕ್ಟನ್ನು ಟೀಂ99 ರೆಟ್ರೋ ಟ್ರ್ಯಾಂಗಲ್ ಮಡಿಕೇರಿ ತಂಡ ಮತ್ತು ಅಶ್ರಫ್ (ಅಚ್ಚು) ನೀಡಲಿದ್ದಾರೆ. ಪ್ಲಾಟ್‍ಫಾರಂನ್ನು ಪುನೀತ್ ತಂಡ ನಿರ್ಮಿಸಲಿದೆ. ಮುಂಬೈ ತಂಡ ಮಂಟಪಕ್ಕೆ ಸ್ಪೆಷಲ್ ಎಫೆಕ್ಟ್ ವ್ಯವಸ್ಥೆ ಮಾಡಲಿದೆ. ಒಟ್ಟು 27.75…

Read More

ಕುಶಾಲನಗರ ಅ.9 NEWS DESK :  ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೊಡಗು ಜಿಲ್ಲೆಯಿಂದ ಪ್ರತಿದಿನ ತೆರಿಗೆ ಹಣ ಪಾವತಿಯಾಗುತ್ತಿದ್ದರೂ ಕೂಡ ಜಿಲ್ಲೆಗೆ ಸರ್ಕಾರದಿಂದ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ ಎಂದು ವರ್ತಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಸಮಧಾನ ವ್ಯಕ್ತಪಡಿಸಿದರು. ಕುಶಾಲನಗರದ ಕನ್ನಿಕಾ ಹೋಟೆಲ್ ಸಭಾಂಗಣದಲ್ಲಿ ನಡೆದ ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ‌ ಅಧ್ಯಕ್ಷ ಕೆ.ಎಸ್.ನಾಗೇಶ್ ಅವರಿಗೆ ಸಮಾನ ಮನಸ್ಕರು ನೀಡಿದ ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ವ್ಯಾಪಾರ ವಹಿವಾಟುಗಳು ನಡೆಯುವ ಕುಶಾಲನಗರದ ಪ್ರಮುಖ ವಾಣಿಜ್ಯ ವಹಿವಾಟಿನ ರಥಬೀದಿಯಲ್ಲಿ ವಾಹನ ನಿಲುಗಡೆ ಸಮಸ್ಯೆಯಿಂದಾಗಿ ವರ್ತಕರಿಗೆ ಬಹಳಷ್ಟು ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಸ್ಥಳೀಯ ಪುರಸಭೆಯ ಸಹಕಾರದೊಂದಿಗೆ ಸ್ಥಾನೀಯ ಸಮಿತಿ ವಾಹನ ನಿಲುಗಡೆಗೆ ಪೂರಕವಾದ ವಿವಿಧೋದ್ದೇಶ ಕಟ್ಟಡ ನಿರ್ಮಿಸಿ ವಾಹನ ನಿಲುಗಡೆಗೆ ಅವಕಾಶಗಳಾಗಬೇಕಿದೆ. ಹಾಗೆಯೇ ಕುಶಾಲನಗರ ಪಟ್ಟಣದಲ್ಲಿ ವರ್ತಕರ ಸಂಘದ ಸ್ವಂತ ಕಟ್ಟಡ ನಿರ್ಮಾಣದ ಯೋಜನೆ ರೂಪುಗೊಳ್ಳಲು ನಾಗೇಂದ್ರ ಪ್ರಸಾದ್ ಕರೆ ನೀಡಿದರು.…

Read More

ಮಡಿಕೇರಿ ಅ.9 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮಡಿಕೇರಿ ತಾಲ್ಲೂಕು ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ಮರಗೋಡು ಶಿವಪಾರ್ವತಿ ದೇವಾಲಯದಲ್ಲಿ ದುರ್ಗಾಪೂಜೆ ಹಾಗೂ ಗೋಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ದುರ್ಗಾಪೂಜೆಯ ಮೂಲಕ ನಾಡಿನ ಒಳಿತಿಗಾಗಿ ದುರ್ಗೆಯನ್ನು ಪ್ರಾರ್ಥಿಸಲಾಯಿತು. ಗೋವು ಮತ್ತು ಕರುವಿಗೆ ವಿಶೇಷ ಪೂಜೆ ಸಲ್ಲಿಸಿ ಬೆಲ್ಲ, ಕಡಲೆ, ಬಾಳೆಹಣ್ಣು, ಅವಲಕ್ಕಿ ಫಲಹಾರ ನೀಡಿ ಗೌರವಿಸಲಾಯಿತು. ನಂತರ ದೇವಾಲಯದ ಸಭಾಂಗಣದಲ್ಲಿ ದುರ್ಗಾಸ್ತೋತ್ರದೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಜಿಲ್ಲಾ ಮಠ, ಮಂದಿರಗಳ ಪ್ರಮುಖ್ ಡಾ.ಮಹಾಭಲೇಶ್ವರ ಭಟ್ ಬೌದಿಕ್ ನಡೆಸಿಕೊಟ್ಟು ಹಿಂದೂ ಧರ್ಮ, ಧಾರ್ಮಿಕ ಆಚರಣೆ, ದುರ್ಗಾಪೂಜೆ ಮತ್ತು ಗೋಪೂಜೆಯ ಮಹತ್ವವನ್ನು ತಿಳಿಸಿದರು. ಮಾತೃಶಕ್ತಿಯ ಮಡಿಕೇರಿ ತಾಲ್ಲೂಕು ಸಂಯೋಜಕಿ ಮಮತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಪ್ರಮುಖ್ ಪೂರ್ಣಿಮ ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಯೋಜಕಿ ಉಮಾವತಿ, ರೋಹಿಣಿ ಚಂದ್ರಶೇಖರ್, ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಜಿಲ್ಲಾ ಪ್ರಸಾರ…

Read More

ಕಣಿವೆ ಅ.9 NEWS DESK : ಐಟಿಡಿಪಿ ಇಲಾಖೆ ಅಧಿಕಾರಿಗಳು ಜೇನು ಕುರುಬರ ಹಾಡಿಗಳಿಗೆ ಬರುತ್ತಿಲ್ಲ. ಅವರ ಕಾರುಗಳು ಹೋಗುವಂತಹ ರಸ್ತೆಗಳು ಇರುವ ಕಡೆಗಳಲ್ಲಿ ಮಾತ್ರ ಹೋಗ್ತಾ ಇದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಡಿಗಳೇ ಗೊತ್ತಿಲ್ಲ. ಇಂತಹ ಬೇಜವಬ್ದಾರಿ ಇಲಾಖಾಧಿಕಾರಿಗಳಿಂದ ಜೇನು ಕುರುಬ ಜನಾಂಗಕ್ಕೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೇನು ಕುರುಬರ ಮುಖಂಡ, ಜಿ.ಪಂ ಮಾಜಿ ಸದಸ್ಯ ಹಾಗೂ ನಂಜರಾಯಪಟ್ಟಣ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಕುಶಾಲನಗರ ತಾಲ್ಲೂಕು ಚಿಕ್ಲಿಹೊಳೆ ಜಲಾಶಯದ ಬಳಿ ಇರುವ ಕಟ್ಟೆಹಾಡಿಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೇನು ಕುರುಬರ ಹೆಸರಿನಲ್ಲಿ ಉಳ್ಳವರು ಹಾಗೂ ಜೇನು ಕುರುಬರಲ್ಲದವರು ಜಾತಿ ಪ್ರಮಾಣ ಪತ್ರಗಳನ್ನು ಮಾಡಿಸಿಕೊಂಡು ನಿಜವಾದ ಅರ್ಹ ಫಲಾನುಭವಿಗಳಿಗೆ ವಂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮೀಸಲಿಡುವ ಪರಿಶಿಷ್ಟರ ಅನುದಾನದ ಶೇ.25 ರಷ್ಟು ಹಣ ನಮ್ಮ ಜೇನು ಕುರುಬರಿಗೆ ಸಲ್ಲಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮ ನಮ್ಮ…

Read More

ಪುತ್ತೂರು ಅ.9 NEWS DESK : ಐಇಇಇ ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಹಾಗೂ ವುಮನ್ ಇನ್ ಇಂಜಿನಿಯರಿಂಗ್ ಸಂಯುಕ್ತ ಆಶ್ರಯದಲ್ಲಿ ನಡೆದ ಐಇಇಇ ದಿನಾಚರಣೆಯ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ಐಇಇಇ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನೂತನ ತಂತ್ರಜ್ಞಾನಗಳನ್ನು ಕಲಿಯುವುದರ ಜತೆಯಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವುದಕ್ಕೆ ಅನುಕೂಲವಾಗುತ್ತದೆ ಎಂದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ, ಐಇಇಇ ತನ್ನ ಕಲಿಕಾ ಜಾಲದ ಮೂಲಕ ಸಂಶೋಧನಾ ನಿರತರಿಗೆ, ಇಂಜಿನಿಯರಿಂಗ್ ಪ್ರಾಧ್ಯಾಪಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿರಂತರ ವೃತ್ತಿಪರ ಶಿಕ್ಷಣವನ್ನು ನೀಡುತ್ತದೆ. ಇದರ ಚಟುವಟಿಕೆಗಳು ಕಾಲೇಜಿನಲ್ಲಿ ವರ್ಷಪೂರ್ತಿ…

Read More

ಮಡಿಕೇರಿ ಅ.9 NEWS DESK : ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಸರಿಗಮ ಖ್ಯಾತಿಯ ಸುರೇಖಾ, ಪ್ರಥ್ವಿ ಭಟ್, ರೇಷ್ಮಾ, ಸ್ನೇಹ ನಂಜಪ್ಪ ಮತ್ತು ತಂಡದಿಂದ ಸಂಗೀತ ರಸಸಂಜೆ, ಮಹಿಳಾ ತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Read More

ಮಡಿಕೇರಿ ಅ.9 NEWS DESK : ವಿಶ್ವ ವಿಖ್ಯಾತ ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಮಡಿಕೇರಿಯಲ್ಲಿ ಜರುಗಲಿರುವ ಆಯುಧ ಪೂಜಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ಮಡಿಕೇರಿ ದಸರಾ ಉತ್ಸವ ಸಮಿತಿಯ ಸದಸ್ಯರು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಆಹ್ವಾನ ನೀಡಿದರು. ಈ ಸಂದರ್ಭ ಆಯುಕ್ತರಾದ ರಮೇಶ್, ಸಮಿತಿ ಕಾರ್ಯದರ್ಶಿ ಬಿ.ವೈ.ರಾಜೇಶ್, ಖಜಾಂಚಿ ಅರುಣ್ ಶೆಟ್ಟಿ, ಸಮಿತಿಯ ಪ್ರಮುಖರಾದ ಸತೀಶ್ ಪೈ, ಲೋಕೇಶ್ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಅ.9 NEWS DESK : ನಗರದ ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ 29ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದ್ದು, ಈ ಬಾರಿ ಶ್ರೀ ಕೊಲ್ಲೂರು ಮೂಕಾಂಬಿಕೆ ಮಹಿಮೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಮುದ್ದಂಡ ಚಂಗಪ್ಪ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‍ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಮಡಿಕೇರಿ ಸ್ಕಂದ ಡೆಕೋರೇಟರ್ಸ್‍ನ ಅನಿಲ್ ಧ್ವನಿವರ್ಧಕ ಒದಗಿಸಲಿದ್ದು, ಬೆಂಗಳೂರಿನ ಅನು ಪ್ರೊ ಲೈಟಿಂಗ್‍ನವರು ಸ್ಟುಡಿಯೋ ಲೈಟಿಂಗ್ ವ್ಯವಸ್ಥೆ ಮಾಡಲಿದ್ದಾರೆ. ಒಟ್ಟು 20 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಶೋಮ್ಯಾನ್ ಕ್ರಿಯೇಷನ್ಸ್ ತಂಡ ಕಲಾಕೃತಿಗಳನ್ನು ರಚಿಸಲಿದೆ. ಪ್ಲಾಟ್‍ಫಾರಂ ನಿರ್ಮಾಣ, ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಸಮಿತಿಯ ಸದಸ್ಯರುಗಳೇ ಮಾಡಲಿದ್ದಾರೆ. ಬೆಂಗಳೂರಿನ ಮೈತ್ರಿ ಕ್ರಿಯೇಷನ್ ಆಂಡ್ ಇವೆಂಟ್‍ನವರು ಫೈರ್ ಎಫೆಕ್ಟ್ ವ್ಯವಸ್ಥೆ ಮಾಡಲಿದ್ದಾರೆ. ಒಟ್ಟು 22 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ವಾಲಗ ಮಂಟಪವನ್ನು ಮುನ್ನಡೆಸಲಿದೆ. ಕಳೆದ ಬಾರಿ ತೃತೀಯ ಬಹುಮಾನ…

Read More

ವಿರಾಜಪೇಟೆ ಅ.9 NEWS DESK : ಉಡುಪಿಯ ಬ್ರಹ್ಮಾವರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗಿನ 14 ವರ್ಷದೊಳಗಿನ ಬಾಲಕರ ತಂಡವು ಹಾಸನ ತಂಡವನ್ನು ಮಣಿಸಿ ವಿಜೇತಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ವಿಭಾಗ ಮಟ್ಟದ 14 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ಬಾಲಕರ ಕ್ರಿಕೆಟ್ ಪಂದ್ಯಾವಳಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಶಾರದಾ ಶಾಲೆಯ ಮೈದಾನದಲ್ಲಿ ಆಯೋಜಿಸಿತು. ಪ್ರತಿ ತಂಡಕ್ಕೆ ಮೂರು ಸುತ್ತುಗಳ ಪಂದ್ಯ ನಡೆಯಿತು. ಮೊದಲ ಸುತ್ತಿನಲ್ಲಿ ಕೊಡಗು ತಂಡ  ಮಂಡ್ಯ ಜಿಲ್ಲೆಯ ತಂಡವನ್ನು ಸೋಲಿಸಿ ಎರಡನೆ ಸುತ್ತಿಗೆ ಅರ್ಹತೆ ಪಡೆಯಿತು. ಸೆಮಿಫೈನಲ್ ಪಂದ್ಯದಲ್ಲಿ ತನ್ನ ಎದುರಾಳಿ ಉಡುಪಿ ಜಿಲ್ಲಾ ತಂಡದೊಂದಿಗೆ ಆಡಿ ಉತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಗೆ ಅರ್ಹತೆ ಪಡೆಯಿತು. ಫೈನಲ್ ಪಂದ್ಯಾವಳಿಯಲ್ಲಿ ಹಾಸನ ಜಿಲ್ಲಾ ತಂಡ ಮತ್ತು ಕೊಡಗು ಜಿಲ್ಲಾ ತಂಡದ ಮಧ್ಯೆ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಡಗು ಜಿಲ್ಲಾ ತಂಡವು 10 ಓವರ್‌ಗಳಲ್ಲಿ…

Read More