ಲೇಖಕ: admin

ಮಡಿಕೇರಿ NEWS DESK ಅ.9 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಏಳನೇ ದಿನವಾದ ಇಂದು ಶಾರದ ದೇವಿಯ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಅ.10 ರಂದು ಬಳೆಯ ಅಲಂಕಾರ ನಡೆಯಲಿದೆ.

Read More

ಮಡಿಕೇರಿ ಅ.9 NEWS DESK : ಗೋಣಿಕೊಪ್ಪದಲ್ಲಿ ನಡೆದ ‘ಮಕ್ಕಳ ದಸರಾ’ ನೃತ್ಯ ಸ್ಪರ್ಧೆಯಲ್ಲಿ ಮೂರ್ನಾಡಿನ “ಸ್ಟೆಪ್ಅಪ್ ಶ್ಯಾಡೋಸ್” ಡ್ಯಾನ್ಸ್  ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಜೂನಿಯರ್ ಮತ್ತು ಸೀನಿಯರ್ ಎರಡು ವಿಭಾಗದಲ್ಲೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Read More

ಕುಶಾಲನಗರ ಅ.9 NEWS DESK : ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಸವಿನೆನಪಿಗಾಗಿ  ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ‘ಶಿಕ್ಷಕ ಸಿರಿ’ ಕಾರ್ಯಕ್ರಮ ನಡೆಯಿತು. ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ವಿವಿ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶಿಕ್ಷಕ ವರ್ಗ ಜ್ಞಾನದಾಸೋಹದಂತಹ ಅತ್ಯಂತ ಶ್ರೇಷ್ಠ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ. ಸಮಾಜದಲ್ಲಿ ಅಜ್ಞಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜ್ಯೋತಿಯಂತಹ ಸೇವೆ ಒದಗಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜೀವನ ಪ್ರಕಾಶಮಯವಾಗಿಸಲು ಸತ್ಯ, ಸುಜ್ಞಾನದ ಬೀಜ ಬಿತ್ತುವ ಮೂಲಕ, ಜವಾಬ್ದಾರಿಯುತ ವ್ಯಕ್ತಿಯಾಗಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.  ಅಧಿಕ ಫಲ ಅಪೇಕ್ಷಿಸದೆ ಪಠ್ಯದೊಂದಿಗೆ ನಮ್ಮ ಜ್ಞಾನ, ಅನುಭವ, ಜೀವನ ಮೌಲ್ಯಗಳನ್ನು, ಬದುಕಿನ ಸೂತ್ರಗಳನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ದೈವಿಕ ಕಾಯಕವನ್ನು ಶಿಕ್ಷಕರು ನಿರ್ವಹಿಸಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್, ಪೋಷಕರ…

Read More

ವಿರಾಜಪೇಟೆ ಅ.9 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಪ್ರತಿಷ್ಟಿತ ದಂತ ಮಹಾವಿದ್ಯಾಲಯವಾದ ಕೊಡಗು ದಂತ ಮಹಾ ವಿದ್ಯಾಲಯಕ್ಕೆ ಹ್ಯಾನೋವರ್‍ನ ಇಂಟರ್‍ನ್ಯಾಷನಲ್ ಆರ್ಥೊಡಾಂಟಿಕ್ ಸೊಸೈಟಿಯ ಉಪಾಧ್ಯಕ್ಷ ಪ್ರೊ.ಜಾನ್. ವಿ ರೈಮನ್ ಮತ್ತು ಆರ್ಥೊಡಾಂಟಿಸ್ಟ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜನ್ ಹಾಗೂ ಅಡ್ವಾನ್ಸ್‍ಡ್ ರಿಪೊಸಿಷನಿಂಗ್ ಅಪ್ಲೈಯನ್ಸ್‍ನ ಸಂಶೋದಕ ಪ್ರೊ.ಅಲಾದಿನ್ ಸಬಾಗ್ ಭೇಟಿ ನೀಡಿದರು. ಕೊಡಗು ದಂತ ಮಹಾ ವಿದ್ಯಾಲಯ(ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್) ನ 25 ನೇ ವರ್ಷದ ಸಂಭ್ರಮಾಚರಣೆಯ ನೆನಪಿಗಾಗಿ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‍ನ ರಜತ ಮಹೋತ್ಸವ ಉಪನ್ಯಾಸ ಸರಣಿಯ ಭಾಗವಾಗಿ ಕೊಡಗು ದಂತ ಮಹಾವಿದ್ಯಾಲಯ ಮತ್ತು ಇಂಟರ್ ನ್ಯಾಷನಲ್ ಆರ್ಥೋಡಾಂಟಿಕ್ ಸೊಸೈಟಿಯ ವೈಜ್ಞಾನಿಕ ಮತ್ತು ಭೋಧನ ವಿನಿಮಯ ಒಪ್ಪಂದದ ಅಡಿಯಲ್ಲಿ ಈ ಭೇಟಿ ಹಾಗೂ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಯುರೋಪಿಯನ್ ಅಸೋಸಿಯೇಶನ್ ಆಫ್ ಆರ್ಥೊಡಾಂಟಿಸ್ಟ್ಗೆ ಭಾರತವನ್ನು ಪ್ರತಿನಿಧಿಸುವ ರಾಯಭಾರಿಗಳಾಗಿ ನೇಮಕಗೊಂಡ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‍ನ ಡೀನ್ ಡಾ. ಸುನಿಲ್ ಮುದ್ದಯ್ಯ ಮತ್ತು ಡಾ. ಅನ್ಮೋಲ್…

Read More

ಮಡಿಕೇರಿ ಅ.9 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ.17 ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಕಳೆದ ಬಾರಿಯಂತೆ ಈ ಬಾರಿಯೂ ಸಹ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೋರಿದರು. ಕಳೆದ ಬಾರಿ ಗಾಂಧಿ ಮೈದಾನದಿಂದ ಕಾವೇರಿ ಕಲಾಕ್ಷೇತ್ರದವರೆಗೆ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು, ಈ ಬಾರಿಯು ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಕೋರಿದರು. ರೈತರು, ಪೌರಕಾರ್ಮಿಕರು, ಮತ್ತು ಮಾಜಿ ಸೈನಿಕರನ್ನು ಸನ್ಮಾನಿಸುವಂತಾಗಬೇಕು ಎಂದು ಅಶೋಕ್ ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಅಕ್ಟೋಬರ್, 17 ರಂದು ನಾಡಿನ ಜೀವನನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ. ಹಾಗಾಗಿ ಮೆರವಣಿಗೆ ಇರುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಮಡಿಕೇರಿ NEWS DESK ಅ.8 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವ ಮತ್ತು ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವದಲ್ಲಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡುವ ನಿಟ್ಟಿನಲ್ಲಿ 2 ಸಾವಿರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ ಎಂದು ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಸರಾ ಉತ್ಸವವನ್ನು ಶಾಂತಿಯುತವಾಗಿ ಆಚರಿಸುವ ಸಲುವಾಗಿ ಇಬ್ಬರು ಎಎಸ್‌ಪಿ, 7 ಡಿವೈಎಸ್‌ಪಿ, 27 ವೃತ್ತ ನಿರೀಕ್ಷಕರು, 80 ಪಿಎಸ್‌ಐ, 126 ಎಎಸ್‌ಐ, 975 ಪೊಲೀಸ್ ಸಿಬ್ಬಂದಿಗಳು, 360 ಗೃಹ ರಕ್ಷಕ ದಳದ ಸಿಬ್ಬಂದಿಗಳು ಸೇರಿದಂತೆ 16 ಡಿಎಆರ್, 8 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ ಎಂದರು. ::: 8 ‘ಜಂಬೋ’ ತಂಡಗಳ ನಿಯೋಜನೆ ::: ಮಡಿಕೇರಿ ದಸರಾ ಉತ್ಸವದ ಶೋಭಾಯಾತ್ರೆಯ ಸಂದರ್ಭ ಲಕ್ಷಾಂತರ ಮಂದಿ ನಗರಕ್ಕೆ ಆಗಮಿಸುತ್ತಾರೆ. ಈ ಹಂತದಲ್ಲಿ ಮಹಿಳೆೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ, ಜನಸಂದಣಿ…

Read More

ಮಡಿಕೇರಿ ಅ.8 NEWS DESK : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಗೆ ಒಪ್ಪಂದದ ಆಧಾರದ ಮೇಲೆ 2024-25 ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ), ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ. 30 ಸಾವಿರ ಗೌರವ ಧನ ನೀಡಲಾಗುವುದು. ಈ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಅಕ್ಟೋಬರ್, 21 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ),…

Read More

ಮಡಿಕೇರಿ ಅ.8 NEWS DESK : ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ಅ.31 ರಿಂದ ನ.4ರ ವರೆಗೆ ಎರಡನೇ ವರ್ಷದ ಅಂತರ ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಬಾಳಲೆಯಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಖಜಾಂಚಿ ಕೊಕ್ಕೆಂಗಡ ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳಲೆಯ ವಿಜಯಲಕ್ಷ್ಮಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಐದು ದಿನಗಳ ಕಾಲ ನಾಕೌಟ್ ಮಾದರಿಯ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವುದೆಂದರು. ಪಂದ್ಯಾವಳಿಯಲ್ಲಿ ಕೊಡವ ಜನಾಂಗದ ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸುಮಾರು 14 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಂದು ತಂಡಕ್ಕೆ ಎರಡು ಹೊರ ಜಿಲ್ಲೆಯ ಕೊಡವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಆಟಗಾರರು ಅ.20ರ ಒಳಗಾಗಿ ರೂ.5,000 ರೂಪಾಯಿಗಳನ್ನು ಪಾವತಿಸಿ ತಂಡಗಳ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ ಅವರು, ಆಟಗಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ತಂಡದ ನೊಂದಾಣಿಗಾಗಿ 9343856877,…

Read More

ಮಡಿಕೇರಿ ಅ.8 NEWS DESK : ದಕ್ಷಿಣ ಭಾರತದ ಸುಮಾರು ಎಂಟು ಕೋಟಿ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ನದಿ ತನ್ನ ತವರು ಜಿಲ್ಲೆ ಕೊಡಗಿನಲ್ಲೇ ನಿರ0ತರವಾಗಿ ಕಲುಷಿಗೊಳ್ಳುತ್ತಿದೆ. ನದಿ ಮಾಲಿನ್ಯವನ್ನು ತಡೆಯುವಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆ ವಿವಿಧ ಹಂತದ ಹೋರಾಟದೊಂದಿಗೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಕೊಡಗು ಮೋಡೆಲ್ ಫಾರೆಸ್ಟ್ ಟ್ರಸ್ಟ್ ನ ಉಪಾಧ್ಯಕ್ಷ ಕರ್ನಲ್ ಸಿ.ಪಿ.ಮುತ್ತಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನದಿ ಮತ್ತು ಪರಿಸರ ಸ್ನೇಹಿ ಸಂಘಟನೆಗಳ ಸಹಕಾರದೊಂದಿಗೆ ಕಾವೇರಿಯನ್ನು ಉಳಿಸಿಕೊಳ್ಳಲು ಹೋರಾಟ ರೂಪಿಸುವುದಾಗಿ ಹೇಳಿದರು. ಕಾವೇರಿ ನದಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಹುಟ್ಟಿ ಸುಮಾರು 810 ಕಿ.ಲೋ ಮೀಟರ್ ಹರಿದು ಬಂಗಾಳಕೊಲ್ಲಿ ಸಮುದ್ರಕ್ಕೆ ಸೇರುತ್ತದೆ. ದುರಾದೃಷ್ಟವಶಾತ್ ಭಾಗಮಂಡಲದಿಂದಲೇ ನದಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯದ ನೀರು ನೇರವಾಗಿ ಚರಂಡಿ ಮೂಲಕ ಕಾವೇರಿ ನದಿಗೆ ಸೇರ್ಪಡೆಗೊಳ್ಳುತ್ತಿದೆ. ಇದೇ ರೀತಿ ನಾಪೋಕ್ಲು, ಬೇತ್ರಿ, ಕೊಂಡಂಗೇರಿ, ನೆಲ್ಲಿಹುದಿಕೇರಿ,…

Read More

ಮಡಿಕೇರಿ ಅ.8 NEWS DESK : ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ  ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ  ಬಣ್ಣಿಸಿದರು. ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತಾಗಬೇಕು ಎಂದು…

Read More