ಮಡಿಕೇರಿ ನ.30 NEWS DESK : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಲೇಖಕ: admin
ಮಡಿಕೇರಿ ನ.30 NEWS DESK : ಅಂಚೆ ಅದಾಲತ್ನ ಮುಂದಿನ ಸಭೆಯು ಡಿ.23 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆಯ ಅಶೋಕ್ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 20 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, 23 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಗೋಣಿಕೊಪ್ಪ ನ.29 NEWS DESK : ಅತ್ತೂರು ಪಾಲ್ಮ್ ವ್ಯಾಲಿ ರೆಸಾರ್ಟ್ನಲ್ಲಿ ಆಯೋಜಿಸಿದ್ದ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ರಿಕೆಟ್ ಕಲರವಕ್ಕೆ 4 ತಂಡಗಳಿಗೆ 60 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಮಚ್ಚಮಾಡ ಅನೀಶ್ ಮಾದಪ್ಪ ಮಾಲೀಕತ್ವದ, ಸಂಚಾಲಕ ಸಣ್ಣುವಂಡ ಕಿಶೋರ್ ನಾಚಪ್ಪ, ಮುಸ್ತಪಾ ನಾಯಕತ್ವದ ತಾಳೇರಿ ಮೂಂದ್ನಾಡ್ ಮೀಡಿಯಾ, ಚಿಮ್ಮಣಮಾಡ ದರ್ಶನ್ ದೇವಯ್ಯ, ಸಂಚಾಲಕ ಎನ್. ಎನ್. ದಿನೇಶ್, ಹಾಗೂ ಆದರ್ಶ್ ನಾಯಕತ್ವದ ಕುತ್ತ್ನಾಡ್ ಮೀಡಿಯಾ ವಾರಿಯರ್ಸ್, ಪುತ್ತಂ ಪ್ರದೀಪ್ ನಾಯಕತ್ವದ, ಸಂಚಾಲಕ ಸಿಂಗಿ ಸತೀಶ್, ಮಂಡೇಡ ಅಶೋಕ್ ನಾಯಕತ್ವದ ಮರೆನಾಡ್ ಪ್ರೆಸ್ ಟೀಂ, ಆನಂದ್ಕುಮಾರ್ ಮಾಲೀಕತ್ವದ, ವಿ.ವಿ.ಅರುಣ್ ಕುಮಾರ್, ಜಯಪ್ರಕಾಶ್ ನಾಯಕತ್ವದ ಅಂಜಿಗೇರಿನಾಡ್ ಮೀಡಿಯಾ ಕಿಂಗ್ಸ್ ತಂಡಗಳಿಗೆ ಆಯ್ಕೆ ನಡೆಯಿತು. 60 ಆಟಗಾರರು ಬಿಡ್ಡೀಂಗ್ನಲ್ಲಿ ಭಾಗವಹಿಸಿದ್ದರು. ಜನವರಿ 5 ರಂದು ಹಾತೂರು ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಟೂರ್ನಿ ನಡೆಯುವ ಬಗ್ಗೆ ಘೋಷಿಸಲಾಯಿತು. ಪಾಲ್ಮ್ ವ್ಯಾಲಿ ರೆಸಾರ್ಟ್ ಉದ್ಯಮಿ ವಿಖ್ಯಾತ್ ಮಾಚಯ್ಯ ಆಟಗಾರರ ಪಟ್ಟಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ,…
ಮಡಿಕೇರಿ ನ.29 NEWS DESK : ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನುಗಳಿಗೆ ಮೂಲ ಸಂವಿಧಾನ. ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಹ ಸಂವಿಧಾನದ ಕೊಡುಗೆ. ಸಂವಿಧಾನದಲ್ಲಿ ಕೇವಲ ಹಕ್ಕುಗಳನ್ನು ಮಾತ್ರ ನೀಡದೆ, ಕರ್ತವ್ಯಗಳನ್ನು ನೀಡಿದ್ದು ಅದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಪ್ರತಿಯೊಬ್ಬರಿಗೂ ವಿಶೇಷ ಪ್ರತಿಭೆ ಇದ್ದು, ಅದನ್ನು ಪ್ರದರ್ಶಿಸಲು ಸಹ ಸಂವಿಧಾನ ಮೂಲ ಕಾರಣ ಎಂದರು. ಶಿಕ್ಷಣವೆಂದರೆ ಕೇವಲ ಕಲಿಕೆಯಾಗದೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದರು. ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್ ಮಾತನಾಡಿ, ಸಂವಿಧಾನ ದಿನವನ್ನು ಪ್ರತಿಯೊಬ್ಬರೂ ಹಬ್ಬದಂತೆ…
ಮಡಿಕೇರಿ ನ.29 NEWS DESK : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಸಲಹೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಹಾಗೆಯೇ ಗುರುತಿನ ಚೀಟಿಯನ್ನು ಶುಕ್ರವಾರ ವಿತರಿಸಿ ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ತಿಳಿಸಲಾಗಿದೆ. ಆದ್ದರಿಂದ ಮೂಲಭೂತ ಹಕ್ಕು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆ ದಿಸೆಯಲ್ಲಿ ಕಾನೂನು ಸೇವಾ ಪ್ರಾಧಿಕಾರವು ಕಾನೂನಿನ ಅರಿವು ಮತ್ತು ನೆರವು ನೀಡುತ್ತಿದೆ ಎಂದರು. ಕಾನೂನು ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಕಟ್ಟಕಡೆಯ ವ್ಯಕ್ತಿಗೂ ಸಹ ಕಾನೂನಿನ ಬಗ್ಗೆ ಅರಿವಿನ ಮಾಹಿತಿ ನೀಡುವಂತಾಗಬೇಕು ಎಂದು ಪ್ರಧಾನ ಜಿಲ್ಲಾ…
ಮಡಿಕೇರಿ ನ.29 NEWS DESK : ಬೆಂಗಳೂರು ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಬಸವನಹಳ್ಳಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ 15 ದಿನಗಳ ನಾಟಕ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ನಾಟಕ ಮಂಡಳಿಯ ನಿರ್ದೇಶಕರಾದ ಡಾಕ್ಟರ್ ಜಾಹಿದಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿಶೇಷ ಕಲೆಗಳು ಅಡಕವಾಗಿದ್ದು, ಅವುಗಳನ್ನು ಸೂಕ್ತ ತರಬೇತಿ ಮೂಲಕ ಹೊರ ತೆಗೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಹಾಗೂ ಕಲಿಕೆಯ ಕಡೆಗೆ ಮಕ್ಕಳನ್ನು ಆಕರ್ಷಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಮಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟಕ ನಿರ್ದೇಶಕರಾದ ರಾಜೇಂದ್ರ ಪ್ರಸಾದ್, ಶಾಲಾ ಮುಖ್ಯೋಪಾಧ್ಯಾಯರಾದ ರವಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ತಾವು ಕಲಿತ ನಾಟಕವನ್ನು ಪ್ರದರ್ಶಿಸಿದರು.
ಮಡಿಕೇರಿ ನ.29 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾಮದ ಮನೆಯೊಂದರ ಆವರಣದಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪಲು ನಿವಾಸಿ ವಿ.ಬಿ.ಮುತ್ತಣ್ಣ(68) ಬಂಧಿತ ಆರೋಪಿಯಾಗಿದ್ದು, 5 ಕೆ.ಜಿ 500ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮನೆಯ ಕಾಂಪೌಂಡ್ ಒಳಗೆ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ವಿರಾಜಪೇಟೆ ಗ್ರಾಮಾಂತರ ಠಾಣಾ ಎಸ್ಐ ವಾಣಿಶ್ರೀ ಬಿ.ಎಸ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ಮಡಿಕೇರಿ ನ.29 NEWS DESK : ಕರಿಕೆ ಗ್ರಾ.ಪಂ ವ್ಯಾಪ್ತಿಯ ಪಚ್ಚೆ ಪಿಲಾವು, ದೊಡ್ಡಚೇರಿ, ಪಳ್ಳಿ ಕಳ, ಚೆತ್ತುಕಯ ಭಾಗದಲ್ಲಿ ಉಪಟಳ ನೀಡುತ್ತಿರುವ ಚಿರತೆಯನ್ನು ಸೆರೆ ಹಿಡಿಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲು ಕರಿಕೆ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಚಿರತೆ ದಾಳಿ ಕುರಿತು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹೆಚ್ಚುವರಿ ಬೋನ್ ಅಳವಡಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಚಿರತೆ ಭೀತಿಯ ಕುರಿತು ವಿವರಿಸಿದರು.
ಮಡಿಕೇರಿ ನ.29 NEWS DESK : ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರಿಕೆ- ಭಾಗಮಂಡಲ ರಾಜ್ಯ ಹೆದ್ದಾರಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರಿಕೆಯಲ್ಲಿ ಭೂಮಿಪೂಜೆ ನೆರವೇರಿಸಿದ ಶಾಸಕರು ಗುಣಮಟ್ಟದ ಕಾಮಗಾರಿ ನಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಕರಿಕೆ ಗಡಿ ಭಾಗದಲ್ಲಿರುವ ಪಂಚಾಯಿತಿಯ ಬಸ್ ನಿಲ್ದಾಣದ ಜಾಗವನ್ನು ಪರಿಶೀಲಿಸಿದ ಅವರು ಬಸ್ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗುವುದು, ಗಡಿಭಾಗ ಚೆಂಬೇರಿಯಲ್ಲಿ ಕರ್ನಾಟಕಕ್ಕೆ ಸ್ವಾಗತ ದ್ವಾರವನ್ನು ನಿರ್ಮಿಸಲಾಗುವುದು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ.ದೇವರಾಜ್, ಜಿಲ್ಲಾ ಸರಕಾರಿ ವಕೀಲ ಎನ್.ಶ್ರೀಧರನ್ ನಾಯರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ, ಸದಸ್ಯರುಗಳಾದ ಆಯಿಷಾ ಎಂ.ಹೆಚ್, ಪಿ.ಪಿ.ರಾಜಕುಮಾರ,…
ಮಡಿಕೇರಿ ನ.29 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು ಸಂಸ್ಥೆಗಳ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ಕಾಂತೂರು-ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖ್ಯಾತ ಇ.ಎನ್.ಟಿ ವೈದ್ಯ ಡಾ.ಮೋಹನ್ ಅಪ್ಪಾಜಿ, ಕ.ಸಾ.ಪ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಆಡಳಿತಾಧಿಕಾರಿ ಅಕ್ಷತಾ…






