ಲೇಖಕ: admin

ಮಡಿಕೇರಿ NEWS DESK ಅ.9 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೃತಿಕ ಸಮಿತಿ  ವತಿಯಿಂದ ಅ.9 ರಂದು ಸಂಜೆ 6 ಗಂಟೆಗೆ ವಿವಿಧ ನೃತ್ಯ ವೈಭವ ಗಮನ ಸೆಳೆಯಲಿದೆ. ರಾಷ್ಟ್ರೀಯ ಖ್ಯಾತಿಯ ಕೋಟೆರ ಯಾಮಿನಿ ಮುತ್ತಣ್ಣ ಮತ್ತು ಶಿಷ್ಯೆಯರಿಂದ “ದೇವಿ ಮಾರ್ಗಂ ನೃತ್ಯರೂಪಕ”, ವಿಂಗ್ಸ್ ಆಫ್ ಫ್ಯಾಷನ್ ತಂಡದಿಂದ ನೃತ್ಯ ಸೌರಭ, ನಾದ ವಿದ್ಯಾಲಯ ಮೈಸೂರು ತಂಡದಿಂದ ನೃತ್ಯರೂಪಕ-ಮಹಿಷಾಸುರ ಮರ್ದಿನಿ, ಕೂರ್ಗ್ ಮೆಲೋಡೀಸ್ ಮಡಿಕೇರಿ ತಂಡದಿಂದ ಸಂಗೀತ ರಸಮಂಜರಿ, ಯಶಸ್ವಿ ಡ್ಯಾನ್ಸ್ ಗ್ರೂಪ್ ಮಂಗಳೂರು ತಂಡದಿಂದ ಕಡಲ ಹಬ್ಬ ನೃತ್ಯ ಸಂಭ್ರಮ, ನಿತ್ಯ ನಿರಂತರ ಮೈಸೂರು ವಿಶೇಷ ಚೇತನ ಮಕ್ಕಳಿಂದ ಕರ್ನಾಟಕ ವೈಭವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ NEWS DESK ಅ.8 : ಸುಂಟಿಕೊಪ್ಪದ ಪನ್ಯ ಗ್ರಾಮ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿದೆ. ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಮಾರು 4 ದಿನಗಳ ಹಿಂದೆ ದೇಹವನ್ನು ಸುಟ್ಟಿರುವ ಶಂಕೆ ಇದ್ದು, ಇದೊಂದು ಕೊಲೆ ಪ್ರಕರಣವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಡಿವೈಎಸ್‌ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Read More

ಸಿದ್ದಾಪುರ ಅ.8 NEWS DESK : ನವಪಲ್ಲವ ಸಾಹಿತ್ಯ ವೇದಿಕೆ ಹಾಗೂ ನೆಲ್ಲಿಹುದಿಕೇರಿ ಕೆ.ಪಿ.ಎಸ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಲೇಖಕಿ ಎಂ.ಬಿ.ಜಯಲಕ್ಷ್ಮಿ ವಸಂತ್ ಹೊಸಮನೆ ಅವರು ರಚಿಸಿರುವ “ಸಾಂಚವ್ಯ” ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ನೆಲ್ಲಿಹುದಿಕೇರಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಡಿಕೇರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ ಪುಸ್ತಕ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ಸಾಹಿತ್ಯ ಪರಿಷತ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಸೋಮವಾರಪೇಟೆ ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ಗೋಣಿಕೊಪ್ಪಲಿನ ಸಂಗನಗೌಡ ಪಾಟೀಲ್ ಪಾಲ್ಗೊಂಡಿದ್ದರು. ವಸಂತ್ ಕುಮಾರ್ ಹೊಸಮನೆ ಸ್ವಾಗತಿಸಿ,…

Read More

ಪುತ್ತೂರು ಅ.8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು 30 ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿಯನ್ನು ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 623 ಅರ್ಹ ವಿದ್ಯಾರ್ಥಿಗಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ವಾರ್ಷಿಕ 15 ಲಕ್ಷ ರೂಪಾಯಿಗಳ ಸಂಬಳವನ್ನು ನೀಡುವ ಒಪ್ಪಂದದೊಂದಿಗೆ ನೇಮಕಾತಿ ಪ್ರಕ್ರಿಯೆಯು ನಡೆಯಿತು. ಪ್ರಥಮ ಸುತ್ತಿನ ಪರೀಕ್ಷೆಯ ನಂತರ 102 ವಿದ್ಯಾರ್ಥಿಗಳನ್ನು ಮುಂದಿನ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ದ್ವಿತೀಯ ತಾಂತ್ರಿಕ ಸುತ್ತಿನ ಬಳಿಕ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ 5 ವಿದ್ಯಾರ್ಥಿಗಳ ಸಹಿತ 20 ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು. ನಂತರ ಪ್ರತಿ ವಿದ್ಯಾರ್ಥಿಗಳ ಜತೆಗೆ ಮುಖಾ ಮುಖಿ…

Read More

ಮಡಿಕೇರಿ ಅ.8 NEWS DESK : ಮಾಯಮುಡಿಯ ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ವಿವಿಧ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕೋಲುಬಾಣೆ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಾಳಪಂಡ ಟಿ.ಟಿಪ್ಪು ಬಿದ್ದಪ್ಪ ಅವರು, ಯುವ ಸಮೂಹ ಕ್ರೀಡೆಗೆ ಹೆಚ್ಚು ಮಹತ್ವ ನೀಡಬೇಕು. ಮೊಬೈಲ್ ಹವ್ಯಾಸದಿಂದಾಗಿ ಕ್ರೀಡೆ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಒಳ್ಳೆಯ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಹಿರಿಯ ಸದಸ್ಯ ಚೆಪ್ಪುಡಿರ ಕಿಟ್ಟು ಅಯ್ಯಪ್ಪ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಪರಸ್ಪರ ಸ್ನೇಹ, ಸೌಹಾರ್ಧತೆ ಬೆಳೆಯುತ್ತದೆ ಎಂದರು. ಕ್ರೀಡಾ ಕಾರ್ಯದರ್ಶಿ ಆಪಟ್ಟೀರ ಎಸ್.ಟಾಟು ಮೊಣಪ್ಪ, ಉಪಾಧ್ಯಕ್ಷ ನಾಮೇರ ರವಿ ದೇವಯ್ಯ, ಕಾರ್ಯದರ್ಶಿ ಎಸ್.ಎಸ್.ಸುರೇಶ್, ಕಾಳಪಂಡ ಸಿ.ನರೇಂದ್ರ, ಆಪಟ್ಟೀರ ಎ.ಬೋಪಣ್ಣ, ಎಸ್.ವಿ.ಮಂಜುನಾಥ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.…

Read More

ಮಡಿಕೇರಿ ಅ.8 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಶ್ರೀಧರ ಹೆಗಡೆ ಅವರಿಗೆ ಲಾಲ್ ಬಹದ್ದೂರ್ ಶಾಸ್ತ್ರಿ ಹಿಂದಿ ಅನುವಾದ ಪುರಸ್ಕಾರ ಲಭಿಸಿದೆ. ರಾಜ್ಯ ಮಟ್ಟದ ಈ ಪುರಸ್ಕಾರವನ್ನು ಬೆಂಗಳೂರು ವಿಶ್ವ ವಿದ್ಯಾಲಯದ ಹಿಂದಿ ವಿಭಾಗ ನೀಡಿ ಗೌರವಿಸಿದೆ. ಪ್ರೊ.ಡಾ.ಶ್ರೀಧರ ಹೆಗಡೆ ಅವರು ಕುವೆಂಪು ಅವರ ನಾಟಕ “ಬಲಿದಾನ” ವನ್ನು ಹಿಂದಿ ಭಾಷೆಗೆ ಅನುವಾದ ಮಾಡಿದ್ದಾರೆ. ಈ ಕೃತಿಗೆ ಲಾಲ್ ಬಹದ್ದೂರ್ ಶಾಸ್ತ್ರಿ ಹಿಂದಿ ಅನುವಾದ ಪುರಸ್ಕಾರ ಸಿಕ್ಕಿರುವುದರಿಂದ ಕನ್ನಡ ಮತ್ತು ಹಿಂದಿ ಭಾಷೆ ಬಾಂಧವ್ಯವೂ ಹೆಚ್ಚಿದಂತ್ತಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತರಾದ ಡಾ.ಶ್ರೀಧರ ಹೆಗಡೆ ಅವರು 22 ಕ್ಕಿಂತ ಹೆಚ್ಚು ಕೃತಿಗಳನ್ನು ಕನ್ನಡದಲ್ಲಿ ಮತ್ತು 15 ಕ್ಕಿಂತ ಹೆಚ್ಚು ಕೃತಿಗಳನ್ನು ಹಿಂದಿ ಭಾಷೆಯಲ್ಲಿ ರಚಿಸಿದ್ದಾರೆ. ಅಲ್ಲದೆ ಕನ್ನಡದಿಂದ ಹಿಂದಿ ಭಾಷೆಗೆ 10ಕ್ಕಿಂತ ಅಧಿಕ ಹಾಗೂ ಹಿಂದಿಯಿಂದ ಕನ್ನಡಕ್ಕೆ 5 ಕ್ಕಿಂತ ಹೆಚ್ಚು ಕೃತಿಗಳನ್ನು ಅನುವಾದಿಸಿ ಕನ್ನಡ ಮತ್ತು ಹಿಂದಿ ಸಾಹಿತ್ಯದ ಪರಿಚಯ ಮಾಡಿ…

Read More

ಮಡಿಕೇರಿ ಅ.8 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯು 49ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಕೂಪದಿರ ಅಯ್ಯಪ್ಪ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‍ಗಳನ್ನು ಬಳಸಲಾಗುತ್ತಿದ್ದು, ಶ್ರೀ ಕೃಷ್ಣನ ಬಾಲಲೀಲೆ ಹಾಗೂ ಕಂಸವಧೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಕಳೆಯಗಂ ಲೈಟಿಂಗ್ ಬೋರ್ಡ್ ಅಳವ ಡಿಸಲಿದ್ದು, ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆಯನ್ನು ಬೆಂಗ ಳೂರಿನ ಪಿಎಸ್‍ಎಲ್ ಸಂಸ್ಥೆ ಒದಗಿಸಲಿದೆ. ಪ್ಲಾಟ್ ಫಾರಂ ನಿರ್ಮಾಣ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಸಮಿತಿ ಸದಸ್ಯರೇ ಮಾಡಲಿದ್ದಾರೆ. 19 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಸಮಿತಿಯ ಆಲ್ವಿನ್, ರಾಕಿ ಮತ್ತು ಸದಸ್ಯರು ಕಲಾಕೃತಿ ಗಳನ್ನು ರಚಿಸಲಿದ್ದಾರೆ. ಕಲಾಕೃತಿಗಳಿಗೆ ಚಲನ – ವಲನವನ್ನು ಸಮಿತಿಯ ಪ್ರಸಾದ್ ಆಚಾರ್ಯ, ಮನೋಜ್ ತಂಡ ನೀಡಲಿದೆ. ಫೈರ್ ವರ್ಕ್ ಹಾಗೂ ಸ್ಪೆಷಲ್ ಎಫೆಕ್ಟನ್ನು ಬೆಂಗಳೂರಿನ ಆಲ್ಫಾ ಇವೆಂಟ್ ತಂಡ ನೀಡಲಿದೆ. ಒಟ್ಟು 25 ಲಕ್ಷ ವೆಚ್ಚದಲ್ಲಿ…

Read More

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅ.9 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಅ.8 NEWS DESK : ನಗರದ ಶ್ರೀ ಕೋದಂಡ ರಾಮ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. 50ನೇ ವರ್ಷದ ಆಚರಣೆಯಲ್ಲಿ ಶ್ರೀ ರಾಮನಿಂದ ರಾವಣನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಕುಶಾಲ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‍ನ ಡೇವಿಡ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. 27 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಹಾಗೂ ಸಮಿತಿ ಸದಸ್ಯರು ಕಲಾಕೃತಿಗಳನ್ನು ರಚಿಸಲಿದ್ದಾರೆ. ಟೀಂ ಜೆವೈಸಿ ಕಲಾಕೃತಿಗಳಿಗೆ ಚಲನವಲನ ನೀಡಲಿದೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಸಮಿತಿಯ ಹೇಮರಾಜ್, ವಿವೇಕ್, ಮಂಜಿ, ರವೀಂದ್ರ ತಂಡದವರು ಮಾಡಲಿದ್ದಾರೆ. ಸೋಮವಾರಪೇಟೆಯ ಲೋಬೋ ಧ್ವನಿವರ್ಧಕ ಒದಗಿಸಲಿದ್ದು, ಮಡಿಕೇರಿಯ ಗೌತಮ್ ಮತ್ತು ಸಂದೇಶ್ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆ ಮಾಡಲಿದ್ದಾರೆ. ಸಮಿತಿ ಸದಸ್ಯರೆ ಪ್ಲಾಟ್‍ಫಾರಂ ನಿರ್ಮಾಣ ಮಾಡಲಿದ್ದಾರೆ. 25 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಕಳೆದ ಬಾರಿ ಪ್ರಥಮ ಬಹುಮಾನ ಪಡೆದಿದ್ದು, ಈ ಬಾರಿಯೂ ಜನಾಕರ್ಷಣೆಯೊಂದಿಗೆ ಬಹುಮಾನಕ್ಕೆ ಪೈಪೋಟಿ…

Read More

ಮಡಿಕೇರಿ ಅ.8 NEWS DESK : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ-ತೋಟಗಾರಿಕೆ ಮೇಳವು ಅ.18 ರಿಂದ 21 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ನವಿಲೆ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

Read More