ಮಡಿಕೇರಿ ಅ.8 NEWS DESK : ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 106ನೇ ವರ್ಷದ ಉತ್ಸವ ಆಚರಣೆ ತಯಾರಿ ನಡೆಸುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ಗಳನ್ನು ಬಳಸಲಾಗುತ್ತಿದ್ದು, ಕಾಳಿಂಗ ಮರ್ದನ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಕೊಪ್ಪಳದ ಪದ್ಮ ಎಲೆಕ್ಟ್ರಿಕಲ್ಸ್ನವರು ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟ್ ವ್ಯವಸ್ಥೆ ಮಾಡಲಿದ್ದಾರೆ. 28 ಕಲಾ ಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಆರ್.ಬಿ.ರವಿ ಕ್ರಿಯೇಷನ್ಸ್ರವರು ಕಲಾಕೃತಿಗಳನ್ನು ರಚಿಸಲಿದ್ದಾರೆ. ಪ್ಲಾಟ್ಫಾರಂ ನಿರ್ಮಾಣ, ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಮಡಿಕೇರಿಯ ಪುಣ್ಯ ಕ್ರಿಯೇಷನ್ಸ್ನ ಪ್ರಮೋದ್ ಮತ್ತು ತಂಡದವರು ಮಾಡಲಿದ್ದಾರೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್ನ್ನು ಮಡಿಕೇರಿಯ ಗಣೇಶ್ ಬೆಳವಾಯಿ, ಕಿರಣ್, ಸೋಮ, ನಿತಿಶ್ ತಂಡ ಮಾಡಲಿದ್ದು, ಬೆಂಗಳೂರಿನ ಗನ್ ಅನಿಲ್ ಸ್ಪೆಷಲ್ ಎಫೆಕ್ಟ್ ಕಲ್ಪಿಸಲಿದ್ದಾರೆ. ಒಟ್ಟು 16 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಪಡೆಯುವುದರ ಜೊತೆಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗುವುದು. ಮಂಗಳೂರಿನ ನಾಸಿಕ್ ಬ್ಯಾಂಡ್ ಮಂಟಪವನ್ನು…
ಲೇಖಕ: admin
ಮಡಿಕೇರಿ ಅ.8 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನ.5 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ,…
ಮಡಿಕೇರಿ NEWS DESK ಅ.8 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಆರನೇ ದಿನವಾದ ಇಂದು ಮಹಾಲಕ್ಷ್ಮಿ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಅ.9 ರಂದು ಶಾರದ ದೇವಿಯ ಅಲಂಕಾರ ನಡೆಯಲಿದೆ.
ಮಡಿಕೇರಿ ಅ.8 NEWS DESK : ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ಮಡಿಕೇರಿ ದಸರಾ ಸಮಿತಿ ಹಾಗೂ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಗಾನ ಸುಧೆಯೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸೋನಿ ಟಿ.ವಿ.ರಿಯಾಲಿಟಿ ಶೋ, ಸೂಪರ್ ಸ್ಟಾರ್ ಸಿಂಗರ್ ಪ್ರಶಸ್ತಿ ವಿಜೇತ ಅವಿರ್ಭವ್ ಅವರ ಗಾನ ಸುಧೆ ಎಲ್ಲರ ಗಮನ ಸೆಳೆಯಿತು. ಕೊಡಗು ಪತ್ರಕರ್ತರ ಸಂಘದ ಸದಸ್ಯರಿಂದ ಸಂಗೀತ ರಸಮಂಜರಿ, ಕುಶಾಲನಗರದ ಏಂಜಲ್ ವಿಂಗ್ಸ್ ತಂಡ, ಮಡಿಕೇರಿ ನಾಟ್ಯನಿಕೇತನ, ಕಿಂಗ್ಸ್ ಆಫ್ ಕೂರ್ಗ್ ತಂಡ ಸೇರಿದಂತೆ ವಿವಿಧ ತಂಡದಿಂದ ಸಾಂಸ್ಕೃತಿಕ ವೈವಿದ್ಯಮಯ ಕಾರ್ಯಕ್ರಮ ನಡೆಯಿತು.
ಮೈಸೂರು NEWS DESK ಅ.7 : ಮೈಸೂರಿನಲ್ಲಿ ನಡೆದ 6 ನೇ ಪೊಲೀಸ್ ಕರ್ತವ್ಯ ಕೂಟದಲ್ಲಿ ಕೊಡಗಿಗೆ GOLD-5 SILVER-2 BRONZE-2 TROPHY-1 ಪ್ರಶಸ್ತಿ ಲಭಿಸಿದೆ. Best Dog Of The Meet, Dog Name-Copper, Manamohan B P AHC01 Dar. ASC Room Search 1st Jithendra Rai K R ARSI Dar. Crime Dog 1st Siddanagouda Patil APC Dar. Narcotic Dog 1st Dog-Copper Manamohan B P AHC 01 Dar. Police Portrait Parley Test 1st Place Sunil Kumar P M CHC198 Ktps. Computer Typing Speed and Ms Office 1st Ayisha Bhagamandala. Police Photography 2nd Place-Swamy K K CPC 9. Police Videography 2nd Place Ajay CHC438 Cen Ps. Computer Awareness Typing Speed And Ms Office 3rd Sumanth CPC…
ಮಡಿಕೇರಿ NEWS DESK ಅ.7 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಉನ್ನತೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿ.ಪಂ ಕಚೇರಿ ಎದುರು ಒಕ್ಕೂಟದ ಪ್ರಮುಖರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಅಧಿಕಾರಿಗಳು ಹಾಗೂ ಪಿಡಿಒಗಳ ಮೇಲೆ ಆಗುತ್ತಿರುವ ಒತ್ತಡ ನಿಲ್ಲಬೇಕು, ಪಂಚಾಯತ್ ಕಾರ್ಯನಿರ್ವಹಣೆ ಕುರಿತು ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು, ತಾ.ಪಂ ಸಹಾಯಕ ನಿದೇಶಕರ ಹುದ್ದೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳ ಹುದ್ದೆ ಎಂದು ಪರಿಗಣಿಸಬೇಕು, ವೇತನ ಶ್ರೇಣಿಯಲ್ಲಿ ಆಗಿರುವ ತಾರತಮ್ಯವನ್ನು ತಕ್ಷಣ ಸರಿಪಡಿಸಬೇಕು, 15 ರಿಂದ 20 ವರ್ಷಗಳಿಂದ ಉಪಕಾರ್ಯದರ್ಶಿ ವೃಂದದಲ್ಲಿ ಸೇವೆ ಸಲ್ಲಿಸಿದವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗೆ ಬಡ್ತಿ ನೀಡಬೇಕು, ಪಂಚಾಯತ್ ಆಡಳಿತ ಸೇವೆ ಜಾರಿಗೊಳಿಸಬೇಕು, ಎಲ್ಲಾ ಸಿಬ್ಬಂದಿಗಳಿಗೆ ವೇತನ ಶ್ರೇಣಿ ನಿಗದಿಪಡಿಸಬೇಕು, ಡಿ.ಇ.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಅನುಮೋದನೆ ನೀಡಬೇಕು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು…
ಸೋಮವಾರಪೇಟೆ NEWS DESK ಅ.7 : ಭಾರತ ಆಧ್ಯಾತ್ಮಿಕ ದೇಶವಾಗಿದ್ದು, ಇಡೀ ಪ್ರಪಂಚಕ್ಕೆ ಜ್ಞಾನ ಹಂಚುವ ಶಕ್ತಿಯಿದೆ. ಆಧುನಿಕ ಯುಗದಲ್ಲಿ ಮನಸ್ಸುಗಳು ಹಂಚಿಹೋಗಿದ್ದು, ಇವುಗಳನ್ನು ಒಂದುಗೂಡಿಸುವ ಶಕ್ತಿ ಆಧ್ಯಾತ್ಮಿಕಕ್ಕೆ ಇದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೈಸೂರು ವಲಯದ ಪ್ರಧಾನ ಸಂಚಾಲಕಿ ಬಿ.ಕೆ.ಲಕ್ಷ್ಮಿ ಅಭಿಪ್ರಾಯಪಟ್ಟರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಪಟ್ಟಣದ ಅಟಲ್ಜೀ ಕನ್ನಡ ಭವನದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆಧ್ಯಾತ್ಮಿಕ ಜ್ಞಾನದಿಂದ ಜೀವನದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ನಕಾರಾತ್ಮಕ ಚಿಂತನೆಯಿಂದ ದೂರ ಉಳಿಯಲು ಇದು ಸಹಕಾರಿಯಾಗಿದೆ. ಕರ್ಮದಲ್ಲಿ ಶುದ್ಧತೆಯಿಟ್ಟುಕೊಳ್ಳಬೇಕು. ಕರ್ಮ ಶ್ರೇಷ್ಠತೆ ಮಾತ್ರ ಮಾನವನನ್ನು ಮರಣಾನಂತರವೂ ಹಿಂಬಾಲಿಸುತ್ತದೆ ಎಂದು ತಿಳಿ ಹೇಳಿದರು. ಜೀವನವನ್ನು ಸುಧಾರಿಸಿಕೊಳ್ಳಲು ಭಗವಂತನು ಕಲಿಸುವ ರಾಜಯೋಗವು ಸಹಕಾರಿಯಾಗುತ್ತದೆ. ದಿನದ 24 ಗಂಟೆಯಲ್ಲಿ ಒಂದು ಗಂಟೆಯನ್ನು ಆಧ್ಯಾತ್ಮಿಕ ಪ್ರವಚನ ಕೇಳಲು ಮೀಸಲಿಟ್ಟರೆ ಆರೋಗ್ಯ, ನೆಮ್ಮದಿ ಲಭಿಸುತ್ತದೆ. ರಾಜಯೋಗ ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದ ಜೊತೆಗೆ ವ್ಯಸನಮುಕ್ತ ಆಂದೋಲನವನ್ನು ನಡೆಸಲಾಗುತ್ತಿದೆ ಎಂದರು. ಅ.12ರವರೆಗೆ ಜರುಗಲಿರುವ…
ಸೋಮವಾರಪೇಟೆ NEWS DESK ಅ.7 : ನಿವೇಶನ ರಹಿತ ಕಾರ್ಮಿಕರಿಗೆ ಸರ್ಕಾರ ಉಚಿತ ನಿವೇಶನ ನೀಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಸಿ.ಪಿ.ಐ) ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ, ಜೇಸಿ ವೇದಿಕೆಯಲ್ಲಿ ಧರಣಿ ನಡೆಸಲಾಯಿತು. ಕಕ್ಕೆಹೊಳೆ ಜಂಕ್ಷನ್ನಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಕೂಲಿ ಕಾರ್ಮಿಕರ ಪರವಾಗಿ ಘೋಷಣೆ ಕೂಗಿದರು. ಜೇಸಿ ವೇದಿಕೆಗೆ ಆಗಮಿಸಿದ ಉಪ ತಹಶೀಲ್ದಾರ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ಕೊಡಗಿನಾದ್ಯಂತ ಗುರುತು ಮಾಡಿರುವ ಸರ್ಕಾರಿ ಪೈಸಾರಿ ಜಾಗಗಳನ್ನು ಶ್ರೀಮಂತರು ಒತ್ತುವರಿ ಮಾಡಿಕೊಂಡಿದ್ದಾರೆ. ಅಕ್ರಮ ಒತ್ತುವರಿಯನ್ನು ಸರ್ಕಾರ ತೆರವು ಮಾಡಿಸುವುದನ್ನು ಬಿಟ್ಟು, ಒತ್ತುವರಿ ಮಾಡಿಕೊಂಡವರಿಗೆ ಲೀಸ್ಗೆ ಕೊಡಲು ತಂತ್ರ ರೂಪಿಸುತ್ತಿದೆ ಎಂದು ಸಿ.ಪಿ.ಐ ಜಿಲ್ಲಾ ಸಹ ಕಾರ್ಯದರ್ಶಿ ಎಚ್.ಎಂ.ಸೋಮಪ್ಪ ಆರೋಪಿಸಿದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಬಡವ ಇನ್ನೂ ಬಡವನಾಗಿಯೇ ಉಳಿದಿದ್ದಾನೆ. ಸರ್ಕಾರವೂ ಎಲ್ಲರಿಗೂ ಸೂರು ಎಂದು ಭರವಸೆಗಳನ್ನು ಮಾತ್ರ ನೀಡುತ್ತಿದೆ. ಬಡ ಕೂಲಿ ಕಾರ್ಮಿಕರನ್ನು ಶೋಷಣೆ ಮಾಡಿ ಭೂ ಮಾಲೀಕರಿಗೆ ಪೂರಕವಾದ ನಿಯಮಗಳನ್ನು…
ಮಡಿಕೇರಿ NEWS DESK ಅ.7 : ದೀರ್ಘಕಾಲಿಕವಾದ “ಕಾಫಿ ಕೃಷಿ”ಯ ಬಗ್ಗೆ ಕಾಫಿ ಬೆಳೆೆಗಾರರಲ್ಲಿ ಯಾವುದೇ ಗೊಂದಲ ಅಥವಾ ಆತಂಕ ಬೇಡ, ಈ ಕೃಷಿಯನ್ನು ನಂಬಿ ಮುಂದುವರೆಯಿರಿ ಎಂದು ಸಕಲೇಶಪುರದ ಪ್ರಗತಿಪರ ಕೃಷಿಕ ಧರ್ಮರಾಜ ಅವರು ಕರೆ ನೀಡಿದ್ದಾರೆ. ಮಡಿಕೇರಿ ದಸರಾ ಸಮಿತಿಯಿಂದ ಆಯೋಜಿತ ಕಾಫಿ ದಸರಾದ ದ್ವಿತೀಯ ದಿನದಂದು ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರಮುಖ ಬೆಳೆಯಾಗಿ ಕಾಫಿ ಕೃಷಿಯನ್ನು ನಡೆಸುವುದರೊಮದಿಗೆ ಮಿಶ್ರ ಬೆಳೆಯಾಗಿ ಇತರೆ ಬೆಳೆಗಳನ್ನು ನಿಮಗೆ ಅಗತ್ಯವಿರುವಷ್ಟು ಬೆಳೆಯಿರಿ. ಆದರೆ, ಕಾಫಿಗೆ ಪರ್ಯಾಯವಾಗಿ ಬಟರ್ ಫ್ರೂಟ್ ಇನ್ನಿತರ ಬೆಳೆಗಳನ್ನು ದೀರ್ಘ ಕಾಲಿಕವಾಗಿ, ದೊಡ್ಡ ಪ್ರಮಾಣದಲ್ಲಿ ಬೆಳೆಯುವುದು ಸುಲಭ ಸಾಧ್ಯವಲ್ಲವೆಂದು ಅಭಿಪ್ರಾಯಿಸಿ, ಯಾವುದೇ ರೀತಿಯ ವೈಫರೀತ್ಯಗಳ ನಡುವೆಯೂ ಕಾಫಿ ಕೃಷಿ ಬೆಳೆÉಗಾರರನ್ನು ಕೈ ಬಿಟ್ಟಿಲ್ಲವೆಂದು ನುಡಿದರು. ಪೋಷಕಾಂಶಗಳನ್ನು ಬಗ್ಗೆ ನಿಗಾ ಇರಲಿ- ಪ್ರಸ್ತುತ ಕಾಫಿ ಬೆಳೆಗಾರರು ತಾವು ಯಾವ ರೀತಿಯಲ್ಲಿ ಕೃಷಿ ನಡೆಸಬೇಕು, ರಾಸಾಯನಿಕ ಗೊಬ್ಬರಗಳನ್ನು ಬಳಸಿ ಕೃಷಿ ಮಾಡಬೇಕೆ,…
ಮಡಿಕೇರಿ ಅ.7 NEWS DESK : ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸುತ್ತಿದ್ದು, ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ಎರಡು ದಿನಗಳ ಕಾಲ ಏರ್ಪಡಿಸಲಾಗಿದ್ದ ಮೊದಲ ವರ್ಷ ಕಾಫಿ ದಸರಾ ಕಾರ್ಯಕ್ರಮದಲ್ಲಿ ಕಾಫಿ ಹಾಗೂ ವಿವಿಧ ಕೃಷಿ ಸಂಬಂಧಿಸಿದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಗೆ ಕಾಫಿ ದಸರಾವು ಒಂದು ವೇದಿಕೆಯಾಗಿದ್ದು, ಕಾಫಿ ಕೃಷಿಯಲ್ಲಿ ಕೊಡಗಿನ ಜನರು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕಿದೆ ಎಂದು ಡಾ.ಮಂತರ್ ಗೌಡ ಸಲಹೆ ಮಾಡಿದರು. ಕಾಫಿ ದಸರಾ ವಿಚಾರ ಸಂಕಿರಣದಲ್ಲಿ ವಿವಿಧ ತಜ್ಞರು, ವಿಜ್ಞಾನಿಗಳು, ಕೃಷಿಕರು ಪಾಲ್ಗೊಂಡು ಕಾಫಿ ಉತ್ತೇಜನ ಸಂಬಂಧಿಸಿದಂತೆ ಹಲವು ಅಭಿಪ್ರಾಯ, ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ತಜ್ಞರ ಅಭಿಪ್ರಾಯವನ್ನು ಕ್ರೊಢೀಕರಿಸಿ ಕಾಫಿ ಬೆಳೆಯಲ್ಲಿ ಮತ್ತಷ್ಟು ಉತ್ತಮ ಇಳುವರಿ…






