ಮಡಿಕೇರಿ ಅ.7 NEWS DESK : ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಶ್ರೀಕಾವಾಡಿ ಭಗವತಿ ದೇವಸ್ಥಾನದ ಸುತ್ತಮುತ್ತ ದೇವರಕಾಡು ಇದ್ದು, ಇದರಲ್ಲಿ ಒಂದು ಏಕರೆಯನ್ನು ಹಿಂದೂ ರುದ್ರಭೂಮಿಗಾಗಿ ನೋಂದಣಿ ಮಾಡಿಕೊಳ್ಳಲು ಕೊಡಗು ಜಿ.ಪಂ ಅನುಮತಿ ನೀಡಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ದೇವಸ್ಥಾನದ ಆಡಳಿತ ಮಂಡಳಿ, ಅಮ್ಮತ್ತಿ ರೈತ ಸಂಘ, ಅಖಿಲ ಕೊಡವ ಸಮಾಜ ಹಾಗೂ ಅಮ್ಮತ್ತಿ ಕೊಡವ ಸಮಾಜದ ಪದಾಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮ್ಮತ್ತಿ ರೈತ ಸಂಘದ ಕಾನೂನು ಸಲಹೆಗಾರ ಬಿದ್ದಂಡ ಸಿ.ಸುಬ್ಬಯ್ಯ ಅವರು, ಕಾರ್ಮಾಡು ಪಂಚಾಯಿತಿ ವ್ಯಾಪ್ತಿಯ ಕುಂಬೇರಿ ಗ್ರಾಮದಲ್ಲಿ ಹಿಂದೂ ಸ್ಮಶಾನಕ್ಕೆಂದು 1.70 ಏಕರೆ ಜಾಗವಿದ್ದರೂ ದೇವರಕಾಡಿನಲ್ಲಿ ಮತ್ತೆ ಸ್ಮಶಾನಕ್ಕೆ ಜಾಗ ನೀಡಿರುವುದನ್ನು ಎಲ್ಲರೂ ವಿರೋಧಿಸುತ್ತೇವೆ. ಸಿಇಓ ಅವರು ನೀಡಿದ ಅನುಮತಿಯನ್ನು ತಕ್ಷಣ ಹಿಂಪಡೆದು ದೇವರಕಾಡನ್ನು ಹಾಗೆಯೇ ಉಳಿಸಲು ಕ್ರಮ ಕೈಗೊಳ್ಳಬೇಕು ಎಂದರು. ಕೊಡಗಿನ ಎಲ್ಲಾ ಊರು ಊರಿನಲ್ಲಿರುವ ದೇವಸ್ಥಾನಗಳಿಗೆ ದೇವರ ಕಾಡು ಇದ್ದು, ಅದನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರಿನವರು ಪುರಾತನ ಕಾಲದಿಂದಲೂ ಪೋಷಿಸಿ, ಸಂರಕ್ಷಿಸಿ…
ಲೇಖಕ: admin
ಮಡಿಕೇರಿ ಅ.7 NEWS DESK : ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.8 ರಂದು 7 ನೇ ವಷ೯ದ ಮಹಿಳಾ ದಸರಾ ಆಯೋಜಿಸಲಾಗಿದ್ದು, ವೈವಿಧ್ಯಮಯ ಸ್ಪಧೆ೯ಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ. ಮಹಿಳಾ ದಸರಾ ಅಂಗವಾಗಿ ಮಡಿಕೇರಿ ನಗರಸಭೆಯ ಸದಸ್ಯೆಯರು, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪಧೆ೯ಗಳು, ಕಾಯ೯ಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿತವಾಗಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಮೆಹಂದಿ ಹಾಕುವ ಸ್ಪರ್ಧೆ, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಒಂಟಿ ಕಾಲಿನ ಓಟ, ಕಪ್ಪೆ ಜಿಗಿತ, ಕೇಶವಿನ್ಯಾಸ, ಗಾರ್ಭ ನೃತ್ಯ, ಸೀರೆಗೆ ನಿಖರ ಬೆಲೆ ಹೇಳುವ ಸ್ಪರ್ಧೆ, 60 ವರ್ಷ ಮೇಲ್ಪಟ್ಟವರಿಗೆ ಅಜ್ಜಿ ಜೊತೆ ಮೊಮಕ್ಕಳ ನಡಿಗೆ, ವಾಲಗ ನೃತ್ಯ, ಕಣ್ಣಿಗೆ ಬಟ್ಟೆ ಕಟ್ಟಿ…
ಸುಂಟಿಕೊಪ್ಪ ಅ.7 NEWS DESK : ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಂತರ ಸೋಮವಾರಪೇಟೆ ತಾಲೂಕಿನ ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕೆ.ಎಸ್.ಕಾರ್ಯಪ್ಪ (76) ಅವರು ಮುಂಜಾನೆ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಅ.8 ರಂದು ವಿರಾಜಪೇಟೆ ತಾಲೂಕಿನ ಹಾತೂರಿನಲ್ಲಿ ನಡೆಯಲಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ನಿವೃತ್ತ ಶಿಕ್ಷಕ ಕೆ.ಎಸ್.ಕಾರ್ಯಪ್ಪ ಆಗಲಿಕೆಗೆ ಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ವಿರಾಜಪೇಟೆ ಅ.7 NEWS DESK : ಮಾನವೀಯತೆಗಿಂತ ಮಿಗಿಲಾದ ನೈತಿಕತೆ ಬೇರೆ ಇಲ್ಲ ಎಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಲುಬ್ನಾ ಝಕಿಯಾ ಹೇಳಿದ್ದಾರೆ. ವಿರಾಜಪೇಟೆ ಸಮೀಪದ ಅರಮೇರಿ ಶ್ರೀ ಕಳಂಚೇರಿ ಮಠದಲ್ಲಿ ಮಾಸಿಕ ತತ್ವ ಚಿಂತನ ಗೋಷ್ಠಿ ಹೊಂಬೆಳಕಿನ 224ನೇಯ ಕಿರಣ ಕಾರ್ಯಕ್ರಮದಲ್ಲಿ “ನೈತಿಕತೆಯೇ ಸ್ವಾತಂತ್ರ್ಯದ ಭರವಸೆ” ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾಜದಲ್ಲಿ ಅನೈತಿಕತೆಗೆ ಕಾರಣವಾಗುವ ಎಲ್ಲಾ ಹಾದಿಗಳಿಗೆ ಕಡಿವಾಣ ಹಾಕಲು ಕಾನೂನು ನಿರ್ಮಾಣ ಆಗಬೇಕು. ಮಾನವ ನಿರ್ಮಿತ ಕಾನೂನುಗಳಿಗಿಂತ ದೇವ ನಿರ್ಮಿತ ಕಾನೂನುಗಳು ಕೆಡುಕುಗಳನ್ನು ತಡೆಯುತ್ತವೆ. ಮನುಷ್ಯ ತಾನೊಬ್ಬ ಉತ್ತರದಾಯಿತ್ವವಿರುವ ಪ್ರಜೆ ಎಂಬುದನ್ನು ಮರೆತು ಬಿಟ್ಟಿರುವುದು ಕೆಡುಕುಗಳಿಗೆ ಕಾರಣವಾಗಿದೆ. ಹೊಣೆಗಾರಿಕೆಯಿಂದ ಜಾರುವ ಮನೋಧರ್ಮ ಇಂದಿನ ಪೀಳಿಗೆಯ ಮುಖಮುದ್ರಯೆನಿಸಿಬಿಟ್ಟಿದೆ. ಇಂದು ವಿಶ್ವವು ನೈತಿಕ ದಿವಾಳಿತನವನ್ನು ಅತಿಯಾಗಿ ಎದುರಿಸುತ್ತಿದೆ. ಆಧುನಿಕತೆಯು ಪ್ರಗತಿಪರ ಎಂಬ ವಾದದೊಂದಿಗೆ ನೈತಿಕತೆಯ ಎಲ್ಲೆಗಳನ್ನು ಮೀರಲಾಗುತ್ತಿದೆ” ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆÉಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ.ಕಾವೇರಿ “ನೈತಿಕತೆ…
ಮಡಿಕೇರಿ ಅ.7 NEWS DESK : ಬಲ್ಲಮಾವಟಿಯ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಅ.29 ರಿಂದ ನ.2ರವರೆಗೆ ನಾಲ್ನಾಡ್ ವ್ಯಾಪ್ತಿಯ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಈ ಪಂದ್ಯಾವಳಿಯನ್ನು ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ಬಲ್ಲಮವಾಟಿಯ ನೇತಾಜಿ ವಿದ್ಯಾಸಂಸ್ಥೆಯ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದರು. ಹಾಕಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದ್ದು, ನಾಲ್ನಾಡ್ ವ್ಯಾಪ್ತಿಯ 16 ತಂಡಗಳು ಭಾಗವಹಿಸಲಿವೆ. ಮುಂದಿನ ದಿನಗಳಲ್ಲಿ ಶಾಲೆಯ ಬೇಸಿಗೆ ರಜೆಯ ದಿನಗಳಲ್ಲಿ ಕಿರಿಯ ಮಕ್ಕಳಿಗೆ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುವುದೆಂದು ತಿಳಿಸಿದರು. ಕಾರ್ಯದರ್ಶಿ ಚಂಗೇಟಿರ ಸೋಮಣ್ಣ ಮಾತನಾಡಿ, ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಈ ಪಂದ್ಯಾವಳಿಯ ಪ್ರಯೋಜಕರಾಗಿದ್ದು, ಹಾಕಿ ಪಂದ್ಯಾವಳಿಯ ಪ್ರಥಮ ಸ್ಥಾನದ ಟ್ರೋಫಿಯನ್ನು ನೆಲಜಿ ಗ್ರಾಮದ ಮಾಳೆಯಂಡ ದಿ.ಲಲಿತ ಚೋಂದವ್ವ ಜ್ಞಾಪಕಾರ್ಥವಾಗಿ ಅವರ…
ಮಡಿಕೇರಿ ಅ.7 NEWS DESK : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೃಸೂರು ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿರುವ ಪಂಚ ಕವಿ ಗೋಷ್ಠಿಗೆ ಕೊಡವ ಭಾಷೆಯ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ. ಅ.8 ರಂದು ನಡೆಯಲಿರುವ ನಾಲ್ಕನೇ ದಿನದ ಸಮಷ್ಟಿ ಬಹುಭಾಷಾ ಕವಿಗೋಷ್ಠಿಯಲ್ಲಿ ಮದೋಷ್ ಪೂವಯ್ಯ ಕೊಡವ ಭಾಷೆಯನ್ನು ಪತಿನಿಧಿಸುತ್ತಿದ್ದಾರೆ.
ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದುರ್ಗಾದೇವಿಗೆ ಬಾಳೆ ಎಲೆ ಅಲಂಕಾರ ಮಾಡಲಾಯಿತು. ವಿವಿಧೆಡೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀ ಶಕ್ತಿಪಾರ್ವತಿ ದೇವಿಗೆ ಕುಂಕುಮ ಅಲಂಕಾರ ಮಾಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೋಮವಾರಪೇಟೆ ಅ.7 NEWS DESK : ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ನಿರ್ವಹಣೆ ಹಾಗೂ ವ್ಯವಹಾರಕ್ಕಾಗಿ ಸೋಮವಾರಪೇಟೆ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ದೊರೆಯಿತು. ಕೊಡಗು ಜಿಲ್ಲೆ ಸಹಕಾರ ಬ್ಯಾಂಕಿನ 99ನೇ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶರತ್ ಶೇಖರ್ ಅವರಿಂದ ಮಾದಾಪುರ ಸಂಘದ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಹಾಗೂ ಸಿಇಒ ಕಾವೇರಪ್ಪ 25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಬಾಂಡ್ ಗಣಪತಿ ಇದ್ದರು.
ಮಡಿಕೇರಿ ಅ.7 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವ ನರ್ತನವನ್ನು ಮನರಂಜನೆಗಾಗಿ ಬಳಸಿಕೊಂಡು ಅಪಮಾನಿಸಲಾಗಿದೆ ಎಂದು ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಅವರು ದೈವ ನರ್ತನ ಎನ್ನುವುದು ತುಳುನಾಡು ಹಾಗೂ ಕರಾವಳಿ ಭಾಗದ ದೈವಶಕ್ತಿಯ ಆರಾಧನೆ, ಸಂಸ್ಕೃತಿ ಮತ್ತು ಸಂಪ್ರದಾಯವಾಗಿದೆ. ಇದನ್ನು ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಮನರಂಜನೆಗಾಗಿ ಬಳಸಿಕೊಂಡು ದೈವ ಆರಾಧಕರು ಹಾಗೂ ದೈವ ನರ್ತಕರಿಗೆ ಮಾನಸಿಕವಾಗಿ ನೋವುಂಟು ಮಾಡುವುದು ಖಂಡನೀಯವೆಂದರು. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇದಿಕೆಯಲ್ಲಿ ನೃತ್ಯ ತಂಡಗಳು ದೈವ ನರ್ತನವನ್ನು ತಮಗಿಷ್ಟ ಬಂದಂತೆ ಬಳಸಿಕೊಂಡು ಸಂಪ್ರದಾಯಕ್ಕೆ ಅಪಚಾರವೆಸಗಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಖಂಡನೆ ವ್ಯಕ್ತವಾಗಿದೆ. ಕೊಡಗಿನಲ್ಲಿ ನಮ್ಮ ಸಂಘ ಮನರಂಜನೆಗಾಗಿ ದೈವ ವೇಷ ತೊಟ್ಟು ನರ್ತನ ಮಾಡುವುದನ್ನು ಅನೇಕ ಬಾರಿ ವಿರೋಧಿಸುತ್ತಲೇ ಬಂದಿದೆ. ಶಾಲಾ ಕಾಲೇಜುಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಹಿಂದೆ ಸರ್ಕಾರ…






