ಲೇಖಕ: admin

ಸೋಮವಾರಪೇಟೆ ಅ.7 NEWS DESK : ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್ ಆಗ್ರಹಿಸಿದರು. ಕೂತಿ ಗ್ರಾಮದ ಸಮುದಾಯಭವನದಲ್ಲಿ ನಡೆದ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಅವರೊಂದಿಗೆ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರರ ಸಂಕಷ್ಟವನ್ನು ಹೇಳಿದರು. ಕಾಫಿಯನ್ನು ಆಹಾರ ಬೆಳೆಯೆಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದರೆ ಮಾತ್ರ, ಕಾಫಿ ಬೆಳೆಗಾರರಿಗೆ ಸೂಕ್ತ ಸೌಲಭ್ಯಗಳು ಸಿಗುತ್ತವೆ. ವಿಶೇಷ ಸವಲತ್ತುಗಳನ್ನು ಒದಗಿಸದಿದ್ದರೆ ಮುಂದಿನ ಕೆಲವೇ ವರ್ಷಗಳಲ್ಲಿ ಕೊಡಗಿನ ಕಿತ್ತಳೆಯಂತೆ ಕಾಫಿಯೂ ಕಣ್ಮರೆಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಹೇಳಿದರು. ಕಾಫಿ ಹೂ ಅರಳುವ ಸಂದರ್ಭದಲ್ಲಿ ನಿಗದಿತ ಸಮಯದಲ್ಲಿ ಹೂಮಳೆ ಬೀಳುವುದಿಲ್ಲ. ಮತ್ತು ಬ್ಯಾಕಿಂಗ್ ಮಳೆ ಸಿಗುವುದಿಲ್ಲ. ಈ ಕಾರಣದಿಂದ ಬಹುತೇಕ ಸಣ್ಣ ಬೆಳೆಗಾರರು ಬೋರ್‍ವೆಲ್‍ಗಳಿಂದ ನೀರನ್ನು ಹಾರಿಸಿ, ಕಾಫಿ ಹೂ ಅರಳಿಸಬೇಕಾಗಿದೆ. ಈ ಕಾರಣದಿಂದ ಸಂಕಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರ ಎಲ್‍ಟಿ4ಸಿ ಪಂಪ್‍ಸೆಟ್‍ಗಳಿಗೆ ಯಾವುದೇ ಷರತ್ತುಗಳಿಲ್ಲದೆ ಉಚಿತ ವಿದ್ಯುತ್…

Read More

ಮಡಿಕೇರಿ ಅ.7 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಸಿ ಮತ್ತು ಡಿ ಭೂಮಿಯಲ್ಲಿ ಬದುಕು ಕಟ್ಟಿಕೊಂಡಿರುವ ಬಡವರ ಜಮೀನುಗಳನ್ನು ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಮೈಸೂರು ವಿಭಾಗದ ಅರಣ್ಯ ವ್ಯವಸ್ಥಾಪನಾಧಿಕಾರಿಗಳು ಗ್ರಾ.ಪಂ ಗಳಿಗೆ ಸುತ್ತೋಲೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದ ಸರ್ವೆ ನಂಬರ್ 55ರ ಒಟ್ಟು ವಿಸ್ತೀರ್ಣ 109.44 (ಹೆಕ್ಟೇರುಗಳಲ್ಲಿ) ಜಮೀನುಗಳನ್ನು ಕರ್ನಾಟಕ ಅರಣ್ಯ ಅಧಿನಿಯಮ 1963ರ ಕಲಂ-05 ರನ್ವಯ ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಎಂದು ಅರಣ್ಯ ವ್ಯವಸ್ಥಾಪನಾಧಿಕಾರಿಯಾಗಿರುವ ನಿವೃತ್ತ ಕೆಎಎಸ್ ಅಧಿಕಾರಿ ರೇಣುಕಾಂಬ ಅವರು ಮಕ್ಕಂದೂರು ಗ್ರಾ.ಪಂ ಗೆ 2024 ಜುಲೈ 5ಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಇದೇ ರೀತಿಯ ಸುತ್ತೋಲೆ ಜಿಲ್ಲೆಯ ಇನ್ನಿತರ ಗ್ರಾ.ಪಂ ಗಳಿಗೂ ಕಳುಹಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಇದನ್ನು ಸ್ಪಷ್ಟಪಡಿಸಿಕೊಳ್ಳಲು ತಾವು ಹಾಗೂ ಗ್ರಾಮಸ್ಥರು ರೇಣುಕಾಂಬ…

Read More

ಮಡಿಕೇರಿ ಅ.7 NEWS DESK : ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಅಸಾಧಾರಣ ಸಾಧನೆಗಾಗಿ ಕೊಡಗಿನ ಮೂಕಳೇರ ಟೈನಿ ಪೂಣಚ್ಚ ಅವರು “ಪುನೀತ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ಡಾ.ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ ಅಂಗವಾಗಿ ಚಲನಚಿತ್ರ ಮತ್ತು ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿಯ ವತಿಯಿಂದ ಧಾರವಾಡದಲ್ಲಿ ಅ.27, 28 ಮತ್ತು 29 ರಂದು ಜರುಗುವ “ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್” ಕಾರ್ಯಕ್ರಮದಲ್ಲಿ  ಮೂಕಳೇರ ಟೈನಿ ಪೂಣಚ್ಚ ಅವರಿಗೆ “ಪುನೀತ”ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಂಡಳಿಯ ಪ್ರಮುಖರು ತಿಳಿಸಿದ್ದಾರೆ.

Read More

ಮಡಿಕೇರಿ ಅ.7 NEWS DESK : ನಗರದ ನಾಲ್ಕು ಶಕ್ತಿ ದೇವಾಲಯಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯ 94ನೇ ವರ್ಷದ ದಸರಾ ಉತ್ಸವಕ್ಕೆ ಸಜ್ಜಾಗುತ್ತದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ರಮೇಶ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಕೌಶಿಕೆ ಮಹಾತ್ಮೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಜೆಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಿದ್ದು, ಸಮಿತಿ ಸದಸ್ಯರೇ ಪ್ಲಾಟ್‍ಫಾರಂ ನಿರ್ಮಿಸಲಿದ್ದಾರೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ವ್ಯವಸ್ಥೆಯನ್ನು ಮಡಿಕೇರಿಯ ಶಿವು ಇವೆಂಟ್ ಮ್ಯಾನೆಜ್‍ಮೆಂಟ್‍ನವರು ಒದಗಿಸಲಿದ್ದಾರೆ. 21 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕಲಾಕೃತಿಗಳ ರಚನೆ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಮಡಿಕೇರಿಯ ಆನಂದ್ ಆಟ್ರ್ಸ್‍ನವರು ಮಾಡಲಿದ್ದಾರೆ. ಮಡಿಕೇರಿಯ ಅಶ್ರಫ್ ಹಾಗೂ ಪ್ರಕಾಶ್ ಸ್ಪೆಷಲ್ ಎಫೆಕ್ಟ್ ನೀಡಲಿದ್ದಾರೆ. ಮಡಿಕೇರಿ ಓಜೋನ್ ಫ್ಯಾಬ್‍ನ ದಿನೇಶ್ ನಾಯರ್ ತಂಡ ಕಲಾಕೃತಿಗಳಿಗೆ ಚಲನವಲನ ನೀಡಲಿದೆ. ಒಟ್ಟು 27 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಪಡೆಯುವುದರೊಂದಿಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗವುದು ಎಂದು ರಮೇಶ್ ಮಾಹಿತಿ ನೀಡಿದರು.

Read More

ಮಡಿಕೇರಿ NEWS DESK ಅ.7 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಐದನೇ ದಿನವಾದ ಇಂದು ನಿಂಬೆ ಹಣ್ಣಿನ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಅ.8 ರಂದು ಮಹಾಲಕ್ಷ್ಮಿ ಅಲಂಕಾರ ನಡೆಯಲಿದೆ.

Read More

ಸಿದ್ದಾಪುರ ಅ.7 NEWS DESK :  ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಿದ್ದಾಪುರದಲ್ಲಿ 31ನೇ ವರ್ಷದ ಆಯುಧ ಪೂಜೆಯನ್ನು ಈ ಬಾರಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಲು ನಿರ್ಧರಿಸಲಾಗಿದ್ದು, ಸಿದ್ದತೆ ನಡೆಯುತ್ತಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್ ತಿಳಿಸಿದರು. ನಗರದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.11 ರಂದು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಮಕ್ಕಳ ಸೈಕಲ್ ನಿಧಾನ ಸ್ಪರ್ಧೆ, 16ವರ್ಷ ಮೇಲ್ಪಟ್ಟವರಿಗೆ ಯುವಕರಿಗೆ ರಸ್ತೆ ಓಟ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಆಯುಧ ಪೂಜೆ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಮಾತನಾಡಿ. ಸಾಂಸ್ಕೃತಿಕ ಕಾರ್ಯಕ್ರಮವು ನಾಲ್ಕು ವಿಭಾಗಗಳಲ್ಲಿ ನಡೆಯುತ್ತಿದ್ದು,  ಒಂದರಿಂದ ಏಳನೇ ತರಗತಿವರೆಗೆ ಭರತನಾಟ್ಯ, ಜಾನಪದ ನೃತ್ಯ ,ಸಾಮೂಹಿಕ ನೃತ್ಯ, ಪ್ರೌಢಶಾಲಾ ವಿಭಾಗದಲ್ಲಿ ಭರತನಾಟ್ಯ, ಜಾನಪದ ನೃತ್ಯ, ಸಾಮೂಹಿಕ ನೃತ್ಯ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಾಮೂಹಿಕ ನೃತ್ಯ, ಜಾನಪದ ನೃತ್ಯ , ನೃತ್ಯಶಾಲಾ ವಿಭಾಗದಲ್ಲಿ ಸಾಮೂಹಿಕ…

Read More

ನಾಪೋಕ್ಲು ಅ.7 NEWS DESK : ಬೆಂಗಳೂರು ಸೂರ್ಯ ಫೌಂಡೇಶನ್ ಮತ್ತು ಬೆಂಗಳೂರು ಸ್ಪಾರ್ಕ್ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಜಂಟಿ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮುಖ್ಯಶಿಕ್ಷಕರಿಗೆ ನೀಡುವ “ಶಿಕ್ಷಣ ಪ್ರಕಾಶ” ಪ್ರಶಸ್ತಿಗೆ ಕೊಡಗು ಜಿಲ್ಲೆಯಿಂದ ಮಡಿಕೇರಿ ತಾಲೂಕಿನ ಚೆಂಬು ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಸೋಮಣ್ಣ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅ.15 ರಂದು ಬೆಂಗಳೂರಿನಲ್ಲಿ ಜರುಗಲಿದೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಶಿಕ್ಷಕ ವೃಂದ, ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಅ.7 NEWS DESK : ಇಂದಿರಾ ನಗರದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಇಂದಿರಾನಗರ ವಿವೇಕಾನಂದ ಯುವಕ ಸಂಘದ ಪ್ರಮುಖ ಜಲೇಂದ್ರ ಮಾತನಾಡಿ, ರೂ.10 ಲಕ್ಷ ರೂ. ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದ್ದು, ಇಂದಿರಾನಗರದ ವಿವೇಕಾನಂದ ಯುವಕ ಸಂಘದ ಪದಾಧಿಕಾರಿಗಳು ಸಮುದಾಯ ಭವನದ ಅವಶ್ಯಕತೆ ಇದೆ ಎಂದು ಶಾಸಕ ಪೊನ್ನಣ ಅವರ ಗಮನ ಸೆಳೆದಿದ್ದರು. ಶಾಸಕರ ಮುತುವರ್ಜಿಯಿಂದ ಸಮುದಾಯ ಭವನಕ್ಕೆ ಅನುದಾನ ದೊರೆತಿದೆ. ನಾಡಿಗೆ ಶಾಸಕರಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನೆರವೇರಲಿ ಎಂದರು. ಸಂಘದ ಪರವಾಗಿ ಶಾಸಕಾರಿಗೆ ಹೂವಿನ ಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಕೆಡಿಪಿ ಸದಸ್ಯ ಎಂ.ಹೆಚ್.ಅಬ್ದುಲ್ ರಹಿಮಾನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕೊಡಗು ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ವೈ.ಸಿ.ಕತ್ತನಿರ, ಕೊಡಗು ಜಿಲ್ಲಾ ಕಾರ್ಮಿಕ ಸಂಘದ ಉಪಾಧ್ಯಕ್ಷ ಪರವಂಡ ಮಿರ್ಶಾದ್, ಕುಲ್ಲೇಟಿರ…

Read More

ಸುಂಟಿಕೊಪ್ಪ ಅ.7 NEWS DESK : ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಂಚಾಯಿತಿ ಸದಸ್ಯ ಹಾಗೂ ಗುಡ್ಡೆಹೊಸೂರು ಹೋಟೆಲ್ ಉದ್ಯಮಿ ಕುಡೆಕಲ್ ನಿತ್ಯಾನಂದ ಉಚಿತವಾಗಿ ಟಿಶರ್ಟ್‍ಗಳನ್ನು ವಿತರಿಸಿದರು. ಕಳೆದ 3 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಖಾಸಗಿ ಶಾಲೆಯ ಮಕ್ಕಳಂತೆ ಕಾಣಬೇಕೆಂಬ ಹಂಬಲದೊಂದಿಗೆ ಗಡ್ಡೆಹೊಸೂರು ಹೋಟೆಲ್ ಉದ್ಯಮಿ ನಿತ್ಯಾನಂದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 72 ಮಕ್ಕಳಿಗೆ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಟಿಶರ್ಟ್ ವಿತರಿಸಿದರು. ಬಸವನಹಳ್ಳಿ ಲ್ಯಾಂಪ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಅನಿಕುಮಾರ್ 50 ಮಕ್ಕಳಿಗೆ ಐಡಿ ಕಾರ್ಡ್‍ಗಳನ್ನು ವಿತರಿಸಿದರು. ಶಾಲಾ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಹಾಗೂ ಮಾಜಿ ಪ್ರದಾನಮಂತ್ರಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಅಂಗವಾಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮಕ್ಕಳಿಂದ ಗುಡ್ಡೆಹೊಸೂರಿನ ಪ್ರಮುಖ ಬೀದಿಗಳಲ್ಲಿ ಗಾಂಧಿಜಿಯ ಸ್ವಚ್ಛ ಭಾರತ ಕನಸಿನ ಸಂದೇಶ ಸಾರುವ ಕಾಲ್ನಡಿಗೆ ಜಾಥಾ ಅಭಿಯಾನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್. ನಾಗೇಂದ್ರ ವಹಿಸಿದ್ದರು.…

Read More

ಸುಂಟಿಕೊಪ್ಪ ಅ.7 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ 54ನೇ ವರ್ಷದ ಆಯುಧಪೂಜಾ ಸಮಾರಂಭದ ಅಂಗವಾಗಿ ಸಂಘದ ವತಿಯಿಂದ ಕುಶಾಲನಗರ ವಿಸನ್ಸ್‍ಸ್ಪ್ರಿಂಗ್ ಹಾಗೂ ಮಡಿಕೇರಿಯ ಆಶೋಧಯ ಸಮಿತಿ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಶಿಬಿರವನ್ನು ವಾಹನಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ಮಾತನಾಡಿದ ಅವರು ಗ್ರಾಮೀಣ ಬಡ ಜನರಿಗೆ ಸದುಪಯೋಗಗೊಳಿಸುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ 130ಕ್ಕೂ ಹೆಚ್ಚು ಮಂದಿ ಕಣ್ಣಿನ ತಪಾಸಣೆ ನಡೆಸಿಕೊಂಡಿದ್ದು, 80 ಮಂದಿಗೆ ಕನ್ನಡಕ ಹಾಗೂ 7 ಮಂದಿಗೆ ಕಣ್ಣಿನ ಪೊರೆ ಚಿಕಿತ್ಸೆಗೆಶಿಪಾರಸ್ಸು ಮಾಡಲಾಯಿತು. ಶಿಬಿರದಲ್ಲಿ ರಕ್ತದ ಒತ್ತಡ, ಹೆಚ್‍ಐವಿ, ಸಿಫಿಲಿಸ್ ಕಾಯಿಲೆಗಳ ತಪಾಸಣೆ ನಡೆಸಲಾಯಿತು. ತಜ್ಞ ವೈದ್ಯರಾದ ಪುಷ್ಪೆಂದ್ರಯಾಧವ್, ಪುಷ್ಪೇಂದ್ರ ಮಿಶ್ರ ಹಾಗೂ ಸಿಬ್ಬಂದಿಗಳು ತಪಾಣೆ ನಡೆಸಿದರು. ಈ ಸಂದರ್ಭ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಉಪಾಧ್ಯಕ್ಷ ಕೃಷ್ಣಪ್ಪ, ಕಾರ್ಯದರ್ಶಿ ರಕ್ಷಿತ್, ರಿಜ್ವಾನ್, ಬಸಪ್ಪ, ಶಕ್ತಿ…

Read More