ಲೇಖಕ: admin

ಸುಂಟಿಕೊಪ್ಪ ಅ.7 NEWS DESK : ನವರಾತ್ರಿ ಉತ್ಸವದ ಅಂಗವಾಗಿ ಶ್ರೀಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ 4ನೇ ದಿನ ಭಸ್ಮದ ಅಲಂಕಾರದಲ್ಲಿ ಗಮನ ಸೆಳೆಯಿತು. ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ಅವರ ನೇತೃತ್ವದಲ್ಲಿ ದೇವಿಗೆ ನೈವೇದ್ಯಪೂಜೆ, ಮಲ್ಲಿಗೆ ಹೂವಿನ ಪೂಜೆ, ಪುಷ್ಪರ್ಚನೆ, ಗಂಧದ ಅಭಿಷೇಕ ನಡೆಯಿತು. ಸಂಜೆ ವಿಶೇಷ ಪೂಜೆ ನೆರವೇರಿತು. ರಾತ್ರಿ ಮಹಾಪೂಜೆ, ಆರತಿ ಪೂಜೆ, ತುಪ್ಪದ ದೀಪ ಆರಾಧನೆ ನಡೆಯಿತು. ಹೋಬಳಿ ವ್ಯಾಪ್ತಿಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ವಿರಾಜಪೇಟೆ ಅ.7 NEWS DESK : ಸುಗಮ ಸಂಗೀತ 20ನೇ ಶತಮಾನದಲ್ಲಿ ಆರಂಭಗೊಂಡಿದ್ದು, ಇಂದು ವಿಶ್ವವ್ಯಾಪಿ ಯುವ ವರ್ಗದಿಂದ ಮುಪ್ಪಿನ ವರೆಗೂ ಮುದ ನೀಡುವ ಸಂಗೀತ ಪ್ರಕಾರವಾಗಿದೆ. ಸುಗಮ ಸಂಗೀತವನ್ನು ಉಳಿಸಿ ಬೆಳಸಬೇಕು ಎಂದು ನಿವೃತ್ತ ವೈದ್ಯಾಧಿಕಾರಿ ಮತ್ತು ಖ್ಯಾತ ಗಝಲ್ ಕವಿಗಳಾದ ಡಾ.ಶ್ರೀ ಶೈಲ ಮಾದಣ್ಣವರ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರು ಪ್ರಣವ ಸಂಗೀತ ಶಾಲೆ ವತಿಯಿಂದ ವಿರಾಜಪೇಟೆ ನಗರದ ಶ್ರೀ ರಾಜರಾಜೇಶ್ವರಿ ಸಭಾಂಗಣದಲ್ಲಿ ನಡೆದ ಪ್ರಥಮ ವಾರ್ಷಿಕ ಸಂಭ್ರಮಾಚರಣೆ  ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು  ಅವರು ಮಾತನಾಡಿದರು. ಪಾಶ್ಚಾತ್ಯ ಸಂಗೀತಕ್ಕೆ ಮಾರು ಹೋಗದೆ ನಾಡಿನ ದಿವ್ಯ ಪರಂಪರೆಯ ಸಂಸ್ಕೃತಿಗಳ ಭಾಗವಾದ ಕರ್ನಾಟಕ ಸಂಗೀತ, ಜನಪದ ಮತ್ತು ಸುಗಮ ಸಂಗೀತವನ್ನು ಅಭ್ಯಾಸ ಮಾಡಿ ಮುಂದಿನ ತಲೆಮಾರಿಗೂ ಮುಂದುವರೆಸುವ ಅನಿವಾರ್ಯ ಸಮಾಜಕ್ಕಿದೆ. ಯುವ ಜನತೆ ಸೇರಿದಂತೆ ಮುಪ್ಪಿನಲ್ಲಿರುವ ವ್ಯಕ್ತಿಗಳಿಗೂ ಮನಸ್ಸಿಗೆ ಮುದ ನೀಡುವ ಸಂಗೀತ ಸುಗಮ ಸಂಗೀತವಾಗಿದ್ದು, ಜನಪದ ಸಾಹಿತ್ಯಕ್ಕೆ ಹೊಸ ಲೇಪನ ಮಾಡಿ, ಹಾಡಿನ ಮೂಲಕ ಮೋಡಿ ಮಾಡುವ ಶಕ್ತಿ ಸುಗಮ…

Read More

ಮಡಿಕೇರಿ NEWS DESK ಅ.6 : ಮಡಿಕೇರಿ ದಸರಾ ಸಮಿತಿ ಮತ್ತು ಕ್ರೀಡಾ ಸಮಿತಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾಭವನದಲ್ಲಿ ಪತ್ರಕರ್ತರಿಗೆ ಭಾನುವಾರ ಟಿಟಿ, ಕೇರಂ ಹಾಗೂ ಚೆಸ್ ಸ್ಪರ್ಧೆ ನಡೆಯಿತು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ ಕರ್ಕೆರ ಮಾತನಾಡಿ, ಈಗಾಗಲೇ ತಾಲೂಕು ಮಟ್ಟದ ರಸ್ತೆ ಓಟ, ಮುಕ್ತ ಫುಟ್ಬಾಲ್ ಪಂದ್ಯಾಟ ನಡೆದಿದೆ. ಕೆಲವು ಸ್ಪರ್ಧೆಗಳು ಭಾನುವಾರ ನಡೆದಿದೆ. ಅದೇ ರೀತಿ ಪತ್ರಕರ್ತರಿಗಾಗಿ ವಿವಿದ ಕ್ರೀಡಾಕೂಟ ಆಯೋಜಿಸಲಾಗಿದೆ. ಅ.9 ರಂದು ಚೆಸ್ ಮತ್ತು ಕೇರಂ ಪಂದ್ಯಾಟ ನಡೆಯಲಿದೆ. ಅ.10 ರಂದು ಮ್ಯಾಟ್ ಕಬಡ್ಡಿ ನಡೆಯಲಿದೆ. ಕ್ರೀಡಾಕೂಟಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿ, ದಸರಾ ನಾಡ ಹಬ್ಬ. ಇಂತಹ ಸಂದರ್ಭ ಎಲ್ಲರನ್ನೂ ಒಗ್ಗೂಡಿಸಲು ದಸರಾ ಕ್ರೀಡಾ ಸಮಿತಿ ವತಿಯಿಂದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಒತ್ತಡದಲ್ಲಿರುವ ಪತ್ರಕರ್ತರಿಗೆ ಇಂದು ಕೊಂಚ ವಿರಾಮ…

Read More

ಮಡಿಕೇರಿ NEWS DESK ಅ.6 : ವಿಶ್ವದಲ್ಲಿಯೇ ವಿಶಿಷ್ಟವಾಗಿರುವ ಕೊಡವರ ಆಚಾರ ವಿಚಾರ ಹಾಗೂ ಸಂಸ್ಕೃತಿಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕುಟ್ಟಂಡ ಪ್ರಮೋದ್ ಮುತ್ತಪ್ಪ ತಿಳಿಸಿದ್ದಾರೆ. ಕೂಡಿಗೆಯ ಕೊಡವ ಕೂಟದ ವತಿಯಿಂದ ಸ್ಥಳೀಯ ರೈತ ಸಹಕಾರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕೈಲ್ದ್ ಪೊಳ್ದ್ ಸಂತೋಷ ಕೂಟ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೊಡವ ಕೂಟಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದರು. ಕೊಡಗ ಕೂಟದ ಅಧ್ಯಕ್ಷ ವಾಂಚೀರ ಮನು ನಂಜುಂಡ ಮಾತನಾಡಿ, ಕೊಡವರ ಜಮ್ಮಾ ಆಸ್ತಿಯನ್ನು ಪರಾಭಾರೆ ಮಾಡದೆ ಜೋಪಾನವಾಗಿ ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಯುವ ಸಮುದಾಯ ಕೊಡವ ಪರಂಪರೆ ಹಾಗೂ ಸಂಸ್ಕೃತಿಯ ವಾರಸುದಾರರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಕೊಡವ ಕೂಟದ ಕಾರ್ಯದರ್ಶಿ ಮುಂಡಂಡ ಸತೀಶ್, ಖಜಾಂಚಿ ದೇಯಂಡ ಪೊನ್ನಪ್ಪ, ನಿರ್ದೇಶಕರಾದ ಕೊಳುವಂಡ…

Read More

ಮಡಿಕೇರಿ NEWS DESK ಅ.6 : ಕೊಡಗು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಜೊತೆಗೆ ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಲಾಗಿರುವ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ಸಮಗ್ರ ಅಭಿವೃದ್ಧಿ ಬಗ್ಗೆ ತೋಟಗಾರಿಕೆ ಸಚಿವರ ಜತೆ ಚರ್ಚಿಸಲಾಗಿವುದು. ಹಾಗೆಯೇ ಕಾಫಿ ಬೆಳೆಗಾರರಿಗೆ ಮತ್ತಷ್ಟು ಸಹಕಾರಿ ಕಾರ್ಯಕ್ರಮಗಳನ್ನು ರೂಪಿಸಲು ಸಂಬಂಧಪಟ್ಟವರ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಅವರು ಹೇಳಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ…

Read More

ಕುಶಾಲನಗರ NEWS DESK ಅ.6 : ಮಕ್ಕಳು ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದ್ದಾರೆ. ಕುಶಾಲನಗರದ ಕೇರಳ ಸಮಾಜದ ವತಿಯಿಂದ ನಡೆದ ಓಣಂ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಓಣಂ ಆಚರಣೆ ಸುಂದರವಾದ ಆಚರಣೆ. ಮಲೆಯಾಳಿ ಸಮಾಜ ಕೇರಳದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಹೇಳಿದರು. ಹಿಂದೂ ಮಲೆಯಾಳಿ ಸಮಾಜದ ಕೊಡಗು ಜಿಲ್ಲಾಧ್ಯಕ್ಷ ವಿ.ಎಂ.ವಿಜಯ ಮಾತನಾಡಿ ಹಿಂದೂ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಮುರುಳಿ, ಮಡಿಕೇರಿ ಎಸ್‌ಎನ್‌ಡಿ ಪಿ ಅಧ್ಯಕ್ಷ ಹರೀಶ್ ಕುಮಾರ್, ವಾಸು, ಕೇರಳ ಸಮಾಜದ ಉಪಾಧ್ಯಕ್ಷ ಕೆ.ಬಾಬು, ಕಾರ್ಯದರ್ಶಿ ರಾಬಿನ್, ನಿರ್ದೇಶಕರಾದ ರಾಯ್, ಎಂ.ಜೆ.ಪ್ರಕಾಶ್, ಸುಶೀಲಾ,…

Read More

ವಿರಾಜಪೇಟೆ NEWS DESK ಅ.6 : ಸಂವಿಧಾನವನ್ನು ಓದಿ ಅರ್ಥೈಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕಾಲೇಜ್ ನ ಮಾನವ ಹಕ್ಕುಗಳ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ “ಭಾರತದ ಸಂವಿಧಾನದ ಮೂಲಾಂಶಗಳು” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತ ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಪ್ರಜಾಪ್ರಭುತ್ವಕ್ಕೆ ಸಂವಿಧಾನ ತಳಹದಿಯಾಗಿದೆ. ಸಂವಿಧಾನವನ್ನು ಓದದಿದ್ದರೆ ಕಾನೂನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದ್ದು, ಸಾಮಾಜಿಕ ನ್ಯಾಯದ ಅಂಶಗಳನ್ನು ಎತ್ತಿ ಹಿಡಿದಿದೆ. ಪ್ರತಿಯೊಬ್ಬರು ದೇಶದ ಇತಿಹಾಸ, ಆರ್ಥಿಕ ಪರಿಸ್ಥಿತಿ, ಕಾನೂನು, ಹಕ್ಕುಗಳು, ರಾಜಕೀಯ ಅಂಶಗಳನ್ನು ಓದಿ ತಿಳಿಯಬೇಕು. ಸಂವಿಧಾನಕ್ಕೆ ಗೌರವವನ್ನು ನೀಡುವ ಮೂಲಕ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಕರೆ ನೀಡಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ…

Read More

ವಿರಾಜಪೇಟೆ NEWS DESK ಅ.6 : ಪ್ರಜಾಪ್ರಭುತ್ವದ ಆರಂಭ ಮತ್ತು ಅರಿವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆ ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಕಾಲೇಜುಗಳಲ್ಲಿ ಚುನಾವಣೆಯ ಮೂಲಕವೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಎಲ್ಲರನ್ನು ಸಮಾನತೆಯಿಂದ ಕಾಣಬೇಕು, ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಅವರು ವಿದ್ಯಾರ್ಥಿ ಜೀವನ ಎಂದರೆ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು…

Read More

ಮಡಿಕೇರಿ NEWS DESK ಅ.6 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೖತಿಕ ಸಮಿತಿ  ವತಿಯಿಂದ ಅ.7 ರಂದು ಸೋಮವಾರ ಸಂಜೆ 6 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೋನಿ ರಿಯಾಲಿಟಿ ಶೋ ಸೂಪರ್ ಸ್ಟಾರ್ ಸಿಂಗರ್ ನ ವಿಜೇತ ಕೇರಳದ ಅವಿಭ೯ವ್  ಮತ್ತು ತಂಡದಿಂದ ಗಾನಸಂಭ್ರಮ ಆಯೋಜಿತವಾಗಿದೆ. ಕುಶಾಲನಗರದ ಏಂಜಲ್ ವಿಂಗ್ಸ್ ತಂಡದಿಂದ ನೖತ್ಯ ವೈವಿಧ್ಯ, ಕೊಡಗು ಪತ್ರಕತ೯ರ ಸಂಘ (ರಿ) ತಂಡದಿಂದ ಸಂಗೀತ ರಸಮಂಜರಿ, ನಾಟ್ಯ ನಿಕೇತನ ತಂಡದಿಂದ ನೖತ್ಯ ಸಂಗಮ, ಕಿಂಗ್ಸ್ ಆಫ್ ಕೂಗ್೯ ತಂಡದಿಂದ ನೖತ್ಯ ವೈವಿಧ್ಯ ಮತ್ತು ಇತರ ಸಾಂಸ್ಕೖತಿಕ ವೈವಿಧ್ಯಗಳು ಆಯೋಜಿತವಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕಾಫಿ ದಸರಾ ಅಂಗವಾಗಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೖಷಿಗೆ ಸಂಬಂಧಿಸಿದಂತೆ ನಡೆಯುವ ವಿಚಾರಸಂಕಿರಣದಲ್ಲಿ     ಕೖಷಿ ರಂಗದ ಪರಿಣಿತರಾದ ಧಮ೯ರಾಜ್, ಡಾ ಕೆಂಚರೆಡ್ಡಿ, ಕೆ ಕೆ ವಿಶ್ವನಾಥ್, ನಡಿಕೇರಿಯಂಡ ಬೋಸ್ ಮಂದಣ್ಣ,  ಖಲಿಸ್ತಾ ಡಿಸೋಜಾ, ಡಾ,ಶಿವಪ್ರಸಾದ್, ಮಿಲನಾ…

Read More

ಮಡಿಕೇರಿ NEWS DESK ಅ.6 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭರ್ತಿಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬAಧಿಸಿದAತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಕಾಫಿ ದಸರಾದಲ್ಲಿ…

Read More