ಲೇಖಕ: admin

ಮಡಿಕೇರಿ NEWS DESK ಅ.6 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.  9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ…

Read More

ಮಡಿಕೇರಿ NEWS DESK ಅ.6 : ಕಿತ್ತೂರು ಉತ್ಸವ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡರು. ಕಿತ್ತೂರು ಜ್ಯೋತಿ ರಥಯಾತ್ರೆಗೆ ಪುಷ್ಪನಮನ ಸಲ್ಲಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರು ಬೀಳ್ಕೊಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಯಯ್ಯ, ಶಿರಸ್ತೆದಾರ ದೇವರಾಜು, ಮಂಜುನಾಥ್ ಇತರರು ಇದ್ದರು.

Read More

ಮಡಿಕೇರಿ NEWS DESK ಅ.6 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ನಾಲ್ಕನೇ ದಿನವಾದ ಇಂದು ವಿಶೇಷ ಖಾದ್ಯಗಳ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ.

Read More

ಮಡಿಕೇರಿ NEWS DESK ಅ.5 : ವರ್ಣರಂಜಿತವಾಗಿ ನಡೆದ ಮಡಿಕೇರಿ ಮಕ್ಕಳ ದಸರಾದಲ್ಲಿ ಆಯೋಜಿಸಲಾಗಿದ್ದ ಛದ್ಮವೇಷ ಸ್ಪರ್ಧೆಯಲ್ಲಿ 5 ರಿಂದ 7 ನೇ ತರಗತಿ ವಿಭಾಗದಲ್ಲಿ ಹಾಕತ್ತೂರು ಗ್ರಾಮದ ವರ್ಷಿತ ಹೆಚ್.ವಿ ಪ್ರಥಮ ಬಹುಮಾನ ಗೆದ್ದಿದ್ದಾಳೆ. ವೆಂಕಟೇಶ್ ಹಾಗೂ ವನಿತಾ ದಂಪತಿಯ ಪುತ್ರಿ ವರ್ಷಿತ ಶಿಲಾ ಬಾಲಿಕೆ ವೇಷ ಧರಿಸಿ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು.

Read More

ಮಡಿಕೇರಿ NEWS DESK ಅ.5 : ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ತಿತಿಮತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ.…

Read More

ಮಡಿಕೇರಿ ಅ.5 NEWS DESK : ರಾಮೇಶ್ವರ ‌ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ವಿಷಯಗಳ ಕುರಿತಾದ ಸಂವಾದ ಕಾರ್ಯಕ್ರಮವು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್, ಸಹಕಾರ ಸಂಘದ ಬೆಳೆವಣಿಗೆ, ಆಡಳಿತ ಮಂಡಳಿಯ ಮುಖೇನ ಸಂಘದ ಅಭಿವೃದ್ಧಿಗೆ ಹಮ್ಮಿಕೊಳ್ಳುವ ವಿವಿಧ ಯೋಜನೆ, ಸಹಕಾರ ತತ್ವದ ನಿಯಮಾನುಸಾರ ಕೈಗೊಳ್ಳುವ ವಿಷಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಹಾಜರಿದ್ದ ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾದ ಪ್ರಶ್ನೆಗಳಿಗೆ ಮತ್ತು ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಸಂವಾದದಲ್ಲಿ ‌ಕೇಳಿದ ‌ ಪ್ರಶ್ನೆಗಳಿಗೆ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್  ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ  ನಿರ್ದೇಶಕರಾದ ನಾಗರಾಜು, ಕೆ.ಪಿ.ರಾಜು, ಕೆ.ಬಿ.ರಾಮಚಂದ್ರ, ಜಯಶ್ರೀ, ಎಸ್.ಎಸ್.ಕೃಷ್ಣ, ಜಿಲ್ಲಾ ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ.ರೇಣುಕಾ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪಿ.ಮೀನಾ,…

Read More

ಮಡಿಕೇರಿ ಅ.5 NEWS DESK : ಮಡಿಕೇರಿ ದಸರಾದಲ್ಲಿ ಅ.6 ರಂದು ಬೆಳಗ್ಗೆ 10 ಗಂಟೆಗೆ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮಕ್ಕೆ ಚಾಲನೆ ದೊರಕುತ್ತಿದೆ, ಶಾಸಕ ಡಾ.ಮಂತರ್ ಗೌಡ ಮಾಗ೯ದಶ೯ನದಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯು ಜಿಲ್ಲಾಧಿಕಾರಿ ಮತ್ತು ನಗರ ದಸರಾ ಸಮಿತಿ ಸಹಯೋಗದಲ್ಲಿ ಕಾಫಿ ದಸರಾಕ್ಕೆ ಸವ೯ಸಿದ್ದತೆ ಕೈಗೊಂಡಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ಮಾಹಿತಿ ನೀಡಿದ್ದಾರೆ. ಈ ವಷ೯ದಿಂದ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದಂತೆ ಅನೇಕ ಮಾಹಿತಿ ಕೖಷಿಕರಿಗೆ ದೊರಕಲಿದೆ, ಜಿಲ್ಲೆಯ 12 ಮಂದಿ ಸಾಧಕ ಕೖಷಿಕರನ್ನೂ ಕಾಫಿ ದಸರಾ ಸಂದಭ೯ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ, ಈಗಾಗಲೇ 32 ಮಳಿಗೆಗಳು ಭತಿ೯ಯಾಗಿದ್ದು, ಕಾಫಿ, ಹೈನುಗಾರಿಕೆ,…

Read More

ಮಡಿಕೇರಿ ಅ.5 NEWS DESK : ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಂಡೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆತ್ಮಸಾಕ್ಷಿ ಇದ್ದರೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಗರಣಗಳು ನಡೆಯುತ್ತಿವೆಯೇ ಹೊರತು ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮ, ಎಸ್‍ಸಿ, ಎಸ್‍ಟಿ ಅನುದಾನ ದುರ್ಬಳಕೆ ಸೇರಿದಂತೆ ಮುಡಾ ಹಗರಣವೂ ಬೆಳಕಿಗೆ ಬಂದಿದೆ. ಅಧಿವೇಶನದಲ್ಲಿ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಸಿಎಂ ಪಲಾಯನವಾದ ಮಂಡಿಸಿದ್ದಾರೆ. ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಮುಖವಾಡದ ರಾಜಕಾರಣ ಮಾಡಿದ್ದಾರೆ ಎನ್ನುವುದು ಇದೀಗ ಸಾಬೀತಾಗಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದರು.…

Read More

ಮಡಿಕೇರಿ ಅ.5 NEWS DESK : ಮಡಿಕೇರಿ ನಗರ ದಸರಾ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ಮಡಿಕೇರಿಯ ಮಕ್ಕಳ ದಸರಾದಲ್ಲಿ ವಿವಿಧ ಸ್ಪಧೆ೯ಗಳಲ್ಲಿನ ಬಹುಮಾನ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಮಕ್ಕಳ ಸಂತೆ :: ಎಚ್.ಎನ್.ಬೊಳ್ಳಮ್ಮ , ಎ.ಎ.ಬೊಳ್ಳಮ್ಮ , ಚೋಂದಮ್ಮ ಕೆ.ಕೆ.ಲೀನಾ ದೇಚಮ್ಮ ತಂಡ ಪ್ರಥಮ,  ಶೀತಲ್ ಎ.ಬಿ, ಪೂಣ೯ಶ್ರೀ ಕೆ.ಪಿ, ತಂಡ ದ್ವಿತೀಯ, ಮನ್ನಿತ್ ಎಂ.ಎಂ. ಮತ್ತು ಲಿಪಿಕ ತಂಡ ತೃತೀಯ, ರಕ್ಷಿತ್ ಮತ್ತು ತಾಂಜಿಲ ತಂಡ ಚತುಥ೯, ಲಾಸ್ಯ ಮೊನಿಕಾ ಮತ್ತು ಪ್ರೇಕ್ಷಾ ತಂಡ ಐದನೇ ಬಹುಮಾನ ಕ್ಲೇಮಾಡೆಲಿಂಗ್ ಸ್ಪಧೆ೯ಗಳು ::  (5 ರಿಂದ 7 ನೇ ತರಗತಿ ವಿಭಾಗ) ::  ಪ್ರಥಮ – ಸದನ್ ಗೌಡ ಬಿ.ಆರ್, ದ್ವಿತೀಯ ವಿಷ್ಣು ಎಂ.ಎಸ್, ತೃತೀಯ – ಯಶ್ವಿನ್ ಆರ್,  ಸಮದಾನಕರ ಬಹುಮಾನಗಳು – ಸಾಲಿಯಾ ಐ.ಎ, ಮತ್ತು ಆಧ್ಯಾ ಎಂ.ಎಸ್. ( 8 ರಿಂದ 10 ನೇ ತರಗತಿ ವಿಭಾಗ) :: …

Read More

ವಿರಾಜಪೇಟೆ ಅ.5 NEWS DESK :  ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು, ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.  ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಆರಂಭವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಅಂದರೆ ಇಂದಿಗೂ ಕಾಲೇಜಿನಲ್ಲಿ ಚುನಾವಣೆಯ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿರುವ ಸ್ನೇಹ, ಭಾಂದವ್ಯ, ವಾತ್ಸಲ್ಯ ಮತ್ತೆ ಸಿಗುವುದಿಲ್ಲ ಎಂದರು. ಎಲ್ಲರನ್ನೂ ಸಮಾನತೆಯಿಂದ ಕಾಣುವ ಮೂಲಕ ಸಮಾಜದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಮಾತನಾಡಿ, ವಿದ್ಯಾರ್ಥಿ ಎಂದರೇ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಇಲ್ಲಿ ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು…

Read More