ಮಡಿಕೇರಿ ಅ.5 NEWS DESK : ನಗರ ದಸರಾ ಸಮಿತಿ ವತಿಯಿಂದ ಅ.6 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನ ಕಲಾ ಸಂಭ್ರಮ ವೇದಿಕೆಯಲ್ಲಿ ಮೊದಲ ವರ್ಷದ ಕಾಫಿ ದಸರಾ ನಡೆಯಲಿದೆ. ಕಾಫಿ, ಕೃಷಿ ಸಂಬಂಧಿತ ಉಪಯುಕ್ತ ಮಾಹಿತಿಯುಳ್ಳ ಪ್ರದರ್ಶನ ಮಳಿಗೆಗಳು, ಕಾಫಿ, ವಿವಿಧ ಕೃಷಿ ಸಂಬಂಧಿತ ವಿಚಾರ ಸಂಕಿರಣ ನಡೆಯಲಿದೆ ಎಂದು ದಸರಾ ಸಮಿತಿ ತಿಳಿಸಿದೆ.
ಲೇಖಕ: admin
ಮಡಿಕೇರಿ ಅ.5 NEWS DESK : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಮಕ್ಕಳ ದಸರಾ ಉತ್ಸವ’ದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು. ಎತ್ತ ನೋಡಿದರತ್ತ ಮಕ್ಕಳ ಕಲರವ, ಬನ್ನಿ ತರಕಾರಿ, ಸೊಪ್ಪು, ಹಣ್ಣು, ತಿಂಡಿ, ತಿನಿಸು ಪಡೆಯಿರಿ ಎಂಬುದು ಮಕ್ಕಳಿಂದ ಕೇಳಿ ಬರುತ್ತಿತ್ತು. ಇದು ನಗರದ ಗಾಂಧಿ ಮೈದಾನದಲ್ಲಿ ಶನಿವಾರ ನಡೆದ ಮಕ್ಕಳ ದಸರಾ ಸಂದರ್ಭದಲ್ಲಿ ಕೇಳಿ ಬಂದ ಕೂಗು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಜನೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಮಕ್ಕಳ ಸಂತೆ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಸುಮಾರು 680ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡವು ನೋಂದಣಿ ಮಾಡಿಕೊಂಡು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಾಲಕ್, ಮೆಂತೆ, ಸಬ್ಸಿಗೆ,…
ಮಡಿಕೇರಿ ಅ.5 NEWS DESK : ಯಾವುದೇ ಸಂದರ್ಭದಲ್ಲೂ ಶಿಕ್ಷಣದಿಂದ ವಂಚಿತರಾಗ ಬಾರದು. ಶಿಕ್ಷಣದ ಮೂಲಕವೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಹಲವಾರು ಯೋಜನೆಗಳನ್ನು ನೀಡಿದ್ದು, ಇದರ ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಪೆರುಂಬಾಡಿ ಶಂಸುಲ್ ಉಲಮ ಕ್ಯಾಂಪಸ್ ಆವರಣದಲ್ಲಿ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಅನಾಥಾಶ್ರಮದಿಂದ ನಡೆದ ನಾಲ್ಕು ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಬಡ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಲು ಉನ್ನತ ಶಿಕ್ಷಣದೊಂದಿಗೆ ಉದ್ಯೋಗ ಕಲ್ಪಿಸಿ, ವಿವಾಹ ಕಾರ್ಯವು ಮಾಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು ಹೇಳಿದರು. ಎಲ್ಲಾ ವರ್ಗದ ಬಾಂಧವರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಲ್ಲಿ ಪ್ರತಿಭಾನ್ವಿತರಾಗಿ ಉನ್ನತ ಹುದ್ದೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ…
ಮಡಿಕೇರಿ ಅ.5 NEWS DESK : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ `ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯಡಿ ರಾಷ್ಟ್ರವ್ಯಾಪಿ ನಡೆದ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವು ಅ.6 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ.ಕಾವೇರಿ ಉದ್ಘಾಟಿಸಲಿದ್ದಾರೆ. ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ ಗಣ್ಯ ಉಪಸ್ಥಿತರಿರಲಿದ್ದು, ಮಂಗಳೂರಿನ ಲುಬ್ನಾ ಝಕಿಯಾ `ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮಡಿಕೇರಿ ಅ.5 NEWS DESK : ಕೊಡವ ಮಕ್ಕಡ ಕೂಟದ 95ನೇ ಪುಸ್ತಕ, ಬರಹಗಾರ್ತಿ ಸುಮನ್ ಸೀತಮ್ಮ ಅವರು ರಚಿಸಿರುವ “ಭಾವಸ್ತುತಿ”ಯನ್ನು ಇಂದು ಬಿಡುಗಡೆ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಬರಹಗಾರರು ಹಾಗೂ ಸಮಾಜ ಸೇವಕರಾದ ತೆನ್ನಿರ ಟೀನಾ ಚಂಗಪ್ಪ, ಹೊಸ ಹೊಸ ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಬರಬೇಕು. ಸಾಹಿತ್ಯಾಭಿಮಾನಿಗಳು ಆರ್ಥಿಕ ಸಹಕಾರ ಮತ್ತು ನೆರವು ನೀಡುತ್ತಾರೆ. ಆರ್ಥಿಕತೆಯ ಕಾರಣದಿಂದ ಬರಹಗಾರರು ಹಿಂದೆ ಸರಿಯಬಾರದು ಎಂದರು. ಸಾಹಿತ್ಯ ಕ್ಷೇತ್ರ ಮತ್ತು ಬರಹಗಾರರಿಗೆ ಕೊಡವ ಮಕ್ಕಡ ಕೂಟ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯ. ಕೂಟದ 100ನೇ ಪುಸ್ತಕ ಸಧ್ಯದಲ್ಲಿಯೇ ಬಿಡುಗಡೆಯಾಗುತ್ತಿದ್ದು, ಮತ್ತಷ್ಟು ಪುಸ್ತಕಗಳು ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಪರಿಶ್ರಮದಿಂದ ಸಾಹಿತ್ಯ ಲೋಕಕ್ಕೆ ಸಿಗಲಿ ಎಂದು ಹಾರೈಸಿದರು. “ಭಾವಸ್ತುತಿ” ಪುಸ್ತಕದ ಬರಹಗಾರರಾದ ಬೊಟ್ಟಂಗಡ ಸುಮನ್ ಸೀತಮ್ಮ ಮಾತನಾಡಿ ಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಓದುಗರ ಸಂಖ್ಯೆ ಕಡಿಮೆಯಾಗುತ್ತಿದ್ದು, ಪತ್ರಿಕೆ ಮತ್ತು ಪುಸ್ತಕ ಕಡೆಗಣಿಸಲ್ಪಡುತ್ತಿದೆ. ಮನೆ ಹಾಗೂ ಶಾಲೆಯಿಂದಲೇ…
ಸುಂಟಿಕೊಪ್ಪ ಅ.6 NEWS DESK : ವಿದ್ಯಾರ್ಥಿಗಳು ಶಿಬಿರದಲ್ಲಿ ಪಡೆದುಕೊಂಡ ತರಬೇತಿ ಮತ್ತು ಅನುಭವವನ್ನು ಅಭ್ಯಾಸವನ್ನಾಗಿ ರೂಪಿಸಿಕೊಳ್ಳಬೇಕು. ಸಾಮಾಜಿಕ ಹೊಣೆಗಾರಿಕೆಯನ್ನು ಹೊಂದಿರುವ ದೇಶದ ಅತ್ಯುತ್ತಮ ಪ್ರಜೆಗಳಾಗಿ ಜೀವಿಸಬೇಕು, ಪೋಷಕರಿಗೆ ಹೆಮ್ಮೆ ತರಬೇಕು ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಅಭಿಪ್ರಾಯಿಸಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಎನ್ಎಸ್ಎಸ್ ಶಿಬಿರದ ಸಮರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನತೆಯನ್ನು ಮಾದಕ ವಸ್ತುಗಳ ವ್ಯಸನಿಗಳಾಗದಂತೆ ಕಾಪಾಡುವ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು. ಬದಲಾದ ಕಾಲಘಟ್ಟದಲ್ಲಿ ಜೀವನದ ಆಧುನಿಕ ಶೈಲಿಯ ಅನುಕರಣೆಯಲ್ಲಿ ಬಹುತೇಕ ಯುವಜನತೆಯ ಜೀವನ ಕ್ರಮವೂ ಕೂಡ ಬದಲಾಗುತ್ತಿದೆ. ಮಾದಕವಸ್ತುಗಳ ಸೇವನೆಯಿಂದ ಅಮೂಲ್ಯವಾದ ಬದುಕಿನ ನಾಶವಾಗುತ್ತಿದೆ. ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು. ಹದಿ ಹರೆಯದ ವಯಸ್ಸಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕವಸ್ತುಗಳ ದಾಸರಾಗಿಸುವ…
ನಾಪೋಕ್ಲು ಅ.6 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ದಿನಾಚರಣೆ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅಂಗನವಾಡಿ ಸಹಾಯಕಿಯರಿಗೆ ನೀಡಲಾಗುವ ತಾಲ್ಲೂಕು ಮಟ್ಟದ ಉತ್ತಮ ಅಂಗನವಾಡಿ ಸಹಾಯಕಿ ಪ್ರಶಸ್ತಿಯನ್ನು ನಾಪೋಕ್ಲು ಹಳೇ ಅಂಗನವಾಡಿ ಸಹಾಯಕಿ ಮಮತಾ ಪಡೆದುಕೊಂಡಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಮಾಮತ ಅವರ ಕಾರ್ಯದಕ್ಷತೆಯನ್ನು ಗುರುತಿಸಿ ಇಲಾಖೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಅ.5 NEWS DESK : ಬಿಟ್ಟಂಗಾಲದ ಪೆಗ್ಗರಿಕಾಡುವಿನ ನವೋದಯ ಯುವಕ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಪೆಗ್ಗಾರಿಕಾಡು ಮತ್ತು ಬಿಟ್ಟಂಗಾಲದ ಮುಖ್ಯ ರಸ್ತೆಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಪಿ.ಸುಬ್ಬಯ್ಯ, ಉಪಾಧ್ಯಕ್ಷ ಹೆಚ್.ಕೆ.ಸುಮಂತ್, ಖಜಾಂಚಿ ಟಿ.ಎಂ.ಸುದೀಶ್, ಕಾರ್ಯದರ್ಶಿ ಹೆಚ್.ಎ.ಶಿವಕುಮಾರ್, ಸಲಹೆಗಾರ ಪಿ.ಎನ್.ವಿನೋದ್, ಟಿ.ವಿ.ಅಜಿತ್ ಮತ್ತು ಬಿ.ಎಂ.ದಿನೇಶ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಇದ್ದರು.
ವಿರಾಜಪೇಟೆ ಅ.5 NEWS DESK : ಪೆರಂಬಾಡಿಯ ಕಾಫಿ ತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಸಮೀಪದ ರೆಸಾರ್ಟ್ ವ್ಯವಸ್ಥಾಪಕರು ತೋಟದಲ್ಲಿ ಹೆಬ್ಬಾವು ಕಾಣಿಸಿಕೊಂಡಿರುವ ಬಗ್ಗೆ ಉರಗತಜ್ಞ ಆಟೋ ಸ್ನೇಕ್ ಸತೀಶ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಸ್ನೇಕ್ ಸತೀಶ್ ಸುಮಾರು 12 ಅಡಿ ಉದ್ದ ಹಾಗೂ 20 ಕೆ.ಜಿ.ತೂಕದ ಹೆಬ್ಬಾವನ್ನು ರಕ್ಷಿಸಿ, ಸಮೀಪದ ಮಾಕುಟ್ಟ ಅರಣ್ಯಕ್ಕೆ ಬಿಟ್ಟರು. ಈ ಸಂದರ್ಭ ರೆಸಾರ್ಟ್ ನ ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.
ಸೋಮವಾರಪೇಟೆ ಅ.5 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರನ್ನಾಗಿ ಪಟ್ಟಣದ ಬಸವೇಶ್ವರ ರಸ್ತೆಯ ಕೆ.ಎಸ್.ಉಷಾರಾಣಿ ಅವರನ್ನು ನೇಮಕಗೊಳಿಸಲಾಗಿದ್ದು, ಶರಣ ಹಾಗೂ ಶರಣೆಯರ ಆದರ್ಶಗಳನ್ನು ಸಮಾಜಕ್ಕೆ ಬಿತ್ತರಿಸುವ ಮೂಲಕ ಶರಣ ಸಾಹಿತ್ಯ ಸಂಸ್ಕೃತಿ ಪ್ರಸಾರಕ್ಕೆ ಮುಂದಾಗಬೇಕೆಂದು ಕದಳಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷೆ ಸುಶೀಲಾ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






