ಮಡಿಕೇರಿ NEWS DESK ನ.26 : ಗ್ರಾ.ಪಂ ಉಪ ಚುನಾವಣೆಯಲ್ಲಿ ದಕ್ಷಿಣ ಕೊಡಗಿನ ಮಂಚಳ್ಳಿ ಮತ್ತು ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಜಯ ಗಳಿಸಿದ್ದಾರೆ. ಕುಟ್ಟ ಗ್ರಾ.ಪಂ ವ್ಯಾಪ್ತಿಯ ಮಂಚಳ್ಳಿ ಕ್ಷೇತ್ರದಲ್ಲಿ ರಾಜ ಅವರು 63 ಮತಗಳ ಅಂತರದಿAದ ಗೆಲುವು ಸಾಧಿಸಿದರು. ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಗೌರಿ 54 ಮತಗಳ ಅಂತರದಿAದ ಜಯಶಾಲಿಯಾದರು. ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.
ಲೇಖಕ: admin
ಮಡಿಕೇರಿ ನ.26 NEWS DESK : ವಿರಾಜಪೇಟೆ ತಾಲ್ಲೂಕಿನ ಚೆಂಬೆಳ್ಳೂರು ಗ್ರಾಮ ಪಂಚಾಯತಿಯ ಗ್ರಾಮ ಸಭೆಯು ನ.27 ರಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ದೇವಣಗೇರಿ ವಿಎಸ್ಎಸ್ಎನ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಯ ನೋಡಲ್ ಅಧಿಕಾರಿಯಾಗಿ ತಾಲ್ಲೂಕು ಯೋಜನಾಧಿಕಾರಿ ಮೋಹನ್ ಪಾಲ್ಗೊಳ್ಳಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ನ.26 NEWS DESK : ಸ್ವಾಮಿ ವಿವೇಕಾನಂದರ ದಿವ್ಯ ಲೀಲಾ ಕ್ಷೇತ್ರವಾಗಿರುವ ಡಿವೈನ್ ಪಾರ್ಕ್ ನ ಅಂಗ ಸಂಸ್ಥೆಯಾದ ಮೂರ್ನಾಡಿನ ವಿವೇಕ ಜಾಗೃತ ಬಳಗದ ವತಿಯಿಂದ ಮುರ್ನಾಡಿನ ಸಮುದಾಯ ಭವನದಲ್ಲಿ ವಾತ್ಸಲ್ಯ ಶ್ರೀ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಿವೈನ್ ಪಾರ್ಕ್ ಅಧಿಕಾರಿ ಪದ್ಮಲತಾ ರಾವ್ ಮಾತನಾಡಿ ಉತ್ತಮ ಸಂಸ್ಕಾರವಂತ ಮಗುವನ್ನು ಪಡೆಯುವಲ್ಲಿ ತಾಯಿಯ ಪಾತ್ರವನ್ನು ವಿವರಿಸಿದ್ದರು. ಕೊಡಗು ಜಿಲ್ಲಾ ಶುಶ್ರೂಷಕ ಘಟಕದ ನಿವೃತಾಧಿಕಾರಿ ಬೈಲೋಳಿ ಕುಸುಮ ಲಕ್ಷ್ಮಣ ಮಾತನಾಡಿ ಗರ್ಭಿಣಿಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸುಮಾರು 130 ಸದ್ಭಕ್ತರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಂಡರು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಮಡಿಲು ತುಂಬಿಸುವ ಕಾರ್ಯ ನಡೆಯಿತು. ವೇದಿಕೆಯಲ್ಲಿ ಬಳಗದ ಅಧ್ಯಕ್ಷರಾದ ದಿವ್ಯ ತೇಜ್ ಕುಮಾರ್ ಹಾಜರಿದ್ದರು. ಬಳಗದ ಕಾರ್ಯಕರ್ತರಾದ ನಿಶಾಮಣಿ ಸ್ವಾಗತಿಸಿದರು. ಶೃತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ನ.26 NEWS DESK : ಕೊಡವ ಸಾಂಪ್ರದಾಯಿಕ ವಾಲಗತ್ತಾಟ್ ಅನ್ನು ಬೆಳೆಸುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ವಿರಾಜಪೇಟೆಯ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ನಡೆಸುತ್ತಿರುವ “ತೂಕ್ ಬೊಳಕ್ ಕೊಡವ ವಾಲಗತ್ತಾಟ್ ನಮ್ಮೆ ಪೈಪೋಟಿ ಕಾರ್ಯಕ್ರಮವು ಡಿ.10 ರಂದು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪೊನ್ನಂಪೇಟೆ ಕೊಡವ ಸಮಾಜದ ಸಹಕಾರದಲ್ಲಿ ಈ ಬಾರಿ ವಿಜ್ರಂಭಣೆಯಿಂದ ವಾಲಗತಾಟ್ ನಮ್ಮೆಯನ್ನು ಆಚರಿಸಲು ನಿರ್ಧರಿಸಿದ್ದು, ಪುರುಷರು ಮಹಿಳೆಯರು ಮಕ್ಕಳು ಎಂಬ 16 ವಿಭಾಗದಲ್ಲಿ ಪೈಪೋಟಿಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. ಚಿಕ್ಕ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವ ಹಾಗೂ ಕೊಡವ ವಾಲಗತಾಟ್ ಅನ್ನು ಒಂದು ಹಬ್ಬವಾಗಿ ಆಚರಿಸುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ನಮ್ಮ ಸಂಸ್ಥೆಯಿಂದ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಪೈಪೋಟಿ ನಡೆಯಲಿದ್ದು, ಪೊನ್ನಂಪೇಟೆಯಲ್ಲಿ ನಡೆಯುವ…
ಕುಶಾಲನಗರ, ನ.26 NEWS DESK : ವಿದ್ಯಾರ್ಥಿ ಸಮುದಾಯ ಹಾಗೂ ಯುವಜನತೆಯಲ್ಲಿ ಶಿಸ್ತು- ಸಂಯಮ, ಭೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದರು. ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕುಶಾಲನಗರದಲ್ಲಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಧ್ಯೇಯೋದ್ದೇಶಗಳ ಕುರಿತು ಮಾಹಿತಿ ನೀಡಿದ ಅವರು, ವಿಶ್ವಶಾಂತಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲ ಸಂಕಲ್ಪವಾಗಿದೆ ಎಂದರು. ಯುವಜನತೆಯಲ್ಲಿ ಶಿಸ್ತು- ಸಂಯಮ, ಭೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದು…
ಮಡಿಕೇರಿ NEWS DESK ನ.26 : ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವುದನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ವಿರಾಜಪೇಟೆ ಘಟಕ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ನ ವಿರಾಜಪೇಟೆ ಅಧ್ಯಕ್ಷ ಅಂತೋಣಿ ರಾಬಿನ್, ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಪ್ರಧಾನ ಕಾರ್ಯದರ್ಶಿ ಜ್ಯೂಡಿ ವಾಸ್ ಹಾಗೂ ಸಂಚಾಲಕ ಜಾನ್ಸನ್, ಇಬ್ಬರು ಮಹಾನ್ ಸೇನಾಧಿಕಾರಿಗಳು ಭಾರತೀಯ ಸೇನೆಗೆ ನೀಡಿದ ಕೊಡುಗೆಯನ್ನು ಮತ್ತು ರಕ್ಷಣಾ ಪಡೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸದೆ ಅಗೌರವ ತೋರಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೇಶಭಕ್ತಿ ಮತ್ತು ಶಿಸ್ತಿಗೆ ಹೆಸರುವಾಸಿಯಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಅವಹೇಳನ ಸೇನಾ ಘನತೆಗೆ ದಕ್ಕೆ ತಂದಿದೆ. ಇದೊಂದು ಪ್ರಚೋದನಾಕಾರಿ ಹೇಳಿಕೆಯಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್…
ಮಡಿಕೇರಿ NEWS DESK ನ.26 : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಬಳಸಿ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ವ್ಯಕ್ತಿಯ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಅರ್ಚಕರ ಸಂಘ ಪೊನ್ನಂಪೇಟೆ ಠಾಣೆಯಲ್ಲಿ ದೂರು ದಾಖಲಿಸಿದೆ. ನಕಲಿ ಖಾತೆಯಲ್ಲಿ ಬಳಸಿರುವ ಹೆಸರು ಬ್ರಾಹ್ಮಣ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಕೂಡಿದ್ದು, ಇದನ್ನು ಖಂಡಿಸುವುದಾಗಿ ಸಂಘದ ಪ್ರಮುಖರು ತಿಳಿಸಿದರು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೂರು ಸಲ್ಲಿಸುವ ಸಂದರ್ಭ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಹಾಜರಿದ್ದರು.
ವಿರಾಜಪೇಟೆ ನ.26 NEWS DESK : ರಾಷ್ಟ್ರದ ಮೂಲಭೂತ ಕಾನೂನು ಆದ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಪದವಿ ಕಾಲೇಜಿನ ಐಕ್ಯೂಎಸಿ ಘಟಕ, ಎನ್. ಎಸ್. ಎಸ್ ಘಟಕ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಸಂವಿಧಾನವು ನಮಗೆ ಅನೇಕ ಹಕ್ಕನ್ನು ನೀಡಿದ್ದು ಕರ್ತವ್ಯ ಪ್ರತಿಪಾದನೆಯು ಅತೀ ಮುಖ್ಯವಾಗಿದೆ. ಸ್ವತಂತ್ರ, ಸಮಾನತೆ, ಬ್ರಾತೃತ್ವ, ನ್ಯಾಯ ನಮ್ಮ ಸಂವಿಧಾನದ ಮೂಲ ಆಶಯಗಳಾಗಿದ್ದು ಸಂವಿಧಾನಕ್ಕೆ ಬದ್ಧರಾಗಿ ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂವಿಧಾನದ ಪೂರ್ವ ಪೀಠಿಕೆಯ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಪದವಿ ಕಾಲೇಜಿನ ಎನ್.ಎಸ್. ಎಸ್. ಅಧಿಕಾರಿಗಳಾದ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ…
ಮಡಿಕೇರಿ ನ.26 NEWS DESK : ವ್ಯಾಂಡಮ್ ಎಂಟರ್ ಪ್ರೈಸಸ್ ನ 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಪ್ರತಿ 2 ಸಾವಿರ ರೂಪಾಯಿಗಳ ಖರೀದಿಗೆ ನೀಡಲಾದ ಉಚಿತ ಕೂಪನ್ ಲಕ್ಕಿ ಡ್ರಾ ಸಮಾರಂಭ ಮಡಿಕೇರಿ ಬ್ರಾಹ್ಮಣರ ಬೀದಿಯ ಅಶ್ವಥ ಕಟ್ಟೆ ಬಳಿ ಇರುವ ವ್ಯಾಂಡಮ್ ಎಂಟರ್ ಪ್ರೈಸಸ್ ನಲ್ಲಿ ನಡೆಯಿತು. ಲಯನ್ಸ್ ಕ್ಲಬ್ನ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷ ಪಟ್ರಪಂಡ ಪಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮದೆನಾಡಿನ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಸಿದ್ದರಾಜು ಉದ್ಘಾಟಿದರು. ಮಕ್ಕಂದೂರು ಪ್ರೌಢಶಾಲಾ ಶಿಕ್ಷಕರಾದ ಜಿ.ವನಜಾಕ್ಷಿ ದಾಮೋದರ್, ನ್ಯಾಯಾಂಗ ಇಲಾಖೆಯ ನಿವೃತ್ತ ಅಧಿಕಾರಿ ರವಿ ಕುಂಞಪ್ಪ, ಕೊಡಗು ಬ್ಲಡ್ ಡೋರ್ಸ್ ಸಂಸ್ಥೆಯ ಖಜಾಂಚಿ ಖಲೀಲ್ ಕ್ರಿಯೇಟಿವ್ ಹಾಗೂ ವ್ಯಾಂಡಮ್ ಎಂಟರ್ ಪ್ರೈಸಸ್ನ ಮಾಲೀಕರಾದ ಕೆ.ಕೆ.ದಾಮೋದರ್ ಹಾಜರಿದ್ದರು. ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಸ್ತುಗಳ ಮಾರಾಟಕ್ಕೆ ಹೆಸರುವಾಸಿಯಾದ ವ್ಯಾಂಡಮ್ ಎಂಟರ್ ಪ್ರೈಸಸ್ ಕುರಿತು ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು. ಉಚಿತ ಕೂಪನ್ ಲಕ್ಕಿ ಡ್ರಾದಲ್ಲಿ ಮೊದಲನೇ…
ಬೆಂಗಳೂರು ನ.26 NEWS DESK : ಸಂವಿಧಾನ ದಿನಾಚರಣೆ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ‘ಸಂವಿಧಾನ ಸನ್ಮಾನ ಅಭಿಯಾನʼ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದ ಬಸವರಾಜ ಎಸ್. ಬೊಮ್ಮಾಯಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿ.ಸಿ.ಪಾಟೀಲ್, ಶಶಿಲ್ ಜಿ. ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕ ಬಸವರಾಜ ಮತ್ತಿಮಡು, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಸಿ.ಮಂಜುಳಾ, ಪ್ರಕೋಷ್ಠಗಳ ರಾಜ್ಯ ಸಂಚಾಲಕ ದತ್ತಾತ್ರಿ ಎಸ್, ರಾಜ್ಯ ಕಾರ್ಯದರ್ಶಿಗಳಾದ ಲಲಿತಾ ಆನಾಪುರ, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕಾರಜೋಳ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.






