ಮಡಿಕೇರಿ ಅ.26 NEWS DESK : ದೆಹಲಿಯ ವಿಕಾಸ್ ಪುರಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕ ಅರವಿಂದ್ ಕೇಜ್ರಿವಾಲ್ ಆವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಜೆಪಿ ಯುವ ಮೋರ್ಚಾದವರು ನಡೆಸಿರುವ ಹಲ್ಲೆಯನ್ನು ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ನಾಯಕರುಗಳು ಹತಾಶೆಯಿಂದ ಈ ರೀತಿಯ ದಾಳಿಗೆ ಮುಂದಾಗಿದ್ದಾರೆ. ಪ್ರಾಮಾಣಿಕರು ಎಂದಿಗೂ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಬಾರದು, ಜನಪರ ಆಡಳಿತವನ್ನು ನೀಡಬಾರದು ಎನ್ನುವುದು ಬಿಜೆಪಿಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಬೇಕು ಮತ್ತು ಹಲ್ಲೆ ನಡೆಸುವವರನ್ನು ಹತೋಟಿಯಲ್ಲಿಡಬೇಕೆಂದು ಆಗ್ರಹಿಸಿದ್ದಾರೆ. ಕೇಜ್ರಿವಾಲ್ ಅವರ ಮೇಲಿನ ದಾಳಿ ಇದೇ ಮೊದಲಲ್ಲ, ಅನೇಕ ಬಾರಿ ಈ ರೀತಿಯ ದಬ್ಬಾಳಿಕೆ, ದೌರ್ಜನ್ಯ, ದಾಳಿ ನಡೆದಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಆಮ್ ಆದ್ಮಿ ಪಾರ್ಟಿಯ ನಾಯಕರುಗಳನ್ನು ಜೈಲಿನಲ್ಲಿಟ್ಟರು ರಾಷ್ಟ್ರದ…
ಲೇಖಕ: admin
ಮಡಿಕೇರಿ ಅ.26 NEWS DESK : ಭಾರತೀಯ ವಿದ್ಯಾ ಭವನ ಕೊಡಗು ಕೇಂದ್ರದ ವತಿಯಿಂದ ಮಾನಸಿಕ ಅಸ್ವಸ್ಥ ತೆ ಮತ್ತು ಸಮಸ್ಯೆಗಳ ನಿವಾರಣೆಗೆ (ಆಪ್ತ ಸಮಾಲೋಚನೆ ಮತ್ತು ಥೆರಪಿಗಳ ಸೌಲಭ್ಯ ಪ್ರಾರಂಭಿಸಲಾಗಿದೆ, ಕೊಡಗು ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳು ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ಜನರಿಗೆ ದೊರಕುವಂತೆ ಮಾಡುವುದು ಪ್ರಾಜೆಕ್ಟ್ ಮನಸ್ವಿಯ ಉದ್ದೇಶವಾಗಿದ್ದು . ‘ಸಮರ್ಥ ಮನ, ಸ್ವಸ್ಥ ಜೀವನ’ದ ಧ್ಯೇಯದಿಂದ ಈ ಯೋಜನೆಯನ್ನು ಭಾರತೀಯ ವಿದ್ಯಾ ಭವನ ಪ್ರಾರಂಭಿಸಿದೆ ಎಂದು ಭವನದ ಜಿಲ್ಲಾ ಕಾಯ೯ದಶಿ೯ ಬಾಲಾಜಿಕಶ್ಯಪ್ ತಿಳಿಸಿದ್ದಾರೆ. ಕೊಡಗಿನ ಜನತೆಗೆ ಲಭ್ಯವಾಗುವಂತೆ ‘ಪ್ರಾಜೆಕ್ಟ್ ಮನಸ್ವಿ’ ಎಂಬ ಯೋಜನೆಯನ್ನು ಇದೀಗ ಅನುಭವೀ ತಜ್ಞರ ಮಾರ್ಗದರ್ಶನ ಹಾಗೂ ಸಲಹೆಗಳನ್ನು ನಗರದ ಓಂಕಾರೇಶ್ವರ ದೇವಾಲಯ ಬಳಿಯಲ್ಲಿನ ಭಾರತೀಯ ವಿದ್ಯಾಭವನ ಕೇಂದ್ರದಲ್ಲಿ ಪಡೆಯಬಹುದಾಗಿದೆ. ಮಕ್ಕಳನ್ನೂ ಸೇರಿ ಎಲ್ಲ ವಯೋಮಾನದ ಮಂದಿಗೆ ಈ ಸೇವೆಗಳು ಅನ್ವಯಿಸುತ್ತವೆ. ಮಾನಸಿಕ ಒತ್ತಡ, ಆತಂಕ, ಖಿನ್ನತೆ, ಕಲಿಕಾ ತೊಡಕು ಗಳು, ಕುಡಿತ ಮತ್ತಿತರ ವ್ಯಸನಗಳು…
ಮಡಿಕೇರಿ NEWS DESK ಅ.26 : ಕಾವೇರಿ ತುಲಾ ಸಂಕ್ರಮಣದ “ಪಥಲೋಧಿ” ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಕುತಂತ್ರಕ್ಕೆ ಸಿಲುಕಿ ಜೀವ ಕಳೆದುಕೊಂಡ ಹಿರಿಯ ಕೊಡವರಿಗೆ ಇಂದು ಮೀದಿ ಸಮರ್ಪಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮೌನ ಪ್ರಾರ್ಥನೆಯ ಮೂಲಕ ಹಿರಿಯರನ್ನು ಸ್ಮರಿಸಿಕೊಂಡರು. ಅರಮನೆಯ ಪಿತೂರಿಯಲ್ಲಿ ಕೊಡವ ಜನಾಂಗೀಯ ಬುಡಕಟ್ಟು ಜನಾಂಗದ ಹತ್ಯೆಗಳು ಎರಡು ಶತಮಾನಗಳಿಗೂ ಹೆಚ್ಚು ಕಾಲ ನಿರಂತರವಾಗಿ ನಡೆದಿದೆ. ಷಡ್ಯಂತ್ರದಿಂದ ಪ್ರಾಣ ಕಳೆದುಕೊಂಡ ಅಮಾಯಕ ಹಿರಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಅರಸರ ಕಾಲದ 201 ವರ್ಷಗಳ ಕರಾಳ ವಿಶ್ವಾಸಘಾತುಕ ಆಡಳಿತಗಾರರಿಂದ ಕೊಡವರ ದುರಂತ ಅಂತ್ಯವಾಗಿದೆ. 40 ಸಾವಿರಕ್ಕೂ ಹೆಚ್ಚು ಅಮಾಯಕ ಕೊಡವ ಜನಾಂಗೀಯ ಬುಡಕಟ್ಟು ಜನರನ್ನು ಕೋಟೆ ಆವರಣದಲ್ಲಿಯೇ ರಾಜರು ಕೊಂದು ಹಾಕಿದರು. ದೇವಟ್ ಪರಂಬುವಿನಲ್ಲಿ ನಿರಾಯುಧ ಕೊಡವ ಬುಡಕಟ್ಟು ಯೋಧರು…
ಮಡಿಕೇರಿ ಅ.26 NEWS DESK : ಪಿ ಆ್ಯಂಡ್ ಜಿ ಕ್ರಿಯೇಷನ್ಸ್ ಹಾಗೂ ಕೊಡಗು ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಿರುವ “ಕಾಲತ್ರ ಕಳಿ” ಕೊಡವ ಚಲನಚಿತ್ರ ಅ.28 ರಂದು ವಿರಾಜಪೇಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಚಲನಚಿತ್ರದ ನಿರ್ದೇಶಕ ಬಾಳೆಯಡ ಪ್ರತೀಶ್ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10 ಗಂಟೆಗೆ ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಕಾಫಿ ಬೆಳೆಗಾರರು ಹಾಗೂ ದಾನಿಗಳಾದ ನಡಿಕೇರಿಯಂಡ ವಿಕ್ರಮ್ ಪಾಲ್ಗೊಳ್ಳಲಿದ್ದಾರೆ ಎಂದರು. ಬಾಳೆಯಡ ಪ್ರತೀಶ್ ಪೂವಯ್ಯ ಹಾಗೂ ಆಚೆಯಡ ಗಗನ್ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೋಮೆಯಂಡ ಬೋಸ್ ಬೆಳ್ಯಪ್ಪ ಹಾಗೂ ಸಾರ್ವಜನಿಕರ ನೆರವಿನಿಂದ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದ ಮುಖ್ಯ ಪಾತ್ರದಲ್ಲಿ ಮಾಚೆಟ್ಟಿರ ವಿಕಾಸ್ ಬೋಪಣ್ಣ, ಕೋಪುಡ ದೇಸ್ನ ದೇಚಮ್ಮ ನಟಿಸಿದ್ದು, ವಿಶೇಷ ಪಾತ್ರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ…
ನಾಪೋಕ್ಲು ಅ.26 NEWS DESK : ಡಿವೈನ್ ಪಾರ್ಕ್ ಆಧ್ಯಾತ್ಮಿಕ ಪ್ರಯೋಗಶಾಲೆಯಾಗಿ ಮಾನವನ ಕಲ್ಯಾಣಕ್ಕಾಗಿ ಸುದ್ದಿ ಮಾಡದೆ ಸೇವೆಗೈಯ್ಯುತ್ತಿದೆ ಎಂದು ಡಿವೈನ್ ಪಾರ್ಕಿನ ಸಂಪನ್ಮೂಲ ವ್ಯಕ್ತಿ ಸುಂದರ ಗೌಡ ಹೇಳಿದರು. ಉಡುಪಿಯ ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್ನ ಅಂಗ ಸಂಸ್ಥೆಯಾದ ಮೂರ್ನಾಡಿನ ವಿವೇಕ ಜಾಗೃತ ಬಳಗದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಆತ್ಮೋನ್ನತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಆತ್ಮಶಕ್ತಿ ಪಶುತ್ವದಿಂದ ಮಾನವತ್ವದ ಮೂಲಕ ದೈವತ್ವಕ್ಕೆ ಇರುವ ಸುಲಭ ವಿಧಾನ. ಒಮ್ಮೆ ಬರುವ ಮನುಷ್ಯ ಜನ್ಮವನ್ನು ದೇವರ ದರ್ಶನ ಮತ್ತು ಮಧುರ ವಾಣಿಯನ್ನು ಪಡೆದು ಸಾರ್ಥಕ ಮಾಡಿಕೊಳ್ಳುವುದೇ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಶೃತಿ ಸ್ವಾಗತಿಸಿದರು, ಮೂರ್ನಾಡಿನ ವಿವೇಕ ಜಾಗೃತ ಬಳಗದ ಅಧ್ಯಕ್ಷ ದಿವ್ಯ ತೇಜಕುಮಾರ್ ವಂದಿಸಿದರು. ಬಲಮುರಿಯಲ್ಲಿ ನದಿಗೆ ಹಾರಿದ ವ್ಯಕ್ತಿಯನ್ನು ಬದುಕಿಸಿ ಹೊರ ತಂದ ಬಿಪಿನ್ ಅವರನ್ನು ಬಳಗದ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ 170ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ವರದಿ :…
ನಾಪೋಕ್ಲು ಅ.26 NEWS DESK : ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ದಿಯಾ ಭೀಮಯ್ಯ ಒಂದು ಬೆಳ್ಳಿ, ಒಂದು ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಿಯಾ ಭೀಮಯ್ಯ ಡಬ್ಬಲ್ಸ್ ನಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾಳೆ. ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಳು. ಡಬಲ್ಸ್ ನಲ್ಲಿ ತಮಿಳುನಾಡಿನ ಪಿ.ವರ್ನಾ ಅವರೊಂದಿಗೆ ಕೂಡಿ ಆಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಜೊತೆ ಕೂಡಿ ಆಡಿ ತೃತೀಯ ಸ್ಥಾನಗಳಿಸಿದ್ದು, ಸಿಂಗಲ್ಸ್ನಲ್ಲಿ ಪ್ರಥಮ ಶ್ರೇಯಾಂಕಿತ ಮತ್ತು ಚಾಂಪಿಯನ್ ಆಗಿ ಹೊರ ಹೊಮ್ಮಿದ ದಿಯಾ ಒಡಿಸ್ಸಾದ ತಾನ್ವಿ ಪತ್ರಿ ಅವರಿಂದ ಕ್ವಾಟರ್ ಫೈನಲ್ ನಲ್ಲಿ ಪರಾಭವ ಹೊಂದಿದರು. ದಿಯಾ ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ…
ನಾಪೋಕ್ಲು ಅ.26 NEWS DESK : ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ವಿದ್ಯಾರ್ಥಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಬಿ.ಎಂ.ಶಾರದಾ ವಹಿಸಿದ್ದರು. ನಡೆಸಲಾಯಿತು. ವಿದ್ಯಾರ್ಥಿ ಆಹಿಲ್ ಜೋಸೆಫ್ ಅಬ್ದುಲ್ ಕಲಾಂ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.26 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆಯ ಪ್ರಯುಕ್ತ ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ.ದಿನೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ ಪ್ರಕಾಶ್…
ಮಡಿಕೇರಿ ಅ.26 NEWS DESK : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card), ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು…
ಮಡಿಕೇರಿ ಅ.26 NEWS DESK : ಮುಂದಿನ ಶೈಕ್ಷಣಿಕ ಸಾಲಿನ ಒಳಗೆ ನೂತನ ಕಟ್ಟಡವನ್ನು ಪೂರ್ಣಗೊಳಿಸಿ ಕಾಲೇಜಿಗೆ ವರ್ಗಾಯಿಸುವುದರ ಮೂಲಕ ಶೈಕ್ಷಣಿಕ ವರ್ಷದಲ್ಲಿ ಹೊಸ ಕಟ್ಟಡದಲ್ಲಿ ಕಾಲೇಜು ಪ್ರಾರಂಭಿಸುವುದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಮಂತರ್ಗೌಡ ತಿಳಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ನಡೆದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ತು, ಸಾಂಸ್ಕøತಿಕ, ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿನಿಯರು ವಿಧ್ಯಾಭ್ಯಾಸದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಸೀನಪ್ಪ, ವಿದ್ಯಾರ್ಥಿಗಳು ಉದಾತ್ತವಾದ ಆಲೋಚನೆಗಳು, ಆತ್ಮವಿಶ್ವಾಸ, ಶಿಸ್ತು, ಸತತ ಅಭ್ಯಾಸ, ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪಡಬೇಕಾದ ಸತತ ಪರಿಶ್ರಮ…






