ಮಡಿಕೇರಿ ಅ.4 NEWS DESK : ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ (ಸ್ವಚ್ಛತಾ ಹೀ ಸೇವಾ ) ಪಾಕ್ಷಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಜಿ.ಧನರಾಜು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಶಂಸನಾ ಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೂಚನೆಯಂತೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ಸೆ.17 ರಿಂದ ಅ.2 ರ ವರೆಗೆ ಜಿಲ್ಲೆಯ 102 ಗ್ರಾಮ ಪಂಚಾಯಿತಿಗಳಲ್ಲಿಯೂ ಉತ್ತಮ ಮತ್ತು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ ಎಂದರು. ಅಭಿಯಾನದ ಭಾಗವಾಗಿ ಶ್ರಮದಾನ, ಶಾಲಾ ಮಕ್ಕಳಿಗೆ ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆ, ಮಹಿಳಾ ಸಂಘದ ಸದಸ್ಯರಿಗೆ ರಂಗೋಲಿ ಸೇರಿದಂತೆ ವಿವಿಧ ಚಟುವಟಿಕೆಗಳನ್ನು 15 ದಿನಗಳ ಕಾಲ ಹಮ್ಮಿಕೊಂಡು ಸ್ವಚ್ಛತೆಯ ಸಂದೇಶವನ್ನು ಸಾರಲಾಗಿದೆ. ಸೆಪ್ಟಂಬರ್ 27 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಪ್ರವಾಶಿ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 102 ಗ್ರಾ.ಪಂ.ಗಳ…
ಲೇಖಕ: admin
ಮಡಿಕೇರಿ ಅ.4 NEWS DESK : ಕೊಡಗು ಮಾನವ ಬಂಧುತ್ವ ವೇದಿಕೆ, ಕೊಡಗು ಜಿಲ್ಲಾ ಸಂಚಾಲನಾ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ “ಮಾನವೀಯತೆಯೇ ಧರ್ಮ – ಸಂವಿಧಾನವೇ ಧರ್ಮ ಗ್ರಂಥ” ಎಂಬ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ನಗರದ ಪತ್ರಿಕಾ ಭವನದಲ್ಲಿ ಭಾರತೀಯ ದಂಡ ಸಂಹಿತೆ ಸಂವಾದ ಮತ್ತು ಅವಲೋಕನ ಕಾರ್ಯಕ್ರಮವನ್ನು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದೇಶದ ಕಾನೂನಿನಲ್ಲಿ ಬದಲಾವಣೆಗಳಾಗಿವೆ. ಕಳೆದ 75ವರ್ಷಗಳಲ್ಲಿ ಸಂವಿಧಾನಕ್ಕೆ 105 ಬಾರಿ ತಿದ್ದುಪಡಿ ತರಲಾಗಿದೆ. ಕಾಲಕಾಲಕ್ಕೆ ಬದಲಾಗುತ್ತಿರುವ ಸಮಾಜದೊಂದಿಗೆ ಸಂವಿಧಾನವೂ ಬದಲಾಗಿ ಇಂದಿನ ಸಮಾಜಕ್ಕೆ ಪ್ರಸ್ತುತವಾದ ಸಂವಿಧಾನ ಇರಿಸಿಕೊಳ್ಳುವಂತಾಗಿದೆ. ಸಂವಿಧಾನದ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ಒಟ್ಟು ಪ್ರಕ್ರಿಯೆಯನ್ನು ಕಾನೂನು ಪರಿಷ್ಕರಣೆ ಎನ್ನಲಾಗುತ್ತದೆ. ಯಾವುದೇ ಕಾನೂನು ತಿದ್ದುಪಡಿಯಾದರು ಅದು ಸಂವಿಧಾನದ ಮೂಲತತ್ವಗಳಿಗೆ ವಿರುದ್ಧವಾಗಿರಬಾರದು ಎಂದರು. ವಕೀಲ ಹಾಗೂ ವೇದಿಕೆಯ ಸಂಚಾಲಕ ಕೆ.ಆರ್.ವಿದ್ಯಾಧರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ್, ಪ್ರಮುಖರಾದ ಚಂದ್ರಮೌಳಿ,…
ಸೋಮವಾರಪೇಟೆ ಅ.4 NEWS DESK : ಗಾಂಧಿಜಯಂತಿ ಅಂಗವಾಗಿ ಡಾಲ್ಫಿನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭ ಡಾ.ಶಿವಪ್ರಸಾದ ಕ್ಲಬ್ ನ ಅಧ್ಯಕ್ಷ ಹೆಚ್.ಆರ್.ಅಶೋಕ್, ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ಪ್ರಸನ್ನ , ಪ್ರಮುಖರಾದ ಬಿ.ಆರ್.ಮಹೇಶ್, ಕೆ.ಪಿ.ರಾಯ್, ಗಿರೀಶ್, ಮಂಜುನಾಥ್, ರಂಜು ಮಹೇಶ್, ವಿನಾಯಕ ಪಾಲ್ಗೊಂಡಿದ್ದರು.
ಮಡಿಕೇರಿ ಅ.4 NEWS DESK : ಅರವತೋಕ್ಲು ಸರ್ವದೈವತಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಗೋವಿಂದ್ ಸಿಂಗ್ ರಜಪೂತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನು ಸೋಮವಾರಪೇಟೆ ಪಟ್ಟಣದ ಭವಾನಿ ಎಲೆಕ್ಟ್ರಿಕಲ್ಸ್ ಮತ್ತು ಹಾರ್ಡ್ವೇರ್ ಅಂಗಡಿಯ ಮಾಲಿಕರಾದ ಭೈರುಸಿಂಗ್ ಮತ್ತು ಸೋಹನ್ ಕನ್ವರ್ ದಂಪತಿಯ ಪುತ್ರ.
ವಿರಾಜಪೇಟೆ ಅ.4 NEWS DESK : ಹುದಿಕೇರಿಯ ಜನತಾ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 14-17 ರ ವಯೋಮಿತಿಯ ಕ್ರೀಡಾಕೂಟದಲ್ಲಿ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳು 4*100 ರಿಲೇ ಓಟದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನವನ್ನು ಗಳಿಸಿದರು. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಾದ ಲೋಹಿತ್ ವಿ, ಕಾರ್ತಿಕ್ ಸಿ,ಆರ್, ಲಿಶನ್ ಕೆ.ಪಿ ಹಾಗೂ ಪ್ರಥನ್ ಎಂ., ಹಾಗೆಯೇ ಬಾಲಕರ ವಿಭಾಗದ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಮತ್ತು 200ಮೀ, 100 ಮೀಟರ್ ಓಟದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಆಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ್ ಕುಮಾರ್ ಪಾಂಡೆ, ಉಪ ಪ್ರಾಂಶುಪಾಲರಾದ ದೀಪ ಮೌಳ್, ದೈಹಿಕ ಶಿಕ್ಷಣ ಶಿಕ್ಷರಾದ ಗಂಗಾಧರ ಮಾಗಳ್ದ, ತಂಡದ ವ್ಯವಸ್ಥಾಪಕರಾದ ಎಂ.ಕೆ.ಪುರಂದರ್ ಹಾಗೂ ಶಾಲಾ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಅ.4 NEWS DESK : ಎನ್ಎಸ್ಯುಐ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಭಾರತದ ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಾಚರಣೆ ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ ಬಹುಮಾನವನ್ನು ಮಡಿಕೇರಿಯ ಸಂತ ಜೋಸೆಫ್ ಕಾಲೇಜಿನ ವಿದ್ಯಾರ್ಥಿನಿ ಕೆ.ಜಿ.ಸಾಹಿತ್ಯ ಪಡೆದುಕೊಂಡರು. ಸೋಮವಾರಪೇಟೆಯ ಸಂತ ಮೈಕಲ್ ಕಾಲೇಜಿನ ವಿದ್ಯಾರ್ಥಿನಿ ಅಹಲ್ಯ ಹೆಚ್.ಶೆಟ್ಟಿ ದ್ವಿತೀಯ, ಕೊಟ್ಟಮುಡಿ ಮರ್ಕಜುಲ್ ಹಿದಾಯ ಕಾಲೇಜಿನ ಸಹದತ್ ಇಸ್ಮಾಯಿಲ್ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿಗೆ ತೆರಳಿ ಬಹುಮಾನ ವಿತರಿಸಲಾಯಿತು. ಲೇಖಕ ಹಾಗೂ ಸಾಹಿತಿ ಸಾಹಿತ್ಯ ನಂದಾವರ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಈ ಸಂದರ್ಭ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಅಬ್ದುಲ್ ರಾಶಿದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತಾಪ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕಾಲೇಜಿನ ಪ್ರಾಂಶುಪಾಲರಾದ ಜೋಸೆಫ್, ಕಾಲೇಜಿನ ಪ್ರಾಂಶುಪಾಲರಾದ ನೂರಾನಿ ಉಸ್ತಾದ್, ವಿವಿಧ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ NEWS DESK ಅ.4 : ಕುಶಾಲನಗರದ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಕಲಹ ನಡೆದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೊಡಲಿಯಿಂದ ನಡೆಸಿದ ಹಲ್ಲೆಯಿಂದ ಬಸವೇಶ್ವರ ಬಡಾವಣೆಯ ನಿವಾಸಿ ಜೋಸೆಫ್ (55) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಂದರನಗರ ನಿವಾಸಿ ವಸಂತ (46) ಅವರು ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿ ಬಸವೇಶ್ವರ ಬಡಾವಣೆಯ ನಿವಾಸಿ ಗಿರೀಶ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದ ಜೋಸೆಫ್ ಹಾಗೂ ವಸಂತ ಅವರು ಮನೆಯ ಬಳಿ ಇದ್ದಾಗ ಗಿರೀಶ್ ಬಂದು ಈ ಹಿಂದೆ ಮಾಡಿದ ಕೆಲಸದ ಬಾಕಿ ಹಣ ನೀಡುವಂತೆ ಜೋಸೆಫ್ ಅವರ ಬಳಿ ಕೇಳಿದ್ದಾನೆ. ಯಾವುದೇ ಹಣ ನೀಡಲು ಬಾಕಿ ಇರುವುದಿಲ್ಲ ಎಂದು ಜೋಸೆಫ್ ಅವರು ಹೇಳಿದಾಗ ಕುಪಿತಗೊಂಡ ಗಿರೀಶ್ ತನ್ನ ಮನೆಗೆ ಹೋಗಿ ಕೊಡಲಿ ತಂದು ಜೋಸೆಫ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ತಡೆಯಲು ಹೋದ ವಸಂತ…
ಮಡಿಕೇರಿ ಅ.4 NEWS DESK : ಕೊಡಗಿನ ಕ್ರೀಡೆಯೆಂದರೆ ಹಾಕಿ ಆಟ ಅದರಲ್ಲೂ ಹಾಕಿ ಆಡುತ್ತಲೇ ಜೀವ ತ್ಯಜಿಸಿದ ಆಟಗಾರನೇ ಚೌರೀರ ಹರಿ ಅಚ್ಚಯ್ಯ. ಚೌರೀರ ಅಪ್ಪಯ್ಯ ಹಾಗೂ ದೇಚವ್ವ (ತಾಮನೆ ಕಾಡುಮಂಡ) ದಂಪತಿಯರ ಪುತ್ರನಾಗಿ ಹರಿ ಅವರು ಜನವರಿ 30, 1953 ರಂದು ಮಡಿಕೇರಿಯಲ್ಲಿ ಜನಿಸಿದರು. ಶಿಕ್ಷಣ :: ಹರಿ ಅವರು ಪ್ರಾಥಮಿಕ ಶಿಕ್ಷಣವನ್ನು ಹಾಗು ಪ್ರೌಢ ಶಿಕ್ಷಣವನ್ನು ಮಡಿಕೇರಿಯಲ್ಲಿ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಎ ಪದವಿಯನ್ನು ಪಡೆದರು. ಬಾಲ್ಯದಿಂದಲೇ ಹಾಕಿಯ ಓಡನಾಟ :: ಬಾಲ್ಯದಿಂದಲೇ ಹಾಕಿ ಆಟದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಹರಿಪಾಲ್ ಅವರು ತಮಗಿಂತ ಹಿರಿಯ ಆಟಗಾರರ ಜೊತೆ ಹಾಕಿ ಆಡುತ್ತಿದ್ದರು. ತಮ್ಮ 10- 12 ನೇ ವಯಸ್ಸಿನಲ್ಲಿ ಗೋಲ್ ಕೀಪರ್ ಆಗಿ ಆಡುತ್ತಿದ್ದರು. ನಂತರ ಕಾಲೇಜು ದಿನಗಳಲ್ಲಿ ಫುಲ್ ಬ್ಯಾಕ್ ಆಗಿ ಆಡಲು ಪ್ರಾರಂಭಿಸಿದರು. ಸ್ನೇಹಿತರ ಅನಿಸಿಕೆ :: ಕೋಟೆರ ಮುದ್ದಯ್ಯ ಹಾಗೂ ಹರಿಪಾಲ್ ಅವರಿಬ್ಬರು ಕಾಲೇಜು ಸಹಪಾಠಿಗಳಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪರ…
ನಾಪೋಕ್ಲು ಅ.4 NEWS DESK : ಅಂಕುರ್ ಪಬ್ಲಿಕ್ ಶಾಲೆಯ ಲಿಯೋ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಲಿಯೋ ಕ್ಲಬ್ ಸದಸ್ಯರು ಶಾಲಾ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಿ, ನಾಪೋಕ್ಲು – ಭಾಗಮಂಡಲ ಮುಖ್ಯ ರಸ್ತೆ ಬಸ್ ತಂಗುದಾಣ ಸುತ್ತಮುತ್ತ ಇದ್ದ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸಿ ಪರಿಸರವನ್ನು ಶುಚಿಗೊಳಿಸಿದರು. ಗಾಂಧೀಜಿಯವರ ಚಿಂತನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಲಿಯೋ ಕ್ಲಬ್ ಸದಸ್ಯರು ಕಾರ್ಯ ನಿರ್ವಹಿಸಿದ್ದು, ಕಾರ್ಯಕ್ರಮದಲ್ಲಿ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಕೇಟೋಳಿರ ರತ್ನ ಚರ್ಮಣ್ಣ ಶಿಕ್ಷಕ ಬೃಂದ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.4 NEWS DESK : ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ, ಜನರ ಆರೋಗ್ಯ ಮತ್ತು ಮನಸ್ಸು ಸ್ವಚ್ಛವಾಗಿರುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಸ್ವಚ್ಛತೆಯೇ ಸೇವೆ ಎಂಬ ಘೋಷ ವಾಕ್ಯದೊಂದಿಗೆ ವಿರಾಜಪೇಟೆ ನಗರಾದ್ಯಂತ ಸಂಚರಿಸಿದ ಶಾಸಕರು ತಾವೇ ಸ್ವಚ್ಛತಾ ಕಾರ್ಯ ಕೈಗೊಂಡು ನಗರವಾಸಿಗಳಿಗೆ ಸ್ವಚ್ಛತೆಯ ಸಂದೇಶವನ್ನು ಸಾರಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆಯ ನೂತನ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಕಾಂಗ್ರೆಸ್ ಪಕ್ಷದ ಪುರಸಭೆ ಕೌನ್ಸಿಲರ್’ಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.






