ವಿರಾಜಪೇಟೆ ಅ.4 NEWS DESK : ಪೆಗ್ಗರಿಕಾಡು, ಬಿಟ್ಟಂಗಾಲ, ವಿರಾಜಪೇಟೆಯ ನವೋದಯ ಯುವಕ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಟಿ.ಪಿ.ಸುಬ್ಬಯ್ಯ, ಉಪಾಧ್ಯಕ್ಷರಾಗಿ ಹೆಚ್.ಕೆ.ಸುಮಂತ್, ಖಜಾಂಚಿಯಾಗಿ ಟಿ.ಎಮ್.ಸುದೀಶ್, ಕಾರ್ಯದರ್ಶಿಯಾಗಿ ಹೆಚ್.ಎ.ಶಿವಕುಮಾರ್, ಸಲಹೆಗಾರರಾಗಿ ವಿನೋದ್ ಪಿ.ಎನ್, ಅಜಿತ್ ಟಿ.ವಿ. ಮತ್ತು ಬಿ.ಎಂ.ದಿನೇಶ್ ಅವರನ್ನು ಆಯ್ಕೆ ಮಾಡಲಾಯಿತು.
ಲೇಖಕ: admin
ನಾಪೋಕ್ಲು ಅ.4 NEWS DESK : ಅಜ್ಜಿಮುಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಿಸಲಾಯತು. ಗಾಂಧಿ ಜಯಂತಿ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್ ಮತ್ತು ಸಿಹಿಯನ್ನು ಹಂಚಿ ದಿನದ ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ಪುಷ್ಪವತಿ, ಶೌರ್ಯ ಮಾಸ್ಟರ್ ದಿವ್ಯಮಂದಪ್ಪ ಬಾಳೆಯಡ, ಶೌರ್ಯ ಸ್ವಯಂ ಸೇವಕರದ ದಿಲಿಶ್, ಶಂಕರ್, ಮಾಯಿಲಪ್ಪ, ಸುನೀತಾ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.4 NEWS DESK : ಕೊಡಗು ಹವ್ಯಕ ಬ್ರಾಹ್ಮಣರ ಉತ್ತಮ ಜೀವನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ವಿರಾಜಪೇಟೆಯ ಆಂಜನೇಯ ದೇವಾಲಯದ ಸಮೀಪದ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಎನ್.ಹರಿಶಂಕರ್ ಪ್ರಸಾದ್, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಅಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು ಸಂಘದ ಶ್ರೇಯೋಭಿವೃದ್ಧಿಗೆ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಎಂ.ಎಸ್.ಸುಧೀರ್ ಕುಮಾರ್, ನಿರ್ದೇಶಕರಾದ ಎನ್.ನಾಗರಾಜ್, ಎ.ವಿ.ಮಂಜುನಾಥ್, ಎಸ್.ಯು.ಪಾರ್ವತಿ, ಎಂ.ಜಿ.ರಾಮಪ್ರಸಾದ್, ಕೆ.ಆರ್.ರಂಜಿತ್, ಎನ್.ಎಸ್.ಉದಯ ಶಂಕರ್, ಎಸ್.ಎಸ್.ಮೀನಾಕ್ಷಿ, ಸಿ.ಎಸ್.ಸುರೇಶ್, ಕೆ.ಎಸ್.ಮಂಜುನಾಥ್, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ರಾಮು ಮೂಗೂರು, ಮಾಜಿ ಅಧ್ಯಕ್ಷೆ ಗೀತಾ ಗಿರೀಶ್ ಹಾಗೂ ಇನ್ನಿತರ ನಿರ್ದೇಶಕರುಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.4 NEWS DESK : ಮಡಿಕೇರಿ ದಸರಾ ಜನೋತ್ಸವ ಅಂಗವಾಗಿನ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಇಂದು (ಅ.4) ಸಂಜೆ 6 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಚಾಲನೆ ದೊರಕಲಿದ್ದು, ಜಿಲ್ಲಾಧಿಕಾರಿ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ವೆಂಕಟ ರಾಜಾ ಕಾಯ೯ಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ತಿಳಿಸಿದ್ದಾರೆ. ಉದ್ಘಾಟನಾ ಕಾಯ೯ಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಶಾಸಕರುಗಳಾದ ಬೋಜೇಗೋಡ, ಧನಂಜಯ ಸಜಿ೯, ಮಾಜಿ ಶಾಸಕರಾದ ಕೆ ಜಿ ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಮುಖ್ಯಕಾಯ೯ನಿವ೯ಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ನಗರಸಭೆ ಪೌರಾಯುಕ್ತ ರಮೇಶ್, ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ರಾಜೇಶ್ ಬಿ.ವೈ, ಖಜಾಂಚಿ ಅರುಣ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇ೯ಶಕ ಕುಮಾರ್, ವಾತಾ೯ಧಿಕಾರಿ ಚಿನ್ನಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಕಾವ್ಯಶ್ರೀ ಕಪಿಲ್ ತಂಡದಿಂದ ನೖತ್ಯ, ವಿರಾಜಪೇಟೆಯ ಕಾವೇರಿ ಅಯ್ಯಪ್ಪ ತಂಡದಿಂದ ಹಾಡುಗಾರಿಕೆ ಎ ಕ್ರಿಯೇಟಿವ್…
ಸೋಮವಾರಪೇಟೆ ಅ.4 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯಕ್ಕೆ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಕ್ತಿಪಾರ್ವತಿ ಉತ್ಸವ ಮೂರ್ತಿಯನ್ನು ಆನೆಕೆರೆಯಲ್ಲಿ ಗಂಗೆ ಪೂಜೆಯ ನಂತರ ಮೆರವಣಿಗೆಯಲ್ಲಿ ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಅರ್ಚಕ ಚಿತ್ರಕುಮಾರ್ ಭಟ್ ನೇತೃತ್ವದಲ್ಲಿ ಪಾರ್ವತಿ ದೇವಿಗೆ ಪುಷ್ಪಾಲಂಕಾರ, ಮಹಾ ಮಂಗಳಾರತಿ ನಡೆಯಿತು.
ಮಡಿಕೇರಿ ಅ.4 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಎರಡನೇ ದಿನವಾದ ಇಂದು ಹೂವಿನ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.5 ರಂದು ಬೇವಿನ ಅಲಂಕಾರ ನಡೆಯಲಿದೆ.
ಸೋಮವಾರಪೇಟೆ ಅ.4 NEWS DESK : ಲಯನ್ಸ್ ಕ್ಲಬ್ ಸೋಮವಾರಪೇಟೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀಗಂಧ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎನ್.ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಕೆ.ಬಸವರಾಜು ಹಾಗೂ ಹೊಸ ತೋಟ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಿರ್ಮಿಸಿದ ಪರಿಸರ ಸ್ನೇಹಿ ಚಿತಗಾರ ಕಟ್ಟಡವನ್ನು ನಿರ್ಮಿಸಿಕೊಟ್ಟ ರಾಘವೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸೋಮಾವಾರಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಜಾಂಚಿ ಜಗತ್ ಪ್ರಧಾನ್, ಮಾಜಿ ಅಧ್ಯಕ್ಷ ಎ.ಎಸ್.ಮಹೇಶ್, ಹರೀಶ್, ರೋಹಿತ್, ಜೆ.ಸಿ.ಶೇಖರ್, ನಿರ್ವಾಣಿಶೆಟ್ಟಿ, ಸಿ.ಕೆ.ಮಲ್ಲಪ್ಪ ಇದ್ದರು.
ಸೋಮವಾರಪೇಟೆ ಅ.4 NEWS DESK : ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿರುವ ‘ನಾವು ಪ್ರತಿಷ್ಠಾನ ’ ಎಂಬ ಸರ್ಕಾರೇತರ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನೊಳಗೊಂಡ ವದ್ದಳ್ಳಿ ಪ್ರಕಾಶನದ ಕಿರು ಪುಸ್ತಕವನ್ನು ಸಾಮಾಜಿಕ ಕಾರ್ಯಕರ್ತೆ ಮೋನಿಕಾ ಬಿಡುಗಡೆಗೊಳಿಸಿದರು. ಸಂಸ್ಥೆಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕಾರ್ಯಕಾರಿ ನಿರ್ದೇಶಕಿ ಸುಮನ್ ಮ್ಯಾಥ್ಯೂ, ಸದಸ್ಯರುಗಳಾದ ಪೊನ್ನಪ್ಪ, ರವಿಕುಮಾರ್, ಪ್ರಜ್ವಲ್, ಕಾರ್ತಿಕ್ ಕಿರಗಂದೂರು ಇದ್ದರು.
ಸೋಮವಾರಪೇಟೆ ಅ.4 NEWS DESK : ಶಾಂತಳ್ಳಿ-ಬೆಟ್ಟದಳ್ಳಿಯಲ್ಲಿರುವ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿ, ಬೇರೆಡೆಗೆ ವರ್ಗಾವಣೆಯಾದ ಶಿಕ್ಷಕರು ಹಾಗೂ ಸಿಬ್ಬಂದಿಗಳನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕುಮಾರಲಿಂಗೇಶ್ವರ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ.ಕೆ.ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ವಾರ್ಷಿಕ ಮಹಾಸಭೆಯಲ್ಲಿ, ಪ್ರೌಢಶಾಲೆಯಲ್ಲಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸಿದ ಉಷಾಕುಮಾರಿ, ಪರಶುರಾಮ, ಕುಶಾಲಪ್ಪ, ಸಿಬ್ಬಂದಿಗಳಾದ ದೀಪಕ್, ರಘು, ವಿಜಯ ಅವರುಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕಾರ್ಯಪ್ಪ, ಬಾತ್ಮೀದಾರ ಸಂಪತ್, ನಿರ್ದೇಶಕ ಅರುಣ್ ಕೊತ್ನಳ್ಳಿ, ಮಾಜಿ ಎಂ.ಎಲ್.ಸಿ. ಮೇದಪ್ಪ ಸೇರಿದಂತೆ ನಿರ್ದೇಶಕರುಗಳು ಇದ್ದರು. ಶ್ರೀಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ, ಶಿಕ್ಷಕರುಗಳಾದ ಭವ್ಯ, ಶ್ವೇತಾ, ನಿರ್ಮಲ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.
ಮಡಿಕೇರಿ ಅ.3 NEWS DESK : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ `ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯಡಿ ರಾಷ್ಟ್ರವ್ಯಾಪಿ ನಡೆದ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವು ಅ.6 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಝೈನಬಾ ರೆಹಮಾನ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ.ಕಾವೇರಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ ಗಣ್ಯ ಉಪಸ್ಥಿತರಿರಲಿದ್ದು, ಮಂಗಳೂರಿನ ಲುಬ್ನಾ ಝಕಿಯಾ `ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲು ಅಭಿಯಾನದ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಕೊಡಗಿನಲ್ಲಿ ಮಹಿಳಾ ಸಮಾವೇಶ, ಗಣ್ಯ ವ್ಯಕ್ತಿಗಳ ಭೇಟಿ-ಸಂದರ್ಶನ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಮನೆ ಮನೆಗೆ…






