ಲೇಖಕ: admin

ಮಡಿಕೇರಿ ಅ26 NEWS DESK : ಜಿಲ್ಲಾಡಳಿತವು 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು ಎಂದರು. 25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ…

Read More

ಮಡಿಕೇರಿ ಅ.26 NEWS DESK : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಷರತ್ತುಗಳು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ…

Read More

ಮಡಿಕೇರಿ ಅ.26 NEWS DESK : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಷರತ್ತುಗಳು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ…

Read More

ಮಡಿಕೇರಿ ಅ.26 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು, ದೊಡ್ಡತ್ತೂರು  ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಜಮೀನುಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.  ಚಿಕ್ಕತ್ತೂರು, ದೊಡ್ಡತ್ತೂರು ಗ್ರಾಮದ ರಾಮೇಗೌಡ, ಕಾಳೇಗೌಡ ಅವರ ಜಮೀನಿಗೆ  ಭೇಟಿ ನೀಡಿದ ಅಧಿಕಾರಿಗಳು ಬೆಳೆಗಾರರಿಂದ ನಷ್ಟದ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಣಾಧಿಕಾರಿ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಹಾಜರಿದ್ದರು.

Read More

ಮಡಿಕೇರಿ ಅ.26 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಬಸವ, ಅಂಬೇಡ್ಕರ್, ಪಿಎಂಜಿಎಸ್‍ವೈ, ಮತ್ತಿತರ ವಸತಿ ಯೋಜನೆಯಡಿ 2010-11 ರಿಂದ ಮನೆ ನಿರ್ಮಾಣಕ್ಕೆ ಬಾಕಿ ಇದ್ದು, ಸಾಧ್ಯವಾದಷ್ಟು ಪ್ರಗತಿ ಸಾಧಿಸುವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ವಸತಿ ಯೋಜನೆಯಡಿ ಪರಿಶಿಷ್ಟರಿಗೆ 2 ಲಕ್ಷ ರೂ., ಸಾಮಾನ್ಯರಿಗೆ 1.20 ಲಕ್ಷ ರೂ., ಇದ್ದು, ವಸತಿ ಯೋಜನೆ ಪ್ರಗತಿ ಸಾಧಿಸಲು ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವಸತಿ ಯೋಜನೆ ಪ್ರಗತಿ…

Read More

ಮಡಿಕೇರಿ NEWS DESK ಅ.25 : ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್ (27) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದÀ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಅ.20 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ವಾಹನದಟ್ಟಣೆ ಹೆಚ್ಚಾಗಿತ್ತು. ಈ ಸಂದರ್ಭ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು.ಎ.ಜಿ (27) ಅವರು ಡಿಕ್ಕಿಪಡಿಸಿದ ನಝೀರ್ ನ ಕಾರನ್ನು ಪಕ್ಕಕ್ಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ನಿರ್ಲಕ್ಷಿಸಿದ ನಝೀರ್ ಕಾರನ್ನು ಚಲಾಯಿಸಿ ಪರಾರಿಯಾಗಿದ್ದಾನೆ. ಈ ಸಂದರ್ಭ ಸಂಜು ಅವರ ಬಲಗಾಲಿಗೆ ಗಾಯವಾಗಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಪಿಎಸ್‌ಐ ಲೋಕೇಶ್…

Read More

ಮಡಿಕೇರಿ ಅ.25 NEWS DESK : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಣ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಆರಂಭಗೊಂಡು ಶತಮಾನ ಪೂರೈಸಿದೆ. ಈ ಸಂಕಷ್ಟದಿಂದ ಜನರು ನೆಮ್ಮದಿಯನ್ನು ಕಳೆದುಕೊಂಡಿದ್ದು, ಸುದೀರ್ಘ ಅವಧಿಯಿಂದ ನಡೆದುಕೊಂಡು ಬಂದಿರುವ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಮೈಸೂರು ಆದಿ ಚುಂಚನಗಿರಿ ಶಾಖಾ ಮಠದ ಶ್ರೀಸೋಮನಾಥ ಸ್ವಾಮೀಜಿ ತಿಳಿಸಿದ್ದಾರೆ. ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿಯಿಂದ ಆಯೋಜಿತ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಮಾತೆ ಕಾವೇರಿಗೆ ಪೂಜೆ ನೆರವೇರಿಸಿ, ನದಿ ವಿವಾದ ಪರಿಹಾರಕ್ಕೆ ನೋಂದಾವಣೆ ಮಾಡಿರುವ ಸಮಿತಿಗೆ ಶುಭ ಹಾರೈಸಿ ಅವರು ಮಾತನಾಡಿದರು. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ರಾಜ್ಯದ ವಿವಿಧ ಮಠಾಧೀಶರು, ಸವೋಚ್ಚ ನ್ಯಾಯಾಲಯ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ನೀರಾವರಿ ತಜ್ಞರು, ಕಾನೂನು ತಜ್ಞರನ್ನು ಒಳಗೊಂಡ ನೂರು ಮಂದಿಯ ವಿಶೇಷ ಸಮಿತಿಯನ್ನು ರಚಿಸಿ ಅದನ್ನು ನೋಂದಾವಣೆ ಮಾಡಲಾಗಿದೆ. ಈ ಸಮಿತಿ, ಕಾವೇರಿ ನದಿ…

Read More

ಮಡಿಕೇರಿ ಅ.25 NEWS DESK : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈ ನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ನಡೆದ “44ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2024ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 23 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿದ್ದು, 14 ಚಾಂಪಿಯನ್ ಟ್ರೋಫಿ, 8 ಚಿನ್ನದ ಪದಕ ಮತ್ತು 1 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ಸ್ಪರ್ಧೆಯಲ್ಲಿ ಒಟ್ಟು 8200 ಮಕ್ಕಳು ಭಾಗವಹಿಸಿದ್ದು, ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಸಾಧನೆ ಮೆರೆದರು. ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಸಾಧನೆಯ ಹೆಗ್ಗಳಿಕೆ ನಮ್ಮ ಕೇಂದ್ರದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು. ಈ ಅದ್ಭುತ ಯಶಸ್ಸಿಗೆ ಕಾರಣಕರ್ತರಾದ ಮಕ್ಕಳಿಗೆ ಹಾಗೂ ಮುತುವರ್ಜಿ ವಹಿಸಿದ ಪೋಷಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತರಬೇತುದಾರರಾದ ಮಾಪಂಗಡ…

Read More

ವಿರಾಜಪೇಟೆ ಅ.25 NEWS DESK : ಗ್ರಂಥಾಲಯಗಳ ಡಿಜಿಟಲೀಕರಣದಿಂದ ಜ್ಞಾನದ ಪ್ರಸಾರವಾಗಿ ವಿಸ್ತರಣೆಯಾಗುತ್ತ ಹೋಗುತ್ತದೆ ಎಂದು ಬೆಂಗಳೂರಿನ ಈಸಿಲಿಬ್ ಸಾಫ್ಟ್ ವೇರ್ ಹಾಗೂ ಫೈನ್ ವೆನ್ ಸಿಸ್ಟಮ್ ಟೆಕ್ನಾಲಜಿಯ ಸಿಇಓ ವಾಸು ಎ.ದೇಶಪಾಂಡೆ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಆಯೋಜಿಸಲಾಗಿದ್ದ ಈಸಿಲಿಬ್ ಸಾಫ್ಟ್ ವೇರ್ ಕುರಿತ ಗ್ರಂಥಪಾಲಕರ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ಲಾವುಡ್ ವರ್ಷನ್ ನ ಪರಿಣಾಮಕಾರಿ ಬಳಕೆ ಪ್ರಮುಖವಾಗಿದ್ದು, ಇದು ಆಧುನಿಕ ತಂತ್ರಾಂಶವನ್ನು ಪರಿಚಯಿಸುತ್ತದೆ. ಓದುಗರಿಗೆ ಇದು ಉಪಯುಕ್ತವಾಗಿದ್ದು, ತನ್ನತ್ತ ಸೆಳೆಯುತಿದೆ ಎಂದರು. ಮಾತ್ರವಲ್ಲದೆ ಡಿಜಿಟಲೀಕರಣದ ಬಳಕೆ ಹೆಚ್ಚಿದಂತೆ ಅಧ್ಯಯನ ವ್ಯಾಪ್ತಿ ವಿಸ್ತಾರವಾಗುತ್ತಿದ್ದು ಸಿಬ್ಬಂದಿಗಳಿಗೂ ಸರಳ ವಿಧಾನವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಪುಸ್ತಕವನ್ನು ಓದುವುದರಿಂದ ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು…

Read More

ಮಡಿಕೇರಿ ಅ.25 NEWS DESK : ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ದೃಢ ವಿಶ್ವಾಸದಿಂದ ಮಾಡಬೇಕು ಮತ್ತು ಕಂಡ ಕನಸನ್ನು ನನಸು ಮಾಡಿಕೊಳ್ಳಲು ಶ್ರಮವಹಿಸಬೇಕು. ಆಗ ಮಾತ್ರ ಜೀವನದಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಕರ್ನಲ್ ಕೆ.ಸಿ.ಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೀಬಿಲ್ಡ್ ಕೊಡಗು ಸಂಸ್ಥೆ (ಟೈಮ್ ಟು ಗಿವ್ ಬ್ಯಾಕ್  and ಜಾಯ್ ಆಫ್ ಗಿವಿಂಗ್)ಯ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸತತ ಪರಿಶ್ರಮದ ಮೂಲಕ ಶೈಕ್ಷಣಿಕ ಸಾಧನೆ ಮಾಡಬೇಕು. ಪ್ರತಿಯೊಬ್ಬರು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು, ಆ ನಿಟ್ಟಿನಲ್ಲಿ ತಮ್ಮ ಸಂಪಾದನೆಯಲ್ಲಿ ಶೇ.10ರಷ್ಟು ಹಣವನ್ನು ಸಮಾಜ ಸೇವೆಗಾಗಿ ಮೀಸಲಿಡಬೇಕು. ಇದು ಸಮಾಜದ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ರೀಬಿಲ್ಡ್ ಕೊಡಗು ಸಂಸ್ಥೆ ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ಸ್ಪಂದಿಸಿರುವುದು ಶ್ಲಾಘನೀಯ. ಅನೇಕ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ ಅವರು ಕೊಡಗಿನ ಜನತೆಗೆ ಏಕಾಂಗಿಯಾಗಿ ಪರಿಹಾರವನ್ನು ಒದಗಿಸಿದ್ದಾರೆ.…

Read More