ಮಡಿಕೇರಿ ಅ.25 NEWS DESK : ಪ್ರವಾಸೋದ್ಯಮಕ್ಕೆ ಪೂರಕವಾಗಿ, ಪ್ರಮುಖ ಪ್ರವಾಸಿತಾಣಗಳನ್ನು ಕೇಂದ್ರವಾಗಿರಿಸಿಕೊಂಡು ರಚಿಸಲಾದ ಚಿತ್ರ ಕಲಾಕೃತಿಗಳ ಪ್ರದರ್ಶನವನ್ನು ಸಧ್ಯದಲ್ಲಿ ನಗರದಲ್ಲಿ ಆಯೋಜಿಸುವುದಾಗಿ ಕಲಾವಿದ ಸಂದೀಪ್ ಕುಮಾರ್ ಆರ್. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳ ಪ್ರಮುಖ ಪ್ರವಾಸಿ ತಾಣಗಳನ್ನು ತಾನು ಕುಂಚದಿಂದ ಸೆರೆಹಿಡಿದಿದ್ದೇನೆ. ಇಂತಹ 237 ಕಲಾಕೃತಿಗಳ ಪ್ರದರ್ಶನ ನನ್ನ ಉದ್ದೇಶವೆಂದರು. ಚಿತ್ರಕಲಾ ಪ್ರದರ್ಶನಕ್ಕೆ ರಾಜಾಸೀಟಿನಲ್ಲಿ ಅವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ವಿನಂತಿಸಿಕೊಂಡಿದ್ದೆನಾದರು, ಸೂಕ್ತ ಸ್ಪಂದನ ದೊರಕಿಲ್ಲ. ಹೀಗಿದ್ದೂ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನನ್ನ ಕಲಾ ಸಾಧನೆ ಮತ್ತು ತಾನು ರಚಿಸಿರುವ ಕಲಾಕೃತಿಗಳ ಪ್ರದರ್ಶನಕ್ಕೆ ಬೆಂಬಲವನ್ನು ನೀಡಿದ್ದಾರೆ. ಈ ಹಿನ್ನೆಲೆ ಅವಕಾಶ ದೊರೆತಲ್ಲಿ ಶನಿವಾರದಿಂದಲೆ ರಾಜಾಸೀಟಿನಲ್ಲಿ ಚಿತ್ರಕಲಾ ಪ್ರದರ್ಶನ ಆಯೋಜಿಸುವುದಾಗಿ ಹೇಳಿದರು. ರಾಜಾಸೀಟಿನಲ್ಲಿ ಅವಕಾಶ ದೊರಕದಿದ್ದಲ್ಲಿ ಚೈನ್ ಗೇಟ್ ಬಳಿ ಈ ಹಿಂದೆ ತಾನು ನಡೆಸುತ್ತಿದ್ದ ಆರ್ಟ್ ಗ್ಯಾಲರಿ ಸ್ಥಳದಲ್ಲಿ ಚಿತ್ರಕಲಾ ಪ್ರದರ್ಶನ ನಡೆಸಬೇಕೆನ್ನುವ ಚಿಂತನೆ ತನ್ನದು. ಈ ನನ್ನ ಪ್ರಯತ್ನಗಳಿಗೆ ಪತ್ನಿ ಕವಿತಾ…
ಲೇಖಕ: admin
ಮಡಿಕೇರಿ ಅ.25 NEWS DESK : ಕೇಲೋ ಇಂಡಿಯಾದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಷನ್ ಸಂಸ್ಥೆಯ ಸಹಕಾರದೊಂದಿಗೆ, ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ವತಿಯಿಂದ ಮಡಿಕೇರಿಯಲ್ಲಿ ನ.5 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಕಿಕ್ ಬಾಕ್ಸಿಂಗ್ ತರಬೇತಿ ಕಿಂಬರ್ಲಿ ಕೂರ್ಗ್ ನೆರವಿನೊಂದಿಗೆ ನಡೆಯಲಿದೆ ಎಂದರು. ತರಬೇತಿ ಶಿಬಿರದಲ್ಲಿ ಜಿಲ್ಲೆ ಹಾಗೂ ರಾಷ್ಟ್ರದ ವಿವಿಧೆಡೆಗಳ ಆಸಕ್ತ 200 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತರಬೇತಿಯಲ್ಲಿ ರಾಷ್ಟ್ರೀಯ ಮಟ್ಟದ 13 ಹಾಗೂ 3 ಮಂದಿ ಅಂತರಾಷ್ಟ್ರೀಯ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ. ತರಬೇತಿಯಲ್ಲಿ ಪಾಲ್ಗೊಳ್ಳುವವರಿಗೆ 14 ಸಾವಿರ ಪ್ರವೇಶ ಶುಲ್ಕ ನಿಗಧಿಯಾಗಿದ್ದು, ಸ್ಥಳೀಯರಿಗೆ ರಿಯಾಯಿತಿ ಇರಲಿದೆ ಎಂದು ತಿಳಿಸಿದರು. ಕಿಕ್ ಬಾಕ್ಸಿಂಗ್ ತರಬೇತಿಯಲ್ಲಿ ಪಾಲ್ಗೊಳ್ಳಲು ಯಾವುದೇ ವಯೋಮಿತಿಯನ್ನು ಕಡ್ಡಾಯಗೊಳಿಸಿಲ್ಲ.…
ನಾಪೋಕ್ಲು ಅ.25 NEWS DESK : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದ ಎಂ.ರಾಮಚಂದ್ರ ಕೊಡಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.25 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಒತ್ತಾಯಿಸಿ ಭಾರತ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷ ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದ್ದು, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಪಕ್ಷದ ನೆಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 12 ಸಾವಿರ ಜನಸಂಖ್ಯೆ ಹೊಂದಿರುವ ನೆಲ್ಲಿಹುದಿಕೇರಿಗೆ ಸಾರ್ವಜನಿಕ ಸ್ಮಶಾನದ ಅಗತ್ಯವಿದ್ದು, ಸಿಪಿಐಎಂ ಪಕ್ಷ ಜನಪರವಾಗಿ ಹೋರಾಟ ನಡೆಸುತ್ತಿದೆ. ಆದರೆ ಕೆಲವರು ದೇವಾಲಯದ ಹೆಸರು ಹೇಳಿಕೊಂಡು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಇದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕಾರ್ಯದಲ್ಲಿ ತೊಡಗಿರುವ ಸಿಪಿಐಎಂ ಪಕ್ಷ ಯಾವುದೇ ದೇವಾಲಯ ಅಥವಾ ಇನ್ನಿತರ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಜನರನ್ನು ಕೆರಳಿಸುವ ಕೆಲಸ ಮಾಡುತ್ತಿಲ್ಲ. ಭೂಮಿಯಿಲ್ಲದ ಬಡವರಿಗೆ ಭೂಮಿ, ಸೂರು, ನಿರುದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ನ್ಯಾಯ ಸಮ್ಮತವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೋರಾಟ ನಡೆಸುತ್ತಿದೆ. ಸ್ಮಶಾನದ ಹೋರಾಟದ ದಿಕ್ಕು ತಪ್ಪಿಸಲು ಕೆಲವರು ದೇವಾಲಯದ…
ಮಡಿಕೇರಿ ಅ.25 NEWS DESK : ಕೊಡಗು ಜಿಲ್ಲೆಯ ನಾಲ್ಕು ಭಾಗಗಳಲ್ಲಿ 66 ಕೆ.ವಿ.ಸಾಮರ್ಥ್ಯ ದ ವಿದ್ಯುತ್ ಉಪಕೇಂದ್ರ ಹಾಗೂ ಎರಡು ಭಾಗಗಳಲ್ಲಿ 33 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕಾಮಗಾರಿ ಕೈಗೊಳ್ಳಲು ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ಇಂಧನ ಸಚಿವರ ಗೃಹ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಜಾರ್ಜ್ ಹುದಿಕೇರಿ, ಬಾಳಲೆ, ಮೂರ್ನಾಡು, ಸಿದ್ದಾಪುರ ಗಳಲ್ಲಿ 66 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಗಳು ಹಾಗೂ ಸಂಪಾಜೆ, ಭಾಗಮಂಡಲ ಗಳಲ್ಲಿ 33 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಕ್ಕೆ ಸಂಭಂದಿಸಿದ ಕಾಮಗಾರಿಗೆ ಮುಂದಿನ ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಸೇರಿದಂತೆ…
ಮಡಿಕೇರಿ ಅ.25 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅ.27 ರಂದು ಸುಂಟಿಕೊಪ್ಪ ಹೋಬಳಿ ಮಟ್ಟದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ “ಕೊಡಗು ಭೂಷಣ” ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಡಾ.ಅಂಬೇಡ್ಕರ್ ಚಿಂತನೆಗಳನನ್ನು, ಸಂವಿಧಾನದ ಮಹತ್ವವನ್ನು ಸಾರುವ ಚಿಂತನೆಗಳಡಿ ಸುಂಟಿಕೊಪ್ಪ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ವಿರಾಜಪೇಟೆ, ಸೋಮವಾರಪೇಟೆ ವಿಭಾಗಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಉದ್ದೇಶ ತಮ್ಮದೆಂದು ಹೇಳಿದರು. ::: ಗರಗಂದೂರಿನಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ನಮನ ::: ಸುಂಟಿಕೊಪ್ಪ ಶ್ರೀ ರಾಮ ಮಂದಿರ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಜಯಂತಿ ನಡೆಯಲಿದೆ. ಇದಕ್ಕೂ ಮುನ್ನ 9.30 ಗಂಟೆಗೆ ಗರಗಂದೂರು ಗ್ರಾಮದ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುಂಟಿಕೊಪ್ಪದವರೆಗೆ ಬೈಕ್ ಜಾಥ…
ಕೊಚ್ಚಿನ್ ಅ.25 NEWS DESK : ದೇಶೀ ಮಾರುಕಟ್ಟೆಯಲ್ಲಿ ಕಾಳು ಮೆಣಸಿನ ದರವು ಎರಡು ವಾರಗಳಲಿ ಕಿಲೋಗೆ 19 ರೂಪಾಯಿಗಳಷ್ಟು ಕುಸಿತ ಕಂಡಿದೆ. ಕಳೆದ ವಾರದಲ್ಲಿಯೇ ಕಿಲೋಗೆ ₹ 11 ಕುಸಿತವಾಗಿದೆ, ಕಳೆದ ಐದು ವಾರಗಳಲ್ಲಿ ಒಟ್ಟು ಕುಸಿತವು ಕೆಜಿಗೆ ₹ 35ರಷ್ಟು ಕುಸಿದಿದೆ. (South Asian Free Trade Area ) SAFTA ಅಡಿಯಲ್ಲಿ 8 ಶೇಕಡಾ ಸುಂಕದ ಅಡಿಯಲ್ಲಿ ಶ್ರೀಲಂಕಾದಿಂದ ಆಮದು ಮಾಡಿದ ಉತ್ಪನ್ನಗಳ ಬೃಹತ್ ಆಗಮನವು ಬೆಲೆ ಕುಸಿತಕ್ಕೆ ಕಾರಣವೆಂದು ಬೆಳೆಗಾರ ಸಂಘಟನೆಗಳು ಆರೋಪಿಸಿದೆ. ಕೊಚ್ಚಿ ಟರ್ಮಿನಲ್ ಮಾರುಕಟ್ಟೆಯಲ್ಲಿ ಅನ್ಗಾರ್ಬಲ್ಡ್ ಕಿಲೋಗೆ ₹ 627 ಮತ್ತು ಗಾರ್ಬಲ್ಡ್ಗೆ ₹ 647 ರಂತೆ ಬೆಲೆಗಳು ಇವೆ. ಕೊಚ್ಚಿಯ ಕಾಳುಮೆಣಸಿನ ವ್ಯಾಪಾರಿ ಕಿಶೋರ್ ಶಾಮ್ಜಿ, ಮುಂಬೈನಿಂದ ಬಂದಿರುವ ಶ್ರೀಲಂಕಾದ ಕಾಳುಮೆಣಸು ಲಭ್ಯತೆಯೊಂದಿಗೆ ಬಹುತೇಕ ಎಲ್ಲಾ ಮಾರುಕಟ್ಟೆಗಳು ತುಂಬಿವೆ ಮತ್ತು ದಕ್ಷಿಣದ ಮಾರುಕಟ್ಟೆಗಳಲ್ಲಿಯೂ ಮಾರಾಟವಾಗುತ್ತಿದೆ ಎಂದು ಹೇಳಿದರು. ಶ್ರೀಲಂಕಾದ ಆಮದಿನ ಕಾರಣದಿಂದ ಸ್ಥಳೀಯವಾಗಿ ಬೆಳೆದ ಕಾಳುಮೆಣಸಿನ ಬೆಲೆ ಮೇಲೆ ಮತ್ತಷ್ಟು ಒತ್ತಡವನ್ನು…
ಮಡಿಕೇರಿ ಅ.25 NEWS DESK : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಮಹಾಸಭೆ ಅ.26 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಅ.24 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ದಾಖಲೆಯ 100ನೇ ಪುಸ್ತಕವನ್ನು ನ.24 ರಂದು ಅದ್ದೂರಿಯಾಗಿ ಲೋಕಾರ್ಪಣೆಗೊಳಿಸಲಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 98ನೇ ಪುಸ್ತಕ, ಲೇಖಕಿ ಡಾ.ದೀಪ ನರೇಂದ್ರ ಬಾಬು ಅವರು ರಚಿಸಿರುವ “ಗುಳೆ” ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವ ಮಕ್ಕಡ ಕೂಟದ ದಾಖಲೆಯ 100ನೇ ಪುಸ್ತಕ ಪುತ್ತರಿರ ಕರುಣ್ ಕಾಳಯ್ಯ ಸಂಪಾದಕತ್ವದ “ನೂರನೆ ಮೊಟ್ಟ್” ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದ್ದು, ಇದರೊಂದಿಗೆ ಲೇಖಕರಾದ ಐಚಂಡ ರಶ್ಮಿ ಮೇದಪ್ಪ, ಕರವಂಡ ಸೀಮಾ ಗಣಪತಿ, ತೆನ್ನೀರ ಟೀನಾ ಚಂಗಪ್ಪ, ಯಶೋಧ ಪೇರಿಯಂಡ ಅವರು ರಚಿಸಿರುವ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ ತಿಳಿಸಿದರು. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರಥಮ ಪುಸ್ತಕವನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಹೊರತರಲಾಗಿದೆ. ಸಾಮಾಜಿಕ…
ಮಡಿಕೇರಿ ಅ.24 NEWS DESK : ರಾಜ್ಯದಲ್ಲಿ ಹೋಂಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯಚಟುವಟಿಕೆಗಳು, ಪ್ರವಾಸೋದ್ಯಮ ನೀತಿ, ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಪ್ರಚಾರಾಂದೋಲನ, ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಪ್ರವಾಸಿ ಕ್ಷೇತ್ರದಲ್ಲಿ ತೊಡಗಿರುವ ಪಾಲುಗಾರರಿಗೆ ಉತ್ತೇಜನ ನೀಡುವ ಸಲುವಾಗಿ ಪ್ರಸ್ತುತ ರಾಜ್ಯದಲ್ಲಿನ ಪ್ರಮುಖ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸಿ ರಾಜ್ಯದ ಎಲ್ಲಾ ಪ್ರವಾಸಿ ಸಹಭಾಗಿದಾರರನ್ನು ಒಗ್ಗೂಡಿಸುವ ಸಂಬಂಧ ನಗರ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ನಡೆದ ‘ಕನೆಕ್ಟ್ ಕರ್ನಾಟಕ-2024’ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಒಂದು ನೀತಿ ಬೇಕಿದೆ ಎಂದು ಹಲವು ದಶಕಗಳಿಂದ ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಮುಂದಿನ ಕ್ಯಾಲೆಂಡರ್ ವರ್ಷದ ಆರಂಭದಲ್ಲಿಯೇ ಹೋಂಸ್ಟೇಗಳಿಗೆ ಹೊಸ ನೀತಿಯನ್ನು ಸರ್ಕಾರ ಘೋಷಿಸಲಿದೆ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಮಾಲಿಕರು ವಾಸಿಸುವ ಸ್ಥಳದಲ್ಲಿಯೇ ಹೋಂಸ್ಟೇಗಳು ಇರುವುದರಿಂದ ಅವುಗಳ ನಿರ್ವಹಣೆ,…






