ಮಡಿಕೇರಿ ಅ4 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಾವಾದ) ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಈ ದೇಶದ ಮೂಲ ನಿವಾಸಿಗಳು, ಆದರೆ ನಮ್ಮನ್ನು ಆಳುವ ಸರ್ಕಾರ ಶೋಷಿತ ಸಮುದಾಯಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಒತ್ತು ನೀಡುವುದನ್ನು ಬಿಟ್ಟು ಎಲ್ಲಾ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದೆ. ದಲಿತರ ಹಿತ ಕಾಯುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗುತ್ತಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನ 5ಸಾವಿರ, ಹತ್ತನೇ ತರಗತಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ.25ಸಾವಿರ ನೀಡಬೇಕು, ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು, ಸರ್ಕಾರಿ ಕಚೇರಿಯಲ್ಲಿ ದಲಿತ…
ಲೇಖಕ: admin
ಮಡಿಕೇರಿ NEWS DESK ಅ.3 : ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಸಂಭ್ರಮ ಇಂದು ಆರಂಭಗೊ0ಡಿತು. ಇತಿಹಾಸ ಪ್ರಸಿದ್ಧ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸಿ ಕರಗೋತ್ಸವದ ನಗರ ಸಂಚಾರಕ್ಕೆ ಚಾಲನೆ ನೀಡಲಾಯಿತು. ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಮಡಿಕೇರಿಯ ದಸರಾ ಉತ್ಸವಕ್ಕೆ ಒಂದೂವರೆ ಶತಮಾನದ ಭವ್ಯ ಇತಿಹಾಸವಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ದಸರಾ ಉತ್ಸವದಲ್ಲಿ ಅಗ್ರ ಸ್ಥಾನವನ್ನು ನೀಡಲಾಗಿದೆ. ನವರಾತ್ರಿಯ ವಿಶೇಷವಾಗಿ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ.ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ನಗರದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ.ಚಾಮಿ, ಗೌಳಿಬೀದಿಯ ಶ್ರೀಕಂಚಿಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಪಿ.ಸಿ.ಉಮೇಶ್, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಎ.ಉಮೇಶ್ ಹಾಗೂ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಬಿ.ಅನೀಶ್ ಕುಮಾರ್ ಹೊರುವ ಮೂಲಕ ನಗರ ಪ್ರದಕ್ಷಿಣೆಯನ್ನು ಆರಂಭಿಸಿದರು. ನವರಾತ್ರಿ ಉತ್ಸವದ ಆರಂಭದ ಹಿನ್ನೆಲೆಯಲ್ಲಿ…
ಮಡಿಕೇರಿ ಅ.3 NEWS DESK : ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಹಾಗೂ ವಿವಿಧ ಶಾಲಾ-ಕಾಲೇಜು ಸಹಯೋಗದೊಂದಿಗೆ ಗುರುವಾರ ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಧ್ಯೇಯ ವಾಕ್ಯದೊಂದಿಗೆ 70ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು. ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ, ಪ್ರತಿಯೊಬ್ಬರೂ ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ…
ಮಡಿಕೇರಿ ಅ.3 NEWS DESK : ಮಡಿಕೇರಿ ಕರಗ ಉತ್ಸವದೊಂದಿಗೆ ದಸರಾಗೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅ.4 ರಿಂದ 12 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಮಡಿಕೇರಿ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ವತಿಯಿಂದ ವಿವಿಧ ದಸರಾ ಕಾರ್ಯಕ್ರಮಗಳು ಜರುಗಲಿದೆ ಎಂದರು. ಅ.4 ರಂದು ಸಂಜೆ 6 ಗಂಟೆಗೆ ರಸಮಂಜರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.5 ರಂದು ಬೆಳಗ್ಗೆ 9 ಗಂಟೆಗೆ ‘ಮಕ್ಕಳ ದಸರಾ’ ನಡೆಯಲಿದೆ. ಜೊತೆಗೆ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅ.6 ರಂದು ಬೆಳಗ್ಗೆ 10 ಗಂಟೆಗೆ ‘ಕಾಫಿ ದಸರಾ’ ನಡೆಯಲಿದ್ದು, ಕೃಷಿ ಸಂಬಂಧಿಸಿದ ಉಪಯುಕ್ತ ಮಾಹಿತಿ ಉಳ್ಳ ಪ್ರದರ್ಶನ ನಡೆಯಲಿದೆ. ಈ…
ಕುಶಾಲನಗರ ಅ.2 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾ.ಪಂ ಸಹಯೋಗದೊಂದಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅ.2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155 ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎಸ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಧ್ಯೇಯವಾದ ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ” 2024 ರ ಅಂಗವಾಗಿ ಕೂಡ್ಲೂರು ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆ : “ಸ್ವಚ್ಛತಾ ಹೀ ಆಂದೋಲನ ನಡೆಸಲಾಯಿತು. ಸ್ವಭಾವ ಸ್ವಚ್ಛತೆ – ಸಂಸ್ಕಾರ ಸ್ವಚ್ಚತೆ”: ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮತ್ತು ಒಳ್ಳೆಯ ಸ್ವಭಾವ ಹೊಂದಿರಬೇಕು. ಆಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ವಿದ್ಯಾರ್ಥಿಗಳು…
ಮಡಿಕೇರಿ ಅ.3 NEWS DESK : ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಅ.11 ರಂದು ಗೋಣಿಕೊಪ್ಪಲು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ ಸೇರಿದಂತೆ 13 ಭಾಷೆಯ ಕವನಗಳನ್ನು 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ ಎಂದು ತಿಳಿಸಿದರು. ಕನ್ನಡ ಭಾಷೆಯ ಚುಟುಕು ಕವನ 4 ಕವಿಗಳು ವಾಚಿಸಲಿದ್ದಾರೆ. ಬೆಳೆಯ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವ ಸಲುವಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಕವನಗೋಷ್ಠಿ (6…
ಮಡಿಕೇರಿ ಅ.3 NEWS DESK : ನಗರದ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಜಯದಶಮಿಯ ಮೊದಲ ದಿನ ಶ್ರೀ ಚೌಡೇಶ್ವರಿ ದೇವಿ ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ.
ಮಡಿಕೇರಿ ಅ.3 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ವೈಭವ ನಗರದ ಗಾಂಧಿ ಮೈದಾನದಲ್ಲಿ ಅ.4 ರಿಂದ ಆರಂಭಗೊಳ್ಳಲಿದೆ. ವೇದಿಕೆ ಮತ್ತು ಪೆಂಡಾಲ್ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಮಡಿಕೇರಿ ಅ.3 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಈಗಾಗಲೇ 94 ಪುಸ್ತಕಗಳನ್ನು ಬಿಡುಗಡೆ ಮಾಡಿದ್ದು, ಮಹತ್ವಾಕಾಂಕ್ಷೆಯ 100ನೇ ಪುಸ್ತಕವನ್ನು ನವೆಂಬರ್ ತಿಂಗಳಿನಲ್ಲಿ ಅದ್ದೂರಿಯಾಗಿ ಸಮರ್ಪಿಸಲಾಗುವುದು ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 94ನೇ ಪುಸ್ತಕ, ಬರಹಗಾರ್ತಿ ಬೊಟ್ಟೋಳಂಡ ನಿವ್ಯ ದೇವಯ್ಯ ಅವರ 2ನೇ ಪುಸ್ತಕ “ಏಳ್ ದಿನಕ್ಕೊಮ್ಮ… ಬ್ರಹ್ಮಗಿರಿಲ್” ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕøತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ದಾಖಲೆಯ ಪುಸ್ತಕಗಳನ್ನು ಬಿಡುಗಡೆ ಮಾಡಿ ಹಿರಿಯ ಹಾಗೂ ಕಿರಿಯ ಬರಹಗಾರರಿಗೆ ಪ್ರೋತ್ಸಾಹವನ್ನು ನೀಡಿದೆ. ಯುವ ಬರಹಗಾರರಿಗೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿಯನ್ನು ತುಂಬಿದೆ ಎಂದರು. ಕೂಟದ ಮೂಲಕ 99ನೇ ಪುಸ್ತಕವಾಗಿ ಲೇಖಕಿ ತೆನ್ನಿರ ಟೀನಾ ಚಂಗಪ್ಪ ಅವರು ಬರೆದಿರುವ…
ಮೈಸೂರು ಅ.3 NEWS DESK : ಮೈಸೂರು ದಸರಾ ಹಿನ್ನೆಲೆ ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಆರಂಭಿಸಿದರು. ರಾಜ ಪೋಷಾಕು ಧರಿಸಿ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಬಂದು, ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಈ ಸಂದರ್ಭ ರಾಜಮಾತೆ ಪ್ರಮೋದಾದೇವಿ, ಪತ್ನಿ ತ್ರಿಷಿಕಾ ಕುಮಾರಿ, ಯುವರಾಜ ಆದ್ಯವೀರ ನರಸಿಂಹರಾಜ ಒಡೆಯರ್ ಇದ್ದರು.






