ರುಚಿಕರವಾದ ಪೆಪ್ಪರ್ ಚಿಕನ್ ಕಬಾಬ್ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು :: ಚಿಕನ್- 1 ಕೆಜಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಹಸಿಮೆಣಸಿನ ಕಾಯಿ ಪೇಸ್ಟ್- ಒಂದು ಸಣ್ಣ ಬಟ್ಟಲು (5 ಮೆಣಸಿನಕಾಯಿ), ನಿಂಬೆಹಣ್ಣು- 1, ಉಪ್ಪು-ರುಚಿಗೆ ತಕ್ಕಷ್ಟು, ಮೊಟ್ಟೆ- 1, ಅರಿಶಿಣದ ಪುಡಿ – ಅರ್ಧ ಚಮಚ, ಕಾಳು ಮೆಣಸು- 3 ಚಮಚ (ಕುಟ್ಟಿ ಪುಡಿ ಮಾಡಿದ್ದು), ದನಿಯಾ ಪುಡಿ- 1 ಚಮಚ, ಗರಂ ಮಸಾಲೆ ಪುಡಿ- 1 ಚಮಚ, ಕರಿಬೇವು- ಸ್ವಲ್ಪ, ಕೊತ್ತಂಬರಿ ಹಾಗೂ ಪುದೀನಾ- ಸ್ವಲ್ಪ, ಕಸ್ತೂರಿ ಮೇಥಿ- 1 ಚಮಚ, ಬೆಳ್ಳುಳ್ಳಿ- ಜಜ್ಜಿದ್ದು- 10 ಎಸಳು, ಕಾರ್ನ್ ಫ್ಲೋರ್- 6-7 ಚಮಚ, ಮೈದಾ ಹಿಟ್ಟು- 3 ಚಮಚ, ಸೋಯಾ ಸಾಸ್- 1 ಚಮಚ, ಎಣ್ಣೆ-ಕರಿಯಲು ಮಾಡುವ ವಿಧಾನ :: ಮೊದಲಿಗೆ ಚಿಕನ್ ನ್ನು ಚೆನ್ನಾಗಿ ತೊಳೆದು, ನೀರಿಲ್ಲದೆ ಸೋರಿಸಿಟ್ಟುಕೊಳ್ಳಿ. ಒಂದು ಪಾತ್ರೆಗೆ ಚಿಕನ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಹಸಿಮೆಣಸಿನ ಕಾಯಿ ಪೇಸ್ಟ್, ನಿಂಬೆಹಣ್ಣಿನ ರಸ ಹಾಗೂ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದು ಅರ್ಧ ಗಂಟೆಗಳ ನೆನೆಯಲು ಬಿಡಿ. ನಂತರ ಮತ್ತೊಂದು ಪಾತ್ರೆಗೆ ಮೊಟ್ಟೆ, ಅರಿಶಿಣದ ಪುಡಿ,…
ಲೇಖಕ: admin
ನಾಪೋಕ್ಲು ಅ.24 NEWS DESK : ಕರ್ನಾಟಕ ಮುಸ್ಲಿಂ ಜಮಾಯತ್ ಎಸ್ ಎಸ್ ಎಫ್ ನಾಪೋಕ್ಲು ಶಾಖೆ ವತಿಯಿಂದ ವಿಷನ್ಸ್ಪ್ರಿಂಗ್ ಫೌಂಡೇಶನ್ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ನಾಪೋಕ್ಲು ಪಟ್ಟಣದ ಮಸೀದಿಯ ಮದ್ರಸ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಎಸ್.ವೈ.ಎಸ್ ಮಡಿಕೇರಿ ಶಾಖೆಯ ಮುನಿರ್ ಮಲ್ಲಾರಿ ಉದ್ಘಾಟಿಸಿದರು. ಎಸ್.ವೈ.ಎಸ್ ರಾಜ್ಯ ಅಧ್ಯಕ್ಷ ಅಬ್ದುಲ್ ಅಫಿಲ್ ಸಅದಿ ಮಾತನಾಡಿ, ಮನುಷ್ಯನಿಗೆ ಆರೋಗ್ಯ ಬಹು ಮುಖ್ಯ. ಅದರಲ್ಲೂ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಕಣ್ಣಿನ ತಪಾಸಣಾ ಶಿಬಿರದಿಂದ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಕಣ್ಣನ್ನು ಸಂರಕ್ಷಿಸುವುದು ಅತಿಅಗತ್ಯ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ವಿಷನ್ಸ್ಪ್ರಿಂಗ್ ಫೌಂಡೇಶನ್ ನ ಅವಿನಾಶ್ ಮಾತನಾಡಿ, ಸಂಸ್ಥೆಯ ವತಿಯಿಂದ ಸಾಮಾಜಿಕ ಉಪಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಹಾಗೂ ತೋಟದ ಕಾರ್ಮಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಅಗತ್ಯ ಇದ್ದವರಿಗೆ ಮಡಿಕೇರಿಯ ಮೆಡಿಕಲ್ ಕಾಲೇಜಿನಲ್ಲಿ ಅಗತ್ಯ ಚಿಕಿತ್ಸೆಗೆ ಶಿಫಾರಸು ಮಾಡಲಾಗುತ್ತದೆ ಎಂದರು. ಕರ್ನಾಟಕ ಮುಸ್ಲಿಂ ಜಮಾಯತ್…
ಪೊನ್ನಂಪೇಟೆ ಅ.24 NEWS DESK : ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2024ಅನ್ನು ಡಿ.4 ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ.ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು. ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ…
ಮಡಿಕೇರಿ NEWS DESK ಅ.24 : ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಗ್ರಾ.ಪಂ ಅಧ್ಯಕ್ಷರ ವಿರುದ್ಧ ಕೆಲವು ಸದಸ್ಯರು ಅವಿಶ್ವಾಸ ಮಂಡಿಸಿದ ಹಿನ್ನೆಲೆ ಇಂದು ಕರೆಯಲಾಗಿದ್ದ ಅವಿಶ್ವಾಸ ನಿರ್ಣಯದ ಸಭೆಗೆ ಕೋರಂ ಕೊರತೆ ಎದುರಾಯಿತು. ಜಿಲ್ಲಾ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ನಾಲ್ವರು ಸದಸ್ಯರು ಮಾತ್ರ ಹಾಜರಾಗಿದ್ದರು. ಒಟ್ಟು ಎಂಟು ಸದಸ್ಯ ಬಲದ ಗ್ರಾ.ಪಂ ನ ನಾಲ್ವರು ಸದಸ್ಯರು ಗೈರು ಹಾಜರಾದ ಕಾರಣ ಕೋರಂ ಕೊರತೆ ಕಂಡು ಬಂತು. ಇದರಿಂದ ಉಪವಿಭಾಗಾಧಿಕಾರಿಗಳು ಸಭೆಯನ್ನು ವಿಸರ್ಜಿಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ ಉಪಸ್ಥಿತರಿದ್ದರು.
ಮಡಿಕೇರಿ ಅ.24 NEWS DESK : ಭಾರತದ ಪ್ಯಾರಾ ಒಲಂಪಿಕ್ ಸಮಿತಿ, ಗೋವಾ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಮತ್ತು ವಿಕಲಾಂಗ ವ್ಯಕ್ತಿಗಳ ರಾಜ್ಯ ಆಯುಕ್ತರ ಕಚೇರಿ, ಗೋವಾ ಪ್ಯಾರಾಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಗೋವಾದ SAG ಈಜುಕೊಳದಲ್ಲಿ ನಡೆದ 24ನೇ ರಾಷ್ಟ್ರೀಯ ಪ್ಯಾರಾಸ್ವಿಮ್ಮಿಂಗ್ ಚಾಂಪಿಯನ್ಶಿಪ್ ನ ಮಹಿಳೆಯರ ವಿಭಾಗದಲ್ಲಿ ಮಡಿಕೇರಿಯ ಡಾ.ದೀಪಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾರತದಾದ್ಯಂತ 28 ರಾಜ್ಯಗಳನ್ನು ಪ್ರತಿನಿಧಿಸುವ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ದೀಪಾ ಬೆಂಗಳೂರಿನ ತರಬೇತುದಾರರಾದ ಸಿಂಧ್ಯಾ, ಮನೋಹರ್ ಹಾಗೂ ಕೊಡಗಿನ ತರಬೇತುದಾರರಾದ ರೋಹಿತ್ ಅವರಿಂದ ತರಬೇತಿ ಪಡೆದಿದ್ದಾರೆ.
ಪುತ್ತೂರು NEWS DESK ಅ.24 : ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಾಪೋಕ್ಲು ಅ.24 NEWS DESK : ಸಮಾಜದಲ್ಲಿ ಉತ್ತಮವಾಗಿ ಬದುಕಬೇಕಾದರೆ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಆಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಜಿನ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಮೀಪದ ಕಕ್ಕಬೆ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದ ಉತ್ತಮ ಅಂಶಗಳನ್ನು ರೂಪಿಸಿಕೊಂಡು ಮಹಿಳೆಯರು ಸದೃಢ ವನ್ನು ರೂಪಿಸಲು ಮಹಿಳೆಯರು ಮುಂದಾಗಬೇಕು. ಸಮಾಜದಿಂದ ಅನೌಪಚಾರಿಕ ಶಿಕ್ಷಣವನ್ನು ಪಡೆದುಕೊಳ್ಳಲಾಗುತ್ತಿದೆ ಇದರಿಂದ ನಾಲ್ಕು ಜನರ ನಡುವೆ ಉತ್ತಮವಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು ಹೆಣ್ಣುಮಕ್ಕಳು ಶಿಕ್ಷಣವಂತರಾಗಬೇಕು ಸರ್ಕಾರ ಕಡ್ಡಾಯ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ ಮಹಿಳೆಯರು ಉದ್ಯೋಗ ನಿರ್ವಹಿಸುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು. ಪೂರ್ತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷರಾದ ಲಲಿತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪಾದ್ಯಕ್ಷೆ ಸೀತಮ್ಮ, ಸೇವಾಪ್ರತಿನಿಧಿ…
ಬೆಂಗಳೂರು NEWS DESK ಅ.24 : ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಬೆಂಗಳೂರು ಅ.24 NEWS DESK : ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ವೈಯಾನಡ್ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ…
ಮಡಿಕೇರಿ ಅ.24 NEWS DESK : ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ನ.3 ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಲಿದೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ ಪ್ರಸನ್ನ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮೂಕಳೇರ ಟೈನಿ ಪೂಣಚ್ಚ ವಹಿಸಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಗಿ ಕಾನಡ್ಕ ಡೀನಾ ದೇವಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯಲ್ಲಿ ಕೆ.ಯಶಿಕ ದೇವಯ್ಯ, ಬಿ.ತಪಾಷ ಲೋಕೇಶ್, ಪ್ರಥಮ್ ಚಿನ್ನಪ್ಪ, ಹೇಮಂತ್ ಪಾರೇರ, ಪಾರ್ವತಿ ಮೂರ್ನಾಡು, ಎನ್.ಎಂ.ಗೀತಾಂಜಲಿ, ರಾಧಿಕಾ ವಿಶ್ವನಾಥ್, ದೀಕ್ಷಿ ಪಟ್ಟಡ, ಡಿ.ಹೆಚ್.ಪುಷ್ಪ, ಯಶೋಧ ಪೇರಿಯಂಡ, ಎಂ.ಬಿ.ಜಯಲಕ್ಷ್ಮಿ, ಮನೆಯಪಂಡ ಶೀಲಾ ಬೋಪಣ್ಣ, ಎಸ್.ಪಿ.ಜನ್ಮಿತಾ, ಹೇಮಲತಾ ಪೂರ್ಣಪ್ರಕಾಶ, ಹೆಚ್.ಕೆ.ಜೀವನ್, ಬಿ.ವಿ.ಶಿಲ್ಪ, ಎಸ್.ಸೈಮನ್, ಎ.ಶಬೀರ್, ಪುಗ್ಗೇರ ಸುಮಿ ಸನ್ನು, ವತ್ಸಲ ಶ್ರೀಶ, ಅಬ್ದುಲ್ಲಾ, ಮುಕ್ಕಾಟಿರ ಹರಿಣಿ ಗಿರೀಶ್, ಎಸ್.ಕೆ.ಈಶ್ವರಿ, ಕೆ.ಎಂ.ಖುಷಿಕ, ಕಡ್ಲೇರ ಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.






