ನಾಪೋಕ್ಲು ಸೆ.3 NEWS DESK : ನಾಪೋಕ್ಲುವಿನ ವಿವಿಧ ಶಾಲೆಗಳಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಿವಿಧ ಶಾಲೆಗಳಲ್ಲಿ ನೇತಾರರ ಭಾವಚಿತ್ರಗಳನ್ನು ಇರಿಸಿ ಪುಷ್ಪ ನಮನ ಸಲ್ಲಿಸಿ ಶಾಲಾ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಲಾ ಸುತ್ತಮುತ್ತಲಿನ ಪರಿಸರ ಹಾಗೂ ಆವರಣವನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ದಿನದ ಮಹತ್ವದ ಕುರಿತು ವಿವರಿಸಿದರು. ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಸಬರಮತಿಯಲ್ಲಿ ಮೊದಲಿಗೆ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಚಳುವಳಿಯನ್ನು ಆರಂಭಿಸಿದರು. ಬಳಿಕ ದೇಶದ ಉದ್ದಗಲಕ್ಕೂ ಚಳುವಳಿಗಳನ್ನು ಕೈಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳ ವಿವರಿಸಿದರು. ಶಾಲೆಯ ಪ್ರಾಂಶುಪಾಲೆ ಬಿ.ಎ ಶಾರದ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.…
ಲೇಖಕ: admin
ಮೈಸೂರು ಅ.3 NEWS DESK : ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ.…
ಮೈಸೂರು ಅ.3 NEWS DESK : ದಸರಾ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದಸರಾ ಉದ್ಘಾಟಕ ಡಾ. ಹಂ.ಪ.ನಾಗರಾಜಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿ ಹಲವಾರು ಸಚಿವರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ವಿರಾಜಪೇಟೆ ಅ.3 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕಮಲಮ್ಮ ದಿನದ ಮಹತ್ವದ ಕುರಿತು ಮತ್ತು ಸ್ವಚ್ಛತೆಯ ಕುರಿತು ಮಾತನಾಡಿದರು. ಗಾಂಧಿ ಜಯಂತಿಯ ಪ್ರಯುಕ್ತ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ನಂತರ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಶಾಲೆಯ ಸುತ್ತ ಸ್ವಚ್ಛತಾ ಶ್ರಮದಾನವನ್ನು ಮಾಡಿದರು. ಈ ಸಂದರ್ಭ ಬಿ.ಎಸ್.ಎನ್.ಎಲ್. ನ ನಿವೃತ್ತ ನೌಕರ ಕೋಡಿರ ಟಿ.ಗಣಪತಿ, ರೇಷ್ಮಾ ಗಣಪತಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ವೈ.ಎಸ್.ಲತಾ, ಸಹ ಶಿಕ್ಷಕಿ ಕಮರುನ್ನಿಸ, ಎಸ್. ಡಿ. ಎಂ. ಸಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ಮಡಿಕೇರಿ ಅ.3 NEWS DESK : ಕೂಡಿಗೆ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಧ ಸಂತೋಷ್, ಉಪಾಧ್ಯಕ್ಷರಾಗಿ ಅಶ್ವಿನಿ ಯೋಗೇಶ್ ಅವಿರೋಧವಾಗಿ ಆಯ್ಕೆಯಾದರು. ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಧಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಆಶಾ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಭಾರತಿ, ವಿಜಯ, ಪಂಕಜಾ, ವೀಣಾ , ಲಕ್ಷ್ಮಿ, ಮಣಿ, ಪಲ್ಲವಿ, ಸಾಕಮ್ಮ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಿ ಹಾಜರಿದ್ದರು.
ಮಡಿಕೇರಿ ಅ.3 NEWS DESK : ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪೂಜಾ ಮುರಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಂಡಕರೆ ಶಾಲೆಯಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಪೂಜಾ ಅವರನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತಾನಾಡಿದ ಪೂಜಾ ಮುರಳಿ, ಮುಂದಿನ ದಿನಗಳಲ್ಲಿ ಶಾಲೆಯ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಸಮ್ಮಿಲನ ಕಾರ್ಯಕ್ರಮ ಮಾಡುವುದರ ಮೂಲಕ ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಟಿ.ಎನ್.ರತೀಶ್, ಸುಜಿತ್, ವಿನೋದ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಜೀದ್, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಅ.3 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಮೊದಲನೇ ದಿನವಾದ ಇಂದು ಬೆಳ್ಳಿಯ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.4 ರಂದು ಹೂವಿನ ಅಲಂಕಾರ ನಡೆಯಲಿದೆ.
ಸುಂಟಿಕೊಪ್ಪ ಅ.3 NEWS DESK : ಸುಂಟಿಕೊಪ್ಪ ಮಹಾತ್ಮಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಗರಗಂದೂರು ಮೊರಾರ್ಜಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಗಾಂಧಿ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳ ಕಾಲೇಜಿನ ಆವರಣದಲ್ಲಿ 25 ಕ್ಕೂ ಹೆಚ್ಚು ಹಣ್ಣಿನ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಲು ವಿದ್ಯಾರ್ಥಿಗಳಿಗೆ ದತ್ತು ನೀಡಲಾಯಿತು. ಟ್ರಸ್ಟ್ ಕಾರ್ಯದರ್ಶಿ ಡೆನಿಸ್ ಡಿಸೋಜ ಮಾತನಾಡಿ, 1934ರಲ್ಲಿ ಮಹಾತ್ಮಾ ಗಾಂದೀಜಿಯವರು ಕೊಡಗು ಜಿಲ್ಲೆಗೆ ಬಂದು ಗುಂಡುಗುಟ್ಟಿಯ ಮಂಜನಾಥಯ್ಯನವರ ಬಂಗಲೆಗೆ ಆಗಮಿಸಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದರು. ಅವರು ಬಂದು ತಂಗಿ ಹೋದ ಸವಿನೆನಪಿಗಾಗಿ ಆ ತೋಟದ ಮಾಲೀಕರಾದ ಮುಕುಲ್ ಮಹೀಂದ್ರ ಅವರೊಂದಿಗೆ ಒಂದು ಟ್ರಸ್ಟ್ ರಚಿಸಿದ್ದು ಆ ಟ್ರಸ್ಟ್ ಮೂಲಕ ಪ್ರತೀ ವರ್ಷ ಗಾಂಧಿ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಟ್ರಸ್ಟ್ ಸಂಚಾಲಕರಾದ ಎಂ.ಇ.ಮೊಹಿದ್ದೀನ್ ಮಾತನಾಡಿ, ಪರಿಸರದ ಬಗ್ಗೆ ನಾವುಗಳು ಜವಾಬ್ದಾರಿಕೆಯನ್ನು ಹೊಂದಬೇಕು ಮತ್ತು ಮರಗಳನ್ನು ಬೆಳೆಸುವುದರಿಂದ ನಾವು ನಿಸರ್ಗಕ್ಕೆ…
ಮಡಿಕೇರಿ ಅ.3 NEWS DESK : ಇಂದಿನ ಯುವ ಜನಾಂಗ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸಬೇಕೆಂದು ಸುಂಟ್ಟಿಕೊಪ್ಪ ನಾಡ ಪ್ರೌಢ ಶಾಲೆಯ ವಿದ್ಯಾರ್ಥಿ ಹಾಗೂ ಬಾಲ ವಾಗ್ಮಿ ಶ್ರೀಶಾ ಅಭಿಪ್ರಾಯಪ್ಟರು. ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಯುವಕ ಸಂಘದಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯ ಜನ್ಮದಿನ ಹಾಗೂ ಶ್ರಮದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ಪ್ರಸ್ತುತ ಸಮಾಜಕ್ಕೆ ಮಾದರಿ. ನಾವೆಲ್ಲರೂ ಗಾಂಧೀಜಿಯ ಜೀವನ ಶೈಲಿಯನ್ನು ಸರಿಯಾಗಿ ಅರ್ಥೈಸಿಕೊಂಡು ಮುನ್ನಡೆಯಬೇಕು. ಗಾಂಧೀಜಿಯವರ ತ್ಯಾಗ, ಹೋರಾಟದ ಫಲವಾಗಿ ನಾವೆಲ್ಲರೂ ಇಂದು ಒಂದುಗೂಡಿ ಜೀವನ ನಡೆಸುತ್ತಿರುವುದು. ಅದಲ್ಲದೇ ಮುಖ್ಯವಾಗಿ ಇಂದಿನ ಯುವ ಸಮೂಹ ಮತ್ತು ವಿದ್ಯಾರ್ಥಿಗಳು ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಬೇಕಾಗಿದೆ ಎಂದು ಶ್ರೀಶಾ ಕರೆ ನೀಡಿದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಟಿ.ಎನ್.ರತೀಶ್ ಮಾತನಾಡಿ ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು. ನಾವೆಲ್ಲರೂ ಸೇರಿ ನಮ್ಮ ಗ್ರಾಮ, ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆಯಿಂದ…
ಸುಂಟಿಕೊಪ್ಪ ಅ.3 NEWS DESK : ಜೌಪಚಾರಿಕ ಶಿಕ್ಷಣದ ಜೊತೆಗೆ ಅನಾಜೌಪಚಾರಿಕ ಶಿಕ್ಷಣವು ವಿದ್ಯಾರ್ಥಿಗಳಿಗೆ ಅತ್ಯಗತ್ಯವೆಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಪೊಲೀಸ್ ನಿಮ್ಮ ಸ್ನೇಹಿತ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಅಂತಂರಿಕವಾಗಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕ ಸೇವೆಗಳು ಉತ್ತಮವಾಗಿ ಲಭ್ಯವಾದಾಗ ರಾಷ್ಟ್ರವೊಂದು ಉತ್ತಮ ರಾಷ್ಟ್ರ ಎನ್ನಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳು ಶಾಲೆಯ ಒಳಗೆ ಹೊರಗೆ ಕಲಿಯುವುದಕ್ಕಿಂತಲೂ ಶಾಲೆಯ ಹೊರಗೆ ಕಲಿಯುವುದು ಬಹಳಷ್ಟಿದೆ. ಈಗಾಗಿ ಮಕ್ಕಳು ಏನ್ನನ್ನು ಕಲಿಯಬೇಕು ಏನ್ನನು ಕಲಿಯಬಾರದು ಎನ್ನುವ ಬಗ್ಗೆ ಜೀವನವಿಡಿ ಕಲಿಯುವ ಅಂಶಗಳಿದೆ ಎಂದು ಅವರು ವಿಶ್ಲೇಷಿಸಿದರು. ಪಾಸ್ಪೊರ್ಟ್ ಸೇರಿದಂತೆ ಕೆಲವೊಂದು ಮಹತ್ವದ ದಾಖಲೆಗಳಲ್ಲಿ ಪೊಲೀಸರ ಅಭಿಪ್ರಾಯ ಪರಿಶೀಲನೆ ಎಷ್ಟು ಅಗತ್ಯ ಎಂಬುದನ್ನು ಅವರು ಉದಾಹರಣೆಗಳೊಂದಿಗೆ ವಿವರಿಸಿದರು. ಇಂದಿನ ಮಕ್ಕಳಿಗೆ ಪತ್ರ ಬರೆಯುವ ಕಲ್ಪನೆಯೇ. ಇಲ್ಲ ಕಾಲ ಬದಲಾಗಿದ್ದು,…






