ಲೇಖಕ: admin

ಕುಶಾಲನಗರ ಜ.29 NEWS DESK :  ರೋಟರಿ ಕುಶಾಲನಗರ ಮೂಲಕ ಹಸಿ ಕಸದ ನಿರ್ವಹಣೆ ಯೋಜನೆಯೊಂದಿಗೆ ಸ್ವಚ್ಛ ಕುಶಾಲನಗರ ಅಭಿಯಾನ ಫೆ.1 ರಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ತಿಳಿಸಿದ್ದಾರೆ.  ಕುಶಾಲನಗರ ರೋಟರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಅಂಗವಾಗಿ ಈಗಾಗಲೇ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ತಿಂಗಳ ಅಂತ್ಯ ತನಕ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಛ ಕುಶಾಲನಗರ ನಿರ್ಮಿಸುವುದು ಸುವರ್ಣ ಮಹೋತ್ಸವದ ಧ್ಯೇಯವಾಗಿದೆ ಎಂದು ಹೇಳಿದ ಅವರು ಈ ಸಂಬಂಧ ಕುಶಾಲನಗರ ಪಟ್ಟಣದಲ್ಲಿ ಒಂದು ತಿಂಗಳ ಕಾಲ ವಾಹನಗಳ ಮೂಲಕ ನಾಗರಿಕರಿಗೆ ಕಸ ವಿಲೇವಾರಿ ಬಗ್ಗೆ ಮಾಹಿತಿ ಅರಿವು ನೀಡುವ ಕೆಲಸ ನಡೆಯಲಿದೆ ಇದರೊಂದಿಗೆ ನಮ್ಮ ತಂಡ ಪ್ರತಿ ಮನೆಮನೆಗೆ ತೆರಳಿ ಸ್ವಚ್ಛತಾ ಬಗ್ಗೆ ಮಾಹಿತಿ ನೀಡಿ ಸಹಿ ಸಂಗ್ರಹ ಯೋಜನೆ…

Read More

ನಾಪೋಕ್ಲು ಜ.29 NEWS DESK : ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿ, ಕಲಿಕಾ ಹಬ್ಬಕ್ಕೆ ಶುಭ ಹಾರೈಸಿದರು. ನಂತರ ಮಕ್ಕಳಿಂದ ವಿವಿಧ ಕಲಿಕಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೊಂಗೆರ ಶಿಲ್ಪಾ, ಕಕ್ಕಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಫಿಯ, ಇಂದಿರಾ, ಕಕ್ಕಬೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯವರಾದ ಕಲ್ಪನಾ ಪಿ.ಆರ್., ಯವಕಪಾಡಿ ಶಾಲೆಯ ಎಸ್‍ಡಿಎಂಸಿ ಸದಸ್ಯರಾದ ಗಿರಿಜಾ, ಕಕ್ಕಬೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿ ಕ್ಲಸ್ಟರ್ ನ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಾನಿಗಳಾದ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿನ್ನಪ್ಪ ವಿದ್ಯಾರ್ಥಿಗಳಿಗೆ ಸೇರಿದಂತೆ ಆಗಮಿಸಿದ ಸರ್ವರಿಗೂ…

Read More

ಸುಂಟಿಕೊಪ್ಪ ಜ.29 NEWS DESK : ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ಕೃಷಿಕರು ಕೃಷಿಯಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣವೆಂದು ಚೆಟ್ಟಳ್ಳಿ ಕಾಫಿ ಮಂಡಳಿಯ ಡಾ.ಸೈಯದ್ ನದಾಬ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 7ನೇ ಹೊಸಕೋಟೆ ಕಲ್ಲುಕೋರೆ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸೋಮವಾರಪೇಟೆ ತಾಲ್ಲೂಕು ಹಾಗೂ ಗುಡ್ಡೆಹೊಸೂರು ವಲಯ ಕೃಷಿ ನೀರಾವರಿ ಮತ್ತು ಮಣ್ಣು ಪರೀಕ್ಷೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದ್ದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿಯವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಾಗೂ ಗುಡ್ಡೆಹೊಸೂರು ವಲಯದ ಸತ್ಯನಾರಾಯಣ ಪೂಜಾ ಸಮಿತಿ…

Read More

ಮಡಿಕೇರಿ ಜ.29 NEWS DESK : ಅಲ್ ಅಮೀನ್  ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಮುಸ್ಲಿಂ ಸಮಾಜದ ಬಡ ಮತ್ತು ಅನಾಥ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹ ಸಮಾರಂಭ ಫೆ.1 ರಂದು ನಡೆಯಲಿದೆ. ಸುಂಟಿಕೊಪ್ಪದ ಎಸ್.ಎಸ್,ಹಾಲ್ ನಲ್ಲಿ ಪೂರ್ವಾಹ್ನ 10.30 ಗಂಟೆಗೆ  ಸಮಾರಂಭ ನಡೆಯಲಿದ್ದು, ಆಯ್ದ 11 ಜೋಡಿ ವಧು ವರರು ಸತಿಪತಿಗಳಾಗಲಿದ್ದಾರೆ. ವಧುವಿಗೆ ಚಿನ್ನದ ಸರ ಮತ್ತು ಬಳೆಯನ್ನು ಅಲ್ ಅಮೀನ್ ಸಮಿತಿಯು ನೀಡಲಿದೆ. ವಧು-ವರರಿಗೆ ಉಡುಪು ಹಾಗೂ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನೂ ಮಾಡಲಿದೆ. ಈ ಸಾಮೂಹಿಕ ವಿವಾಹಕ್ಕೆ ತಗಲುವ ವೆಚ್ಚವನ್ನು ಭರಿಸಲು ಅಲ್  ಅಮೀನ್ ಸಮಿತಿಯು ಸಮಾಜ ಬಾಂಧವರನ್ನೇ ಅವಲಂಬಿತವಾಗಿದೆ ಎಂದು ಸಮಿತಿಯ ಅಧ್ಯಕ್ಷ  ಬಿ.ಹೆಚ್.ಅಹ್ಮದ್ ಹಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಶಾಲನಗರ ಜ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ಜಾನಪದ ನೃತ್ಯ ಹಾಗೂ ಸಮೂಹ ನೃತ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನ ರಂಜಿಸಿದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಪೋಷಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು. ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬೇಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕಮಲಮ್ಮ ಮಾತನಾಡಿ, ವಾರ್ಷಿಕೋತ್ಸವಕ್ಕೆ ಶುಭಹಾರೈಸಿದರು. ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.  ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ…

Read More

ಮಡಿಕೇರಿ ಜ.29 NEWS DESK : ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಕೊಡಗು, ಪರಾಕ್ರಮ್ ದಿವಸ್- ಪರೀಕ್ಷಾ ಪೇ ಚರ್ಚಾದೊಂದಿಗೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕೊಡಗು ಶಾಲೆಯಲ್ಲಿ ಪರಾಕ್ರಮ್ ದಿವಸ್ ಆಚರಿಸಲಾಯಿತು. ಪರೀಕ್ಷಾ ಪೇ ಚರ್ಚಾ- ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಸಕಾರಾತ್ಮಕತೆಯಿಂದ ಪರೀಕ್ಷೆಯನ್ನು ಸಮೀಪಿಸಲು ಮತ್ತು ಅವುಗಳನ್ನು ಹಬ್ಬದಂತೆ ಆಚರಿಸಲು ಪ್ರೇರೇಪಿಸುವ ಮಹತ್ವದ ಸಾಮೂಹಿಕ ಚಳುವಳಿಯಾಗಿ ವಿಕಸನಗೊಂಡಿದೆ ಎಂದು ಗಣ್ಯರು ಹೇಳಿದರು. ಜ.12 ರಿಂದ ಜನವರಿ 23 ರವರೆಗೆ ಪರೀಕ್ಷಾ ಪೆ ಚರ್ಚಾ ಅಡಿಯಲ್ಲಿ ಚಟುವಟಿಕೆಗಳ ಪುಷ್ಪಗುಚ್ಛವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾಲಯವು ಆಪರೇಷನ್ ಸಿಂಧೂರ್ ಕುರಿತು ರಸಪ್ರಶ್ನೆಯನ್ನು ಆಯೋಜಿಸಿತು, ಇದು ಸ್ವದೇಶಿಯ ಕೇಂದ್ರ ವಿಷಯಗಳು ಮತ್ತು ನಮ್ಮ ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ರಾಷ್ಟ್ರಕ್ಕೆ ಅವರ ನಿಸ್ವಾರ್ಥ ಸೇವೆಯ ಆಚರಣೆಯನ್ನು ಕೇಂದ್ರೀಕರಿಸಿದೆ. ಪಿಎಂಶ್ರೀ ಕೇಂದ್ರೀಯ…

Read More

ಕುಶಾಲನಗರ ಜ.29 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಘಟಕ, ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ. ಸಮಿತಿಯ ಆಶ್ರಯದಲ್ಲಿ  ಸ್ವಾತಂತ್ರ್ಯ ಭಾರತದ ಸೇನಾ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕೆ.ಎಂ. ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸೇನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಠ ಸೇವೆ ಕುರಿತು ಮಾತನಾಡಿದ  ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರೆ ಒಂದು ರೀತಿ ಸ್ಪೂರ್ತಿ ಹಾಗೂ ಚಿಲುಮೆ. ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು’ ಎಂದು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆಯನ್ನು ಪ್ರತಿಯೊಬ್ಬರೂ ತಮ್ಮ…

Read More

ಮಡಿಕೇರಿ, ಜ.29 NEWS DESK : ಕೊಡಗು ಕಲಾವಿದರ ಬಳಗದ ವತಿಯಿಂದ ಚೆಯ್ಯಂಡಾಣೆಯ ಸಿನಿಮಾ ಕಲಾವಿದೆ ಚೆರುವಾಳಂಡ ಸುಜಲಾ ಹಾಗೂ ನಾಣಯ್ಯ ದಂಪತಿ ತೋಟದ ಮನೆಯಲ್ಲಿ ಜಿಲ್ಲೆಯ ಹಲವಷ್ಟು ಹಿರಿ-ಕಿರಿಯ ಸಿನಿಮಾ ಕಲಾವಿದರುಗಳು, ಬರಹಗಾರರು, ನಿರ್ದೇಶಕರು, ಗಾಯಕರು, ಛಾಯಾಚಿತ್ರ ಕಲಾವಿದರುಗಳು ಸಂತಸ ಸಮ್ಮಿಲನದಲ್ಲಿ ಭಾಗಿಗಳಾದರು. ದಶಕಗಳ ಹಿಂದೆ ಆರಂಭಗೊಂಡ ನೋಂದಾಯಿತ ಕಲಾವಿದರ ಸಂಘವೂ ಕಾರ್ಯಚಟುವಟಿಕೆಗಳಿಲ್ಲದೆ ನಿಷ್ಕ್ರಿಯವಾಗಿತ್ತು. ನಟ ನೆರವಂಡ ಉಮೇಶ್ ಹಾಗೂ ತಂಡದವರ ಸಂಚಾಲಕತ್ವದಲ್ಲಿ ವರ್ಷದಿಂದೀಚೆಗೆ ಸಂಘ ಮರುಜೀವ ಪಡೆದುಕೊಂಡಿದೆ. ರಾಜ್ಯದ ಹಲವೆಡೆಗಳಿಂದ ಕಲಾವಿದರುಗಳು ಆಗಮಿಸಿದ್ದು, ಮೈಸೂರಿನಲ್ಲಿ ನೆಲೆಸಿರುವ ಸಂಗೀತಗಾರ, ಹಾರ್ಮೋನಿಯಂ ವಾದಕ ಚೆಕ್ಕೇರ ಅಪ್ಪಯ್ಯ ಅವರ ಉಪಸ್ಥಿತಿ, ಮಾತು, ಹಾಡು ಎಲ್ಲರಲ್ಲಿ ಸಂಚಲನ ಮೂಡಿಸಿತು. ಟಿ.ಡಿ. ಮೋಹನ್ ಅವರಿಂದ ಪ್ರಾರ್ಥನೆ, ಭವಾನಿ ನಾಣಯ್ಯ ಅವರಿಂದ ದೈವಸ್ತುತಿ, ಅಜಿತ್, ಬೋಸು ಅವರುಗಳಿಂದ ಹಾಡು, ಕಲಾವಿದೆ ಶ್ಯಾಮಲ ಅವರ ನೃತ್ಯ ನೆರೆದಿದ್ದವರನ್ನು ರಂಜಿಸಿತು. ಕಲಾಸೇವೆ ಹಾಗೂ ಕಲಾವಿದರಿಗೆ ನೀಡಿದ ಆತಿಥ್ಯ ಗಮನಿಸಿ ಸುಜಲಾ ಹಾಗೂ ನಾಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಳಗದ…

Read More

ಮಡಿಕೇರಿ NEWS DESK ಜ.28 : ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ ನಲ್ಲಿ ಜ.29ರಿಂದ ಫೆ.6ರ ವರೆಗೆ ನಡೆಯುವ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯ ಚಿತ್ರ ಆಯ್ಕೆಯಾಗಿದೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’ ಜನಪದದಲ್ಲಿ ಸಿಬಿಎಫ್ ಸಿ ದಾಖಲಾತಿ ಹೊಂದಿದ ಸಾಕ್ಷ್ಯಚಿತ್ರವಾಗಿದೆ. ಈ ಬಾರಿಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು, ‘ಮಹಿಳಾ ಸಬಲೀಕರಣ’ ವಿಭಾಗದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ ಎಂದು ಸಾಕ್ಷ್ಯ ಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ತಿಳಿಸಿದ್ದಾರೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ…

Read More

ಗೋಣಿಕೊಪ್ಪ ಜ.28 NEWS DESK : ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕಳತ್ಮಾಡು ಲಯನ್ಸ್ ಶಾಲೆಯ ವಿದ್ಯಾರ್ಥಿ ಎಂ.ಚಾರಿಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾಕಾರಂಜಿ ಮತ್ತು ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಿ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಯನ್ಸ್ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ಚಾರಿಕ ಅತ್ತೂರು ಗದ್ದೆಮನೆ ನಿವಾಸಿ ಮದು ಮತ್ತು ವಿಶಾಲಕ್ಷಿ ದಂಪತಿಗಳ ಪುತ್ರಿ.

Read More