ಲೇಖಕ: admin

ಮಡಿಕೇರಿ ಅ.2 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ನವರಾತ್ರಿಯ ಅಂಗವಾಗಿ ಅ.3 ರಿಂದ ಅ.12ರ ವರೆಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಭಕ್ತಾಧಿಗಳು ಬೆಳಿಗ್ಗೆ 9 ಹಾಜರಿದ್ದು, ಅಲಂಕಾರ ಪೂಜಾ ಸೇವೆಯನ್ನು ಮಾಡಿಸಬಹುದಾಗಿ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9449476138, 9448303653, 9449679460, 9449933457 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಅ.2 NEWS DESK : ಮಡಿಕೇರಿ ದಸರಾದಲ್ಲಿ ಈ ವಷ೯ದಿಂದ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು, ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದ ಅನೇಕ ಮಾಹಿತಿ ಕೃಷಿಕರಿಗೆ ದೊರಕಲಿದೆ. ಅಲ್ಲದೆ ಜಿಲ್ಲೆಯ 7 ಮಂದಿ ಸಾಧಕ ಕೃಷಿಕರನ್ನೂ ಕಾಫಿ ದಸರಾ ಸಂದಭ೯ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಕಾಫಿ ದಸರಾ ಸಂಬಂಧಿತ ಪೂವ೯ಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಡಾ.ಮಂಥರ್ ಗೌಡ, ಇದೇ ಮೊದಲ ಬಾರಿಗೆ ಆಯೋಜಿತವಾಗಿರುವ ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭತಿ೯ಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ…

Read More

ಮಡಿಕೇರಿ ಅ.2 NEWS DESK : ಗಾಂಧಿ ಜಯಂತಿ ಪ್ರಯುಕ್ತ ಅರಣ್ಯ ಇಲಾಖೆಯ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಚೇಲಾವಾರ ಕಬ್ಬೆ ಬೆಟ್ಟದ ಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  ಡಿಎಫ್ ಜಗನಾಥ್, ಎಸ್.ಎಫ್. ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಕಬ್ಬೆ ಬೆಟ್ಟದ ಭಾಗದಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗಳು ಪಾಲ್ಗೊಂಡು ಸ್ವಚ್ಛತಾ ಶ್ರಮದಾನ ನಡೆಸಿದರು.

Read More

ಮೈಸೂರು ಅ.2 NEWS DESK : ಗಾಂಧಿ ಜಯಂತಿಯ ಅಂಗವಾಗಿ ಪ್ರಧಾನಿ ಮೋದಿಯವರ ‘ಸ್ವಚ್ಛತೆಯೇ ಸೇವೆ’ ಅಭಿಯಾನದ ಧ್ಯೇಯದಂತೆ ಮೈಸೂರು ವಿಶ್ವವಿದ್ಯಾನಿಲಯದ ಓಪನ್ ಏರ್ ಥಿಯೇಟರ್ ನಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಚ್ಛತಾ ಶ್ರಮದಾನ ನಡೆಸಿದರು.  ಈ ಸಂದರ್ಭ ಹೆಚ್ಚಿನ ಸಂಖ್ಯೆಯಲಿ ಕಾರ್ಯಕರ್ತರು ಹಾಜರಿದ್ದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.

Read More

ಕುಶಾಲನಗರ, ಅ.2 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ  ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಸಹಯೋಗದೊಂದಿಗೆ  ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ 155ನೇ ವರ್ಷದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಫಾತಿಮ ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡನೆಡುವ ಮೂಲಕ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮನ್ನು ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. …

Read More

ವಿರಾಜಪೇಟೆ ಅ.2 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಬೆನಾಡಿಕ್ ಆರ್.ಸಲ್ದಾನ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿ, ಗಾಂಧೀಜಿ ನಮ್ಮ ರಾಷ್ಟ್ರಪಿತ. ಅವರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಬಹು ಮುಖ್ಯ. ಅವರ ಸರಳ ಜೀವನ, ರಾಮರಾಜ್ಯ, ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅದ್ಭುತವಾದದ್ದು, ಅವರು ಬೋಧಿಸಿದ ಕೆಲವು ತತ್ವಗಳನ್ನಾದರೂ ಇಂದಿನ ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರಳತೆಯಿಂದ ಜೀವನ ನಡೆಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರಾದ ನಾಗರಾಜು, ಸೋಮಣ್ಣ, ನಿರ್ಮಿತ, ಕಚೇರಿ ಸಿಬ್ಬಂದಿಗಳಾದ ಸೋಮನಾಥ್, ಜಯಮ್ಮ, ಶಶಿಕಲಾ, ಸೋಮಣ್ಣ , ಸುಮತಿ, ರೇಷ್ಮ , ಎನ್.ಸಿ.ಸಿ ಅಧಿಕಾರಿ ಭೋಜಮ್ಮ, ಎನ್.ಎಸ್ .ಎಸ್ ಯೋಜನಾಧಿಕಾರಿ ಸುನಿಲ್ ಕುಮಾರ್ ಹಾಗೂ ಸ್ವಯಂಸೇವಕರು ಹಾಜರಿದ್ದರು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ…

Read More

ಮಡಿಕೇರಿ ಅ.2 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿಜೇತರಾದ ತಲಾ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಗಣ್ಯರು ವಿತರಿಸಿದರು.

Read More

ಮಡಿಕೇರಿ ಅ.2 NEWS DESK : ಮಹಾತ್ಮ ಗಾಂಧೀಜಿಯವರು ‘ನನ್ನ ಜೀವನವೇ, ನನ್ನ ಸಂದೇಶ’ ಎಂದು ಸಾರಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳದ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನುಡಿದಂತೆ ನಡೆಯುವ ಶಿಸ್ತನ್ನು ಮಹಾತ್ಮ ಗಾಂಧೀಜಿಯವರಂತೆ ಎಲ್ಲರೂ ಜೀವನದಲ್ಲಿ ಪಾಲಿಸಬೇಕು. ಹಾಗಾಗಿ ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಸಹ…

Read More

ಮಡಿಕೇರಿ ಅ.2 NEWS DESK :  ಚೇರಂಬಾಣೆ ಕುಲಾಲ ಸಂಘ ಆಶ್ರಯದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘ ಲೋಗೋ ಬಿಡುಗಡೆ,  ಸದಸ್ಯತ್ವ ಅಭಿಯಾನ ಮತ್ತು ಜನಗಣತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಸಂಘದ ನೂತನ ಲೋಗೋವನ್ನು ಬಿಡುಗಡೆಗೊಳಿಸಿ, ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಸದಸ್ಯತ್ವ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕುಲಾಲ ಕುಂಬಾರ ಸಂಘವು ಜಿಲ್ಲೆಯಲ್ಲಿ ಸದೃಢಗೊಳ್ಳುತ್ತಿದ್ದು ಸಮಾಜ ಬಾಂಧವರು ಸಂಘಟನೆಗಾಗಿ ಉತ್ಸುಕರಾಗಿದ್ದಾರೆ. ಈಗಾಗಲೇ ಯುವ ಘಟಕ ಮತ್ತು ಮಹಿಳಾ ಘಟಕವು ರಚನೆಯಾಗಿ ಸಕ್ರಿಯವಾಗಿದ್ದು, ಜಿಲ್ಲೆಯ ಕುಲಾಲ ಕುಂಬಾರ ಸಂಘಕ್ಕೆ ಬಲಬಂದoತಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತಾವಿಕ ನುಡಿಯನ್ನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಪ್ರಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಕುಲಾಲ ಕುಂಬಾರ…

Read More

ಕುಶಾಲನಗರ ಅ.2 NEWS DESK :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯ ಪ್ರಯುಕ್ತ ಕೊಡಗಿನಸೈನಿಕ ಶಾಲೆಯ ಎನ್.ಸಿ.ಸಿ ಘಟಕದ ವತಿಯಿಂದ ಕೂಡಿಗೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಎನ್‌ಸಿಸಿ ಘಟಕದ ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ 560ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೈನಿಕ ಶಾಲೆಯಿಂದ ಕೂಡಿಗೆ, ಹಳೆ ಕೂಡಿಗೆ ಹಾಗೂ ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ಈ ಸಂದರ್ಭಕೂಡಿಗೆ ಮತ್ತು ಕೂಡುಮಗಳೂರು ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

Read More