ಮಡಿಕೇರಿ ನ.23 NEWS DESK : ಎನ್ಸಿಸಿ ದಿನಾಚರಣೆ ಅಂಗವಾಗಿ ಕೊಡಗು ವಿದ್ಯಾಲಯದ ಎನ್ಸಿಸಿ ಕೆಡೆಟ್ ಗಳು ನಗರದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಪ್ರತಿಮೆಯನ್ನು ಸ್ವಚ್ಚಗೊಳಿಸಿದರು. ನಗರದ ಮೈಸೂರು ರಸ್ತೆಯಲ್ಲಿನ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ವೃತ್ತದ ಬಳಿಯಿರುವ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಪ್ರತಿಮೆಯನ್ನು ಶುಚಿಗೊಳಿಸಿ, ಈ ವ್ಯಾಪ್ತಿಯಲ್ಲಿದ್ದ ಕಾಡು ಗಿಡಗಳನ್ನು ಕಡಿದು, ಕುರಚಲು ಗಿಡಗಳನ್ನು ತೆರವುಗೊಳಿಸಲಾಯಿತು. 40 ಕೆಡೆಟ್ ಗಳು ಪಾಲ್ಗೊಂಡಿದ್ದ ಈ ಸ್ವಚ್ಚತಾ ಅಭಿಯಾನದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರಾ ಆಡಳಿತಾಧಿಕಾರಿ ಪಿ.ರವಿ, ಎನ್ ಸಿಸಿ ಅಧಿಕಾರಿ ದಾಮೋದರ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ನ.23 NEWS DESK : ಕರ್ನಾಟಕ ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಸವಣೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಯಿತು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಕೆ.ಪಿ.ಸಿ.ಸಿ. ಸದಸ್ಯರಾದ ಯಾಕೂಬ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯೇಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ.ಡಿಸಿಲ್ವಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸುನೀಲ್, ಸುಜೀತ್, ಉಪಾಧ್ಯಕ್ಷರಾದ ಬಸವರಾಜು, ವಕ್ತಾರ ರಜಾಕ್ ಬಜೆಗುಂಡಿ, ನಗರ ಕಾಂಗ್ರೆಸ್ ಕಾರ್ಯಾಧ್ಯಕ್ಷ ಭುವನೇಶ್, ಉಪಾಧ್ಯಕ್ಷರಾದ ಜಮೀರ್, ಜಾಕೋಬ್ ಸೈಮನ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫೀ, ಬ್ಲಾಕ್ ಕಾಂಗ್ರೆಸ್ ಎಸ್ಪಿ ಘಟಕದ ಅಧ್ಯಕ್ಷ ರಾಜಪ್ಪ ಹಾಗೂ ಬ್ಲಾಕ್ ಮತ್ತು ನಗರ…
ಮಡಿಕೇರಿ NEWS DESK ನ.23 : ಕರ್ನಾಟಕ ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಸವಣೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್, ಸಂಡೂರುವಿನಲ್ಲಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಯಾಸಿರ್ ಅಹಮ್ಮದ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ.
ಮಡಿಕೇರಿ ನ.23 NEWS DESK : ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸಕಾ೯ರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಮನರಂಜನಾ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಯಿತು. ನಗರದ ರಾಜಾಸೀಟ್ ನಲ್ಲಿರುವ ಸಾಹಸ ಕ್ರೀಡೆಗಳಲ್ಲಿ ಸಕಾ೯ರಿ ಬಾಲಕಿಯರ ಬಾಲ ಮಂದಿರದ ಮಕ್ಕಳು ಸಂಭ್ರಮದಿಂದ ತೊಡಗಿಸಿಕೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ಹಾಜರಿದ್ದರು.
ಪುತ್ತೂರು ನ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡವನ್ನು ಸಮರ್ಥವಾಗಿ ಮುನ್ನಡೆಸಿದ ನಾಯಕಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವರ್ಷಿತಾ.ಪಿ.ಆಳ್ವಾ ವಿಭಾಗ ಮಟ್ಟದ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳೆರಡರಲ್ಲೂ ಬೆಸ್ಟ್ ರೈಡರ್ ಆಗಿ ಹೊರಹೊಮ್ಮಿದ್ದಾರೆ. ಈ ಮೊದಲು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಗೆದ್ದುಕೊಂಡು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ರಶ್ಮಿ.ಎ, ವಿದ್ಯಾ.ಸಿ.ಎಸ್, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಶ್ರೇಯಾ.ಎಂ,…
ಮಡಿಕೇರಿ ನ.23 NEWS DESK : ಭಾರತ ದೇಶದ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವುದು ಖಂಡನೀಯವೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಸಾಮರಸ್ಯವನ್ನು ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ಸೇನೆಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸೇರಿದಂತೆ ಕೊಡಗು ಜಿಲ್ಲೆಯ ಅನೇಕ ವೀರ ಯೋಧರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೇನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ದೇಶದ ರಕ್ಷಣೆಗಾಗಿ ಯುದ್ಧಗಳನ್ನು ಎದುರಿಸಿ ತ್ಯಾಗಬಲಿದಾನ ಮಾಡಿದ್ದಾರೆ. ವೀರ ಯೋಧರಿಗೆ ನಿತ್ಯ ಗೌರವ ತೋರಬೇಕೆ ಹೊರತು ಅವಹೇಳನ ಮಾಡುವುದು ಸರಿಯಲ್ಲ. ಜಿಲ್ಲೆಯ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡುವ ಕಿಡಿಗೇಡಿಗಳ ಪಿತೂರಿಯನ್ನು ಸರ್ಕಾರ ವಿಫಲಗೊಳಿಸಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ನ.23 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಮೂಲಕ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸುಳ್ಯ ತಾಲ್ಲೂಕಿನ ಹಾಲೆಟ್ಟಿ ಗ್ರಾಮದ ನಿವಾಸಿ, ವಕೀಲ ವೃತ್ತಿಯಲ್ಲಿ ತೊಡಗಿರುವ ವಿದ್ಯಾಧರ ಗೌಡ (66) ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿರುವುದಾಗಿ ಹೇಳಿದರು. ಇಡೀ ದೇಶವೇ ಗೌರವ ತೋರುವ ಸೇನಾ ನಾಯಕರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಕುರಿತು ಗ್ರೂಪ್ ನ ಅಡ್ಮಿನ್ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆಯಲಾಗಿದೆ. ಗ್ರೂಪ್ನಲ್ಲಿ ಯಾವುದೇ ರೀತಿಯ ಅವಹೇಳನಕಾರಿ ಮತ್ತು ಅವಾಚ್ಯ ಸಂದೇಶಗಳನ್ನು ರವಾನಿಸದಂತೆ ಗ್ರೂಪ್ ನಲ್ಲಿರುವ ಎಲ್ಲರಿಗೂ ಸೂಕ್ತ…
ಮಡಿಕೇರಿ ನ.23 NEWS DESK : ವಿರಾಜಪೇಟೆ ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ವತಿಯಿಂದ 2ನೇ ಹಂತದ ಅರ್ಜಿಗಳನ್ನು ವಿಲೇವಾರಿ ಮಾಡುವ ಸಲುವಾಗಿ ಸಂಬಂಧಿಸಿದ ಸ್ಥಳಗಳನ್ನು ಪರಿಶೀಲಿಸಲಾಯಿತು. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ವಿರಾಜಪೇಟೆ ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ, ಸದಸ್ಯರುಗಳಾದ ವಿ.ಕೆ.ಸತೀಶ್ ಕುಮಾರ್, ಕೋಳೆರ ಟೀನಾ ಅವರ ನೇತೃತ್ವದಲ್ಲಿ ತಹಶೀಲ್ದಾರ್ ರಾಮಚಂದ್ರ, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು. ವಿರಾಜಪೇಟೆ ಹೋಬಳಿಯ ಹೆಗ್ಗಳ, ಆರ್ಜಿ, ಬೇಟೋಳಿ ಗ್ರಾಮಗಳಲ್ಲಿ ಸರ್ಕಾರಿ ಜಾಗ ಮಂಜೂರಾತಿ ಕೋರಿ ಫಾರಂ 57 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಯಿತು ಎಂದು ಆರ್.ಕೆ.ಅಬ್ದುಲ್ ಸಲಾಂ ತಿಳಿಸಿದರು.
ಮಡಿಕೇರಿ ನ.23 NEWS DESK : ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ಇನ್ಟೊಪೀಸ್ ಡ್ಯಾನ್ಸ್ ಕ್ರಿವ್ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನ.29 ರಂದು ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ ಎಂಬ ಜಿಲ್ಲಾಮಟ್ಟದ ವಿವಿಧ ಜಾನಪದ ಸ್ಪರ್ಧೆ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಲ್ದಾನ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಕಲರವ ನಡೆಯಲಿದ್ದು, ಆಧುನಿಕ ಮಾಧ್ಯಮದಿಂದ ಮಕ್ಕಳ ಗಮನ ಭಾರತೀಯ ಹಾಗೂ ಸ್ಥಳೀಯ ಸಂಸ್ಕೃತಿಯಿಂದ ದೂರವಾಗುತ್ತಾ ಪಾಶ್ಚಿಮಾತ್ಯದ ಕಡೆಗೆ ಸಾಗುತ್ತಿದೆ. ಈ ಸಮಾಜದಲ್ಲಿ ನಮ್ಮ ಮೂಲ ಸಂಸ್ಕೃತಿ ನೀಡುವ ಮೌಲ್ಯವು ದಿನೇ ದಿನೇ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟವಾದ ಗುರಿ ಹಾಗೂ ಗುರಿ ತಲುಪಲು ಬೇಕಾದ ಪ್ರಯತ್ನ ಕಾಣುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ನಿರಾಸಕ್ತಿ ಹೆಚ್ಚುತ್ತಾ ಹೋಗುತ್ತಿದೆ . ಆದ್ದರಿಂದ ಮಕ್ಕಳಲ್ಲಿ ಮೂಲ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜಿಲ್ಲಾ ಮಟ್ಟದ ಸಾಂಸ್ಕೃತಿಕ…
ವಿರಾಜಪೇಟೆ ನ.23 NEWS DESK : ಕಾಸರಗೋಡು ಬದಿಯಡ್ಕ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ ಹಾಗೂ ಕೋಲಾರ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ಕೊಡಗಿನ ಹಿನ್ನೆಲೆ ಗಾಯಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರ ಸಂಗೀತ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಕಾಸರಗೋಡಿನ ಬಾರಡ್ಕದಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.






