ಮಡಿಕೇರಿ ನ.23 NEWS DESK : ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ಇನ್ಟೊಪೀಸ್ ಡ್ಯಾನ್ಸ್ ಕ್ರಿವ್ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನ.29 ರಂದು ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ ಎಂಬ ಜಿಲ್ಲಾಮಟ್ಟದ ವಿವಿಧ ಜಾನಪದ ಸ್ಪರ್ಧೆ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಲ್ದಾನ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಕಲರವ ನಡೆಯಲಿದ್ದು, ಆಧುನಿಕ ಮಾಧ್ಯಮದಿಂದ ಮಕ್ಕಳ ಗಮನ ಭಾರತೀಯ ಹಾಗೂ ಸ್ಥಳೀಯ ಸಂಸ್ಕೃತಿಯಿಂದ ದೂರವಾಗುತ್ತಾ ಪಾಶ್ಚಿಮಾತ್ಯದ ಕಡೆಗೆ ಸಾಗುತ್ತಿದೆ. ಈ ಸಮಾಜದಲ್ಲಿ ನಮ್ಮ ಮೂಲ ಸಂಸ್ಕೃತಿ ನೀಡುವ ಮೌಲ್ಯವು ದಿನೇ ದಿನೇ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟವಾದ ಗುರಿ ಹಾಗೂ ಗುರಿ ತಲುಪಲು ಬೇಕಾದ ಪ್ರಯತ್ನ ಕಾಣುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ನಿರಾಸಕ್ತಿ ಹೆಚ್ಚುತ್ತಾ ಹೋಗುತ್ತಿದೆ . ಆದ್ದರಿಂದ ಮಕ್ಕಳಲ್ಲಿ ಮೂಲ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜಿಲ್ಲಾ ಮಟ್ಟದ ಸಾಂಸ್ಕೃತಿಕ…
ಲೇಖಕ: admin
ವಿರಾಜಪೇಟೆ ನ.23 NEWS DESK : ಕಾಸರಗೋಡು ಬದಿಯಡ್ಕ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ ಹಾಗೂ ಕೋಲಾರ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ಕೊಡಗಿನ ಹಿನ್ನೆಲೆ ಗಾಯಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರ ಸಂಗೀತ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಕಾಸರಗೋಡಿನ ಬಾರಡ್ಕದಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಮಡಿಕೇರಿ ನ.23 NEWS DESK : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ದ ತೆನ್ನಿರ ಮೈನಾ ಶ್ಲಾಘಿಸಿದ್ದಾರೆ. ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಬೋಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ತಾವು ಪಡೆಯುವ ಗೌರವಧನಕ್ಕೆ ಮೀರಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿರುವವರು,ಇವರಿಂದ ಮಕ್ಕಳು ಸಂಸ್ಕಾರ ಮತ್ತು ಶಿಸ್ತನ್ನು ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಇಂತಹ ಕಾರ್ಯಕರ್ತೆಯರ ಬೀಳ್ಕೊಡುಗೆ ಸಮಾರಂಭಕ್ಕೆ ಪಾಲ್ಗೊಂಡು ಭೂಮಿ ತೂಕದ ವ್ಯಕ್ತಿತ್ವದ ತಾಯಿಯಂದಿರನ್ನು ಸನ್ಮಾನಿಸಿದ್ದು ತುಂಬಾ ಸಂತೋಷವನ್ನು ಉಂಟು ಮಾಡಿದ್ದು ಇದೊಂದು ಅವಿಸ್ಮರಣೀಯ ಕ್ಷಣ ಎಂದು ತಿಳಿಸಿದರು. ಸರ್ಕಾರದ ಎಲ್ಲಾ ಯೋಜನೆಗಳನ್ನು ಮಹಿಳೆಯರಿಗೆ ಮಕ್ಕಳಿಗೆ ಗ್ರಾಮಸ್ಥರಿಗೆ ತಲುಪಿಸುವಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮಾಜದ ಪರವಾಗಿ ಧನ್ಯವಾದಗಳು ಅರ್ಪಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, 30 ರಿಂದ 32…
ಮಡಿಕೇರಿ ನ.23 NEWS DESK : ನಗರದ ವ್ಯಾಂಡಮ್ ಎಂಟರ್ಪ್ರೈಸಸ್ ನ 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಪ್ರತೀ 2,000 ಖರೀದಿಗೆ ನೀಡಲಾದ ಉಚಿತ ಕೂಪನ್ “ಲಕ್ಕಿ ಡ್ರಾ ಸಮಾರಂಭವು ನ.24 ರಂದು ನಡೆಯಲಿದೆ. ವ್ಯಾಂಡಮ್ ಎಂಟರ್ಪ್ರೈಸಸ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಲಯನ್ಸ್ ಕ್ಲಬ್ ಇಂಟನ್ರ್ಯಾಷನಲ್ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷ ಲಯನ್ ಪಟ್ರಪಂಡ ಪಿ.ಸೋಮಣ್ಣ (ಎಂಜೆಎಫ್) ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮದೆನಾಡು ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಸಿದ್ದರಾಜು ಪಾಲ್ಗೊಳ್ಳಲಿದ್ದಾರೆ. ಮಕ್ಕಂದೂರು ಪ್ರೌಢಶಾಲಾ ಶಿಕ್ಷಕಿ ಲಯನ್ ಜಿ.ವನಜಾಕ್ಷಿ ದಾಮೋದ್ ಗೌರವ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ನ.23 NEWS DESK : ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿಯ ಪ್ರಶಸ್ತಿಗಳ ಮಾರ್ಗಸೂಚಿಗಳು [ಮೈಸೂರು (ನಗರ ಪ್ರದೇಶವನ್ನು ಹೊರತುಪಡಿಸಿ) ಮತ್ತು ಕೊಡಗು ಜಿಲ್ಲೆಗಳಿಗೆ ಮಾತ್ರ ಅನ್ವಯ] ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಸಮುದಾಯದ ಅಭಿವೃದ್ಧಿಗಾಗಿ 1984 ರಿಂದ ಆರೋಗ್ಯ, ಶಿಕ್ಷಣ, ಸಾಮಾಜಿಕ-ಆರ್ಥಿಕ ಸಬಲೀಕರಣ ಕಾರ್ಯಕ್ರಮ ಹಾಗೂ ತರಬೇತಿ ಮತ್ತು ಸಂಶೋಧನೆ ಎಂಬ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಕಾರ್ಯಕ್ಷಮತೆ ಇರಿಸಿಕೊಂಡು ನವಭಾರತದ ನಿರ್ಮಾಣದೆಡೆಗೆ ಸಾಗುತ್ತಿದೆ. ಸಂಸ್ಥೆಯು ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಸರ್ಕಾರ, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಸಮಾನ ಮನಸ್ಸುಳ್ಳವರು ಸೇರಿ, ಸ್ಥಳೀಯ ಸಮುದಾಯದ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಸ್ಥೆಯು 1990ರ ದಶಕದಿಂದ ವಿಶೇಷಚೇತನರ ಸಬಲೀಕರಣಕ್ಕಾಗಿ ಸಮುದಾಯ ಆಧಾರಿತ ಪುನರ್ವಸತಿ ಕಾರ್ಯಕ್ರಮ ನಡೆಸುತ್ತಿದ್ದು, ಪ್ರಸ್ತುತ ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ವಿಶೇಷಚೇತನರಿಗಾಗಿ ಸಮಗ್ರ ಆರೈಕೆ, ಬೆಂಬಲ ಮತ್ತು ಚಿಕಿತ್ಸೆ ಕಾರ್ಯಕ್ರಮವು ಜಾರಿಯಲ್ಲಿದೆ. ವಿಶೇಷಚೇತನರನ್ನು ಗುರುತಿಸಿ, ಮೌಲ್ಯಮಾಪನ…
ಮಡಿಕೇರಿ ನ.23 NEWS DESK : ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಪಿಡಿಒ ಎ.ಎ.ಅಬ್ದುಲ, ಜವಾಹರ್ ಲಾಲ್ ನೆಹರು ಅವರ ಜೀವನ ಚರಿತ್ರೆ, ಮಕ್ಕಳ ಮೇಲೆ ಇಟ್ಟ ಪ್ರೀತಿ ಹೇಗೆ ಎಂಬುದನ್ನು ವಿವರಿಸಿದರು. ಗ್ರಾ.ಪಂ ಅಧ್ಯಕ್ಷೆ ಬಡುವಂಡ್ರ ಕವಿತಾ, ಆರೋಗ್ಯ ಕಾರ್ಯಕರ್ತೆಯರಾದ ಬಿ.ಎಂ.ಕುಸುಮ ಮಾತನಾಡಿ ಮಕ್ಕಳ ಚಟುವಟಿಕೆ ಬಗ್ಗೆ ನೆಹರು ಬಗ್ಗೆ ಸ್ವಚ್ಛತೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಗ್ರಾ. ಪಂ ಉಪಾಧ್ಯಕ್ಷರಾದ ಎಂ.ಬಿ.ಚಿದಂಭರ, ಸದಸ್ಯರಾದ ಬಿ.ವೈ.ಪ್ರಭುಶೇಖರ್, ಉಷಾ ತಂಗಮ್ಮ, ಜೆ.ಪಾರ್ವತಿ, ಆರೋಗ್ಯ ಕಾರ್ಯಕರ್ತೆಯರಾದ ಬಿ.ಎಂ.ಕುಸುಮ, ಸಮುದಾಯ ಆರೋಗ್ಯ ಕೇಂದ್ರದ ಶ್ರೀಜ, ಆಶಾ ಕಾರ್ಯಕರ್ತೆ ಜಯ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಯತಿಕುಮಾರಿ, ಸದಸ್ಯರು ಪೊನ್ನಮ್ಮ,ವನಿತ, ಮಮತ ಬೋಜಿ, ರಮೇಶ, ನೇತ್ರ, ಮಕ್ಕಳ ಪೋಷಕರು ಹಾಜರಿದ್ದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗೆ ಕಪ್ಪೆ ಹಾರುವುದು, ಕಾಳು ಹೆಕ್ಕುವುದು ಮತ್ತು ಓಟದ ಸ್ಪರ್ಧೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು.…
ಮಡಿಕೇರಿ ನ.23 NEWS DESK : ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸುವಂತೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ಕೃಷಿಕರ ಬೆನ್ನುಲುಬಾಗಿದ್ದು, ಸಹಕಾರ ಸಂಘಗಳನ್ನು ಪ್ರತಿಯೊಬ್ಬರೂ ಬಲಪಡಿಸಲು ಮುಂದಾಗಬೇಕು. ಸಹಕಾರ ಸಂಘಗಳು ಉಳಿದಲ್ಲಿ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಕೆ.ಎನ್.ರಾಜಣ್ಣ ಹೇಳಿದರು. ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಅವಕಾಶವಿದ್ದು, ಅಗತ್ಯ ಇದ್ದಲ್ಲಿ ಈ ಸಂಬಂಧ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸೂಕ್ತ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ಸಹಕಾರ ಸಚಿವರಾದ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 74 ಸೇವಾ ಸಹಕಾರ ಸಂಘಗಳಿದ್ದು, ಅದರಲ್ಲಿ 4 ಪ್ರಾಥಮಿಕ ಸೇವಾ ಸಹಕಾರ ಸಂಘಗಳು ನಷ್ಟದಲ್ಲಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ಪ್ರಾಥಮಿಕ ಸೇವಾ ಸಹಕಾರ ಸಂಘಗಳನ್ನು ಲಾಭದಲ್ಲಿ ನಡೆಸುವಂತಾಗಲು…
ಮಡಿಕೇರಿ ನ.23 NEWS DESK : ರಾಷ್ಟ್ರದಲ್ಲಿ ಶುದ್ಧ ಗಾಳಿ ಮತ್ತು ಪರಿಸರ ಹೊಂದಿರುವ ಪ್ರಮುಖ ನಗರ/ ಪಟ್ಟಣಗಳಲ್ಲಿ ಒಂದಾದ ಮಡಿಕೇರಿಯ ಶುಚಿತ್ವಕ್ಕೆ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಶ್ಲಾಘಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಪೌರಕಾರ್ಮಿಕರನ್ನು ಗೌರವಿಸಬೇಕು. ಪೌರಕಾರ್ಮಿಕರು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು. ಪೌರಕಾರ್ಮಿಕರು ಪಟ್ಟಣ, ನಗರ, ಮಹಾನಗರ ಪಾಲಿಕೆಗಳ ಬೆನ್ನುಲುಬು ಎಂದರೆ ತಪ್ಪಾಗಲಾರದು. ರಜೆ ಅವಧಿಯಲ್ಲಿ ರಜೆ ಪಡೆಯದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ನಗರ, ಪಟ್ಟಣ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂದು ಡಾ,ಮಂತರ್ ಗೌಡ ಅವರು ನುಡಿದರು. ಪೌರಕಾರ್ಮಿಕರು ವೃತ್ತಿಯ ಜೊತೆಗೆ ಆರೋಗ್ಯ ಹಾಗೂ ಮಕ್ಕಳ ಶಿಕ್ಷಣ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕರು ಸಲಹೆ ನೀಡಿದರು. ಪೌರಕಾರ್ಮಿಕರ ಒತ್ತಡ ಕಡಿಮೆ ಮಾಡುವಲ್ಲಿ ಮುಂದಿನ ನಗರಸಭೆ ಸಾಮಾನ್ಯ ಸಭೆಯಲ್ಲಿ ಸ್ವಚ್ಛತಾ ಯಂತ್ರಗಳನ್ನು ಖರೀದಿಸುವಂತಾಗಲು…
ಮಡಿಕೇರಿ NEWS DESK ನ.22 : ಭಾರತೀಯ ಸೇನೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿ ಇಡೀ ದೇಶವೇ ಗೌರವದಿಂದ ಕಾಣುವ ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಭಾರತೀಯ ಸೇನೆಯನ್ನು ಕಟ್ಟಿ ಬೆಳೆಸಿದ ದೇಶಭಕ್ತ ವೀರ ಸೇನಾನಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ದೇಶದ್ರೋಹವಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಿಡಿಗೇಡಿಯ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ದೇಶಸೇವೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಇವರ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸಿರುವ ವ್ಯಕ್ತಿಗೆ ಕಠಿಣ…
ಮಡಿಕೇರಿ ನ.22 NEWS DESK : ಮಡಿಕೇರಿಯ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ ಸಾರ್ವಜನಿಕರಿಗೆ ಸಮರ್ಪಿಸಿದರು. ನಗರಸಭೆಯ ಎಸ್ಎಫ್ಸಿ ಅನುದಾನದಲ್ಲಿ ಸುಮಾರು 220 ಮೀಟರ್ ಉದ್ದದ ರಸ್ತೆ ನಿರ್ಮಿಸಲಾಗಿದೆ. ರಸ್ತೆಗೆ ಚರಂಡಿ ನೀರನ್ನು ಬಿಡಬಾರದು. ವಾಹನವನ್ನು ವೇಗವಾಗಿ ಚಲಾಯಿಸಬಾರದು. ರಸ್ತೆ ಉಳಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಹೇಳಿದರು. ಸ್ಥಳೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಶ್ವೇತಾ, ಸಬಿತಾ, ಮನ್ಸೂರ್, ಜಗದೀಶ್, ನಗರಸಭೆ ಮಾಜಿ ಅಧ್ಯಕ್ಷರಾದ ಜುಲೈಕಾಬಿ, ಎಚ್.ಎಂ.ನಂದಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರಶೇಖರ್, ಪೌರಾಯುಕ್ತರಾದ ಎಚ್.ಎನ್.ರಮೇಶ್, ನಗರಸಭೆ ಎಂಜಿನಿಯರ್ ಹೇಮಂತ್, ಸತೀಶ್, ಸೆಸ್ಕ್ ಎಇ ಸಂಪತ್ ಕುಮಾರ್ ಇತರರು ಇದ್ದರು.






