ವಿರಾಜಪೇಟೆ ಅ.2 NEWS DESK : ನಗರದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ವರ್ಷದ ಎಲ್ಲಾ ದಿನಗಳು ತಮ್ಮ ಸೇವೆಯಲ್ಲಿ ತೊಡಗಿಕೊಂಡು ಜನಸೇವೆಗೆ ತಮ್ಮ ಸೇವೆಯನ್ನು ನೀಡುತ್ತಿರುವುದು ಗಮನರ್ಹವಾಗಿದೆ ಎಂದು ವಿರಾಜಪೇಟೆ ಪುರಸಭೆಯ ನೂತನ ಅಧ್ಯಕ್ಷ ದೇಚಮ್ಮ ಕಾಳಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಪುರಸಭೆ ಪೌರಕಾರ್ಮಿಕ ಸೇವಾ ಸಮಿತಿ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ವಿವಿಧ ಆಟೋಟ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರಕಾರ್ಮಿಕರು ಪುರಸಭೆಯ ಒಂದು ಅಂಗ, ಪುರಸಭೆಯ ಆಡಳಿತ ವರ್ಗ ಮತ್ತು ಪೌರಕಾರ್ಮಿಕರು ಒಂದು ನಾಣ್ಯದ ಎರಡು ಮುಖಗಳಂತೆ, ನಗರದ ಶುಚಿತ್ವಕ್ಕೆ ಮಹತ್ವ ನೀಡಿದಂತೆ ತಮ್ಮ ಆರೋಗ್ಯ ಮತ್ತು ಕುಟಂಬದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಪೌರಕಾರ್ಮಿಕರ ಅಭಿವೃದ್ದಿಗಾಗಿ ಸರ್ಕಾರದಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಕೊಡುವಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರೊಂದಿಗೆ ಗುರುತಿಸುವ ಕೆಲಸವಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ…
ಲೇಖಕ: admin
ಕುಶಾಲನಗರ ಅ.2 NEWS DESK : ಪ್ರತಿಯೊಬ್ಬರೂ ನಮ್ಮ ಸುತ್ತಲಿನ ಪರಿಸರ ಸ್ವಚ್ಚತೆಗೆ ಜತೆಗೆ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಮಂಗಳವಾರ ( ಅ.1 ರಂದು ) ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎಸ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದ ವತಿಯಿಂದ ಸ್ವಚ್ಛತೆಯೇ ಸೇವೆ : “ಸ್ವಚ್ಛತಾ ಹೀ ಸೇವಾ” ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ…
ಮಡಿಕೇರಿ ಅ.1 NEWS DESK : ಕೂರ್ಗ್ ಕಾಫಿ ವುಡ್ ಮೂವಿಸ್ನ ಬ್ಯಾನರ್ ಅಡಿಯಲ್ಲಿ ತಯಾರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಅ.4 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ. ಈಗಾಗಲೇ ಬಾಂಗ್ಲಾ ದೇಶದ ಢಾಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಲ್ರ್ಡ್ ಪ್ರೀಮಿಯರ್ ಪ್ರದರ್ಶನ ಕಂಡು ಹೆಸರು ಮಾಡಿರುವ “ಬೇರ್” (The Root) ಕೊಡವ ಸಿನಿಮಾ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗುವ ಮೂಲಕ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆ ಮಾಡಿದೆ. ಇದೀಗ “ಬೇರ್” ಕೊಡವ ಸಿನಿಮಾ ಮೈಸೂರಿನ ಇನಾಕ್ಸ್ ಚಿತ್ರಮಂದಿರದಲ್ಲಿ ಶುಕ್ರವಾರ ಮಧ್ಯಾಹ್ನ 1.15ಕ್ಕೆ ಪ್ರದರ್ಶನಗೊಳ್ಳಲಿದೆ. “ಬೇರ್” (The Root) ಪ್ರಪ್ರಥಮ ಬಾರಿಗೆ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದ್ದು, ಕೆಲವೇ ಪಾತ್ರದಾರಿಗಳ ನಟನೆ ಈ ಸಿನಿಮಾದಲ್ಲಿದೆ. ತಮ್ಮದಲ್ಲದ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಗುವ ಅನಾಹುತಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ ಕಥಾಹಂದರವನ್ನು ಹೊಂದಿದೆ. ಚಿತ್ರದಲ್ಲಿ ನಿರ್ದೇಶಕ ಕೊಟ್ಟುಕತ್ತೀರ…
ಮಡಿಕೇರಿ ಅ.1 NEWS DESK : ಯುವ ದಸರಾ ನೃತ್ಯ ಸ್ಪರ್ಧೆಗೆ ತಂಡಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ. ಆಯ್ಕೆಯಾದ ತಂಡಗಳ ದಸರಾ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಯುವ ದಸರಾ ನೃತ್ಯ ಸ್ಪರ್ಧೆಗೆ ನಿಯಮಗಳು ಇಂತಿವೆ. ಸ್ಪರ್ಧೆಯ ನೀತಿ ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು. ಶಾಸ್ತ್ರೀಯ ನೃತ್ಯ ಪ್ರಕಾರ ಹೊರತುಪಡಿಸಿ ಇತರ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿಬರ್ಂಧವಿಲ್ಲ. ತಂಡದಲ್ಲಿ ಕನಿಷ್ಠ 10 ಮಂದಿ ಗರಿಷ್ಠ 30 ಮಂದಿ ಕಲಾವಿದರು ಇರಬೇಕು. ನೃತ್ಯಗಳು ಪರಿಕಲ್ಪನೆ/ ತೊಡುಗೆಗಳು ಸಭ್ಯವಾಗಿರಬೇಕು ಹಾಗೂ ಯಾರ ನಂಬಿಕೆಗಳಿಗೂ ನೋವನ್ನುಂಟು ಮಾಡುವಂತಿರಬಾರದು. ಕಾಲಾವಧಿ 8+2 ನಿಮಿಷಗಳು. ಬೆಂಕಿ ಬಣ್ಣ ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟು ಮಾಡುವ ಯಾವುದೇ ಪರಿಕರಗಳನ್ನು ಬಳಸುತ್ತಿಲ್ಲ. ತೀರ್ಪುಗಾರರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು.
ಮಡಿಕೇರಿ ಅ.1 NEWS DESK : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಡಗು ಶಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಹಾಲ್ನಲ್ಲಿ “ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ’ ಹಾಗೂ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ’ ನಡೆಯಿತು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್ ಮಾತನಾಡಿ, ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮದ ಮಹತ್ವದ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ರಕ್ತದ ಅಗತ್ಯ ತುಂಬಾ ಇದೆ. ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಿಂದ ಹೆಚ್ಚು ರಕ್ತದಾನ…
ಮಡಿಕೇರಿ ಅ.1 NEWS DESK : ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಗಳ ತೋಟದ ಲೈನ್ ಮನೆಗಳಲ್ಲಿ ವಾಸವಿರುವ ಅಸ್ಸಾಂ ಮತ್ತಿತರ ಹೊರ ರಾಜ್ಯಗಳ ಕಾರ್ಮಿಕರ ಹೆಸರುಗಳನ್ನು ದಾಖಲೆ ಸಹಿತ ನೋಂದಣಿ ಮಾಡದಿದ್ದಲ್ಲಿ ಪೊಲೀಸರ ಸಹಕಾರದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇದೇ ಸೆ.12 ರಿಂದ 30 ರವರೆಗೆ ಹೆಸರು ನೋಂದಣಿಗೆ ಅವಕಾಶ ನೀಡಲಾಗಿತ್ತು. ನಿಗಧಿತ ಅವಧಿ ಪೂರ್ಣಗೊಂಡಿದ್ದು, ನೋಂದಣಿಗೆ ಬಾಕಿ ಇರುವ ಕಾರ್ಮಿಕರ ಹೆಸರುಗಳನ್ನು ಕಡ್ಡಾಯವಾಗಿ ತಕ್ಷಣ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಮಿಕರ ಹೆಸರು ನೋಂದಣಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆ ಹಾಗೂ ಜಿಲ್ಲೆಯ ಜನರ ಸುರಕ್ಷತೆಯ ದೃಷ್ಟಿಯಿಂದ ಹೆಸರು ನೋಂದಾಯಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಮಿಕರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ,…
ಮಡಿಕೇರಿ ಅ.1 NEWS DESK : ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ “Breaking Rabies boundries ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ಕೊಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನೋಡಲ್ ಅಧಿಕಾರಿ ಹಾಗೂ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಪಕರಾದ ಡಾ.ಕೃತಿಕಾ ಮಾತನಾಡಿ, ರೇಬಿಸ್ ರೋಗ ಎಷ್ಟು ಮಾರಕ, ರೇಬಿಸ್ ಕಾಯಿಲೆ ಹರಡುವ ಬಗ್ಗೆ ಹಾಗೂ ರೇಬಿಸ್ ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಬಗ್ಗೆ ವಿವರಿಸಿದರು. ಜಿಲ್ಲ್ಲಾ ಶಸ್ತ್ರಚಿಕಿತ್ಸಕ ಡಾ.ನಜುಂಡಯ್ಯ ಮಾತನಾಡಿ, ರೇಬಿಸ್ ಕಾಯಿಲೆಯು ಎಷ್ಟು ಮಾರಕವೆಂದು, ಸೂಕ್ತ ಲಸಿಕೆ ಪಡೆಯುವುದು ಅನಿವಾರ್ಯ ಎಂದು ತಿಳಿಸಿದರು. ಹುಚ್ಚು ನಾಯಿ ಕಡಿತದಿಂದ ದೇಶದಲ್ಲಿ ವರ್ಷಕ್ಕೆ 15 ರಿಂದ 20 ಸಾವಿರ ಮಂದಿ ಬಲಿಯಾಗುತ್ತಿದ್ದು ಈ ಪೈಕಿ ಶೇ.40 ರಷ್ಟು 15 ವರ್ಷದ…
ಮಡಿಕೇರಿ ಅ.1 NEWS DESK : ನಾಡ ಹಬ್ಬ ದಸರಾ ಪ್ರಯುಕ್ತ ಅ.3 ರಂದು ಮಡಿಕೇರಿಯಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವ ಆರಂಭಗೊಳ್ಳಲಿದ್ದು, ಗಣ್ಯರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ವಾಹನ ಸುಗಮ ಸಂಚಾರಕ್ಕೆ ಅನುವುಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಬೆಳಿಗ್ಗೆಯಿಂದಲೇ ಪಂಪ್ ಕೆರೆಯಿಂದ ( ಕರಗ ಹೋರಡುವ ಸ್ಥಳ) ಹಿಡಿದ್ದು, ಎವಿ ಶಾಲೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಎವಿ ಶಾಲಾ ಜಂಕ್ಷನ್ ನಿಂದ ಐಜಿ ವೃತ್ತದವರಗೆ ರಸ್ತೆಯ ಒಂದು ಭಾಗದಲ್ಲಿ ಅಂದರೆ ರಸ್ತೆಯ ಎಡ ಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಐಜಿ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ರಾಮಮಂದಿರ ದೇವಾಲಯದವರೆಗೆ ಸಂಜೆ 6 ಗಂಟೆಯ ನಂತರ ರಸ್ತೆಯ ಎರಡು ಭಾಗದಲ್ಲಿಯೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ, ಕರಗ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಡಿಕೇರಿ…
ಮಡಿಕೇರಿ ಅ.1 NEWS DESK : ಬಿದ್ದು ಸಿಕ್ಕಿದ ಬೆಲೆಬಾಳುವ ಮೊಬೈಲ್ ಫೋನ್ಅನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ನಗರದ ಸಂಚಾರಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಗರದ ಐಜಿ ವೃತ್ತದ ಬಳಿ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಉಪ ನೀರಿಕ್ಷಕ ಶ್ರೀಧರ್ ಅವರಿಗೆ ಬೆಲೆಬಾಳುವ ಮೊಬೈಲ್ ಫೋನ್ ಬಿದ್ದುಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಡಿಕೇರಿ ಅ.1 NEWS DESK : 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ಆರ್ಥಿಕ ತಾರತಮ್ಯವನ್ನು ಸರಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರಿಗೆ 6ನೇ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ಕ್ರಮದಿಂದ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ. ಸರ್ಕಾರ ತಕ್ಷಣ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ಪಿ.ಎಸ್.ಜನಾರ್ಧನ…






