ಲೇಖಕ: admin

ವಿರಜಪೇಟೆ ಅ.1 NEWS DESK : ವಿರಾಜಪೇಟೆ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ಎರಡನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯು ನ.15 ರಿಂದ 17ರ ವರೆಗೆ ವಿರಾಜಪೇಟೆ ನಗರದ ತಾಲ್ಲೂಕು ಮೈದಾನದಲ್ಲಿ ನಡೆಯಲಿದೆ ಎಂದು ಕಲ್ಲುಬಾಯ್ಸ್‍ನ ಅಧ್ಯಕ್ಷ ರಹೀಂ ಇಚ್ಚಿಯಪ್ಪ ಮಾಹಿತಿ ನೀಡಿದರು. ವಿರಾಜಪೇಟೆಯ ಟಿ.ಕೆ.ಟಿ. ಟವರ್‍ನಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಲೈಕ್ ಸಂಸ್ಥೆಯ ಮಾಲೀಕ ರಾಸಿಕ್ ಕ್ರೀಡಾಕೂಟದ ಪೋಸ್ಟರ್‍ನ್ನು ಬಿಡುಗಡೆ ಮಾಡಿದರು. ಇದೇ ಸಂದರ್ಭ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ರಾಫಿ ಮಾತನಾಡಿ ಪಂದ್ಯಾವಳಿಗೆ ಶುಭಹಾರೈಸಿದರು. ಈ ಸಂದರ್ಭ ಕ್ರೀಡಾಕೂಟದ ಪ್ರೇಮಿಗಳಾದ ಸಿ.ಎ.ನಾಸಿರ್, ಶಂಶಿರ್, ಚೇಕು, ಯ್ಯಯ್ಯ ಸೇರಿದಂತೆ ಕೀಡಾ ಪ್ರೇಮಿಗಳು ಹಾಜರಿದ್ದರು.

Read More

ಮಡಿಕೇರಿ ಅ.1 NEWS DESK : ನಗರದ ಕೊಡಗು ವಿದ್ಯಾಲಯ ವಿದ್ಯಾಸಂಸ್ಥೆಯ ವತಿಯಿಂದ ದ್ವಿತೀಯ ಬಾರಿಗೆ ಅ.4 ರಿಂದ 7 ರವರೆಗೆ ಸಿಬಿಎಸ್‍ಇ ದಕ್ಷಿಣ ವಲಯದ ವಲಯ 2ರ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ವಲಯಕ್ಕೆ ಒಳಪಡುವ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿನ ಸಿಬಿಎಸ್‍ಇ ಶಿಕ್ಷಣ ಸಂಸ್ಥೆಗಳ ಕ್ರೀಡಾಪಟುಗಳಿಗೆ ಸೀಮಿತವಾಗಿ ಆಯೋಜಿತ ಹಾಕಿ ಪಂದ್ಯಾವಳಿಯ ಪಂದ್ಯಗಳು ಕೂಡಿಗೆ ಮತ್ತು ಸೋಮವಾರಪೇಟೆಯ ಆಸ್ಟ್ರೋ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದರು. 14 ವರ್ಷದೊಳಗಿನ, 17 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ಮೂರು ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಪಂದ್ಯಾವಳಿ ನಡೆಯಲಿದ್ದು, ಒಟ್ಟು 37 ತಂಡಗಳು ಪಾಲ್ಗೊಳ್ಳಲಿವೆ. ಕ್ರೀಡಾಪಟುಗಳು, ತರಬೇತುದಾರರು ಮತ್ತು ವ್ಯವಸ್ಥಾಪಕರು ಸೇರಿದಂತೆ ಸುಮಾರು 700 ಮಂದಿ ಭಾಗವಹಿಸಲಿದ್ದಾರೆ. ಲೀಗ್ ಮತ್ತು ನಾಕೌಟ್ ಮಾದರಿಯಲ್ಲಿ 60 ಪಂದ್ಯಾಟಗಳು ನಡೆಯಲಿದ್ದು, ಹಾಕಿ ಕೂರ್ಗ್‍ನ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಪಂದ್ಯಗಳನ್ನು ನಿರ್ವಹಿಸಲಿದ್ದಾರೆ…

Read More

ಮಡಿಕೇರಿ ಅ.1 NEWS DESK : ಕೊಡವ ಯುವ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಲೆದರ್‌ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಉದ್ದೇಶದಿಂದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.1 ರಿಂದ 20ರ ವರೆಗೆ ಪಾಲಿಬೆಟ್ಟದಲ್ಲಿ ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಟಿ-20 ಮಾದರಿಯ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದರು. ಸೀಸನ್-1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳವ ನಿರೀಕ್ಷೆ ಇದೆ. ಒಂದು ತಂಡದಲ್ಲಿ 15 ಮಂದಿ ಇರಲಿದ್ದು, ಈ ಪಂದ್ಯ ಕೊಡವ ಕ್ರೀಡಾ ಪ್ರತಿಭೆಗಳಿಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜನಾಂಗದ ಪ್ರತಿಭೆಗಳನ್ನು ಗುರುತಿಸಿ ಲೆದರ್‍ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಗುರಿ ಹೊಂದಿದ್ದೇವೆ. ಯುವ ಪ್ರತಿಭೆಗಳು ಲೆದರ್‌ಬಾಲ್ ಕ್ರಿಕೆಟ್…

Read More

ಮಡಿಕೇರಿ ಅ.1 NEWS DESK : ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಅ.5 ರಂದು ಮಲೆನಾಡ ಮಡಿಲಲ್ಲಿ ಜೆಸಿ ನಿಸರ್ಗ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಘಟಕದ ಅಧ್ಯಕ್ಷ ಪೆಮ್ಮಂಡ ಬೋಪಣ್ಣ ಅವರು ಪೊನ್ನಂಪೇಟೆ ತಾಲ್ಲೂಕಿನ ಬೇಗೂರುಕೊಲ್ಲಿಯಲ್ಲಿ ಒಂದು ದಿನ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರವೀಣ್ ಮುತ್ತಪ್ಪ, ಹುದಿಕೇರಿ ಗ್ರಾ.ಪಂ ಅಧ್ಯಕ್ಷರಾದ ಕುಪ್ಪಣಮಡ ಕೆ.ಕಾವೇರಮ್ಮ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠನಾ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಲಯ 14 ಜೆಎಸಿ ವಲಯ ಆಡಳಿತ ಮಂಡಳಿಯ ಸಲಹೆಗಾರ ಎ.ಎಸ್.ನರೈನ್ ಕಾರ್ಯಪ್ಪ, ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ.ಎಂ.ನವೀನ್ ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ನವೀನ್,…

Read More

ಮೈಸೂರು NEWS DESK ಅ.1 : ಕೇಂದ್ರ ಸರ್ಕಾರವು ಸ್ಥಾಯಿ ಸಮಿತಿಗಳನ್ನು ರಚಿಸಿ ಆದೇಶಿಸಿದ್ದು. ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸ್ಥಾಯಿ ಸಮಿತಿಗೆ ಮೈಸೂರು-ಕೊಡಗು ಸಂಸದರಾದ  ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸದರಿ ಸ್ಥಾಯಿ ಸಮಿತಿಗೆ ಅಸ್ಸಾಂನ ಸಂಸದ ಭುಭನೇಶ್ವರ್ ಕಲಿತಾ ಅವರು ಅಧ್ಯಕ್ಷರಾಗಿರುತ್ತಾರೆ.

Read More

ಮಡಿಕೇರಿ NEWS DESK ಅ.1  : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಿಂದ 12 ರವೆರೆಗೆ ಪ್ರತೀ ನಿತ್ಯವೂ ವೈವಿಧ್ಯಮಯ ಸಾಂಸ್ಕೖತಿಕ ಕಾಯ೯ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್. ಟಿ ಮಾಹಿತಿ ನೀಡಿದ್ದಾರೆ. ಮಡಿಕೇರಿ ಕ್ಷೇತ್ರ ಶಾಸಕ ಡಾ, ಮಂಥರ್ ಗೌಡ, ಜಿಲ್ಲಾಧಿಕಾರಿ ಮತ್ತು ದಸರಾ ಸಮಿತಿ ಅಧ್ಯಕ್ಷರಾದ ವೆಂಕಟರಾಜಾ ಮಾಗ೯ದಶ೯ನದಲ್ಲಿ ದಸರಾ ಸಮಿತಿಯ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ರಾಜೇಶ್ ಬಿ ವೈ ಮತ್ತು ಖಜಾಂಜಿ ಅರುಣ್ ಶೆಟ್ಟಿ, ಸಮಿತಿ ಪದಾದಿಕಾರಿಗಳ  ಸಹಕಾರದೊಂದಿಗೆ ವೈವಿಧ್ಯಮಯ ಕಾಯ೯ಕ್ರಮಗಳು ಈ ಬಾರಿಯ ದಸರಾದಲ್ಲಿ ಜನಮನ ಸೆಳೆಯಲಿದೆ ಎಂದೂ ಅನಿಲ್ ತಿಳಿಸಿದ್ದಾರೆ. ::: ದಸರಾ ಕಾಯ೯ಕ್ರಮಗಳ ವಿವರ ::: ಅಕ್ಟೋಬರ್ 4 ರಂದು ಶುಕ್ರವಾರ –   ಮಡಿಕೇರಿಯ ಕಾವ್ಯಶ್ರೀ  ಕಪಿಲ್ ಕಲಾಕಾವ್ಯ ತಂಡದಿಂದ   ನೖತ್ಯ ವೈವಿಧ್ಯ , ಮೇವಡ ಕಾವೇರಿ  ಅಯ್ಯಪ್ಪಮತ್ತು  ತಂಡದಿಂದ  ಗಾನಸುಧೆ ,  ಕೂಡಿಗೆಯ ಎ ಕ್ರಿಯೇಟೀವ್  ಡಾನ್ಸ್ ಅಕಾಡೆಮಿಯಿಂದ   ಭಾರತೀಯ…

Read More

ಮಡಿಕೇರಿ NEWS DESK ಅ.1 : ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ಕೊಡವರ ಮಾತೃಭೂಮಿ ಕೊಡವಲ್ಯಾಂಡ್ ಮೇಲೆ ನಡೆಸುತ್ತಿರುವ ನಯವಂಚನೆಯ ಸಂಚನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಯಲು ಮಾಡಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಶ್ರೀಮಂಗಲದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ, ದಸರಾ, ಹಾಕಿ ಉತ್ಸವ, ದೇವಾಲಯಗಳ ಹಬ್ಬಗಳಿಗೆ ದೇಣಿಗೆ ನೀಡುತ್ತಿರುವ ಭೂಮಾಫಿಯಾಗಳು ದಾನ, ಧರ್ಮ, ಪರಿಸರ ಸಂರಕ್ಷಣೆಯ ನಾಟಕವಾಡುತ್ತಿದ್ದಾರೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಸಮಾಜಸೇವೆಯ ಮುಖವಾಡ ತೊಟ್ಟುಕೊಂಡಿದ್ದಾರೆ. ಈ ನಯವಂಚಕತನದ ಷಡ್ಯಂತ್ರವನ್ನು ಸಿಎನ್‌ಸಿ ಸಂಘಟನೆ ಹೋರಾಟದ ಮೂಲಕ ಬಯಲು ಮಾಡಲಿದೆ ಎಂದರು. ತೆಲಂಗಾಣ ಮತ್ತು ಆಂಧ್ರ ಭಾಗದ ಬಂಡವಾಳಶಾಹಿಗಳು ಕೊಡವರ ಭೂಮಿಯನ್ನು ದೊಡ್ಡ…

Read More

ಮಡಿಕೇರಿ ಅ.1 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅಕ್ಷರ ಹಬ್ಬ” ಒಂದು ದಿನದ ಸಾಹಿತ್ಯ ಉತ್ಸವ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ ನ ಅಧ್ಯಕ್ಷ ಅನಂತಶಯನ ಉದ್ಘಾಟಿಸಿದರು. ಕಾರ್ಯಕ್ರಮದ ಸಂಯೋಜಕರಾದ ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಡಿಕೇರಿ ಪ್ರಾಂಶುಪಾಲರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಸ.ಪ.ಪೂ ಕಾಲೇಜಿನ ಪ್ರಾಚಾರ್ಯರಾದ ಪಿ.ಆರ್.ವಿಜಯ, ಕರಾಮುವಿ ಪ್ರಾದೇಶಿಕ ನಿರ್ದೇಶಕರಾದ ಸ್ಮಿತಾ ಸುಬ್ಬಯ್ಯ  ಭಾಗವಹಿಸಿದ್ದರು. ಪ್ರಗತಿಪರ ಕೃಷಿ ಮಂದ್ರೀರಾ ತೇಜಸ್ ನಾಣಯ್ಯ ತಮ್ಮ ಅನುಭವವನ್ನು ಹಂಚಿಕೊಂಡರು. ವಿಜ್ಞಾನಿ ಡಾ. ಜೆ.ಜಿ.ಮಂಜುನಾಥ್ ಅವರನ್ನು ವಿದ್ಯಾರ್ಥಿಗಳು ಸಂದರ್ಶಿಸಿದರು. ಕಥಾ ವಚನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಡೆಸಿಕೊಟ್ಟರು. ಕನ್ನಡ ಉಪನ್ಯಾಸಕ  ಪೂರ್ಣಿಮಾ ಕವಿತೆ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಸ್ಪರ್ಧೆಗಳು, ರಸಪ್ರಶ್ನೆ, ಪುಸ್ತಕ ಪ್ರದರ್ಶನ, ಕಲಾಪ್ರದರ್ಶನ, ಸಾಧಕರ ಸಂದರ್ಶನ, ಪುಸ್ತಕ ಪರಿಚಯ, ಟ್ರೆಶರ್ ಹಂಟ್  ಇತ್ಯಾದಿ ಕಾರ್ಯಕ್ರಮಗಳು …

Read More

ಪೊನ್ನಂಪೇಟೆ ಅ.1 NEWS DESK : ಕೊಡಗು ಅನ್ವಾರುಲ್ ಹುದಾ ಯುಎಇ ಸಮಿತಿ ವತಿಯಿಂದ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್.ಸೂಫಿ ಹಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಮಿಲಾದ್ ಸಮಾವೇಶದಲ್ಲಿ ಪಾಲ್ಗೊಳ್ಳಲು ದುಬೈಗೆ ಆಗಮಿಸಿದ್ದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಕೊಡಗು ಅನ್ವಾರುಲ್ ಹುದಾ ಯುಎಇ ಸಮಿತಿ ಪದಾಧಿಕಾರಿಗಳು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ  ಕೊಡಗು ಅನ್ವಾರುಲ್ ಹುದಾ ಯುಎಇ ಸಮಿತಿಯ ಉಪಾಧ್ಯಕ್ಷ ಅಶ್ರಫ್ ಕುಂಜಿಲ, ಜುಬೈರ್ ಎಮ್ಮೆಮಾಡು, ಕೋಶಾದಿಕಾರಿ ರಫೀಕ್ ಹಾಜಿ ಚಾಮಿಯಾಲ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮೂರ್ನಾಡು, ಜಂಟಿ ಕಾರ್ಯದರ್ಶಿ ಮುಜೀಬ್ ಕಡಂಗ, ಸಹ ಕಾರ್ಯದರ್ಶಿಗಳಾದ ನಿಸಾರ್ ಗುಂಡಿಕೆರೆ, ಮುಜ್ಹಮ್ಮಿಲ್ ಚಾಮಿಯಾಲ, ಸಂಯೋಜಕರಾದ ಮಮ್ಮದಲಿ ಉಸ್ತಾದ್ ಹಾಗೂ ಅಫ್ಸಲ್ ಅನ್ವಾರಿ ಮೊದಲಾದವರು ಹಾಜರಿದ್ದರು.

Read More

ಮಡಿಕೇರಿ ಅ.1 NEWS DESK : ಕುಶಾಲನಗರದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ(ಎ.ಪಿ.ಸಿ.ಎಂ.ಎಸ್‌.ನಿ) ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡುವ‌ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗೂ ಬಹುಮಾನ ದೊರಕಿದೆ. ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಪೈಕಿ ಉತ್ತಮ ಕಾರ್ಯನಿರ್ವಹಿಸಿ ಈ ಸಾಲಿನಲ್ಲಿ ಪ್ರಥಮ ಸ್ಧಾನ ಪಡೆದಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಬಾಂಡ್ ಗಣಪತಿ ಸಂಘದ ಅಧ್ಯಕ್ಷರಾದ ಎಂ.ಎನ್. ಕುಮಾರಪ್ಪ ಅವರಿಗೆ ಬಹುಮಾನವನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಗದೀಶ್ ಹಾಜರಿದ್ದರು.

Read More