ಲೇಖಕ: admin

ಮಡಿಕೇರಿ NEWS DESK ಸೆ.30 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಅ.3 ರಿಂದ ಅ.12ರ ವರೆಗೆ ದೇವಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ ಎಂದು ದೇವಾಲಯದ ಟ್ರಸ್ಟಿ ಹಾಗೂ ಅಲಂಕಾರ ಸಮಿತಿಯ ಅಧ್ಯಕ್ಷ ಸಿ.ಎಸ್.ರಂಜಿತ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ದಂಡಿನ ಮಾರಿಯಮ್ಮ ದೇವಾಲಯವು 94ನೇ ವರ್ಷದ ಅದ್ದೂರಿ ದಸರಾ ಉತ್ಸವವನ್ನು ಆಚರಿಸುತ್ತಿದ್ದು, ಹತ್ತು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ ಎಂದು ಹೇಳಿದರು. ಅ.3 ರಂದು ಬೆಳ್ಳಿಯ ಅಲಂಕಾರ, ಅ.4 ರಂದು ಹೂವಿನ ಅಲಂಕಾರ, ಅ.5 ರಂದು ಬೇವಿನ ಅಲಂಕಾರ, ಅ.6 ರಂದು ವಿಶೇಷ ಖಾದ್ಯ ಅಲಂಕಾರ, ಅ.7 ರಂದು ನಿಂಬೆ ಹಣ್ಣಿನ ಅಲಂಕಾರ, ಅ.8 ರಂದು ಮಹಾಲಕ್ಷ್ಮಿ ಅಲಂಕಾರ, ಅ.9 ರಂದು ಶಾರದ ದೇವಿಯ ಅಲಂಕಾರ, ಅ.10 ರಂದು ಬಳೆಯ ಅಲಂಕಾರ, ಅ.11 ರಂದು ಹಣ್ಣಿನ ಅಲಂಕಾರ, ಅ.12…

Read More

ಮಡಿಕೇರಿ NEWS DESK ಸೆ.30 : ಮಡಿಕೇರಿ ದಸರಾ ಕ್ರೀಡಾ ಸಮಿತಿ ವತಿಯಿಮದ ಐತಿಹಾಸಿಕ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಅ.5, 6, 7 ಮತ್ತು 9 ರಂದು ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆಯೆಂದು ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.5 ರಂದು ಬೆಳಗ್ಗೆ 6.30 ಗಂಟೆಗೆ ರಸ್ತೆ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪುರುಷರಿಗೆ ಮತ್ತು ಮಹಿಳೆೆಯರಿಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಕ್ಯಾಪಿಟಲ್ ವಿಲೇಜ್‌ವರೆಗೆ, 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಜ.ತಿಮ್ಮಯ್ಯ ವೃತ್ತದಿಂದ ಆಸ್ಪತ್ರೆ ಗೇಟ್‌ವರೆಗೆ, 5 ರಿಂದ 7ನೇ ತರಗತಿ ಮಕ್ಕಳಿಗೆ ಹೋಟೆಲ್ ಓಲ್ಡ್ ಈಸ್ಟ್ ಅಂಡ್‌ವರೆಗೆ, 8 ರಿಂದ 10ನೇ ತರಗತಿ ಮಕ್ಕಳಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಪೋವರೆಗೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸುದರ್ಶನ್ ವೃತ್ತದವರೆಗೆ ರಸ್ತೆ ಓಟ ನಡೆಯಲಿದೆಯೆಂದು ತಿಳಿಸಿದರು. ಅಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರ ವಾಲಿಬಾಲ್ ಪಂದ್ಯಾವಳಿ, ಸಾರ್ವಜನಿಕ ಮುಕ್ತ ವಿಭಾಗದ ಫುಟ್ಬಾಲ್(5+2) ಪಂದ್ಯಾವಳಿ ನಡೆಯಲಿದೆ.…

Read More

ಮಡಿಕೇರಿ NEWS DESK ಸೆ.30 : ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಅ.19 ಮತ್ತು 20 ರಂದು ನಗರದಲ್ಲಿ ಚೆಸ್ ತರಬೇತಿ ಮತ್ತು “ಮುಕ್ತ ರ‍್ಯಾಪಿಡ್ ಚೆಸ್ ಪಂದ್ಯಾವಳಿ”ಯನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಅಧ್ಯಕ್ಷ ಸುದಯ್ ನಾಣಯ್ಯ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತ ಮಾಹಿತಿ ನೀಡಿದ ಅವರು, ನಗರದ ಜೂನಿಯರ್ ಕಾಲೇಜಿನಲ್ಲಿ ಅ.19 ರಂದು 10 ವರ್ಷದೊಳಗಿನ ಮಕ್ಕಳಿಗೆ ಫಿಡೆ ಇನ್‌ ಸ್ಟ್ರಕ್ಟರ್ ಮತ್ತು ಫಿಡೆ ಆರ್ಬಿಟರ್ ಶ್ರೀಪದ್ ಕೆ.ವಿ. ಅವರು ಚೆಸ್ ತರಬೇತಿಯನ್ನು ನೀಡಲಿದ್ದಾರೆ ಎಂದರು. ಅ.20 ರಂದು ಚೆಸ್ ಪಂದ್ಯಾವಳಿಯು 10 ವರ್ಷದೊಳಗಿನ ವಿಭಾಗ, 16 ವರ್ಷದೊಳಗಿನ ವಿಭಾಗ ಮತ್ತು ಮುಕ್ತ ವಿಭಾಗಗಳಲ್ಲಿ ನಡೆಯಲಿದೆ. ಮುಕ್ತ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5 ಸಾವಿರ, ದ್ವಿತೀಯ 4 ಸಾವಿರ, ತೃತೀಯ 3500, ನಾಲ್ಕನೇ ಸ್ಥಾನ 3 ಸಾವಿರ, 5ನೇ ಸ್ಥಾನ 2500, 6ನೇ ಸ್ಥಾನ 2 ಸಾವಿರ, 7ನೇ ಸ್ಥಾನ 1500 ಮತ್ತು 8 ನೇ ಸ್ಥಾನ ಪಡೆಯುವವರಿಗೆ 1 ಸಾವಿರ…

Read More

ಕುಶಾಲನಗರ NEWS DESK ಸೆ.30 : ಕುಶಾಲನಗರ ಸಮೀಪದ ಕೂಡ್ಲೂರು ಬಳಿ ವೀರಭೂಮಿ ಜನಪದ ಗ್ರಾಮದಲ್ಲಿ ಜನರ ಬಳಿಗೆ ಜಾನಪದ ಅದ್ದೂರಿ ಕಾರ್ಯಕ್ರಮ ನಡೆಯಿತು. ಕನ್ನಡದ ಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕನ್ನಡ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪ್ರಖ್ಯಾತ ಜಾನಪದ ಕಲಾವಿದೆ ಪದ್ಮಶ್ರೀ ಡಾ ರಾಣಿ ಮಾಚಯ್ಯ ಅವರ ತಂಡದಿಂದ ಕೊಡಗಿನ ಉಮ್ಮತ್ತಾಟ್ ನೃತ್ಯ, ಜೇನು ಕುರುಬ ಬುಡಕಟ್ಟು ಜನಪದ ಖ್ಯಾತರಾದ ಜೆ ಕೆ ರಾಮ ಅವರ ತಂಡದಿಂದ ಬುಡಕಟ್ಟು ನೃತ್ಯ, ಮಂಡ್ಯದ ಖ್ಯಾತ ಸೋಭಾನೆ ಕಲಾವಿದರು, ವೀರಗಾಸೆ, ಗೊರವ ಕುಣಿತ, ಅಂತರರಾಷ್ಟ್ರೀಯ ಖ್ಯಾತಿಯ  ಕಲಾವಿದ ಕೆ ಪಿ ದೇವರಾಜ್ ತಂಡದಿಂದ ಪೂಜಾ ಕುಣಿತ, ಕಂಸಾಳೆ ಕಲಾವಿದ ಮಂಜು ತಂಡದಿಂದ ಕಂಸಾಳೆ ನೃತ್ಯ, ಜಾನಪದ ಗಾಯನ, ಬಂಜಾರ ನೃತ್ಯ ಪ್ರದರ್ಶನ, ಡೊಳ್ಳು ಕುಣಿತ, ಸಿದ್ಧಿ ಬುಡಕಟ್ಟು ನೃತ್ಯ ಜಾದು ಪ್ರದರ್ಶನ ನಡೆಯಿತು. ಜನಪದ ಸಿರಿ ಕನ್ನಡದ ಸಂಪಾದಕರಾದ ಜರಗನಹಳ್ಳಿ ಕಾಂತರಾಜು ಅವರು ಕಾರ್ಯಕ್ರಮ ಉಸ್ತುವಾರಿ ವಹಿಸಿದ್ದರು. ಇದೇ ಸಂದರ್ಭ ಸ್ಥಳೀಯ ಗಣ್ಯರು ಮತ್ತು ಕಲಾವಿದರಿಗೆ ಜನಪದ ಸಿರಿ…

Read More

ವಿರಾಜಪೇಟೆ NEWS DESK ಸೆ.30 : ವಿರಾಜಪೇಟೆ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ದೇಚಮ್ಮ ಕಾಳಪ್ಪ ಹಾಗೂ ಉಪಾಧ್ಯಕ್ಷರಾಗಿ ಫಸಿಹಾ ತಬುಸುಮ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿಯ ಬೊಪ್ಪಂಡ ಸುನಿತಾ ಜೂನಾ ಹಾಗೂ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಬೋವಿರಿಯಂಡ ಆಶಾ ಸುಬ್ಬಯ್ಯ ಅವರಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ 9 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಗಳ ಪರವಾಗಿ 6 ಮತಗಳು ಚಲಾವಣೆಗೊಂಡವು. ಸುಮಾರು 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಾಣಿ ಹಿಡಿದಿರುವ ಬಗ್ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಹರ್ಷ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

Read More

ಮಡಿಕೇರಿ ಸೆ.30 NEWS DESK : ಐತಿಹಾಸಿಕ ಮಡಿಕೇರಿ ದಸರಾ ಉತ್ಸವ ಒಂದೂವರೆ ಶತಮಾನದ ಉದ್ದಕ್ಕೂ ನಡೆದು ಬಂದ ಹಾದಿಯ ಪಥವನ್ನು ಗುರುತಿಸುವ ನಿಟ್ಟಿನಲ್ಲಿ ಹಿರಿಯ ಪತ್ರಕರ್ತ ಅನಿಲ್ ಹೆಚ್.ಟಿ. ಅವರು ರಚಿಸಿರುವ ‘ಮಡಿಕೇರಿ ಜನೋತ್ಸವ ದಸರಾ ಕಾಫಿ ಟೇಬಲ್ ಪುಸ್ತಕ’ವನ್ನು ಭಾನುವಾರ ಅನಾವರಣಗೊಳಿಸಲಾಯಿತು. ನಗರದ ರೆಡ್ ಬ್ರಿಕ್ಸ್ ಹೋಟೆಲ್‍ನ ಸತ್ಕಾರ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಡಿಕೇರಿ ದಸರಾ ಜನೋತ್ಸವ ಪುಸ್ತಕವನ್ನು ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು, ಸುಮಾರು ಒಂದೂವರೆ ಶತಮಾನದ ಮಡಿಕೇರಿ ದಸರಾ ಉತ್ಸವ ನಡೆದು ಬಂದ ಹಾದಿಯ ಬಗ್ಗೆ ಸ್ಪಷ್ಟವಾದ ಮಾಹಿತಿಗಳಿಲ್ಲ. ಇಂತಹ ಸಂದರ್ಭ ಅನಿಲ್ ಅವರು ದಸರಾ ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಪುಸ್ತಕವೊಂದನ್ನು ಹೊರ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂಬರುವ ದಿನಗಳಲ್ಲಿ ಮಡಿಕೇರಿ ದಸರಾ ಉತ್ಸವ ನಡೆಸಿರುವ ಬಗ್ಗೆ ಸಮಗ್ರ ‘ದಾಖಲೀಕರಣ’ ಮಾಡಲಾಗುತ್ತದೆಂದು ತಿಳಸಿದರು. ಮಡಿಕೇರಿ ಮತ್ತು ಮೈಸೂರು ದಸರಾ ಉತ್ಸವ ಆಚರಣೆಗೆ ಸಾಕಷ್ಟು…

Read More

ಮಡಿಕೇರಿ ಸೆ.30 NEWS DESK : ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಸೇವೆಗಾಗಿ ಪ್ರಗತಿಪರ ಪ್ರಾಂಶುಪಾಲೆ ಪ್ರಶಸ್ತಿ ಲಭಿಸಿದೆ. ಎಜುಕೇಶನ್ ಟುಡೇನ ಎಜುಕೇಶನ್ ನ್ಯೂಸ್ ನೆಟ್‌ವರ್ಕ್ (ಇಎನ್‌ಎನ್) ವತಿಯಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಶಿಕ್ಷಣೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು.  ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸುಮಿತ್ರ ಅವರು ಸಲ್ಲಿಸಿರುವ ಸೇವೆ, ದೃಢಸಂಕಲ್ಪ ಮತ್ತು ಶ್ರಮವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ, ಶಿಕ್ಷಣದ ಗುಣಮಟ್ಟವನ್ನು ಉತ್ತೇಜಿಸಲು  ಸುಮಿತ್ರಾ ಹಮ್ಮಿಕೊಂಡಿರುವ ನಿರಂತರ ಪ್ರಯತ್ನಗಳು ಈ ಗೌರವ ಲಭಿಸಲು ಕಾರಣವಾಗಿದೆ. ದೇಶದ ವಿವಿಧೆಡೆಗಳಿಂದ ಶಿಕ್ಷಣ ತಜ್ಞರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಸೆ.30 NEWS DESK : ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮದ ಹನುಮ ಸೇನಾ ಸಮಿತಿಯ ವತಿಯಿಂದ ಹನುಮ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಸಮಿತಿಯ ಅಧ್ಯಕ್ಷ ಕೆ.ಎಸ್ .ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೂಡುಮಂಗಳೂರು ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಈ ಬಾರಿ ಮೂರನೇಯ ಅವಧಿಯ ಹನುಮ ಜಯಂತಿ ಆಚರಣೆ, ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ವಾರ್ಷಿಕ ರಥೋತ್ಸವ ಸಂದರ್ಭದ ಭಾಗವಹಿಸುವಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆದವು. ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಎರಡೂ ಗ್ರಾಮಗಳಿಗೆ ಒಂದೇ ಶೋಭಾಯಾತ್ರೆಯ ಹನುಮ ‌ಮಂಟಪವನ್ನು ಹೊರತರುವ ಚಿಂತನೆಗಳ ಬಗ್ಗೆ ಹಾಜರಿದ್ದ ಯುವಕರ ತಂಡ, ಗ್ರಾಮಸ್ಥರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಅನುಗುಣವಾಗಿ ಅದ್ದೂರಿಯ ಶೋಭಾಯಾತ್ರೆಯ ವಿಗ್ರಹವನ್ನು ಸಿದ್ದ ಪಡಿಸುವ ಮತ್ತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಕುಶಾಲನಗರ ಹನುಮ ಸೇವಾ ಸಮಿತಿಯ…

Read More

ಮಡಿಕೇರಿ ಸೆ.30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಕೊಡಗು ಶಾಖೆ ಮಡಿಕೇರಿ ಮಾಜಿ ಸೈನಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯು ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರೋಟರಿ ಹಾಲ್‍ನಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,…

Read More

ಮಡಿಕೇರಿ ಸೆ.30 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ನ.5 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅ.8 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ,…

Read More