ಮಡಿಕೇರಿ ಸೆ.30 NEWS DESK : ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಸಿದ್ಧ ದೇವಾಲಯಗಳು, ಪವಿತ್ರ ಸ್ಥಳಗಳು, ಹೋಟೆಲ್, ಹೋಂಸ್ಟೇ, ರೆಸಾರ್ಟ್, ಜಲಾಶಯ, ಜಲಪಾತ, ಪ್ರೇಕ್ಷಣೀಯ ಸ್ಥಳಗಳು ಹೀಗೆ ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್ಸೈಟ್ನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಕಾರದಲ್ಲಿ ನಗರದ ಹೊರವಲಯದ ಆಕ್ಸಿರಿಚ್ ಹೋಟೆಲ್ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಪವಿತ್ರ ಸ್ಥಳವಾದ ತಲಕಾವೇರಿ, ಭಾಗಮಂಡಲ ಹಾಗೂ ಪ್ರವಾಸಿ ಸ್ಥಳವಾದ ಜಲಪಾತಗಳು, ಪ್ರೇಕ್ಷಣೀಯ ಸ್ಥಳಗಳು, ಹೋಟೆಲ್ಗಳು ರೆಸಾರ್ಟ್ಗಳು, ಸೇರಿದಂತೆ ಹಲವು ಸ್ಥಳಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಡಿಸೆಂಬರ್ನೊಳಗೆ ವೆಬ್ಸೈಟ್ಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಅವರು ಮತ್ತೊಬ್ಬರಿಗೆ…
ಲೇಖಕ: admin
ಮಡಿಕೇರಿ ಸೆ.30 NEWS DESK : ವಿಶ್ವ ಪ್ರವಾಸೋದ್ಯಮ ದಿನ 2024ರ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ, ಮಡಿಕೇರಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹಾಗೂ ಕಾಲೇಜಿನ ಎನ್.ಸಿ.ಸಿ. ಘಟಕಗಳ ಜಂಟಿ ಸಹಯೋಗದಲ್ಲಿ “ಸ್ವಚ್ಛತಾ ಹೀ ಸೇವಾ 2024” ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ರ್ಯಾಲಿ ನಡೆಯಿತು. ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಸ್ವಚ್ಛತಾ ರ್ಯಾಲಿ ಚಾಲನೆ ನೀಡಿದರು. ಈ ರ್ಯಾಲಿಯು ಮಡಿಕೇರಿ ನಗರದ ಚೌಕಿ ವೃತ್ತದಿಂದ ಆರಂಭಗೊಂಡು ರಾಜಾಸೀಟಿನಲ್ಲಿ ಕೊನೆಗೊಂಡಿತು. ಈ ಸಂದರ್ಭ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಅನಿತಾ ಭಾಸ್ಕರ್ ಮಾತನಾಡಿ, ಸ್ವಚ್ಛತೆಯು ಒಂದು ದಿನಕ್ಕೆ ಸೀಮಿತವಾಗದೆ ದಿನನಿತ್ಯ ಅನುಸರಿಸಬೇಕೆಂದು ಹೇಳಿದರು. ಇಂದಿನ ಯುವ ಪೀಳಿಗೆ ನಗರದ ಸ್ವಚ್ಛತೆಯನ್ನು ಕಾಪಾಡಲು ಪಣತೊಡಬೇಕೆಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಕೆ.ಶೈಲಶ್ರೀ, ಅಲೋಕ್ ಬಿ.ಜೈ ಮತ್ತು ಅಧ್ಯಾಪಕರಾದ ಖುರ್ಷಿದ್ ಬಾನು, ಅರ್ಷಕ್…
ಮಡಿಕೇರಿ ಸೆ.30 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನಡ ಚಲನಚಿತ್ರ “ಕಂದೀಲು” (The Ray of hope) ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಅ.4ರಂದು ಪ್ರದರ್ಶನಗೊಳ್ಳಲಿದೆ. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾದ ಸ್ಪರ್ಧಾತ್ಮಕ ವಿಭಾಗದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನದಾಗಿಸಿಕೊಂಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ ಚಿತ್ರ ಮೈಸೂರಿನ ಇನಾಕ್ಸ್ ಚಿತ್ರಮಂದಿರದಲ್ಲಿ ಶುಕ್ರವಾರ ಬೆಳಿಗ್ಗೆ 10.15 ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ. ಚಿತ್ರದಲ್ಲಿ ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಬಡ ರೈತ ತಂದೆಯ ಪಾತ್ರ, ಮೈಸೂರಿನ ವನಿತಾ ರಾಜೇಶ್ ತಾಯಿಯ ಪಾತ್ರ, ಗುರು ತೇಜಸ್ ಮಗನ ಪಾತ್ರ ನಿರ್ವಹಿಸಿದ್ದಾರೆ. ಕೊಡಗಿನ ಚಿತ್ರ ನಿರ್ಮಾಪಕರಾದ ಈರಮಂಡ ವಿಜಯ್ ಹಾಗೂ ಹರಿಣಿ ದಂಪತಿಯ ಪುತ್ರಿ ಬಾಲನಟಿ ಈರಮಂಡ ಕುಶಿ ಕಾವೇರಮ್ಮ…
ಮಡಿಕೇರಿ NEWS DESK ಸೆ.30 : ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರಿನ ದಿ ಇನ್ಸ್ ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಹೆಚ್.ಎ.ವೆಂಕಟೇಶ್ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಟಿ.ಪಿ.ರಮೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ.ಮುದ್ದಯ್ಯ, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಕೋಶಾಧಿಕಾರಿ ಬಿ.ಎನ್.ವಾಸುರೈ, ಅಹಿಂದ ಒಕ್ಕೂಟದ ಕೆ.ಎಂ.ರಾಜನ್, ವಿಜಯ…
ಗೋಣಿಕೊಪ್ಪ NEWS DESK ಸೆ.30 : ವಚನ ಸಾಹಿತ್ಯ ಮರೆತು ಹೋದ ಶರಣರ ಪರಂಪರೆಯ ಮೌಲ್ಯಗಳನ್ನು ಮರಳಿ ಸ್ಮರಿಸುವ ವೇದಿಕೆಯಾಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಾಜ್ ಆನಂದತೀರ್ಥ ಹೇಳಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶರಣರ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳ ಘನತೆಯನ್ನು ಬಿಂಬಿಸುವ ವಚನಗಳು ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು. ಹಾಗಾಗಿ ಶಾಲಾ ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳು ವಚನ ಸಾಹಿತ್ಯದ ಅರಿವು ಮೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಲು ಭಾರದ್ವಾಜ್ ಕರೆಕೊಟ್ಟರು. ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಿದ ವಿರಾಜಪೇಟೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ದಿಲನ್ ಮುತ್ತಣ್ಣ, ಶತ ಶತಮಾನಗಳ ಎಲ್ಲೆಯನ್ನು ಮೀರಿ ಎಷ್ಟೋ ಕಾಲದವರೆಗೂ ಜೀವಂತವಾಗಿ ಉಳಿಯಬಲ್ಲ ಸತ್ವ ವಚನಗಳಲ್ಲಿವೆ. ರಾಜಧರ್ಮ ಕ್ಷೀಣಿಸಿ ಪ್ರಜಾಧರ್ಮ ಜಾರಿಗೆ…
ಮಡಿಕೇರಿ ಸೆ.29 NEWS DESK : ಬಿದ್ದು ಸಿಕ್ಕಿದ ಒಂದುವರೆ ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ಅನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕಟ್ಟೆಮಾಡು ಗ್ರಾಮದ ಹರ್ಷಿತ ಎಂಬ ಯುವತಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಡಿಕೇರಿ ನಗರದ ಜಿ.ಟಿ.ಸರ್ಕಲ್ ನಲ್ಲಿ ಬಿದ್ದು ಸಿಕ್ಕಿದ ದುಬಾರಿ ಫೋನನ್ನು ಸಂಚಾರಿ ಪೊಲೀಸರ ನೆರವಿನೊಂದಿಗೆ ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸೋಮವಾರಪೇಟೆ NEWS DESK ಸೆ.30 : ಕೊಡಗು ಜಿಲ್ಲೆಯ ಇಬ್ಬರು ಅಧಿಕಾರಿಗಳು ಅತ್ಯುತ್ತಮ ಸರ್ವೇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ ವೆಂಕಟೇಶ್ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಜೀವನ್ ಅವರಿಗೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಹಾಗೂ ಸರ್ವೇ ಇಲಾಖೆಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಸರ್ಕಾರ ವರ್ಷದ ಅತ್ಯುತ್ತಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಕುಶಾಲನಗರ, ಸೆ.30 NEWS DESK : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಉತ್ತಮ ಕಾರ್ಯ ಯೋಜನೆಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಎಸ್ಎಸ್ಎಲ್ಸಿ ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಸಿ.ರಂಗಧಾಮಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರು ಕ್ರಿಯಾಶೀಲರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ…
ಸುಂಟಿಕೊಪ್ಪ ಸೆ.30 NEWS DESK : ಯಾವುದೇ ರೀತಿಯ ಸಭೆ ಸಮಾರಂಭಗಳನ್ನು ಆಯೋಜಿಸುವಾಗ ವೇದಿಕೆಗೆ ತನ್ನದೆಯಾದ ಶಿಸ್ತು ಘನತೆಯಿದ್ದು, ಆದರ ಬಗ್ಗೆ ಅರಿತು ಆಯೋಜಿಸಿದ್ದಲ್ಲಿ ಮಾತ್ರ ಕಾರ್ಯಕ್ರಮವು ಯಶಸ್ವಿಗೊಳ್ಳಲಿದೆ ಎಂದು ಲೆಕ್ಕ ಪರಿಶೋಧಕ ಪಿ.ಡಬ್ಲ್ಯು. ಪ್ರಾನ್ಸಿಸ್ ಹೇಳಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಭಾಷಣ ಕಲೆ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದÀರು. ಸಭೆಗಳಿಗೆ ವೇದಿಕೆಯನ್ನು ಸಿದ್ಧಪಡಿಸುವಾಗ ಅಧ್ಯಕ್ಷರು ಮತ್ತು ಅತಿಥಿಗಳಿಗೆ ಸೂಕ್ತ ರೀತಿಯಲ್ಲಿ ಆಸನಗಳನ್ನು ಸಿದ್ಧಪಡಿಸುವುದರೊಂದಿಗೆ ಅತಿಥಿಗಳು ಅಸೀನರಾಗುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರು ನಿರ್ವಹಿಸಬೇಕಾದ ಆದ್ಯ ಕರ್ತವ್ಯವಾಗಿದೆ. ಇದರಿಂದ ಸಮಾರಂಭವು ಯಶಸ್ವಿಗೊಳಿಸುತ್ತದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಪಿ.ಎಫ್.ಸಬಾಸ್ಟೀನ್ ಮಾತನಾಡಿ, ಭಾಷಣ ಕಲೆಯನ್ನು ಕರಗತ ಮಾಡಿಕೊಂಡು ಧೈರ್ಯದಿಂದ ಮುಂದುವರಿಯಬೇಕು. ನಮ್ಮೊಳಗಿರುವ ಕಿಳಾರಿಮೆ ತೊಡೆದು ಹಾಕಬೇಕು, ಯಾವುದೇ ವಿಚಾರದ ಮಾತನಾಡುವಾಗ ಆದರ ಪೂರ್ವಪರ ಅರಿತು ಮಾಹಿತಿ…
ಕುಶಾಲನಗರ ಸೆ.30 NEWS DESK : ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಸೇವಾ ಕಾರ್ಯ ನಿರ್ವಹಿಸುವ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಾಡುವುದರೊಂದಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಮೈಸೂರು ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಂಶುಪಾಲರೂ ಹಾಗೂ ಜಂಟಿ ನಿರ್ದೇಶಕರೂ ಆದ ಎಸ್ಎಸ್ಎಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಗೀತಾಂಭ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ನಡೆದಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ರಾಜ್ಯದಲ್ಲಿ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಕಾರಣರಾದ…






