ಕುಶಾಲನಗರ ಸೆ.30 NEWS DESK : ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಸೇವಾ ಕಾರ್ಯ ನಿರ್ವಹಿಸುವ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಾಡುವುದರೊಂದಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಮೈಸೂರು ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಂಶುಪಾಲರೂ ಹಾಗೂ ಜಂಟಿ ನಿರ್ದೇಶಕರೂ ಆದ ಎಸ್ಎಸ್ಎಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಗೀತಾಂಭ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ನಡೆದಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ರಾಜ್ಯದಲ್ಲಿ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಕಾರಣರಾದ…
ಲೇಖಕ: admin
ಬೆಂಗಳೂರು ಸೆ.30 NEWS DESK : ರಾಷ್ಟ್ರಪಿತ, ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ :: ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್ಆರ್ಪಿ,ಮಚ್ಚೆ,ಬೆಳಗಾವಿ (ಪ್ರಥಮ), ಸಮರ್ಥ ನಾಗರಾಜ ಅರ್ಕಸಾಲಿ, ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾ.ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ :: ವಿಜಯಕುಮಾರ್ ಬ.ದೊಡ್ಡಮನಿ, ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ, ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು, ಮೈಸೂರು (ದ್ವಿತೀಯ),ಗೋರಮ್ಮ, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ ಫಲಿತಾಂಶ :: ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ,ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ)…
ಮಡಿಕೇರಿ ಸೆ.30 NEWS DESK : ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ.ಅ) ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸುವಂತೆ ಇಲ್ಯಾಸ್ ತಂಙಲ್ ಎಮ್ಮೆಮಾಡು ಕರೆ ನೀಡಿದರು. ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ ದಮಾಮ್ ಝೋನಲ್ ಸಮಿತಿ, ದಮ್ಮಾಮ್ ನಲ್ಲಿ ಆಯೋಜಿಸದ್ದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1499 ಜನ್ಮದಿನಾಚರಣೆಯ ಅಂಗವಾಗಿ “ಸ್ನೇಹ ಸಂಗಮ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರವಾದಿಯ ಅವರ ಜೀವನವೊಂದು ತೆರದ ಪುಸ್ತಕವಾಗಿದೆ.ಇಡೀ ಮಾನವ ಕುಲಕ್ಕೆ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನವೂ ಮಾದರಿಯಾಗಿದೆ ಎಂದು ಇಲ್ಯಾಸ್ ತಂಙಲ್ ಹೇಳಿದರು.ಸ್ವಾಂತನ ಕಾರ್ಯಕ್ರಮದಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್ ಝೋನಲ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಲ್ಯಾಸ್ ತಂಙಲ್ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಹಫೀಲ್ ಸಹದಿ ಕೊಡಗು ಹಾಗೂ ಹಂಸ ಉಸ್ತಾದ್ ಭಾಗವಹಿಸಿದ್ದರು.ಈ ಸಂದರ್ಭ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್ ಝೋನಲ್ ವತಿಯಿಂದ ಇಲ್ಯಾಸ್ ತಂಙಲ್ ಮತ್ತು ಹಫೀಲ್ ಸಹದಿ ಅವರನ್ನು…
ಮೈಸೂರು NEWS DESK ಸೆ.29 : ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ನಡೆದ ಜಾಥಾದಲ್ಲಿ ಕೊಡಗು ಜಿಲ್ಲೆಯನ್ನು ಕೊಡವ ಕೂಟಾಳಿಯಡ ಕೂಟದ ಸದಸ್ಯರು ಪ್ರತಿನಿಧಿಸಿದರು. ಅರಮನೆ ಮೈದಾನದಿಂದ ಬನ್ನಿ ಮಂಟಪದವರೆಗೆ ನಡೆದ ಈ ಮೆರವಣಿಗೆಯಲ್ಲಿ ಕೊಡಗಿನ ಕೊಡವ ಪಡೆಯಾಳಿಗಳು ಎನ್ನುವ ಪರಿಕಲ್ಪನೆಯಲ್ಲಿ ಕೊಡಗಿನ ಸಂಸ್ಕೃತಿ ಯನ್ನು ಪ್ರತಿಬಿಂಬಿಸುವ ತಳಿಯತಕ್ಕಿ ದೀಪ, ದುಡಿ ಕೊಟ್ಟ್ ಪಾಟ್,ನ ಜೊತೆಗೆ ಕೊಡವ ಸಂಸ್ಕೃತಿಯ ಅಂಗವಾದ, ಒಡಿಕತ್ತಿ, ಬಿಲ್ಲು, ಬಾಣ, ಬಜಿ೯, ಹಿಡಿದು ಜಾಥಾ ನಡೆಸಲಾಯಿತು. ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯಕ್ರಮ ಸಂಚಾಲಕ ಕಾಳಮಂಡ ರಾಬಿನ್ ಅಚ್ಚಮ್ಮ, ಖಜಾಂಜಿ ಬೊಜ್ಜಂಗಡ ಭವ್ಯ ದೇವಯ್ಯ ನಿರ್ದೇಶಕ ಅಮ್ಮಾಟಂಡ ಚೇತನ್ ಅಪ್ಪಯ್ಯ ಸದಸ್ಯರಾದ ಇಟ್ಟಿರ ಭವ್ಯ ಈಶ್ವರ್ ಹಾಗೂ ಮಾಚಂಗಡ ಸಚಿನ್ ತಿಮ್ಮಯ್ಯ, ಚೇಂದಿರ ಅಬಿನ್ ನಾಣಯ್ಯ, ಬುಟ್ಟಿಯಂಡ ಕಾರ್ಸನ್ ಕಾರ್ಯಪ್ಪ, ಕಾಯಪಂಡ ಇಶಾನ್ ಪೂಣಚ್ಚ, ಪೊನ್ನೋಲತಂಡ ಶರಣು ತಮ್ಮಯ್ಯ, ಕೇಳಪ್ಪಂಡ ಲಿಂಕಿತ್ ತಿಮ್ಮಯ್ಯ, ಚಪ್ಪಂಡ ಪೂರ್ವಿಕ್ ಪೊನ್ನಣ್ಣ, ಚೋಳಂಡ…
ಭಾಗಮಂಡಲ NEWS DESK ಸೆ.29 : 17-10-2024 ರಂದು ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯ ದಿನಾಂಕ: 03-10-2024 ರಂದು ಗುರುವಾರ, ಸಮಯ ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಡೆಯಲಿದೆ. ಸದರಿ ಸಮಯದಲ್ಲಿ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದುದ್ದರಿಂದ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಆಡಳಿತಾಧಿಕಾರಿಯ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಡಿಕೇರಿ NEWS DESK ಸೆ.29 : ಅರೆಭಾಷಿಕರು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಅರೆಭಾಷೆ ಕಲಿಸಬೇಕು. ಆಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಡಿಕೇರಿ ಗ್ರಾಮಾಂತರ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಭಾಂಗಣದಲ್ಲಿ ಭಾನುವಾರ ನಡೆದ ಜಿಲ್ಲೆಯ ಅರೆಭಾಷೆ ಬರಹಗಾರರು ಮತ್ತು ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅರೆಭಾಷಿಗರು ಇದ್ದು, ಅರೆಭಾಷೆ ಮಾತನಾಡುವಂತಾಗಬೇಕು ಬರಹಗಾರನೂ ಒಬ್ಬ ಕಲಾವಿದ, ಅವನ ಕಲೆಯ ಮೂಲ ಭಾಷೆ ಆಗಿರುತ್ತದೆ. ಆ ಭಾಷೆಯನ್ನು ಚಿಕ್ಕ ವಯಸ್ಸಿನಲ್ಲಿಯೇ ಆತ ಕರಗತ ಮಾಡಿದರೆ ಉತ್ತಮ ಬರಹಗಾರನಾಗಿ ಮೂಡಿಬರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಮಾತನಾಡಿ ಸಾಹಿತ್ಯ ನಮ್ಮಲ್ಲೇ ಇರುವಂತಹ ವಸ್ತು, ಅದನ್ನು ಗುರುತಿಸಿ ನಾವು ಹೊರಗೆ ತೆಗೆಯಬೇಕು. ಸಣ್ಣ ಸಣ್ಣ ವಿಷಯಗಳಿಂದ ಬರವಣಿಗೆ ಪ್ರಾರಂಭ…
ಪೊನ್ನಂಪೇಟೆ NEWS DESK ಸೆ.29 : ಪೊನ್ನಂಪೇಟೆ ಸಮೀಪದ ಪ್ರಶಾಂತಿ ನಿಲಯದಲ್ಲಿ ವೈವಿಧ್ಯಮಯ ಸಾಕುಪ್ರಾಣಿಗಳ ಕುಟುಂಬದೊಂದಿಗೆ ನಿಮ್ಮ ಗುಣಮಟ್ಟದ ಸಮಯವನ್ನು ಆನಂದಿಸಲು ಸಜ್ಜುಗೊಂಡಿರುವ “ಸಾಯಿ ಪೆಟ್ ಸ್ಟೇಷನ್” ಅಕ್ಟೋಬರ್ 1 ರಂದು ಉದ್ಘಾಟನೆಗೊಳ್ಳಲಿದೆ. ಸಾಯಿ ಪೆಟ್ ಸ್ಟೇಷನ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಒಲಂಪಿಯನ್ ಹಾಕಿ ಆಟಗಾರರಾಗಿದ್ದ ಲೆಫ್ಟಿನೆಂಟ್ ಕರ್ನಲ್ ಬಿ.ಕೆ.ಸುಬ್ರಮಣಿ ಹಾಗು ಕೊಡಗು ಜಿಲ್ಲಾ ಹೋಟೆಲ್-ರೆಸಾರ್ಟ್-ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ ಇವರುಗಳು ಭಾಗವಹಿಸಲಿದ್ದಾರೆ. ವೈವಿಧ್ಯಮಯ ಸಾಕುಪ್ರಾಣಿಗಳ ಸ್ವರ್ಗವಾದ ಸಾಯಿ ಪೆಟ್ ಸ್ಟೇಷನ್ ಅಕ್ಟೋಬರ್ 2 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಸಾಯಿ ಪೆಟ್ ಸ್ಟೇಷನ್ ನ ಮುಖ್ಯಸ್ಥರಾದ ಝರು ಗಣಪತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ NEWS DESK ಸೆ 29: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೂರ್ಗ್ ಲಾರಿ ಚಾಲಕರು ಮತ್ತು ಮಾಲೀಕರ ಸಂಘದ ಜಿಲ್ಲಾ ಘಟಕದ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕುಶಾಲನಗರದ ರೈತ ಸಹಕಾರ ಭವನ ಸಮೀಪ ಆರಂಭಿಸಿರುವ ನೂತನ ಕಛೇರಿಯನ್ನು ಕುಶಾಲನಗರ ಕಾವೇರಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಎ.ಲೋಕೇಶ್ ಉದ್ಘಾಟಿಸಿದರು. ನಂತರ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸ್ತಿತ್ವಕ್ಕೆ ಬಂದಿರುವ ನೂತನ ಜಿಲ್ಲಾ ಸಂಘ ಅಭಿವೃದ್ದಿಯತ್ತ ಸಾಗುವುದರೊಂದಿಗೆ ಸದಸ್ಯರ ಕಷ್ಟಗಳಿಗೆ, ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ ಅಗತ್ಯ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೆ.ಯು.ರಫೀಕ್ ಮಾತನಾಡಿ, ಸಂಘದ ಎಲ್ಲಾ ಸದಸ್ಯರ ಸಹಕಾರದಿಂದ ನೂತನ ಸಂಘ ಸ್ಥಾಪಿಸಿದ್ದು, ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆ ಹೊಂದಲಾಗಿದೆ. ಅದೇ ರೀತಿ ಸಂಘದ ಸದಸ್ಯರ ಸರ್ವಾಂಗೀಣ ಅಭಿವೃದ್ಧಿಗೆ ಸಂಘ ಒತ್ತು ನೀಡಲಿದೆ ಎಂದು ತಿಳಿಸಿದರು. ನೂತನ ಸಂಘದ ಉದ್ಘಾಟನೆ ಹಿನ್ನಲೆಯಲ್ಲಿ ಕುಶಾಲನಗರ ಸಮುದಾಯ…
ಕುಶಾಲನಗರ NEWS DESK ಸೆ.29 : ಕೊಡಗು ಜಿಲ್ಲಾ ಯುವ ಜನ ಸಂಘದ ವತಿಯಿಂದ “ಸ್ನೇಹ, ಸಮತ್ವ ಹಾಗೂ ಸಹಿಷ್ಣುತೆಯನ್ನು ಸಾರುವ ಬೃಹತ್ ಮಿಲಾದ್ ಮೆರವಣಿಗೆ ಹಾಗೂ ಮೌಲಿದ್ ಮಜ್ಲಿಸ್ ಕುಶಾಲನಗರದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕಾಝಿ ಅಬ್ದುಲ್ಲಾ ಫೈಜ಼ಿರವರ ನೇತೃತ್ವದಲ್ಲಿ ನಡೆದ ಮೆರವಣಿಗೆಯು ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಆಕರ್ಷಕ ಉಡುಗೆಗಳನ್ನು ತೊಟ್ಟ ಮದ್ರಸ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶಿಸಲಾಯಿತು. ನಂತರ ಕಾರು ನಿಲ್ದಾಣದಲ್ಲಿ ಮೌಲಿದ್ ಮಜ್ಲಿಸ್ (ಪ್ರಾರ್ಥನೆ) ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ಸಂಘಟನೆಯ ಪದಾಧಿಕಾರಿಗಳು, ಪ್ರಮುಖರಾದ ಉಸ್ಮಾನ್ ಫೈಜ಼ಿ ಭಾಗಿಯಾಗಿದ್ದರು.
ಕುಶಾಲನಗರ NEWS DESK ಸೆ.29 : ಕುಶಾಲನಗರದಲ್ಲಿ ನಾರಾಯಣ ಗುರುಗಳ 170 ನೇ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಹಿಂದೂ ಮಲಯಾಳಿ ಸಂಘದ ಜಿಲ್ಲಾಧ್ಯಕ್ಷರು ಆಗಿರುವ ವಿ.ಎಂ.ವಿಜಯ್ ಮಾತನಾಡಿ ಆಧುನಿಕ ತಂತ್ರಜ್ಞಾನದಿಂದಾಗಿ ಸನಾತನ ಹಿಂದೂ ಧರ್ಮ ಅಳಿವು ಉಳಿವಿನ ಬಗ್ಗೆ ಪ್ರತಿಯೊಬ್ಬರು ಚಿಂತನೆ ಮಾಡಬೇಕಾಗಿದೆ. ಹಿರಿಯರು ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕಾಗಿದೆ. ಧರ್ಮ, ಸಂಸ್ಕ್ರತಿ ಸಂಪ್ರದಾಯಗಳ ಪರಿಪಾಲನೆ ಮುಂದುವರೆಯಬೇಕು ಎಂದು ವಿಜಯ್ ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನೀತಾ ಮಂಜುನಾಥ್, ನಾರಾಯಣ ಗುರುಗಳು ಸಮಾಜಕ್ಕೆ ನೀಡಿರುವ ಸಂದೇಶಗಳು, ಮಾರ್ಗದರ್ಶನ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಎಸ್ ಎನ್ ಡಿಪಿ ಯೂನಿಯನ್ ಅಧ್ಯಕ್ಷರಾದ ವಿ.ಕೆ .ಲೋಕೇಶ್ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಾಳಜಿ ವಹಿಸಬೇಕು ಎಂದರು. ಕುಶಾಲನಗರ ವಲಯ ಎಸ್ ಎನ್ ಡಿ ಪಿ ವಲಯ ಅಧ್ಯಕ್ಷ ಕೆ.ಟಿ.ಗಣೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಸಮಾಜದ ಅಧ್ಯಕ್ಷ…






